ಬೆಂಗಳೂರು: ಇಂದು ರಾಕಿಂಗ್ ಸ್ಟಾರ್ ಯಶ್ ಪತ್ನಿ ರಾಧಿಕಾ ಪಂಡಿತ್ ಅವರ ಸೀಮಂತ ಶಾಸ್ತ್ರವಿದೆ. ಆದರೆ ಸೀಮಾಂತ ಶಾಸ್ತ್ರದ ದಿನವೇ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ.
ನಗರದ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಸೀಮಂತ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಗೌಡ್ರ ಸಂಪ್ರದಾಯದಂತೆ ಮಧ್ಯಾಹ್ನ ಸೀಮಂತ ಶಾಸ್ತ್ರ ನಡೆಯಲಿದ್ದು, ಸೀಮಂತದ ಫಂಕ್ಷನ್ ಗೆ ಸ್ಯಾಂಡಲ್ ವುಡ್ ಕಲಾವಿದರು ಭಾಗಿ ಆಗಲಿದ್ದಾರೆ.
ಯಶ್ ಹಾಗೂ ರಾಧಿಕಾ ಡಿಸೆಂಬರ್ 9ರಂದು ಮದುವೆ ಆಗಿದ್ದರು. ಸಂತಸದ ವಿಷಯವೆಂದರೆ ಅದೇ ದಿನವೇ ಮಗು ಜನನಕ್ಕೆ ವೈದ್ಯರು ಡೇಟ್ ಕೊಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಡಿಸೆಂಬರ್ 9ಕ್ಕೆ ಜೂನಿಯರ್ ರಾಕಿಂಗ್ ಸ್ಟಾರ್ ಅಥವಾ ಪುಟಾಣಿ ಸ್ಯಾಂಡಲ್ ಪ್ರಿನ್ಸೆಸ್ ಆಗಮನವಾಗುವ ಸಾಧ್ಯತೆ ಇದೆ.
ಈಗಾಗಲೇ ರಾಧಿಕಾ ಹಾಗೂ ಯಶ್ ತಾಜ್ ವೆಸ್ಟೆಂಡ್ ಗೆ ಆಗಮಿಸಿದ್ದು, ಮದುವೆ ಆದ ಸ್ಥಳದಲ್ಲೇ ಸೀಮಂತ ಶಾಸ್ತ್ರ ನಡೆಯುತ್ತಿದೆ. ಈ ಸ್ಥಳ ಯಶ್ ಮತ್ತು ರಾಧಿಕಾರ ಫೇವರಿಟ್ ಸ್ಥಳವಾಗಿದೆ. ಸದ್ಯಕ್ಕೆ ಸೀಮಂತದ ಅರೇಂಜ್ ಮೆಂಟ್ಸ್ ನಡೆಯುತ್ತಿದ್ದು, ಯಶ್ ಹಾಗೂ ರಾಧಿಕಾ ಸೀಮಂತಕ್ಕೆ ರೆಡಿ ಆಗುತ್ತಿದ್ದಾರೆ. ಸಿನಿಮಾರಂಗದವರು, ಆಪ್ತರು ಮತ್ತು ಬಂಧುಗಳೆಲ್ಲರು ಸೀಮಂತಕ್ಕೆ ಹಾಜರಾಗುವ ಸಾಧ್ಯತೆ ಇದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್ಬುಕ್ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews