Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 8 ತಿಂಗ್ಳ ಹಿಂದೆ ಶೃತಿ ನಿಮ್ಮ ಸಂಸ್ಥೆಯ ಮೆಂಬರ್ ಆಗಿದ್ರಾ- ಚೇತನ್‍ಗೆ ಧೃವ ಖಡಕ್ ಪ್ರಶ್ನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 8 ತಿಂಗ್ಳ ಹಿಂದೆ ಶೃತಿ ನಿಮ್ಮ ಸಂಸ್ಥೆಯ ಮೆಂಬರ್ ಆಗಿದ್ರಾ- ಚೇತನ್‍ಗೆ ಧೃವ ಖಡಕ್ ಪ್ರಶ್ನೆ

Bengaluru City

8 ತಿಂಗ್ಳ ಹಿಂದೆ ಶೃತಿ ನಿಮ್ಮ ಸಂಸ್ಥೆಯ ಮೆಂಬರ್ ಆಗಿದ್ರಾ- ಚೇತನ್‍ಗೆ ಧೃವ ಖಡಕ್ ಪ್ರಶ್ನೆ

Public TV
Last updated: October 23, 2018 12:22 pm
Public TV
Share
3 Min Read
CHETHAN DHRUVA
SHARE

– ಪಬ್ಲಿಕ್ ಟಿವಿಯಲ್ಲಿ ಚೇತನ್- ಧೃವ ಸರ್ಜಾ ವಾಕ್ಸಮರ

ಬೆಂಗಳೂರು: ನಟ ಚೇತನ್ ಅವರನ್ನು ತುಂಬಾನೇ ನಾನು ಗೌರವಿಸುತ್ತೇನೆ. ಯಾಕಂದ್ರೆ ನಮ್ಮ ಅಜ್ಜಿ ಜೊತೆ ಅವರು ಗೌರವದಿಂದಲೇ ಮಾತನಾಡಿದ್ರು ಅಂತ ಮಾತು ಮುಂದುವರಿಸಿದ ನಟ ಧೃವ ಸರ್ಜಾ ಅವರು ನಟ ಚೇತನ್ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ಪಬ್ಲಿಕ್ ಟಿವಿಯಲ್ಲಿ  ಇಬ್ಬರು ನಟರು ಫೋನ್ ಮೂಲಕ ಪರಸ್ಪರ ಏಕವಚನದಲ್ಲೇ ವಾಕ್ಸಮರ ನಡೆಸಿದ್ದಾರೆ. ಫೈರ್ ಎಂಬ ಸಂಸ್ಥೆ ಆರಂಭವಾಗಿ ಒಂದೂವರೆ ವರ್ಷ ಆಯ್ತಂತೆ. ಶೃತಿ ಅದರ ಮೆಂಬರ್ ಆಗಿ 8 ತಿಂಗಳು ಆಯಿತಂತೆ. ಅದರ ಸದಸ್ಯರಾಗೋದು ಏನಕ್ಕೆ ಅಂದ್ರೆ ಏನಾದ್ರೂ ಒಂದು ಆಪಾದನೆ ಇದ್ದರೆ ಮಾತ್ರ ಅದ್ರ ಮೇಂಬರ್ ಆಗ್ತಾರೆ. ಹೀಗಾಗಿ 8 ತಿಂಗಳ ಹಿಂದೆ ಶೃತಿ ಹರಿಹರನ್ ಮೆಂಬರ್ ಆಗಿರೋದು ಸತ್ಯನಾ ಸುಳ್ಳಾ ಎಂದು ನೇರವಾಗಿ ನಟ ಧೃವ ಅವರು ಚೇತನ್ ಅವರನ್ನು ಪ್ರಶ್ನಿಸಿದ್ದಾರೆ.

Dhruva Sarja

ಈ ವೇಳೆ ಚೇತನ್, ಇಂದು ಶೃತಿ ಹರಿಹರನ್ ಆರೋಪದಿಂದ ನಿಮ್ಮ ಕುಟುಂಬಕ್ಕೆ ತೊಂದರೆಯಾಗಿರುವುದು ನಮಗೆಲ್ಲ ಬೇಜಾರಾಗಿದೆ ಅಂತ ಹೇಳಿದ್ರೆ, ಈ ನಾಟಕಗಳೆಲ್ಲ ಬೇಡ. ನನ್ನ ಪ್ರಶ್ನೆಗೆ ಉತ್ತರಿಸಿ ಅಷ್ಟು ಸಾಕು ಅಂತಾ ಚೇತನ್ ವಿರುದ್ಧ ಧೃವ ವಾಗ್ದಾಳಿ ನಡೆಸಿದರು.

