ʼಗರುಡ ಗಮನ ವೃಷಭ ವಾಹನ’ ಟೀಂ ಕಡೆಯಿಂದ ಸರ್ಪ್ರೈಸ್- ರಾಜ್ ಬಿ ಶೆಟ್ಟಿ ಬಿಗ್ ಅಪ್‌ಡೇಟ್

Public TV
2 Min Read
raj b shetty 2

‘ಒಂದು ಮೊಟ್ಟೆಯ ಕಥೆ’ ಸಿನಿಮಾ ಮೂಲಕ ನಟ ಕಮ್ ನಿರ್ದೇಶಕನಾಗಿ ಚಿತ್ರರಂಗಕ್ಕೆ ಕಾಲಿಟ್ಟ ದೈತ್ಯ ಪ್ರತಿಭೆ ರಾಜ್ ಬಿ ಶೆಟ್ಟಿ (Raj B Shetty) ಅವರು ಇದೀಗ ತಮ್ಮ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ. ‘ಗರುಡ ಗಮನ ವೃಷಭ ವಾಹನ’ (Garuda Gamana Vrushaba Vahana) ಸಿನಿಮಾ ನೋಡಿ ಇಷ್ಟಪಟ್ಟಿದ್ದ ಪ್ರೇಕ್ಷಕರಿಗೆ ಈ ತಂಡದ ಕಡೆಯಿಂದ ಮುಂದಿನ ಚಿತ್ರದ ಬಗ್ಗೆ ಬಿಗ್ ಅಪ್‌ಡೇಟ್ ತಿಳಿಸೋದಾಗಿ ಹೇಳಿದ್ದಾರೆ. ಇದನ್ನೂ ಓದಿ:‘ಪೊನ್ನಿಯನ್ ಸೆಲ್ವನ್ 2’ ಸಕ್ಸಸ್ ಬಳಿಕ ನಯನತಾರಾ ಜೊತೆಯಾದ ಜಯಂರವಿ

Raj B Shetty

ರಾಜ್ ಬಿ ಶೆಟ್ಟಿ ಅವರು ಬಹುಮುಖ ಪ್ರತಿಭೆ, ನಟ- ನಿರ್ದೇಶಕ, ಬರಹಗಾರನಾಗಿ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ‘ಒಂದು ಮೊಟ್ಟೆಯ ಕಥೆ’, ‘ಗರುಡ ಗಮನ ವೃಷಭ ವಾಹನ’ ಸಿನಿಮಾಗಳಿಗೆ  ಮಾಡಿ ರಾಜ್ ಬಿ ಶೆಟ್ಟಿ ಸೈ ಎನಿಸಿಕೊಂಡಿದ್ದಾರೆ. ರಾಜ್ ಬಿ ಶೆಟ್ಟಿ ನೇತೃತ್ವದ Lighters Buddha Film ಅಡಿಯಲ್ಲಿ ವಚನ್ ಶೆಟ್ಟಿ, ರವಿ ರೈ ನಿರ್ಮಾಣ ಮಾಡಿದ್ದರು. ಇವರ ಜೊತೆ Agastya Films ಜಂಟಿಯಾಗಿ ಬರುತ್ತಿದ್ದಾರೆ. ಇವರಿಬ್ಬರ ಕಾಂಬೋದಲ್ಲಿ ಹೊಸ ಸಿನಿಮಾ ಮೂಡಿ ಬರಲಿದೆ.

 

View this post on Instagram

 

A post shared by Raj B Shetty (@rajbshetty)

‘ಗರುಡ ಗಮನ ವೃಷಭ ವಾಹನ’ ಸಿನಿಮಾ ಟೀಂ ಕಡೆಯಿಂದ ಹೊಸ ಚಿತ್ರದ ಬಗ್ಗೆ ಗುಡ್ ನ್ಯೂಸ್ ಸಿಗಲಿದೆ. ಜೂನ್ 13ರಂದು ಬೆಳಿಗ್ಗೆ 11.07  ಚಿತ್ರದ ಬಗ್ಗೆ ಶುಭ ಸುದ್ದಿ ಸಿಗಲಿದೆ ಎಂದು ರಾಜ್ ಬಿ ಶೆಟ್ಟಿ ತಿಳಿಸಿದ್ದಾರೆ. ಈ ಹೊಸ ಪ್ರಾಜೆಕ್ಟ್‌ನಲ್ಲಿ ರಾಜ್ ಬಿ ಶೆಟ್ಟಿ ಕೂಡ ಇದ್ದಾರೆ. ಸಿನಿಮಾ ಯಾವುದು.? ಪಾತ್ರಗಳ ಬಗ್ಗೆ ಅಂದೇ ಹೆಚ್ಚಿನ ಅಪ್‌ಡೇಟ್ ಸಿಗಲಿದೆ. ಈ ಹೊಸ ಪ್ರಾಜೆಕ್ಟ್‌ನಲ್ಲಿ ಭಿನ್ನ ಪಾತ್ರ, ಕಥೆಯ ಮೂಲಕ ರಾಜ್‌ ಬಿ ಶೆಟ್ಟಿ ಬರಲಿದ್ದಾರೆ ಎನ್ನಲಾಗುತ್ತಿದೆ.

ರಾಜ್ ಬಿ ಶೆಟ್ಟಿ ಅವರ ಕೈಯಲ್ಲಿ ಟೋಬಿ, ನಟಿ ರಮ್ಯಾ ನಿರ್ಮಾಣದ ‘ಸ್ವಾತಿ ಮುತ್ತಿನ ಮಳೆ ಹನಿಯೇ’, ರಾಮನ ಅವತಾರ, ಸೇರಿದಂತೆ ಹಲವು ಚಿತ್ರಗಳು ಕೈಯಲ್ಲಿದೆ. ಇನ್ನೂ ‘ಗರುಡ ಗಮನ ವೃಷಭ ವಾಹನ’ ಚಿತ್ರದ ಕಂಟೆಂಟ್ ಭಿನ್ನವಾಗಿತ್ತು. ಈ ಚಿತ್ರವನ್ನ ಫ್ಯಾನ್ಸ್ ನೋಡಿ ಇಷ್ಟಪಟ್ಟಿದ್ದರು. ಇದೀಗ ತಂಡದ ಕಡೆಯಿಂದ ಮತ್ತೊಂದು ಸಿನಿಮಾ ಅಂದಾಕ್ಷಣ ಸಿನಿಮಾ ಮೇಲಿನ ನಿರೀಕ್ಷೆ ಬೆಟ್ಟದಷ್ಟಿದೆ. ಚಿತ್ರದ ಬಗೆಗಿನ ಹೆಚ್ಚಿನ ಅಪ್‌ಡೇಟ್‌ಗೆ ಜೂನ್ 13ರಂದು ಉತ್ತರ ಸಿಗಲಿದೆ.

Share This Article