Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಬಡ ವಿದ್ಯಾರ್ಥಿನಿಯ ಕನಸಿಗೆ ರೆಕ್ಕೆ ಮೂಡಿಸಿದರು ಬಿಗ್ ಬಾಸ್ ಪ್ರಥಮ್!

Public TV
Last updated: May 7, 2019 6:23 pm
Public TV
Share
3 Min Read
Pratham Education Help 1
SHARE

– ಇದು ಎಂಥವರೂ ಮೆಚ್ಚಿಕೊಳ್ಳುವ ಒಂದೊಳ್ಳೆ ಕೆಲಸ!

ಬೆಂಗಳೂರು: ಕಳೆದ ಸೀಸನ್ನಿನ ಬಿಗ್ ಬಾಸ್ ಶೋ ವಿನ್ನರ್ ಆಗಿದ್ದವರು ಪ್ರಥಮ್. ಹಾಗೆ ಗೆದ್ದುಕೊಂಡ ಐವತ್ತು ಲಕ್ಷ ರೂಪಾಯಿಗಳನ್ನು ಸಮಾಜಮುಖಿಯಾದ ಕೆಲಸ ಕಾರ್ಯಗಳಿಗೆ ಬಳಸೋದಾಗಿ ಪ್ರಥಮ್ ಹೇಳಿಕೊಂಡಿದ್ದರು. ಆ ನಂತರದಲ್ಲಿ ಹಂತ ಹಂತವಾಗಿ ತಮ್ಮ ಮಾತಿಗೆ ಬದ್ಧವಾಗಿ ಮನ್ನಡೆಯುತ್ತಾ ಬಂದಿದ್ದ ಪ್ರಥಮ್ ಅವರೀಗ ನಿಜಕ್ಕೂ ಸಾರ್ಥಕವೆಂಬಂಥಾ ಕೆಲಸವೊಂದನ್ನು ಮಾಡಿದ್ದಾರೆ. ಬಡತನದ ಬೇಗೆಯಿಂದಾಗಿ ವಿದ್ಯಾಭ್ಯಾಸವನ್ನು ದ್ವಿತೀಯ ಪಿಯುಸಿಗೇ ಮೊಟಕುಗೊಳಿಸಿಕೊಳ್ಳುವ ಸ್ಥಿತಿಯಲ್ಲಿದ್ದ ಪ್ರತಿಭಾವಂತ ವಿದ್ಯಾರ್ಥಿನಿಯೊಬ್ಬಳಿಗೆ ಪ್ರಥಮ್ ಆರ್ಥಿಕ ಸಹಾಯ ಮಾಡಿದ್ದಾರೆ. ಆಕೆಯ ಓದಿನ ಬಾಬತ್ತನ್ನು ತಾವೇ ಭರಿಸುವ ವಾಗ್ದಾನ ನೀಡುವ ಮೂಲಕ ಎಲ್ಲರೂ ಮೆಚ್ಚುವಂಥಾ ಕೆಲಸ ಮಾಡಿದ್ದಾರೆ.

Pratham Education Help 2

ಹೀಗೆ ಪ್ರಥಮ್ ಅವರ ಮಾನವೀಯ ಸಹಾಯದಿಂದಲೇ ಮುರುಟಿ ಹೋಗುವಂತಿದ್ದ ಕನಸು ಮತ್ತೆ ಚಿಗುರಿದ ಸಂಭ್ರಮದಲ್ಲಿರುವಾಕೆ ಪ್ರತಿಭಾವಂತ ವಿದ್ಯಾರ್ಥಿನಿ ಮೇಘ. ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಹಲಗಾಪುರ ಗ್ರಾಮದ ಚಾಮರಾಜು ಮತ್ತು ರತ್ನಮ್ಮ ದಂಪತಿಯ ಪುತ್ರಿ ಮೇಘಾ, ದ್ವಿತೀಯ ಪಿಯುಸಿಯಲ್ಲಿ 91.5 ಪರ್ಸೆಂಟೇಜು ಅಂಕ ಗಳಿಸಿಕೊಂಡಿದ್ದಳು. ಇಲ್ಲಿನ ಬಂಡಳ್ಳಿ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡಿ 549 ಅಂಕಗಳೊಂದಿಗೆ ಗಮನಾರ್ಹ ಸಾಧನೆ ಮಾಡಿದ್ದರೂ ಹೆತ್ತವರ ಆರ್ಥಿಕ ಸಂಕಷ್ಟವೇ ಮೇಘಾಳ ಓದಿಗೆ ಕಂಟಕವಾಗಿತ್ತು. ಇನ್ನೇನು ಪಿಯುಸಿಗೇ ತನ್ನ ವ್ಯಾಸಂಗ ಮೊಟಕುಗೊಳ್ಳುವ ಭಯ ಈ ವಿದ್ಯಾರ್ಥಿನಿಯನ್ನು ಆವರಿಸಿಕೊಂಡಿತ್ತು.

