ತೆಲುಗಿನ ಹೆಸರಾಂತ ನಟ ರಾಜಶೇಖರ್ (Rajasekhar) ಮತ್ತು ಅವರ ಪತ್ನಿ ಜೀವಿತಾಗೆ (Jeevita) ನಾಂಪಲ್ಲಿ ಕೋರ್ಟ್ ನ ಮುಖ್ಯ ಮ್ಯಾಜಿಸ್ಟ್ರೇಟ್ ಒಂದು ವರ್ಷ ಜೈಲು ಶಿಕ್ಷೆ (Jail sentence) ಮತ್ತು ಐದು ಲಕ್ಷ ರೂಪಾಯಿ ನೀಡುವಂತೆ ಆದೇಶ ಹೊರಡಿಸಿದ್ದಾರೆ. ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದ ಪ್ರಕರಣ ಇದಾಗಿದ್ದು, ರಾಜಶೇಖರ್ ಮತ್ತು ಪತ್ನಿ ಜೀವಿತಾ ಮಾಡಿರುವ ಆರೋಪ ಸುಳ್ಳು ಎಂದು ಸಾಬೀತಾಗಿದೆ.
2011ರಲ್ಲಿ ನಟ ರಾಜಶೇಖರ್ ಮತ್ತು ಅವರ ಪತ್ನಿ ಒಟ್ಟಾಗಿ ಚಿರಂಜೀವಿ (Chiranjeevi) ಬ್ಲಡ್ ಬ್ಯಾಂಕ್ ನಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿದ್ದರು. ಇಲ್ಲಿಗೆ ಬರುವ ರಕ್ತವನ್ನು ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದೆ ಎಂದು ಬಹಿರಂಗವಾಗಿ ಹೇಳಿಕೊಂಡಿದ್ದರು. ಈ ಕುರಿತು ಚಿರಂಜೀವಿ ಅವರ ಭಾವ ಅಲ್ಲು ಅರವಿಂದ್ (Allu Arvind) ಕೋರ್ಟ್ ನಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಇದನ್ನೂ ಓದಿ:ಸರ್ಕಾರದಿಂದ ವೆಬ್ ಸೀರೀಸ್ ಪ್ರಶಸ್ತಿ ಘೋಷಿಸಿದ ಸಚಿವ ಅನುರಾಗ್ ಠಾಕೂರ್
ನಟ ಚಿರಂಜೀವಿ ಕಂಡರೆ ನಟ ರಾಜಶೇಖರ್ ಅವರಿಗೆ ಆಗುವುದಿಲ್ಲ. ಕಾರಣ ಸಿಕ್ಕಾಗೆಲ್ಲ ಚಿರಂಜೀವಿಯನ್ನು ಟೀಕಿಸುತ್ತಲೇ ಇರುತ್ತಾರೆ ರಾಜಶೇಖರ್. ಇದಕ್ಕೆ ವೃತ್ತಿ ವೈಷಮ್ಯ ಕೂಡ ಕಾರಣ ಎಂದು ಹೇಳಲಾಗುತ್ತಿದೆ. ತೆಲುಗು ಚಿತ್ರೋದ್ಯಮದ ಕಲಾವಿದರ ಸಂಘದಲ್ಲೂ ಈ ಇಬ್ಬರೂ ಬಹಿರಂಗವಾಗಿ ಕಿತ್ತಾಡಿಕೊಂಡಿದ್ದರು.
ಅದರ ಮುಂದುವರೆಕೆಗಾಗಿ ಚಿರಂಜೀವಿ ಹೆಸರಿನ ಬ್ಲಡ್ ಬ್ಯಾಂಕ್ ನಲ್ಲಿ ರಕ್ತವನ್ನು ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದೆ ಎಂದಿದ್ದರು ರಾಜಶೇಖರ್. ಈ ಮಾತಿನ ವಿರುದ್ದ ಅಲ್ಲು ಅರವಿಂದ್ ದೂರು ನೀಡಿದ್ದರು. ನಿನ್ನೆ ತೀರ್ಪು ಹೊರಬಂದಿದೆ. ಕೂಡಲೇ ದಂಪತಿ ಜಾಮೀನು ಪಡೆದುಕೊಂಡು ಹೊರ ಬಂದಿದ್ದಾರೆ.
Web Stories