Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾನು ಹೇಳಿಕೆ ನೀಡಲ್ಲ, ಹೋರಾಡೋ ವ್ಯಕ್ತಿ: ಪ್ರತಾಪ್ ಸಿಂಹ ವಿರುದ್ಧ ರೈ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಾನು ಹೇಳಿಕೆ ನೀಡಲ್ಲ, ಹೋರಾಡೋ ವ್ಯಕ್ತಿ: ಪ್ರತಾಪ್ ಸಿಂಹ ವಿರುದ್ಧ ರೈ ಕಿಡಿ

Bengaluru City

ನಾನು ಹೇಳಿಕೆ ನೀಡಲ್ಲ, ಹೋರಾಡೋ ವ್ಯಕ್ತಿ: ಪ್ರತಾಪ್ ಸಿಂಹ ವಿರುದ್ಧ ರೈ ಕಿಡಿ

Public TV
Last updated: November 23, 2017 2:30 pm
Public TV
Share
3 Min Read
PRAKASH RAI 1
SHARE

ಬೆಂಗಳೂರು: ಟ್ವಿಟ್ಟರ್‍ನಲ್ಲಿ ನನ್ನ ವಿರುದ್ಧ ಅವಹೇಳನಕಾರಿಯಾಗಿ ಟ್ವೀಟ್ ಮಾಡಿದ್ದ ಸಂಸದ ಪ್ರತಾಪ್ ಸಿಂಹ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಬಹುಭಾಷಾ ನಟ ಪ್ರಕಾಶ್ ರೈ ಹೇಳಿದ್ದಾರೆ.

ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಇವತ್ತು ನಾನು ಈ ಪ್ರತಿಭಟನೆಯ ಅಂಗವಾಗಿ ಒಬ್ಬ ಪ್ರಜೆಯಾಗಿ ಮೈಸೂರಿನ ಸಂಸದ ಪ್ರತಾಪ್ ಸಿಂಹ ಅವರಿಗೆ ನಾನು ಒಂದು ಕಾನೂನಿನ ನೋಟಿಸ್ ಕಳುಹಿಸಿದ್ದೇನೆ. ಅವರಿಗೆ ನೀಡಿರುವ ನಿಗದಿತ ಸಮಯದಲ್ಲಿ ಉತ್ತರ ನೀಡದೇ ಇದ್ದರೆ ಅವರ ವಿರುದ್ಧ ಕ್ರಿಮಿನಲ್ ಕ್ರಮವನ್ನು ತೆಗೆದುಕೊಳ್ಳುತ್ತೇನೆ ಎಂದು ತಿಳಿಸಿದರು.

vlcsnap 2017 11 23 14h03m24s991 1

ಮೋದಿ ಬಿಜೆಪಿ ನಾಯಕ ಅಂತ ಪ್ರಶ್ನೆ ಮಾಡಿಲ್ಲ. ಅವರು ನಮ್ಮ ದೇಶದ ಪ್ರಧಾನಿ ಅಂತ ಪ್ರಶ್ನೆ ಮಾಡಿದ್ದೇನೆ. ನಿಮ್ಮ ಕ್ಷೇತ್ರದ ಜನರಿಗೆ ಪ್ರಶ್ನೆ ಮಾಡಲು ಇಚ್ಚಿಸುತ್ತೇನೆ ನೀವು ಎಂಥ ವ್ಯಕ್ತಿಯನ್ನ ಆಯ್ಕೆ ಮಾಡಿದ್ದೀರಿ. ನಾನು ಕೇವಲ ಹೇಳಿಕೆ ಕೊಡುವುದಿಲ್ಲ. ನಾನು ಹೋರಾಟ ಮಾಡುತ್ತೇನೆ. ನಾನು ಬಿಜೆಪಿ ಪಾರ್ಟಿ ವಿರುದ್ಧ ಹೋರಾಟ ಮಾಡುತ್ತಿಲ್ಲ. ನಾನು ಪ್ರತಾಪ್ ಸಿಂಹ ವಿರುದ್ಧ ಹೋರಾಟ ಮಾಡುತ್ತೇನೆ. ನಿಮ್ಮ ಬಳಿ ಪವರ್ ಇರಬಹುದು ಆದ್ರೆ ಕಾಮನ್ ಮ್ಯಾನ್ ಆದ ನಾನು ಪ್ರಶ್ನೆ ಕೇಳುವ ಹಕ್ಕಿದೆ ಎಂದು ಹೇಳಿದರು.

