ಚುನಾವಣೆಯ ರಂಗು ಜೋರಾಗಿದೆ. ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ (Shivarajkumar) ಅವರು ಕಾಂಗ್ರೆಸ್ ಪರ ಪ್ರಚಾರ ಮಾಡ್ತಿದ್ದಾರೆ. ‘ಕೈ’ಗೆ ಶಿವಣ್ಣ ಸಾಥ್ ಕೊಡ್ತಿದ್ದಂತೆ ಬಿಜೆಪಿ ನಾಯಕರು ಅಸಮಾಧಾನ ಹೊರಹಾಕಿದ್ದರು. ಇದೀಗ ಈ ಬಗ್ಗೆ ನಟ ಶಿವಣ್ಣ ಪ್ರತಿಕ್ರಿಯೆ ನೀಡಿದ್ದಾರೆ. ಶಿವಣ್ಣ ಅವರು ಸಿದ್ದರಾಮಯ್ಯ ಪರ ಭರ್ಜರಿಯಾಗಿ ಪ್ರಚಾರ ಮಾಡ್ತಿದ್ದಾರೆ. ಗೀತಾ ಶಿವರಾಜ್ಕುಮಾರ್- ಮಧು ಬಂಗಾರಪ್ಪ ಜೊತೆಗೂಡಿ ಚುನಾವಣಾ ಅಖಾಡದಲ್ಲಿ ಶಿವಣ್ಣ ಪ್ರಚಾರ ಜೋರಾಗಿಯೇ ನಡೆಯುತ್ತಿದೆ. ಹೀಗಿರುವಾಗ ಬಿಜೆಪಿ ನಾಯಕರ (Bjp) ಅಸಮಾಧಾನಕ್ಕೆ ನಟ ರಿಯಾಕ್ಟ್ ಮಾಡಿದ್ದಾರೆ. ಇದನ್ನೂ ಓದಿ:ರಾಜಕೀಯಕ್ಕೆ ಅಖಾಡಕ್ಕೆ ರಮೇಶ್ ಅರವಿಂದ್? ಸ್ಪಷ್ಟನೆ ನೀಡಿದ ನಟ
ವರುಣದಲ್ಲಿ ಪ್ರಚಾರ ಚೆನ್ನಾಗಿ ನಡೆಯಿತು. ಇವತ್ತು ಮುಂಡುಗೋಡು, ಶಿರಸಿಯಲ್ಲಿ ಪ್ರಚಾರ ಮಾಡ್ತೀನಿ ಎಂದು ತಮ್ಮ ಮುಂದಿನ ನಡೆ ಬಗ್ಗೆ ಶಿವಣ್ಣ ಅಪ್ಡೇಟ್ ನೀಡಿದ್ದರು. ಸಚಿವ ಸೋಮಣ್ಣ- ಪ್ರತಾಪ ಸಿಂಹ ಅವರು ನಮಗೆ ಒಳ್ಳೆಯ ಆಪ್ತರು. ಅವರ ಬಗ್ಗೆ ಒಳ್ಳೆಯ ಗೌರವವಿದೆ. ನಾನು ಏನು ಚಿಕ್ಕ ಹುಡುಗನಾ ನನಗೆ ಈಗ 61 ವರ್ಷ ಆಯ್ತು. ನನಗೆ ಯಾರು ವೈರಿಗಳಿಲ್ಲ. ಎಲ್ಲರೂ ನನ್ನ ಸ್ನೇಹಿತರೇ ಆಗಿದ್ದಾರೆ. ಇನ್ನೂ ರಾಹುಲ್ ಗಾಂಧಿ (Rahul Gandhi) ಅವರನ್ನ ಮೀಟ್ ಮಾಡಬೇಕು ಅಂತಾ ಮೊದಲಿನಿಂದಲೂ ನನಗೆ ಆಸೆ ಇತ್ತು. ಮೊನ್ನೆಯಷ್ಟೇ ಅವರನ್ನ ಮೀಟ್ ಮಾಡಿದೆ, ರಾಹುಲ್ ಗಾಂಧಿ ಅವರ ಫಿಟ್ನೆಸ್ ಇಷ್ಟ ಆಯ್ತು. ಹಾಗಾಗಿ ಅವರ ಬಗ್ಗೆ ಇಂಪ್ರೆಸ್ ಆಯ್ತು ಎಂದು ಶಿವಣ್ಣ ಖುಷಿಯಿಂದ ಮಾತನಾಡಿದರು. ಕಾಂಗ್ರೆಸ್ ಬಿಟ್ಟು ಬೇರೆ ಪಕ್ಷದವರು ಯಾರು ಪ್ರಚಾರಕ್ಕೆ ನನ್ನನ್ನು ಕರೆದಿರಲಿಲ್ಲ. ಯಾರಾದರೂ ಕರೆದಿದ್ದರೆ ಅವರ ಪರ ಪ್ರಚಾರಕ್ಕೆ ನಾನು ಹೋಗುತ್ತಿದ್ದೆ. ಮೊದಲಿನಿಂದಲೂ ಸಿನಿಮಾದಲ್ಲಿ ಬ್ಯುಸಿಯಾಗಿದ್ದೆ, ಈಗ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದೀನಿ ಎಂದು ಶಿವಣ್ಣ ಮಾತನಾಡಿದರು.
ಶಿವಣ್ಣ ಕಾಂಗ್ರೆಸ್ (Congress) ಪ್ರಚಾರ ಮಾಡ್ತಿದ್ದಂತೆ, ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ (Pratapsimha) ಟ್ವೀಟ್ ಮೂಲಕ ಟಾಂಗ್ ಕೊಟ್ಟಿದ್ದರು. ಬಿಜೆಪಿ ಅಭ್ಯರ್ಥಿ ಸೋಮಣ್ಣನನ್ನು ಹೊಗಳುವ ಮೂಲಕ ಶಿವಣ್ಣನಿಗೆ ಟಾಂಗ್ ನೀಡಿದ್ದರು. ಪುನೀತ್ ರಾಜ್ ಕುಮಾರ್ ಸರ್ ಹೆಸರಿನಲ್ಲಿ ಬಡವರಿಗಾಗಿ ಆಸ್ಪತ್ರೆ ಕಟ್ಟಿದ ಸೋಮಣ್ಣ. ಮನೆಮೆಚ್ಚಿ ಶ್ಲಾಘಿಸಿದ ರಾಘಣ್ಣ, ಸಿದ್ರಾಮಣ್ಣ ಪರವಾಗಿ ಪ್ರಚಾರಕ್ಕೆ ಇಳಿದ ಶಿವಣ್ಣ. ಅವರವರ ಭಾವ ಭಕುತಿಗೆ ಎಂದು ಟ್ವೀಟ್ ಮಾಡಿದ್ದರು. ಇದಕ್ಕೆ ನಟ ಶಿವಣ್ಣ ಪರೋಕ್ಷವಾಗಿ ಪ್ರತಿಕ್ರಿಯೆ ನೀಡಿದ್ದಾರೆ.
ಪುನೀತ್ ರಾಜಕುಮಾರ್ ಸರ್ ಹೆಸರಿನಲ್ಲಿ ಬಡವರಿಗಾಗಿ ಆಸ್ಪತ್ರೆ ಕಟ್ಟಿದ ಸೋಮಣ್ಣ, ಮನಮೆಚ್ಚಿ ಶ್ಲಾಘಿಸಿದ ರಾಘಣ್ಣ, ಸಿದ್ರಾಮಣ್ಣ ಪರವಾಗಿ ಪ್ರಚಾರಕ್ಕಿಳಿದ ಶಿವಣ್ಣ!
ಅವರವ ಭಾವ ಭಕುತಿಗೆ… pic.twitter.com/AwsuZHzmHA
— Pratap Simha (@mepratap) May 4, 2023
ಅಪ್ಪು ಹೆಸರಿನಲ್ಲಿ ಅಭಿಮಾನಿಗಳು ಕೆಲಸ ಮಾಡಿದ್ದಾರೆ. ರಾಯಚೂರಿನಲ್ಲಿ ಒಬ್ಬರು ಸಾದಿಕ್ ಅಂತಾ ಇದ್ದಾರೆ ಜೀವಂತವಾಗಿ ಇದ್ದಾಗಲು ಒಳ್ಳೆಯ ಕೆಲಸ ಮಾಡಿದ್ದರು. ಈಗಲು ಮಾಡುತ್ತಿದ್ದಾರೆ. ಆದರೆ ಅವರು ಯಾರು ಹೇಳಿಕೊಂಡು ಓಡಾಡಲ್ಲ ಎಂದು ಶಿವಣ್ಣ ಪ್ರತಿಕ್ರಿಯೆ ನೀಡಿದ್ದಾರೆ. ಸುದೀಪ್ ಅವರು ಕೂಡ ಪ್ರಚಾರಕ್ಕೆ ಹೋಗ್ತಿದ್ದಾರೆ. ಹಾಗಂತ ನಾಳೆ ನಾನು ಸುದೀಪ್ ಅವರನ್ನು ಮಾತನಾಡಿಸಲು ಆಗಲ್ವಾ ಅಂತಾ ಶಿವಣ್ಣ ಪ್ರಶ್ನೆ ಮಾಡಿದ್ದಾರೆ. ನಾವಿಬ್ಬರೂ ಬೇರೆ ಬೇರೆ ಪಕ್ಷದಲ್ಲಿ ಪ್ರಚಾರ ಮಾಡ್ತಿದ್ದರು. ನಾವಿಬ್ಬರೂ ಎಂದಿಗೂ ಸ್ನೇಹಿತರೇ ಎಂದು ಶಿವಣ್ಣ ರಿಯಾಕ್ಟ್ ಮಾಡಿದ್ದಾರೆ.