Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಟ ವಿಜಯ್ ಬಿಜೆಪಿಯ ʻಸಿʼ ಟೀಂ – ತಮಿಳುನಾಡು ಡಿಎಂಕೆ ಸಚಿವ ಟೀಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ನಟ ವಿಜಯ್ ಬಿಜೆಪಿಯ ʻಸಿʼ ಟೀಂ – ತಮಿಳುನಾಡು ಡಿಎಂಕೆ ಸಚಿವ ಟೀಕೆ

Cinema

ನಟ ವಿಜಯ್ ಬಿಜೆಪಿಯ ʻಸಿʼ ಟೀಂ – ತಮಿಳುನಾಡು ಡಿಎಂಕೆ ಸಚಿವ ಟೀಕೆ

Public TV
Last updated: October 28, 2024 10:05 pm
Public TV
Share
2 Min Read
Thalapathy Vijay 3
SHARE

ಚೆನ್ನೈ: 2026ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಬೇಕೆಂಬ ಗುರಿ ಹೊಂದಿರುವ ತಮಿಳಗ ವೆಟ್ರಿ ಕಳಗಂ (TVK) ವಿರುದ್ಧ ಡಿಎಂಕೆ ಹಾಗೂ ಎಐಡಿಎಂಕೆ ನಾಯಕರು (AIDMK Leaders) ಮುಗಿಬಿದ್ದಿದ್ದಾರೆ. ವಿಜಯ್‌ ನಾಯಕತ್ವದ ಟಿವಿಕೆ ಪಕ್ಷವು ಬಿಜೆಪಿಯ ʻಸಿʼಟೀಂ ಎಂದು ಡಿಎಂಕೆ ಕರೆದರೆ, ಎಐಡಿಎಂಕೆ ಹೊಸ ಬಾಟಲಿಯಲ್ಲಿ ಹಳೆಯ ವೈನ್‌ ಮಿಕ್ಸ್‌ ಮಾಡಿದಂತಿದೆ ಎಂದು ಟೀಕಿಸಿದೆ.

ತಮಿಳಿಗ ವೆಟ್ರಿಕಳಗಂ ಪಕ್ಷದ ತತ್ವ ಸಿದ್ಧಾಂತಗಳು ವಿವಿಧ ಪಕ್ಷಗಳ ಪ್ರಸ್ತುತ ರಾಜಕೀಯ ನಿಲುವುಗಳ ಕಾಕ್‌ಟೈಲ್ ಆಗಿದೆ ಎಂದು ಗುಡುಗಿರುವ ಎಐಎಡಿಎಂಕೆ, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನಟ ಕಮಲ್ ಹಾಸನ್ ಅವರ ಮಕ್ಕಳ ನೀಡಿ ಮೈಯಮ್ (MNM) ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದೆ.‌ ಇದನ್ನೂ ಓದಿ: 2026ರ ಚುನಾವಣೆಯಲ್ಲಿ ಬಹುದೊಡ್ಡ ಪಕ್ಷವಾಗಿ ಗೆಲ್ತೀವಿ – ದಳಪತಿ ವಿಜಯ್‌ ʻವಿಕ್ಟರಿʼ ಮಾತು

Thalapathy Vijay 1

ಭಾನುವಾರ ನಡೆದ ಪಕ್ಷದ ಮೊದಲ ರಾಜ್ಯಮಟ್ಟದ ಸಮಾವೇಶದಲ್ಲಿ ಮಾತನಾಡಿದ್ದ ವಿಜಯ್ (Thalapathy Vijay) ಅವರು, ಬಿಜೆಪಿ ಹಾಗೂ ಭ್ರಷ್ಟ ಡಿಎಂಕೆಯು ನಮ್ಮ ಸೈದ್ಧಾಂತಿಕ ಮತ್ತು ರಾಜಕೀಯ ವಿರೋಧಿಗಳು ಎಂದು ಘೋಷಿಸಿದ್ದರು. ಇದೇ ವೇಳೆ ಜಾತ್ಯತೀತತೆ ಮತ್ತು ‘ಸಾಮಾಜಿಕ ನ್ಯಾಯವು ಟಿವಿಕೆಯ ಸಿದ್ಧಾಂತಗಳು ಎಂದು ಪ್ರಕಟಿಸಿದರು. ದ್ರಾವಿಡವಾದ ಹಾಗೂ ತಮಿಳು ರಾಷ್ಟ್ರೀಯತೆಯನ್ನು ತಮಿಳುನಾಡಿನ ಎರಡು ಕಣ್ಣುಗಳು ಎಂದು ಬಣ್ಣಿಸಿದ್ದರು. ಟಿವಿಕೆಯ ಸಿದ್ಧಾಂತ ಮತ್ತು ನನ್ನ ನಾಯಕತ್ವ ಒಪ್ಪಿಕೊಳ್ಳುವ ರಾಜಕೀಯ ಪಕ್ಷಗಳೊಂದಿಗೆ ಅಧಿಕಾರ ಹಂಚಿಕೊಳ್ಳಲು ಸಿದ್ಧನಿದ್ದೇನೆ ಎಂದು ದಳಪತಿ ವಿಜಯ್‌ ಹೇಳಿದ್ದಾರೆ.