Pratham Education Help 3

ಈ ವಿಚಾರವನ್ನು ಅದು ಹೇಗೋ ತಿಳಿದುಕೊಂಡ ಪ್ರಥಮ್ ಕಳೆದ ಭಾನುವಾರ ಮೇಘಾಳ ಮನೆಗೆ ತೆರಳಿದ್ದಾರೆ. ಹೆತ್ತವರಿಗೆ ಧೈರ್ಯ ತುಂಬಿ, ಮಗಳನ್ನು ಓದಿಸುವಂತೆ ಪ್ರೇರೇಪಿಸಿ ಆರಂಭಿಕವಾಗಿ ಹತ್ತು ಸಾವಿರದಷ್ಟು ಹಣ ನೀಡಿದ್ದಾರೆ. ಇದೇ ಸಂದರ್ಭದಲ್ಲಿ ಮೇಘಾಳನ್ನು ಪೋಷಕರು ಯಾವ ಕಾಲೇಜಿಗೆ ಸೇರಿಸಿದರೂ ವಿದ್ಯಾಭ್ಯಾಸಕ್ಕೆ ನೆರವಾಗೋದಾಗಿಯೂ ಪ್ರಥಮ್ ವಾಗ್ದಾನ ನೀಡಿದ್ದಾರೆ. `ಮೇಘಾ ಕುಗ್ರಾಮದ ಹುಡುಗಿ. ಮನೆಯಲ್ಲಿ ಅಂಥಾ ಬಡತನವಿದ್ದರೂ ಇಷ್ಟೊಂದು ಅಂಕ ಗಳಿಸಿದ್ದೊಂದು ಸಾಧನೆ. ಈ ಹುಡುಗಿ ಬಡತನದ ಕಾರಣದಿಂದ ವಿದ್ಯಾಭ್ಯಾಸ ಮೊಟಕುಗೊಳಿಸಿಕೊಳ್ಳೋ ಸ್ಥಿತಿ ತಲುಪಿರೋದನ್ನು ಕೇಳಿ ಬೇಸರವಾಯ್ತು. ಆದ್ದರಿಂದಲೇ ಸಹಾಯ ಮಾಡಿದ್ದೇನೆ. ಮುಂದೆಯೂ ಮೇಘಾ ವಿದ್ಯಾಭ್ಯಾಸಕ್ಕೆ ಸಹಾಯ ಮಾಡುತ್ತೇನೆ. ನಾನು ಬಿಗ್ ಬಾಸ್ ಶೋನಲ್ಲಿ ಗೆದ್ದ ಹಣ ಇಂಥಾ ಒಳ್ಳೆ ಕೆಲಸ ಕಾರ್ಯಗಳಿಗೇ ವಿನಿಯೋಗವಾಗಬೇಕೆಂಬುದು ತಮ್ಮ ಮಹದಾಸೆ ಅಂತ ಪ್ರಥಮ್ ಹೇಳಿಕೊಂಡಿದ್ದಾರೆ.

pratham

 

ಈ ಹುಡುಗಿ ಮೇಘಾಳ ಹೆತ್ತವರ ಬಡತನ, ಮನೆ ಕಡೆಯ ಪರಿಸ್ಥಿತಿ ಮತ್ತು ಅದೆಲ್ಲದರಾಚೆಗೂ ಓದಿ ಆಕೆ ಪಡೆದುಕೊಂಡ ಅಂಕಗಳ ವಿವರ ಕೇಳಿದರೆ ಪ್ರಥಮ್ ಸಹಾಯ ಮಾಡಿದ್ದು ಎಂಥಾ ಸಾರ್ಥಕ ಕೆಲಸ ಎಂಬುದು ಯಾರಿಗಾದರೂ ಅರ್ಥವಾಗುತ್ತೆ. ಮೇಘಾಳ ತಂದೆ ಚಾಮರಾಜ ಮಡಿವಾಳ ಸಮುದಾಯದವರು. ಈ ಕುಲಕಸುಬನ್ನು ಮಾಡುತ್ತಾ, ಕೂಲಿನಾಲಿ ಮಾಡಿಕೊಂಡು ಹೊಟ್ಟೆ ಹೊರೆಯುತ್ತಿರೋ ಅವರಿಗೆ ಮಡದಿ ರತ್ನಮ್ಮ ಕೂಡಾ ಸಹಾಯಕ್ಕೆ ನಿಂತಿದ್ದಾರೆ. ಈ ದಂಪತಿಗೆ ತಮ್ಮ ಮಗಳು ಮೇಘಾಳನ್ನ ಚೆಂದಗೆ ಓದಿಸಬೇಕೆಂಬ ಬಯಕೆ. ಅದಕ್ಕೆ ಸರಿಯಾಗಿಯೇ ಮೇಘಾ ಕೂಡಾ ಆರಂಭದಿಂದಲೂ ಬುದ್ಧಿವಂತೆ. ಚುರುಕು ಸ್ವಭಾವದ ಮೇಘಾ, ಓದಿನಲ್ಲಿ ಯಾವತ್ತೂ ಹಿಂದೆ ಬಿದ್ದವಳಲ್ಲ.