ಈ ದೇಶದ ಪ್ರಜೆಯಾಗಿ ನಾನು ಒಂದು ಪ್ರಶ್ನೆಯನ್ನು ಕೇಳುತ್ತಿದ್ದೇನೆ. ನಮ್ಮ ದೇಶದಲ್ಲಿ ಟ್ರೋಲ್ ಎನ್ನುವುದು ಗುಂಡಾಗಿರಿಯಾಗಿದೆ. ಇದರಿಂದ ಯಾವ ವ್ಯಕ್ತಿಯು ತನ್ನ ಅಭಿವ್ಯಕ್ತಿ ಸ್ವಾತಂತ್ರದಲ್ಲಿ ಮಾತನಾಡಿದರೂ ಅದಕ್ಕೆ ಹಲವು ಅರ್ಥವನ್ನು ಕೊಡುತ್ತಾ, ಬಿಂಬಿಸುತ್ತಾ ಇಲ್ಲ ಅವರನ್ನೇ ಗುರಿಯಾಗಿಸಿಕೊಂಡು ಇನ್ನೊಮ್ಮೆ ಪ್ರಶ್ನೆಯನ್ನು ಕೇಳದ ರೀತಿಯಲ್ಲಿ ಮಾಡುತ್ತಿದೆ. ಇದು ಎಲ್ಲಾ ಕ್ಷೇತ್ರದಲ್ಲೂ ನಡೆಯುತ್ತಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

vlcsnap 2017 11 23 14h10m45s833

ನಮ್ಮ ದೇಶದಲ್ಲಿ ಪ್ರತಿಯೊಬ್ಬರು ಅವರ ಆತಂಕ, ಅನಿಸಿಕೆ, ಕೋಪ ಮತ್ತು ನೋವನ್ನು ವ್ಯಕ್ತಪಡಿಸುವ ಹಕ್ಕಿಲ್ಲ. ಇಂದು ರಾಜಕೀಯದಲ್ಲಿ ನೋಡಿದಾಗ ನಾನು ಏನು ಕೇಳಿದರೂ, ನಿಮ್ಮ ತಾಯಿಯ ಮತ ಯಾವುದೂ, ನೀನು ಪಾಕಿಸ್ತಾನಕ್ಕೆ ವಾಪಸ್ ಹೋಗು, ನೀನು ನಿಜ ಜೀವದಲ್ಲೂ ಖಳನಟ ಎಂದು ನನ್ನ ವೈಯಕ್ತಿಕ ಜೀವನದ ಘಟನೆಗಳನ್ನು ತಿರುಚಿ ಟ್ರೋಲ್ ಮಾಡುತ್ತಿದ್ದಾರೆ ಎಂದು ಆಕ್ರೋಶದಿಂದ ಹೇಳಿದರು.