Thalapathy Vijay

ನಟ ವಿಜಯ್‌ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ತಮಿಳುನಾಡು ಕಾನೂನು ಸಚಿವ ರಘುಪತಿ, ವಿಜಯ್‌ ಅವರ ತಮಿಳಿಗ ವೆಟ್ರಿ ಕಳಗಂ ಪಕ್ಷವು. ಎ ಟೀಂ, ಬಿ ಟೀಂ ಅಲ್ಲ, ಬಿಜೆಪಿಯ ಸಿ ಟೀಂ. ದ್ರಾವಿಡ ಮಾದರಿಯ ಆಡಳಿತವನ್ನು ಜನರ ಮನಸ್ಸಿನಿಂದ ತೆಗೆದುಹಾಕಲು ಸಾಧ್ಯವಿಲ್ಲ ಎಂಬುದು ಸ್ಪಷ್ಟವಾಗಿದೆ ಎಂದಿದ್ದಾರೆ. ಇದನ್ನೂ ಓದಿ: ತೇಜಸ್ವಿ ಸೂರ್ಯ ಈಗ ಐರನ್ ಮ್ಯಾನ್ – 70.3 ರೇಸ್‌ನಲ್ಲಿ ವಿಜೇತರಾದ ಪ್ರಥಮ ಜನಪ್ರತಿನಿಧಿ!

Thalapathy Vijay 2

ಡಿಎಂಕೆ ನಾಯಕ ಇವಿಕೆಎಸ್ ಇಳಂಗೋವನ್ ಪ್ರತಿಕ್ರಿಯಿಸಿ, ನಮ್ಮ ಪಕ್ಷದ ನೀತಿಗಳನ್ನು ವಿಜಯ್ ಕಾಪಿ ಮಾಡಿ, ಹೊಸದಾಗಿ ಘೋಷಿಸಿದ್ದಾರೆ. ಅವರು (ವಿಜಯ್) ಏನು ಹೇಳಿದ್ದಾರೋ ಅದನ್ನು ನಾವು ಈಗಾಗಲೇ ಹೇಳಿದ್ದೇವೆ ಮತ್ತು ನಾವು ಅನುಸರಿಸುತ್ತಿದ್ದೇವೆ. ನಮ್ಮ ಪಕ್ಷವು (ಡಿಎಂಕೆ) ಜನರ ಸಮಸ್ಯೆಗಳಿಗಾಗಿ ನಿರಂತರವಾಗಿ ಹೋರಾಟ ನಡೆಸಿದೆ. ಆದರೆ, ವಿಜಯ್ ಅವರ ಪಕ್ಷವು ರಾಜಕೀಯಕ್ಕೆ ಪ್ರವೇಶಿಸಿದ ತಕ್ಷಣವೇ ಅಧಿಕಾರದಲ್ಲಿರಲು ಹಾತೊರೆಯುತ್ತಿದೆ. ಇದಲ್ಲದೇ, ಟಿವಿಕೆ ನಾಯಕರು ಡಿಎಂಕೆ ನಾಯಕರಂತೆ ಜೈಲಿಗೆ ಹೋಗಿ ಜನರಿಗಾಗಿ ಹೋರಾಡುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.

ಎಐಡಿಎಂಕೆ ವಕ್ತಾರ ಕೋವೈ ಸತ್ಯನ್‌ ಮಾತನಾಡಿ, ಡಿಎಂಕೆ, ಟಿವಿಕೆ ಸೇರಿದಂತೆ ಇತರ ಪಕ್ಷಗಳ ನಡುವಿನ ವ್ಯತ್ಯಾಸವೆಂದರೆ ನಾವು ಅವರಿಗಿಂತ ಹೆಚ್ಚು ಬಲಿಷ್ಠರಾಗಿದ್ದೇವೆ. ಜನರಿಂದ, ಜನರಿಗಾಗಿ, ಜನರಿಗೋಸ್ಕರವೇ ಕೆಲಸ ಮಾಡುತ್ತೇವೆ. ಹೊಸದಾಗಿ ರಾಜಕೀಯಕ್ಕೆ ಬಂದಿರುವ ವಿಜಯ್ ಅವರಿಗೆ ಅಭಿನಂದನೆಗಳು ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ಸರ್ಕಾರದ ಮುಖ್ಯಸ್ಥರ ಭೇಟಿಯಾದ್ರೆ ಡೀಲ್ ಎಂದರ್ಥವಲ್ಲ: ಮೋದಿ ಭೇಟಿ ಬಗ್ಗೆ ಮೌನ ಮುರಿದ ಸಿಜೆಐ

