ರಕ್ಷಿತ್ ಶೆಟ್ಟಿ (Ayodhya) ಹೊಸ ಸಿನಿಮಾದ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆ ಅವರು ಟೆಂಪಲ್ ರನ್ ಕೂಡ ಮಾಡುತ್ತಿದ್ದಾರೆ. ಮೊನ್ನೆಯಷ್ಟೇ ಅಲೆವೂರು ಜೋಡು ರಸ್ತೆಯಲ್ಲಿ ನಡೆದ 118ನೇ ನೇಮೋತ್ಸವದಲ್ಲಿ ಪಾಲ್ಗೊಂಡಿದ್ದರು.
ಜೊತೆಗೆ ಅವರು ತಮ್ಮ ಮನೆಯಲ್ಲಿ ನಡೆದ ಕೋಲದಲ್ಲೂ ಭಾಗಿಯಾಗಿದ್ದರು. ಇದೀಗ ಅಯೋಧ್ಯೆಯಲ್ಲಿ (Ayodhya) ಕಾಣಿಸಿಕೊಂಡಿದ್ದಾರೆ ರಕ್ಷಿತ್.
ಸ್ನೇಹಿತರ ಜೊತೆಗೆ ಅಯೋಧ್ಯೆಗೆ ತೆರಳಿರುವ ರಕ್ಷಿತ್, ಅಲ್ಲಿನ ರಾಮನ ದರ್ಶನ ಪಡೆದಿದ್ದಾರೆ. ಜೊತೆಗೆ ರಾಮಲಲ್ಲಾ ಮತ್ತು ಅಯೋಧ್ಯೆಯ ಕುರಿತಂತೆ ಮೆಚ್ಚುಗೆಯನ್ನೂ ವ್ಯಕ್ತ ಪಡಿಸಿದ್ದಾರೆ. ಅವರು ಅಯೋಧ್ಯೆಯಲ್ಲಿ ಇರುವ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ.
ರಕ್ಷಿತ್ ಶೆಟ್ಟಿ ಹೊಸ ಸಿನಿಮಾದ ಕೆಲಸದಲ್ಲಿ ತೊಡಗಿದ್ದಾರೆ. ಇದೇ ತಿಂಗಳು ಚಿತ್ರಕ್ಕೆ ಮುಹೂರ್ತ ಎಂದು ಹೇಳಲಾಗುತ್ತಿದೆ. ಹೊಂಬಾಳೆ ಬ್ಯಾನರ್ ನಲ್ಲಿ ಈ ಸಿನಿಮಾ ಮೂಡಿ ಬರಲಿದ್ದು, ಈಗಾಗಲೇ ಸ್ಕ್ರಿಪ್ಟ್ ಕೆಲಸ ಮುಗಿದಿದೆ.
ಜೊತೆಗೆ ಕಲಾವಿದರ ಆಯ್ಕೆಯಲ್ಲೂ ಅವರು ತೊಡಗಿದ್ದಾರೆ ಎಂದು ಹೇಳಲಾಗುತ್ತಿದೆ.