ಇದು ಯಾವುದೇ ಪಕ್ಷ, ಪಂಗಡದ ವಿರುದ್ಧ ಅಲ್ಲ. ಒಬ್ಬ ಜವಾಬ್ದಾರಿಯುತ ಪ್ರಜೆಯಾಗಿ ಇನ್ನೊಬ್ಬರನ್ನು ಈ ರೀತಿ ಟ್ರೋಲ್ ಮಾಡುವುದು ಸರಿಯಲ್ಲ. ಅದಕ್ಕಾಗಿ ನಾನು ಹೋರಾಡುತ್ತಿದ್ದೇನೆ. ನನ್ನ ಮಗನ ಸಾವಿನ ಸುದ್ದಿಯನ್ನು ನೀವು ಟ್ರೋಲ್ ಮಾಡಿದ್ದೀರಿ ಅದು ನನಗೆ ತುಂಬಾ ಆಘಾತ ಆಗಿದೆ. ಇದರಿಂದ ನೀವು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ನನಗೆ ನಿಮ್ಮನ್ನು ಚುನಾಯಿಸಿದ ಯುವಕರ ಮತ್ತು ನಿಮ್ಮ ಕ್ಷೇತ್ರದ ಹೆಣ್ಣುಮಕ್ಕಳ ಬಗ್ಗೆ ನೋವಾಗುತ್ತಿದೆ. ಅವರಿಗೆಲ್ಲಾ ಉತ್ತರ ಕೊಡಿ ಎಂದು ನೋವಿನಿಂದ ಹೇಳಿದರು.

WhatsApp Image 2017 11 23 at 11.42.40 AM

ಒಂದು ಸಮುದಾಯವಾಗಿ ನಿಮ್ಮ ರಾಜಕೀಯ ಬೇಡ. ಆದರೆ ಆರೋಗ್ಯವಾದ ಸಜ್ಜನವಾದ ವಾತಾವರಣ ಬೇಕಾಗಿದೆ. ನಮ್ಮ ಯುವಕರಿಗೆ, ಪ್ರಜೆಗಳಿಗೆ ಪ್ರಶ್ನೆಕೇಳುವ ಉತ್ತರ ಬಯಸುವ ಹಕ್ಕು ಇದೆ. ಆದರೆ ನೀವು ಉತ್ತರಕೊಡುವ ಜವಬ್ದಾರಿ ಇದೆ ಹೊರತು ಹೀಗೆ ಅಸಯ್ಯ, ಅಸಭ್ಯವಾಗಿ ಮಾತನಾಡುತ್ತಾ ಸಮಾಜದ ಆರೋಗ್ಯವನ್ನು ಹಾಳು ಮಾಡಬೇಡಿ. ನಾನು ಕೇವಲ ಹೇಳಿಕೆ ಕೊಡುವವನು ಮಾತ್ರವಲ್ಲ, ನಾನು ನನ್ನ ಹಕ್ಕುಗಳಿಗೆ ಹೋರಾಡೋನು ಎಂದು ಸ್ಪಷ್ಟವಾಗಿ ಹೇಳಿದರು.

ಪದ್ಮಾವತಿ ಚಿತ್ರದ ವಿವಾದ ವಿಚಾರವನ್ನು ಕೇಳಿದಾಗ ಸುಪ್ರೀಂ ಕೋರ್ಟ್ ಬ್ಯಾನ್ ಮಾಡಲು ಸಾಧ್ಯವಿಲ್ಲ ಅಂತಾ ಹೇಳಿದೆ. ಆದರೂ ಇದಾದ ಮೇಲೂ ಚಿತ್ರವನ್ನು ಬ್ಯಾನ್ ಮಾಡುವುದು ಯಾಕೆ ಬೇಕಿತ್ತು ಎಂದು ಅವರು ಪ್ರಶ್ನಿಸಿದರು.

PRAKASH RAI 1 1

ನನಗೆ ರಾಜಕೀಯಕ್ಕೆ ಬರುವ ಯಾವುದೇ ಉದ್ದೇಶವಿಲ್ಲ. ಮೋದಿ ವಿರುದ್ಧ ಧ್ವನಿ ಎತ್ತಲು ಭಯ ಪಡುತ್ತಾರೆ. ಯುವ ಜನತೆ ಈ ದೋರಣೆ ವಿರುದ್ಧ ಧ್ವನಿ ಎತ್ತಬೇಕು. ನಾನು ಮಾತಾನಾಡುತ್ತೇನೆ ಮಾತನಾಡುತ್ತಲೇ ಇರುತ್ತೇನೆ ಎಂದು ಹೇಳಿ ತಮ್ಮ ಮಾತನ್ನ ಮುಗಿಸಿದರು.

ಸುದ್ದಿಗೋಷ್ಠಿ ಆರಂಭಿಸುವ ಮುನ್ನ ಮೈಸೂರಿನ ಆಂದೋಲನ ಪತ್ರಿಕೆಯ ಸಂಸ್ಥಾಪಕ ರಾಜಶೇಖರ ಕೋಟಿ ನಿಧಾನಕ್ಕೆ 2 ನಿಮಿಷ ಎದ್ದು ನಿಂತು ಮೌನಾಚಾರಣೆ ಮಾಡಿದ ನಂತರ ಮಾತನಾಡಿದರು.

ಇದನ್ನು ಓದಿ: ನಟ ಪ್ರಕಾಶ್ ರಾಜ್ ವಿರುದ್ಧ ಕೇಸ್ ದಾಖಲು

ಪ್ರತಾಪ್ ಸಿಂಹ ಟ್ವೀಟ್ ಏನಿತ್ತು?
ಅಕ್ಟೋಬರ್ 2 ರಂದು ಪ್ರತಾಪ್ ಸಿಂಹ ವೆಬ್‍ಸೈಟ್ ಒಂದರಲ್ಲಿ ಬಂದಿದ್ದ ಸುದ್ದಿಯನ್ನು ಟ್ವೀಟ್ ಮಾಡಿದ್ದರು. “ಮಗನ ಸಾವಿನ ದು:ಖದಲ್ಲಿದ್ದ ಹೆಂಡತಿಯನ್ನು ಬಿಟ್ಟು ಡ್ಯಾನ್ಸರ್ ಹಿಂದೆ ಓಡಿದ ರೈಯಂತಹವನು ಮೋದಿ – ಯೋಗಿಗೆ ಹೇಳುವಷ್ಟು ಯೋಗ್ಯತೆಯಿರುವವನಾ?” ಎನ್ನುವ ಹೆಡ್‍ಲೈನ್ ಈ ಸುದ್ದಿಯಲ್ಲಿತ್ತು.

ಇದನ್ನು ಓದಿ: ತಮ್ಮ ದಂಧೆಗಾಗಿ, ಹಣಕ್ಕಾಗಿ ತಮಿಳುನಾಡಿನಲ್ಲಿ ರೈ, ಇಲ್ಲಿ ರಾಜ್: ಪ್ರತಾಪ್ ಸಿಂಹ

ಇದನ್ನು ಓದಿ: ಮೋದಿ, ಪ್ರತಾಪ್ ಸಿಂಹಗೆ ಪರೋಕ್ಷವಾಗಿ ಟಾಂಗ್ ನೀಡಿದ ನಟ ಪ್ರಕಾಶ್ ರೈ

https://www.youtube.com/watch?v=PEcjqcLb2_Y

PRAKASH RAI 2

PRAKASH RAI 3

PRAKASH RAI 4

vlcsnap 2017 11 23 14h04m36s074

vlcsnap 2017 11 23 14h04m50s103

 

TAGGED:BangalorePrakash Raipratap simhaPublic TVಪಬ್ಲಿಕ್ ಟಿವಿಪ್ರಕಾಶ್ ರೈಪ್ರತಾಪ್ ಸಿಂಹಬೆಂಗಳೂರುಸುದ್ದಿಗೋಷ್ಠಿ
Share This Article
Facebook Whatsapp Whatsapp Telegram