ಟಿವಿಕೆ ಪಕ್ಷದ ಸಿದ್ಧಾಂತವು ಇತರೆ ಪಕ್ಷಗಳ ಸಿದ್ಧಾಂತ ಮತ್ತು ಹೊಸ ಬಾಟಲಿಯಲ್ಲಿ ಹಳೆಯ ವೈನ್ ಮಿಕ್ಸ್‌ ಮಾಡಿದಂತಿದೆ. ತಮಿಳುನಾಡಿನ ಎಲ್ಲಾ ರಾಜಕೀಯ ಪಕ್ಷಗಳಿಂದ ತೆಗೆದುಕೊಂಡ ಕಾನ್ಸೆಲ್ ಸಿದ್ಧಾಂತವಾಗಿದೆ. ವಿಜಯ್ ಅವರು ಜಾತಿಗಣತಿ ಸೇರಿದಂತೆ ಹಲವು ಹಲವಾರು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ಇದನ್ನು ಕಾರ್ಯರೂಪಕ್ಕೆ ತರಲು ನಾವು ಅವರಿಗೆ ಸಮಯ ನೀಡುತ್ತೇವೆ ಎಂದು ಸತ್ಯನ್ ತಿಳಿಸಿದ್ದಾರೆ.

TAGGED:DMKDravidian IdeologypoliticianTamizhaga Vetri KazhagamThalapathy Vijayತಮಿಳಿಗ ವೆಟ್ರಿ ಕಾಳಗಂತಮಿಳುನಾಡುದಳಪತಿ ವಿಜಯ್ರಾಜಕೀಯ
Share This Article
Facebook Whatsapp Whatsapp Telegram

Cinema news

Kavya
BBK 12 | ಧ್ರುವಂತ್‌ ಔಟ್‌ – Top 6 ಸ್ಪರ್ಧಿಯಾಗಿ ಕಾವ್ಯ ಸೇಫ್‌
Cinema Latest Main Post TV Shows
Shri Mahadev
ಅಮೂಲ್ಯ ನಟನೆಯ ಪೀಕಬೂ ಚಿತ್ರಕ್ಕೆ ಶ್ರೀರಾಮ್ ಹೀರೋ
Cinema Latest Sandalwood Top Stories
bigg boss 1
Bigg Boss: ಇಂದು ಮಿಡ್‌ ವೀಕ್‌ ಎಲಿಮಿನೇಷನ್‌ – ಮನೆಯಿಂದ ಹೊರ ಹೋಗೋದ್ಯಾರು?
Cinema Latest Top Stories TV Shows
Mango Pachcha Movie
ಮ್ಯಾಂಗೋ ಪಚ್ಚ ಸಿನಿಮಾದ ಅರಗಿಣಿಯೇ ಹಾಡಿಗೆ ಕಿಚ್ಚನ ಪುತ್ರಿಯ ಧ್ವನಿ
Cinema Latest Sandalwood Top Stories

You Might Also Like

Shakuntala Nataraj 3
Court

ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ

Public TV
By Public TV
5 hours ago
Mandya
Districts

ನಾಗಮಂಗಲ | ಬಗರ್‌ ಹುಕುಂನಲ್ಲಿ ಕೋಟಿ‌ ಕೋಟಿ ಅವ್ಯವಹಾರ; 11 ಅಧಿಕಾರಿಗಳ ವಿರುದ್ಧ FIR

Public TV
By Public TV
5 hours ago
Delhi Capitals
Cricket

ಆಲ್‌ರೌಂಡ್‌ ಆಟಕ್ಕೆ ಒಲಿದ ಜಯ -‌ 2 ಸೋಲಿನ ಬಳಿಕ ಗೆಲುವಿನ ಖಾತೆ ತೆರೆದ ಡೆಲ್ಲಿ ಕ್ಯಾಪಿಟಲ್ಸ್

Public TV
By Public TV
5 hours ago
S Jaishankar
Latest

ಜೈಶಂಕರ್‌ ಜೊತೆಗೆ ಇರಾನ್‌ ವಿದೇಶಾಂಗ ಸುದೀರ್ಘ ಮಾತುಕತೆ – ಭಾರತದ ಸಲಹೆ ಆಲಿಸಿದ ಅಬ್ಬಾಸ್‌!

Public TV
By Public TV
5 hours ago
chinnaswamy stadium
Bengaluru City

ಚಿನ್ನಸ್ವಾಮಿಯಲ್ಲಿ ಮತ್ತೆ ನಡೆಯುತ್ತಾ ಐಪಿಎಲ್‌? – ಮಾರ್ಗಸೂಚಿಗಳ ಚರ್ಚೆ ಬಳಿಕ ನಿರ್ಧಾರ: ಕೆಎಸ್‌ಸಿಎ

Public TV
By Public TV
6 hours ago
MP Ramesh Jigajinagi
Districts

ದೀಪ ಆರುವ ಮುನ್ನ ಜಾಸ್ತಿ ಉರಿಯುತ್ತೆ, ರಾಜ್ಯದಲ್ಲಿ ಮುಂದೆ ಕಾಂಗ್ರೆಸ್ ಇರಲ್ಲ ಸತ್ಯನಾಶವಾಗಲಿದೆ – ರಮೇಶ ಜಿಗಜಿಣಗಿ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?