DWD PRATHAM 2

ಹೈಸ್ಕೂಲು ದಾಟುತ್ತಿದ್ದಂತೆಯೇ ತಾನೂ ಸಣ್ಣಪುಟ್ಟ ಕೆಲಸ ಮಾಡುತ್ತಲೇ ಓದು ಮುಂದುವರೆಸಿದ್ದ ಮೇಘಾ ಹೈಸ್ಕೂಲು ದಾಟಿ, ಪಿಯುಸಿ ಪೂರೈಸಿದ್ದೇ ಒಂದು ಸಾಹಸ. ಆದರೆ ಹೇಗೋ ಹರಸಾಹಸ ಪಟ್ಟು ಮಗಳನ್ನು ಪಿಯುಸಿವರೆಗೂ ಓದಿಸಿದ್ದ ಚಾಮರಾಜ ಮತ್ತು ರತ್ನಮ್ಮ ದಂಪತಿಗೆ ಮಗಳ ಕಡೆಯಿಂದ ಸಿಹಿಯೇ ಸಿಕ್ಕಿತ್ತು. ಯಾಕೆಂದರೆ ಆಕೆ 549 ಅಂಕ ಗಳಿಸೋ ಮೂಲಕ ಇಡೀ ತಾಲೂಕಿನ ಗಮನ ಸೆಳೆದಿದ್ದಳು. ಆದರೆ ಮಗಳು ಇಷ್ಟು ಚೆಂದಗೆ ಓದುತ್ತಿದ್ದರೂ ಮುಂದೆ ಆಕೆಯನ್ನು ಓದಿಸಲಾಗದ ದುಃಸ್ಥಿತಿಗೆ ಪೋಷಕರು ತಲುಪಿಕೊಂಡಿದ್ದರು. ಇನ್ನೇನು ಮೇಘಾ ಪಾಲಿಗಿನ್ನು ಓದು ಮರೀಚಿಕೆ ಎಂಬಂಥಾ ನಿರ್ಧಾರವೂ ರೂಪುಗೊಂಡಾಗಿತ್ತು.

PRATHAM 5

ಅಷ್ಟರಲ್ಲಿಯೇ ಈ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿಯಾಗಿ ಅದು ಪ್ರಥಮ್ ಅವರನ್ನೂ ತಲುಪಿಕೊಂಡಿತ್ತು. ತಕ್ಷಣವೇ ಕಾರ್ಯಪ್ರವೃತ್ತರಾದ ಪ್ರಥಮ್ ಮನೆಗೇ ತೆರಳಿ ಮೇಘಾಳನ್ನು ಮತ್ತೆ ವ್ಯಾಸಂಗದಲ್ಲಿ ಮುಂದುವರೆಯುವಂತೆ ಮಾಡಿದ್ದಾರೆ. ಈ ಮೂಲಕ ಕೂಲಿ ನಾಲಿಯಲ್ಲಿ ಕಳೆದು ಹೋಗುತ್ತಿದ್ದ ಪ್ರತಿಭಾವಂತ ವಿದ್ಯಾರ್ಥಿನಿಯೊಬ್ಬಳ ಬದುಕು ಬೆಳಗಿದ್ದಾರೆ. ಇದು ನಿಜಕ್ಕೂ ಎಲ್ಲರೂ ಮೆಚ್ಚಿಕೊಳ್ಳುವಂಥಾ, ಎಲ್ಲರಿಗೂ ಮಾದರಿಯಾದ ಕೆಲಸ.

TAGGED:Bigg bossEducational AssistancehalagpurHanurMeghaPrathamಪ್ರಥಮ್ಬಿಗ್ ಬಾಸ್ಮೇಘಾವಿದ್ಯಾಭ್ಯಾಸ ಸಹಾಯಹನೂರುಹಲಗಾಪುರ
Share This Article
Facebook Whatsapp Whatsapp Telegram

Cinema Updates

Ramya 2
ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುತ್ತೆ ಎಂದು ನಂಬಿದ್ದೇನೆ: ರಮ್ಯಾ
Cinema Karnataka Latest Main Post
Darshan Vijayalakshmi
ಥಾಯ್ಲೆಂಡ್‌ನಲ್ಲಿ ಮ್ಯಾಂಗೋ ಸ್ಟಿಕ್ಕಿ ರೈಸ್ ಸವಿದ ದರ್ಶನ್ ವಿಜಯಲಕ್ಷ್ಮಿ
Cinema Latest Sandalwood Top Stories
Darshan Pavithra
ದರ್ಶನ್‌-ಪವಿತ್ರಾ ಲಿವ್‌ ಇನ್‌ ರಿಲೇಷನ್‌ ಶಿಪ್‌ನಲ್ಲಿದ್ದರು: ಸರ್ಕಾರ ಪರ ವಕೀಲ
Bengaluru City Cinema Court Latest Main Post National Sandalwood
Darshan Court
ದರ್ಶನ್‌ ಜಾಮೀನು ಭವಿಷ್ಯ | ನಾವು ಹೈಕೋರ್ಟ್ ಮಾಡಿದ ತಪ್ಪು ಮಾಡಲ್ಲ, ತರಾತುರಿಯಲ್ಲಿ ಆದೇಶ ಕೊಡಲ್ಲ – ಸುಪ್ರೀಂ
Bengaluru City Cinema Court Latest Main Post National Sandalwood
Appu Cup League
ಅಪ್ಪು ಕಪ್ ಸೀಸನ್ 3; ಜರ್ಸಿ ಅನಾವರಣ
Bengaluru City Cinema Karnataka Latest Top Stories

You Might Also Like

Rishabh Pant 1
Cricket

ನೋವಿನಲ್ಲೂ ಫಿಫ್ಟಿ ಹೊಡೆದ ಪಂತ್‌ – ಏಕದಿನದಂತೆ ಬ್ಯಾಟ್‌ ಬೀಸಿದ ಇಂಗ್ಲೆಂಡ್‌

Public TV
By Public TV
4 hours ago
Hubballi Exam
Dharwad

ಹುಬ್ಬಳ್ಳಿ ಪರೀಕ್ಷಾ ಕೇಂದ್ರದಲ್ಲಿ ಯಡವಟ್ಟು – ಮಧ್ಯಾಹ್ನ 2 ಗಂಟೆಗೆ ನಿಗದಿ, ರಾತ್ರಿ 10 ಕಳೆದರೂ ಆರಂಭವಾಗದ ಪರೀಕ್ಷೆ

Public TV
By Public TV
4 hours ago
Bengaluru Govindraj nagar arrest
Bengaluru City

ನಡುರಸ್ತೆಯಲ್ಲೇ ಯುವತಿಯ ತುಟ್ಟಿ ಕಚ್ಚಿ ಎಸ್ಕೇಪ್ ಆಗಿದ್ದ ಬೀದಿ ಕಾಮುಕ ಅರೆಸ್ಟ್

Public TV
By Public TV
5 hours ago
SSLC Exams
Bengaluru City

ಇನ್ಮುಂದೆ 33% ಅಂಕ ಪಡೆದರೆ SSLC ಪಾಸ್

Public TV
By Public TV
5 hours ago
MB Patil and k.rammohan Naidu
Bengaluru City

ಹುಬ್ಬಳ್ಳಿ, ಬೆಳಗಾವಿ ಏರ್‌ಪೋರ್ಟ್ ಅಂತಾರಾಷ್ಟ್ರೀಯ ನಿಲ್ದಾಣಕ್ಕೆ ಮನವಿ – ಕೇಂದ್ರ ವಿಮಾನಯಾನ ಸಚಿವರೊಂದಿಗೆ ಎಂಬಿಪಿ ಮಾತುಕತೆ

Public TV
By Public TV
5 hours ago
Hulk Hogan 3
Latest

WWE ಲೆಜೆಂಡ್‌, ಕುಸ್ತಿಪಟು ಹಲ್ಕ್ ಹೊಗನ್ ನಿಧನ

Public TV
By Public TV
5 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?