ಇಬ್ಬರ ಸಂಭಾಷಣೆ ಹೀಗಿತ್ತು
ಚೇತನ್: ನಮ್ಮ ಫೈರ್ ಸಂಸ್ಥೆಯಿಂದ ಹಲವಾರು ಸಮಾಜಮುಖಿ ಕೆಲಸಗಳನ್ನು ನಾನು ಮಾಡಿಕೊಂಡು ಬಂದಿದ್ದೇವೆ.

vlcsnap 2018 10 23 11h40m26s35 e1540275071472

ಧೃವ: ನಿಮ್ಮ ಸಂಸ್ಥೆ ಒಳ್ಳೆಯ ಕೆಲಸಗಳನ್ನು ಮಾಡುತ್ತಿರುವುದು ನಿಜ. ಅದರಲ್ಲಿ ಹೆಣ್ಣು ಮಕ್ಕಳಿದ್ದಾರೆ ಎಂದ್ರೆ ನಾವೆಲ್ಲ ಆ ಸಂಸ್ಥೆಯನ್ನು ಗೌರವಿಸುತ್ತೇವೆ. ನೀನು ಇದ್ದೀಯಾ ಅಂತಾನೂ ಗೌರವಿಸುತ್ತೇನೆ. ಯಾಕಂದ್ರೆ ನಿನಗೆ ಗೊತ್ತು. ಹೇಗೆ ಮಾತಾಡ್ಬೇಕು.. ಹೇಗೆ ನಡೆದುಕೊಳ್ಳಬೇಕು ಎಂಬುದು ನಿನಗೆ ಚೆನ್ನಾಗಿ ಗೊತ್ತು. ಆದ್ರೆ ಮಿಸ್ಟರ್ ಚೇತನ್, ನನ್ನ ಪ್ರಶ್ನೆಗೆ ಉತ್ತರಿಸಿ. ಅನ್ಯಾಯವಾಗಿರುವವರಷ್ಟೇ ನಿಮ್ಮ ಸಂಸ್ಥೆಗೆ ಮೆಂಬರ್ ಆಗ್ತಾರೆ. ಶೃತಿ ಹರಿಹರನ್ ಅವರಿಗೆ ಅನ್ಯಾಯವಾಗಿದೆ ಅಂತಾನೇ ಅವರು ನಿಮ್ಮ ಸಂಸ್ಥೆಯ ಸದಸ್ಯರಾಗಿದ್ದಾರೆ ಅಂದ್ರೆ 8 ತಿಂಗಳಿಂದ ಏನು ಮಾಡುತ್ತಿದ್ರಿ?.

Chetan

ಚೇತನ್: ನಾವು ಈಗಷ್ಟೇ ಸಂಸ್ಥೆ ಕಟ್ಟಿಕೊಂಡು ಬರುತ್ತಿದ್ದೇವೆ ಅಷ್ಟೆ. ಅದರಲ್ಲಿ ಸಾಕಷ್ಟು ಸಮಾಜಮುಖಿ ಕೆಲಸಗಳನ್ನು ಮಾಡಿಕೊಂಡು ಬಂದಿದ್ದೇವೆ. ಯಾವತ್ತು ಶೃತಿ ಅವರು ದೊಡ್ಡ ಪ್ರಮಾಣದಲ್ಲಿ ನಮ್ಮ ಜೊತೆ ನಿಂತ್ರು ಅಂದ್ರೆ ಯಾವಾಗ ಕನ್ನಡ ಚಿತ್ರರಂಗದಲ್ಲಿ ನಾವು ಒಂದು 50 ಜನರ ಸಹಿ ತೆಗೆದುಕೊಂಡು `ಅಮ್ಮಾ’ ಅನ್ನೋ ಮಲೆಯಾಲಂ ಇಂಡಸ್ಟ್ರಿ ಮೇಲೆ ದಿಲೀಪ್ ಅನ್ನೋ ನಟನ ವಿರುದ್ಧ ಹೋರಾಡಿದ್ವಿ.

ಧೃವ: ನನಗೆ ಅದ್ಯಾವುದು ಬೇಡ..8 ತಿಂಗಳ ಹಿಂದೆ ಹೇಗೆ ಅವರ(ಅರ್ಜುನ್ ಸರ್ಜಾ) ಮೇಲೆ ದಾಳಿ ಮಾಡೋದು ಅನ್ನೋದನ್ನು ಸ್ಟಡಿ ಮಾಡುತ್ತಿದ್ರಾ ಅಂತ ಪ್ರಶ್ನೆಗಳ ಸುರಿಮಳೆಯನ್ನೇ ಸುರಿಸಿದ್ರು. ಇದರಿಂದ ನಿನ್ನ ಬಗ್ಗೆ ನಿನಗೆ ನಾಚಿಕೆಯಾಗಲ್ವ? ಒಬ್ಬ ನಟನಾಗಿ ಇಂತಹುದನ್ನೆಲ್ಲಾ ಹೇಗೆ ಮಾಡ್ತಿಯಾ?

