– ಕುಟುಂಬಸ್ಥರಿಗೆ ರಾಘವೇಂದ್ರ ರಾಜ್ ಕುಮಾರ್ ಭರವಸೆ
ರಾಮನಗರ: ನಟ ಪುನೀತ್ ರಾಜಕುಮಾರ್ ಅಭಿಮಾನಿ ಆತ್ಮಹತ್ಯೆ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಇಂದು ಯುವಕನ ಮನೆಗೆ ನಟ ರಾಘವೇಂದ್ರ ರಾಜ್ ಕುಮಾರ್ ಭೇಟಿ ನೀಡಿದ್ದಾರೆ.
ನಾಳೆ ಪುನೀತ್ ಕಾರ್ಯಕ್ಕೆ ಬನ್ನಿ ಎಂದು ಆಹ್ವಾನ ನೀಡಿದ ರಾಘವೇಂದ್ರ ರಾಜ್ಕುಮಾರ್, ಅರ್ಧಗಂಟೆಗೂ ಹೆಚ್ಚು ಕಾಲ ಕುಟುಂಬಸ್ಥರ ಜೊತೆಗೆ ಮಾತುಕತೆ ನಡೆಸಿದ್ದಾರೆ. ಅಲ್ಲದೆ ನಿಮ್ಮ ಜೊತೆಗೆ ನಾವಿದ್ದೇವೆ ಧೈರ್ಯವಾಗಿರಿ ಎಂದು ಸಾಂತ್ವನ ಹೇಳಿದ್ದಾರೆ. ಇದನ್ನೂ ಓದಿ: ರಾಜ್ಯದ ಎಲ್ಲ ಥಿಯೇಟರ್ಗಳಲ್ಲಿ ಏಕಕಾಲಕ್ಕೆ ಅಪ್ಪುಗೆ ಶ್ರದ್ಧಾಂಜಲಿ
ನಮ್ಮ ಕುಟುಂಬದಲ್ಲಿ ನೀವು ಒಬ್ಬರು. ಈ ಭಾಗಕ್ಕೆ ಬಂದಾಗಲೆಲ್ಲ ನಾನು ನಿಮ್ಮ ಮನೆಗೆ ಬರುವುದಾಗಿ ಭರವಸೆ ನೀಡಿದರು. ಇದೇ ವೇಳೆ ಯುವಕನ ಕುಟುಂಬಸ್ಥರು ಕೂಡ, ಪುನೀತ್ ರಾಜ್ಕುಮಾರ್ ಕಾರ್ಯ ಮುಗಿದ ಮೇಲೆ ಸಮಾಧಿ ಬಳಿಗೆ ಹೋಗಿ ಸಂತಾಪ ಸೂಚಿಸಿ ಅವರ ಮನೆಗೆ ಭೇಟಿ ನೀಡುವುದಾಗಿ ತಿಳಿಸಿದರು. ಇದನ್ನೂ ಓದಿ: ಅಂಜನಾದ್ರಿ ಬೆಟ್ಟದ 575 ಮೆಟ್ಟಿಲುಗಳನ್ನು 6.5 ನಿಮಿಷದಲ್ಲಿ ಏರಿದ್ದ ಅಪ್ಪು
ಚನ್ನಪಟ್ಟಣದ ಎಲೆಕೇರೆಯಲ್ಲಿ ವೆಂಕಟೇಶ್ (25) ಆತ್ಮಹತ್ಯೆ ಮಾಡಿಕೊಂಡಿದ್ದ. ಈತ ಪುನೀತ್ ನಿಧನದ ಬಳಿಕ ಸಂಪೂರ್ಣ ಖಿನ್ನತೆಗೆ ಒಳಗಾಗಿದ್ದು, ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದನು. ಸದ್ಯ ದುಃಖದ ಸಮಯದಲ್ಲೂ ಯುವರತ್ನ ಅಭಿಮಾನಿ ಮನೆಗೆ ಧಾವಿಸಿ ರಾಘಣ್ಣ ಸಾಂತ್ವನ ಹೇಳಿದ್ದು ವಿಶೇಷವಾಗಿದೆ.