ಅಭಿನಂದನ್ ಕುರಿತು ಸಿನಿಮಾ ತಯಾರಿಯಲ್ಲಿ ವಿವೇಕ್ ಒಬೇರಾಯ್-ಸೋಶಿಯಲ್ ಮೀಡಿಯಾದಲ್ಲಿ ಟ್ರೋಲ್

Public TV
2 Min Read
Vivek Abhinandan

ಮುಂಬೈ: ನಟ ವಿವೇಕ್ ಒಬೇರಾಯ್ ಭಾರತೀಯ ವಾಯುಸೇನೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರ ಕುರಿತ ಸಿನಿಮಾ ಮಾಡಲು ಮುಂದಾಗಿದ್ದಾರೆ. ಈ ಸಂಬಂಧ ಶುಕ್ರವಾರ ಬಾಲಿವುಡ್ ಸಿನಿಮಾ ವಿಮರ್ಶಕ ತರಣ್ ಆದರ್ಶ್ ಟ್ವೀಟ್ ಮೂಲಕ ವಿಷಯವನ್ನು ರಿವೀಲ್ ಮಾಡಿದ್ದರು. ಸಿನಿಮಾ ವಿಷಯ ಹೊರ ಬೀಳುತ್ತಿದ್ದಂತೆ ಸೋಶಿಯಲ್ ಮೀಡಿಯಾದಲ್ಲಿ ಜನರು ವಿವೇಕ್ ಒಬೇರಾಯ್ ಅವರನ್ನು ಟ್ರೋಲ್ ಮಾಡಲಾರಂಭಿಸಿದ್ದಾರೆ.

ವಿವೇಕ್ ಒಬೇರಾಯ್ ಬಾಲಕೋಟ್ ಏರ್ ಸ್ಟ್ರೈಕ್ ಕಥೆಯಾದರಿತ ಸಿನಿಮಾದಲ್ಲಿ ನಟಿಸುತ್ತಿದ್ದು, ‘ಬಾಲಕೋಟ್: ದಿ ಟ್ರ್ಯೂ ಸ್ಟೋರಿ’ ಎಂದು ಟೈಟಲ್ ಅಂತಿಮಗೊಳಿಸಲಾಗಿದೆ. ಜಮ್ಮು, ಕಾಶ್ಮೀರ, ದೆಹಲಿ ಮತ್ತು ಆಗ್ರಾದಲ್ಲಿ ಸಿನಿಮಾದ ಚಿತ್ರೀಕರಣ ನಡೆಯಲಿದೆ. ಈ ವರ್ಷದ ಅಂತಿಮದಲ್ಲಿ ಸಿನಿಮಾ ಶೂಟಿಂಗ್ ಆರಂಭಗೊಳ್ಳಲಿದೆ. ಹಿಂದಿ, ತಮಿಳು ಮತ್ತು ತೆಲಗು ಭಾಷೆಯಲ್ಲಿ ಸಿನಿಮಾ ಬಿಡುಗಡೆಯಾಗಲಿದೆ ಎಂದು ತರಣ್ ಆದರ್ಶ್ ಟ್ವೀಟ್ ಮೂಲಕ ತಿಳಿಸಿದ್ದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಜೀವನಾಧರಿತ ಸಿನಿಮಾದಲ್ಲಿ ವಿವೇಕ್ ಒಬೇರಾಯ್ ಪ್ರಧಾನಿಗಳ ಪಾತ್ರದಲ್ಲಿ ನಟಿಸಿದ್ದರು. ಆದ್ರೆ ಸಿನಿಮಾ ಬಾಕ್ಸ್ ಆಫೀಸ್‍ನಲ್ಲಿ ಸದ್ದು ಮಾಡಲು ವಿಫಲವಾಗಿತ್ತು. ಮೋದಿಯವರ ಪಾತ್ರಕ್ಕೆ ಜೀವ ತುಂಬುವಲ್ಲಿ ವಿವೇಕ್ ಒಬೇರಾಯ್ ಯಶಸ್ವಿಯಾಗಿರಲಿಲ್ಲ ಎಂಬ ಮಾತುಗಳು ಸಾಮಾಜಿಕ ಜಾಲತಾಣಗಳಲ್ಲಿ ಕೇಳಿ ಬಂದಿದ್ದವು. ಇದೀಗ ವಿಂಗ್ ಕಮಾಂಡರ್ ಪಾತ್ರದಲ್ಲಿ ಅಭಿನಂದನ್ ಪಾತ್ರದಲ್ಲಿ ವಿವೇಕ್ ಒಬೇರಾಯ್ ನಟಿಸಲಿದ್ದಾರೆ ಎನ್ನಲಾಗುತ್ತಿದ್ದು, ನೆಟ್ಟಿಗರು ಬೇಸರ ವ್ಯಕ್ತಪಡಿಸಿದ್ದಾರೆ.

