ಕಿಚ್ಚ ಸುದೀಪ್‌ಗೆ ಬೆದರಿಕೆ ಪತ್ರ ಪ್ರಕರಣದಲ್ಲಿ ಹೊಸ ತಿರುವು

Public TV
1 Min Read
sudeep 1 4

ಸ್ಯಾಂಡಲ್‌ವುಡ್‌ನ (Sandalwood) ಸದ್ಯ ಲೇಟೆಸ್ಟ್ ಸುದ್ದಿ ಸಮಾಚಾರ ಅಂದರೆ ಕಿಚ್ಚ ಸುದೀಪ್‌ಗೆ (Kiccha Sudeep) ಬೆದರಿಕೆ ಪತ್ರ ಬಂದಿರೋದು. ಖಾಸಗಿ ವೀಡಿಯೋ ಬೆದರಿಕೆ ಪತ್ರಕ್ಕೆ ಸಂಬಂಧಿಸಿದಂತೆ ನಟ ಸುದೀಪ್ ಮತ್ತು ಮ್ಯಾನೇಜರ್ ಜಾಕ್ ಮಂಜು ಪ್ರಕರಣ ದಾಖಲಿಸಿದ್ದಾರೆ. ಈಗಾಗಲೇ ಸಿಸಿಬಿ ತನಿಖೆ ಕೂಡ ಶುರುವಾಗಿದ್ದು, ಈ ಬಗ್ಗೆ ಹೊಸ ಅಪ್‌ಡೇಟ್‌ವೊಂದು ಸಿಕ್ಕಿದೆ.

Sudeep with jack manju 1

ಬೆದರಿಕೆ ಪತ್ರದ ಪ್ರಕರಣದ ಹಿಂದೆ ಯಾರಿದ್ದಾರೆ ಎಂಬುದು ನನಗೆ ಗೊತ್ತಿದೆ ಎಂದು ಮೊನ್ನೆಯಷ್ಟೇ ಸುದೀಪ್ ಹೇಳಿದ್ದರು. ಸಿನಿಮಾ ರಂಗದವರೇ ಈ ಪ್ರಕರಣದಲ್ಲಿ ಭಾಗಿಯಾಗಿದ್ದು, ಕಾನೂನು ಮೂಲಕವೇ ಅವರಿಗೆ ಉತ್ತರ ಕೊಡುತ್ತೇನೆ ಎಂದೂ ಹೇಳಿಕೊಂಡಿದ್ದರು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಮಹತ್ವದ ಸುಳಿವು ಸಿಕ್ಕಿದೆ. ಸುದೀಪ್ ಮನೆಗೆ ಬಂದಿದ್ದ ಆ ಎರಡೂ ಬೆದರಿಕೆ ಪತ್ರಗಳು ದೊಮ್ಮಲೂರಿನಿಂದ ಪೋಸ್ಟ್ ಆಗಿದೆ. ಆ ಬೆದರಿಕೆ ಪತ್ರಗಳ ಸಂಬಂಧ ಸಿಸಿಬಿಯಿಂದ (Central Crime Branc) ತನಿಖೆ ಶುರುವಾಗಿದ್ದು, ಶಂಕಿತ ಜಾಡು ಹಿಡಿದು ಹೊರಟಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ತಿರುವು ಸಿಕ್ಕಿದೆ. ಇದನ್ನೂ ಓದಿ:ಹೆಣ್ಣು ಮಗುವಿಗೆ ಜನ್ಮ ನೀಡಿದ ‘ಆಕಾಶದೀಪ’ ನಟಿ ದಿವ್ಯಾ ಶ್ರೀಧರ್

sudeep

ಸುದೀಪ್‌ಗೆ ಬೆದರಿಕೆ ಪತ್ರ ಹಾಕಲು ಸ್ವಿಫ್ಟ್ ಕಾರು ಬಳಸಲಾಗಿದೆ. ಈ ವೇಳೆ ನಂಬರ್ ಪ್ಲೇಟ್ ಅನ್ನೇ ಬದಲಿಸಿ ದುಷ್ಕರ್ಮಿಗಳು ಕಾರು ಬಳಸಿದ್ದಾರೆ. ಈ ಮೂಲಕ ದೊಮ್ಮಲೂರು ಪೋಸ್ಟ್ ಆಫೀಸ್‌ಗೆ ಸ್ವಿಫ್ಟ್ ಕಾರಿನಲ್ಲಿ ಆರೋಪಿಗಳು ಬಂದು ಲೆಟರ್ ಹಾಕಿದ್ದಾರೆ. ಸಿಸಿಟಿಟಿವಿಯಲ್ಲಿ ಸ್ವಿಫ್ಟ್ ಕಾರ್ ಬಳಸಿರೋದು ತಿಳಿದು ಬಂದಿದೆ. ಈ ಕಾರು ಕೆಂಗೇರಿ ಬಳಿಯ ವ್ಯಕ್ತಿಗೆ ಸೇರಿರೋದು ಪತ್ತೆಯಾಗಿದೆ. ವ್ಯಕ್ತಿಯ ವಿಚಾರಣೆಯ ನಂತರ ಆತನಿಗೂ ಈ ಪತ್ರಕ್ಕೂ ಸಂಬಂಧವಿಲ್ಲ ಅನ್ನೋದು ತಿಳಿದು ಬಂದಿದೆ. ನಕಲಿ ನಂಬರ್ ಪ್ಲೇಟ್ ಬಳಸಿ ಸುದೀಪ್ ಮನೆಗೆ ಬೆದರಿಕೆ ಪತ್ರ ಕಳುಹಿಸಿರೋದು ಇದೀಗ ಬೆಳಕಿಗೆ ಬಂದಿದೆ. ಮುಂದಿನ ದಿನಗಳಲ್ಲಿ ಈ ಪ್ರಕರಣ ಯಾವ ರೀತಿಯ ತಿರುವು ಪಡೆಯಲಿದೆ ಎಂಬುದನ್ನ ಕಾದುನೋಡಬೇಕಿದೆ.

Share This Article