ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟ ರಮೇಶ್ (Ramesh Aravind) ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆಕ್ಟೀವ್ ಆಗಿದ್ದಾರೆ. ತಮ್ಮದೇ ರೀತಿಯಲ್ಲಿ ಚಿತ್ರರಂಗಕ್ಕೆ ಕೊಡುಗೆ ನೀಡುತ್ತಲೇ ಬಂದಿದ್ದಾರೆ. ಇದೀಗ ಈ ಮಹಾನ್ ನಟನನ್ನ ಗುರುತಿಸಿ ರಾಣಿ ಚೆನ್ನಮ್ಮ ವಿವಿಯಿಂದ ಗೌರವ ಡಾಕ್ಟರೇಟ್ ನೀಡಲಾಗಿದೆ.
- Advertisement 2
ನಟ, ನಿರ್ದೇಶಕ, ಬರಹಗಾರನಾಗಿ ಸೈ ಎನಿಸಿಕೊಂಡಿರುವ ರಮೇಶ್ ಅರವಿಂದ್ ಅವರು ಚಿತ್ರರಂಗಕ್ಕೆ ನೀಡಿರುವ ಅಪಾರ ಕೊಡುಗೆಯನ್ನು ಗುರುತಿಸಿ ಸುವರ್ಣಸೌಧ ಸಭಾಭವನದಲ್ಲಿ ರಾಣಿ ಚೆನ್ನಮ್ಮ ವಿಶ್ವ ವಿದ್ಯಾಲಯದ 10ನೇ ಘಟಿಕೋತ್ಸವ ಇಂದು (ಸೆ.14) ನಡೆದಿದೆ. ಸಮಾಜ ಸೇವಕರಾದ ವ್ಹಿ.ರವಿಚಂದನ್ ವೆಂಕಟರಾಮನ್ ಅವರಿಗೆ `ಡಾಕ್ಟರ್ ಆಫ್ ಸೈನ್ಸ್’, ಚಿತ್ರರಂಗ ಮತ್ತು ಧಾರ್ಮಿಕ ವಲಯದ ಸೇವೆಯನ್ನ ಗುರುತಿಸಿ ನಟ ರಮೇಶ್ ಅರವಿಂದ್ (Ramesh Aravind) ಮತ್ತು ಅಕ್ಕ ಅನ್ನಪೂರ್ಣ (Akka Annapoorna) ಅವರಿಗೆ `ಡಾಕ್ಟರ್ ಆಫ್ ಲೆಟರ್ಸ್’ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯಿತು. ಇದನ್ನೂ ಓದಿ: ಕನ್ನಡದ ಖ್ಯಾತ ಕಿರುತೆರೆ ನಟ ಮಂಡ್ಯ ರವಿ ಸ್ಥಿತಿ ಚಿಂತಾಜನಕ: ಬೆಂಗಳೂರಿನಿಂದ ಮಂಡ್ಯ ಆಸ್ಪತ್ರೆಗೆ ಶಿಫ್ಟ್
- Advertisement 3
- Advertisement 4
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಈ ವೇಳೆ ಡಾಕ್ಟರೇಟ್ ಅನ್ನು ಪ್ರಧಾನ ಮಾಡಿದ್ದಾರೆ. ರಾಣಿ ಚೆನ್ನಮ್ಮ ವಿವಿ. ಕುಲಪತಿ ಪ್ರೋ. ರಾಮಚಂದ್ರೆಗೌಡ ಸೇರಿದಂತೆ ಹಲವರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಇನ್ನು ನೆಚ್ಚಿನ ನಟನಿಗೆ ಅಭಿಮಾನಿಗಳು, ಸಿನಿಮಾರಂಗದ ಸ್ನೇಹಿತರು ಶುಭಹಾರೈಸಿದ್ದಾರೆ.
ಗೌರವ ಡಾಕ್ಟರೇಟ್ ಬಳಿಕ ರಮೇಶ್ ಅರವಿಂದ್ ಮಾಧ್ಯಮಕ್ಕೆ ಪ್ರತಿಕ್ರಿಯಿಸಿ, ನನ್ನ ಈ ಸಂಭ್ರಮದ ಕ್ಷಣದಲ್ಲಿ ತಂದೆ ಇರಬೇಕಿತ್ತು. ನನಗೆ ಗೌರವ ಡಾಕ್ಟರೇಟ್ ಸಿಗ್ತಿದ್ದಂತೆ ಸಂಬಂಧಿಕರಿಗೆ ವಾಟ್ಸಪ್ ಮೆಸೇಜ್ ಮಾಡಿದೆ. ಅಭಿನಂದನೆಗಳು, ನಿಮ್ಮ ತಂದೆ ಇರಬೇಕಿತ್ತು ಎಂದು ಆ ಕಡೆಯಿಂದ ಪ್ರತಿಕ್ರಿಯೆ ಬಂದಿದೆ ಎಂದು ತಂದೆ ಅವರನ್ನ ನೆನೆದು ನಟ ರಮೇಶ್ ಭಾವುಕರಾಗಿದ್ದಾರೆ. 30 ವರ್ಷ ಚಿತ್ರರಂಗದಲ್ಲಿ ಸಲ್ಲಿಸಿದ ಸೇವೆಗೆ ಗೌರವ ಡಾಕ್ಟರೇಟ್ ಸಿಕ್ಕಿದೆ. ಟಿಕೆಟ್ ತೆಗೆದುಕೊಂಡು ನನ್ನ ಸಿನಿಮಾ ನೋಡಿದ ಪ್ರತಿ ಪ್ರೇಕ್ಷಕನಿಗೆ ನಾನು ಋಣಿ ಆಗಿದ್ದೇನೆ. ಈ ವೇಳೆ ನನ್ನ ಜೊತೆಗೆ ನಟಿಸಿರುವ ಹಲವು ಕಲಾವಿದರನ್ನು ನಾನು ಸ್ಮರಿಸುವೆ. ಎಲ್ಲರ ಸಹಾಕರವೇ ನನ್ನ ಈ ಸಾಧನೆಗೆ ಕಾರಣ ಎಂದು ರಮೇಶ್ ಅರವಿಂದ್ ಮಾತನಾಡಿದ್ದಾರೆ.