ಸಿನಿಮಾ ಕುರಿತು ಪ್ರತಿಕ್ರಿಯಿಸಿರುವ ವಿವೇಕ್ ಒಬೇರಾಯ್, ಓರ್ವ ಭಾರತೀಯ ಮತ್ತು ದೇಶಭಕ್ತನಾಗಿ ಹಾಗೂ ಸಿನಿಮಾ ಉದ್ಯಮದ ಸದಸ್ಯನಾಗಿ ಈ ರೀತಿಯ ಸಿನಿಮಾ ಮಾಡಲು ನನಗೆ ಹೆಮ್ಮೆಯಾಗುತ್ತಿದೆ. ನಮ್ಮ ಸೇನೆಯ ಶಕ್ತಿ ಮತ್ತು ಸಾಮಥ್ರ್ಯ ಬಿಂಬಿಸುವ ಸಿನಿಮಾ ಇದಾಗಿದೆ. ಅಭಿನಂದನ್ ಸೇರಿದಂತೆ ಭಾರತೀಯ ವಾಯುಸೇನೆಯ ಅಧಿಕಾರಿಗಳ ಪಾತ್ರಗಳು ಸಿನಿಮಾದ ಲೀಡ್ ನಲ್ಲಿ ಇರಲಿವೆ ಎಂದು ಹೇಳಿದ್ದಾರೆ.

https://twitter.com/sagarcasm/status/1164791354582417409

ಬಾಲಕೋಟ್ ಏರ್ ಸ್ಟ್ರೈಕ್ ಭಾರತೀಯ ವಾಯು ಸೇನೆ ನಡೆಸಿದ ದಾಳಿಯಲ್ಲಿ ಒಂದಾಗಿದೆ. ಪುಲ್ವಾಮಾ ದಾಳಿಯಿಂದ ಏರ್ ಸ್ಟ್ರೈಕ್ ವರೆಗಿನ ಎಲ್ಲ ವಿಷಯಗಳ ಬಗ್ಗೆ ಓದುತ್ತಾ ಬಂದಿದ್ದೇನೆ. ಈ ಸಿನಿಮಾ ಮೂಲಕ ಏರ್ ಸ್ಟ್ರೈಕ್ ದಾಳಿಯ ಸಂಪೂರ್ಣ ಮಾಹಿತಿಯನ್ನು ಚಿತ್ರದಲ್ಲಿ ನೀಡಲು ಪ್ರಯತ್ನಿಸಲಾಗುಗುವುದು ಎಂದು ವಿವೇಕ್ ತಿಳಿಸಿದ್ದಾರೆ.

ಸಿನಿಮಾ ಘೋಷಣೆ ಬಳಿಕ ನೆಟ್ಟಿಗರು, ಚಿತ್ರದ ನಿರ್ದೇಶಕರು ವಿವೇಕ್ ಬದಲಾಗಿ ಅಕ್ಷಯ್ ಕುಮಾರ್ ಅವರನ್ನು ಆಯ್ಕೆ ಮಾಡಿಕೊಳ್ಳಬಹುದಿತ್ತು ಎಂದು ಸಲಹೆ ನೀಡಿದ್ದಾರೆ. ಕೆಲವರು ಅಜಯ್ ದೇವಗನ್, ಹೃತಿಕ್ ರೋಶನ್ ಅವರ ಹೆಸರನ್ನು ಸೂಚಿಸಿದ್ದಾರೆ. ಈ ಹಿಂದೆ ಉರಿ ಚಿತ್ರದಲ್ಲಿ ವಿಕ್ಕಿ ಕೌಶಲ್ ಪಾತ್ರಕ್ಕೆ ನ್ಯಾಯ ಒದಗಿಸಿದ್ದರು ಎಂದು ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.

https://twitter.com/ParijatSingh23/status/1164784448690241537

Share This Article
Leave a Comment

Leave a Reply

Your email address will not be published. Required fields are marked *