arjun sarja

ಒಬ್ಬ ಕಲಾವಿದನಾಗಿ ಹೇಗೆ ನಡೆದುಕೊಳ್ಳಬೇಕು ಎಂಬುದನ್ನು ನಮ್ಮ ಮನೆಯವರು ನಮಗೆ ಚೆನ್ನಾಗಿಯೇ ಹೇಳಿಕೊಟ್ಟಿದ್ದಾರೆ. ನೀನು ಚೆನ್ನಾಗಿ ನಟಿಸಲಲ್ಲ. ಯೂ ಆರ್ ಅನ್ ಫಿಟ್ ಅಂತ ಒಬ್ಬ ಕಲಾವಿದನಿಗೆ ಹೇಳಿದ್ರೆ ಅದು ಅವಮಾನ ಆಗುತ್ತೆ ಅಂತಾನೇ ಅವರು(ಅರ್ಜುನ್) ನಿಮಗೆ ಮೆಸೇಜ್ ಮಾಡಿದ್ದಾರೆ. ಆದ್ರೆ ನೀವು ಅದಕ್ಕೆ ಉಲ್ಟಾ ಮೆಸೇಜ್ ಮಾಡಿದ್ದೀರಾ. ಹೀಗಾಗಿ ಅವರು ಪ್ರೊಫೆಶನಲಿ ಇ-ಮೇಲ್ ಇ- ಮೇಲ್ ಮಾಡಿದ್ದಾರೆ ಅಂತ ಹೇಳಿದ್ರು.

ಈ ಇ-ಮೇಲ್ ಗೆ ನಾನೂ ಪ್ರಸ್ತಾಪ ಮಾಡಿದ್ದೇನೆ ಅಂತ ಚೇತನ್ ಹೇಳಿದ್ದಾರೆ. ಅಲ್ಲದೇ ಸರ್ಜಾ ಕುಟುಂಬದ ಮೇಲೆ ನನಗೆ ವೈಯಕ್ತಿಕವಾಗಿ ಯಾವುದೇ ದ್ವೇಷವಿಲ್ಲ. ಇದಕ್ಕೆ ಪ್ರತಿಕ್ರಿಯಿಸಿದ ಧೃವ, ವೈಯಕ್ತಿಕವಾಗಿ ದ್ವೇಷ ಇಲ್ಲ ಅಂದ ಮೇಲೆ ಒಂದು ಹುಡುಗಿಯನ್ನು ಹಿಡ್ಕೊಂಡು ಯಾಕೆ ಈ ರೀತಿ ಮಾಡ್ತಿದ್ದೀಯಾ? ಯಾಕೆ ಹುಡುಗರಿಗೆ ಯಾರಿಗೂ ಅನ್ಯಾವಾಗಿಲ್ಲ ಅಂತ ಮರು ಪ್ರಶ್ನೆ ಹಾಕಿದ ಅವರು, ಫೈರ್ ಸಂಸ್ಥೆ ಬದಲು ವಾಟರ್ ಸಂಸ್ಥೆ ಅನ್ನೋದನ್ನು ಓಪನ್ ಮಾಡು.

sruthi hariharan

ನಮ್ಮ ಅಂಕಲ್ ಮೇಲೆ ನಾಯಿ, ನರಿ, ಕ್ರಿಮಿ, ಕೀಟ ಯಾರು ಏನೇ ಹೇಳಿದ್ರೂ ನಾವು ನಂಬಲ್ಲ. ನಾವು ಏನು ಅನ್ನೋದು ನಮಗೆ ಗೊತ್ತಿದೆ. ಕಾನೂನಿಗಿಂತ ನಿಮ್ಮ ಫೈರ್ ಸಂಸ್ಥೆ ದೊಡ್ಡದಲ್ಲ ಅಂದ್ರು.

ಚೇತನ್: ನಾವು ಇಲ್ಲಿ ಪ್ರಚಾರಕ್ಕೋಸ್ಕರ ನಿಂತುಕೊಂಡಿಲ್ಲ. ಈ ರೀತಿ ನೀವು ಕೆಟ್ಟದಾಗಿ ಮಾತಾಡೋದು ನಿಜವಾಗಿಯೂ ಸರಿಯಿಲ್ಲ. ಒಂದು ಕಡೆ ನಾನು ಮಹಿಳೆಯರ ಪರವಾಗಿ ಅವರಿಗೆ ಕಷ್ಟಗಳು ಆಗಬಾರದು ಅಂತಾನೂ ಹೇಳುತ್ತೀರಾ. ಇನ್ನೊಂದು ಕಡೆ ಮಹಿಳೆಯರ ಪರ ನಿಂತ್ರೆ ಅದಕ್ಕೂ ಹೇಳುತ್ತೀರಾ. ಇದು ಸರಿಯಲ್ಲ ಅಂದ್ರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

https://www.youtube.com/watch?v=5RZ_sBab49c

https://www.youtube.com/watch?v=7NpriWx6y3k

https://www.youtube.com/watch?v=o_HWldGMV30

TAGGED:actor ChetanArjun Sarjabengalurudhruva sarjaPublic TVSruthi Hariharanