ಲವ್ಲಿ ಸ್ಟಾರ್ ಪ್ರೇಮ್ (Prem) ಮತ್ತು ಶರಣ್ಯ ಶೆಟ್ಟಿ (Sharanya Shetty) ಉಡುಪಿ ಶ್ರೀಕೃಷ್ಣ ದೇಗುಲಕ್ಕೆ (Sri Krishna Temple) ಭೇಟಿ ನೀಡಿದ್ದಾರೆ. ಚಿತ್ರತಂಡದ ಜೊತೆ ಪ್ರೇಮ್ ಹಾಗೂ ಶರಣ್ಯ ಶ್ರೀಕೃಷ್ಣ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದನ್ನೂ ಓದಿ:ಅಂಬಿ ಮೊಮ್ಮಗನ ನಾಮಕರಣ ಸಂಭ್ರಮ: ಕಿಚ್ಚ ಸುದೀಪ್ ಭಾಗಿ
ಪ್ರೇಮ್ ನಟನೆಯ ಹೊಸ ಸಿನಿಮಾಗೆ ಶರಣ್ಯ ಶೆಟ್ಟಿ ನಾಯಕಿಯಾಗಿದ್ದಾರೆ. ಹಾಗಾಗಿ ಈ ಸಿನಿಮಾದ ಶೂಟಿಂಗ್ಗೆ ಚಾಲನೆ ಸಿಗುವ ಮುನ್ನ ಚಿತ್ರತಂಡದೊಂದಿಗೆ ಉಡುಪಿಯ ಶ್ರೀಕೃಷ್ಣ ದೇಗುಲಕ್ಕೆ ಭೇಟಿ ನೀಡಿದ್ದಾರೆ. ಈ ಕುರಿತು ಸೋಶಿಯಲ್ ಮೀಡಿಯಾದಲ್ಲಿ ನಟಿ ಪೋಸ್ಟ್ ಹಂಚಿಕೊಂಡಿದ್ದಾರೆ.
View this post on Instagram
ಅಂದಹಾಗೆ, ಲವ್ಲಿ ಸ್ಟಾರ್ ಪ್ರೇಮ್ ಹೊಸ ಸಿನಿಮಾಗೆ ತೇಜಸ್ ಆ್ಯಕ್ಷನ್ ಕಟ್ ಹೇಳ್ತಿದ್ದಾರೆ. ಚಿತ್ರದಲ್ಲಿ ಪ್ರೇಮ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಶರಣ್ಯ ಅವರಿಗೂ ಉತ್ತಮ ಪಾತ್ರ ಸಿಕ್ಕಿದೆ. ಈ ಸಿನಿಮಾ ಮುಹೂರ್ತ ಕಾರ್ಯಕ್ರಮ ಈಗಾಗಲೇ ನೆರವೇರಿದೆ. ಸದ್ಯದಲ್ಲೇ ಶೂಟಿಂಗ್ ಕೂಡ ಶುರುವಾಗಲಿದೆ.