Cinema news

Gilli 1
ದೇಶ ಕಾಯುವ ಯೋಧರಿಂದ ಹಿಡಿದು ಎಲ್ರೂ ಪ್ರೀತಿ ಕೊಟ್ಟು, ಸಪೋರ್ಟ್ ಮಾಡಿದ್ದೀರಿ: ಗಿಲ್ಲಿ ನಟ
Cinema Latest Main Post Sandalwood TV Shows
Bigg Boss runner up Rakshita Shetty gets a grand welcome in Padubidri
ತೆರೆದ ವಾಹನದಲ್ಲಿ ಮೆರವಣಿಗೆ – ಬಂಗುಡೆ ಮೀನು ಹಿಡಿದು ಸಂಭ್ರಮಿಸಿದ ರಕ್ಷಿತಾ
Cinema Districts Karnataka Latest Main Post TV Shows Udupi
kantara chapter 1
ಜೀ ಕನ್ನಡ ವಾಹಿನಿಯಲ್ಲಿ ಬರಲಿದೆ ಕಾಂತಾರ ಚಾಪ್ಟರ್ 1
Cinema Latest Sandalwood Top Stories
Udaya Kannadiga 2025
ವರ್ಣರಂಜಿತ ಉದಯ ಕನ್ನಡಿಗ-2025 ಪುರಸ್ಕಾರದಲ್ಲಿ ತಾರಾಮೇಳ
Cinema Latest Sandalwood Top Stories TV Shows

You Might Also Like

Ramanath Rai
Dakshina Kannada

ದೇವಸ್ಥಾನದಲ್ಲಿ ಕೇಸರಿ ಸೇರಿದಂತೆ ಯಾವುದೇ ಧ್ವಜ ಹಾರಿಸಬೇಡಿ – ರಮಾನಾಥ ರೈ ವಿವಾದಾತ್ಮಕ ಹೇಳಿಕೆ

Public TV
By Public TV
11 minutes ago
College student dies after car hits bicycle in Channarayapatna
Crime

ಚನ್ನರಾಯಪಟ್ಟಣ | ಸೈಕಲ್‌ಗೆ ಕಾರು ಡಿಕ್ಕಿ – ಕಾಲೇಜು ವಿದ್ಯಾರ್ಥಿ ದುರ್ಮರಣ

Public TV
By Public TV
43 minutes ago
The Panchayat gave the site to the Ritti family who handed over the Treasure to the government
Districts

ಪಬ್ಲಿಕ್‌ ಟಿವಿ ಇಂಪ್ಯಾಕ್ಟ್‌ – ನಿಧಿಯನ್ನು ಸರ್ಕಾರಕ್ಕೆ ಹಸ್ತಾಂತರಿಸಿದ ರಿತ್ತಿ ಕುಟುಂಬಕ್ಕೆ ಪಂಚಾಯತ್‌ನಿಂದ ಸೈಟ್‌

Public TV
By Public TV
45 minutes ago
Bengaluru Airport
Chikkaballapur

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಶೌಚಾಲಯಕ್ಕೆ ಕರೆದೊಯ್ದು ವಿದೇಶಿ ಮಹಿಳೆಗೆ ಕಿರುಕುಳ!

Public TV
By Public TV
45 minutes ago
Bengaluru Traffic 1
Bengaluru City

ಪ್ರಪಂಚದಲ್ಲಿ ಸೆಕೆಂಡ್‌, ದೇಶದಲ್ಲಿ Top-1 – ಅತೀ ಹೆಚ್ಚು ಟ್ರಾಫಿಕ್ ಹೊಂದಿರುವ ನಗರ ಬೆಂಗಳೂರು

Public TV
By Public TV
1 hour ago
Bhojshala site
Court

ಮಧ್ಯಪ್ರದೇಶದ ಧಾರ್‌ನ ಭೋಜ್‌ಶಾಲಾದಲ್ಲಿ ಪ್ರಾರ್ಥನೆ ವಿವಾದ; ಹಿಂದೂ-ಮುಸ್ಲಿಮರ ಪ್ರಾರ್ಥನೆಗೆ ‘ಸುಪ್ರೀಂ’ ಅವಕಾಶ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?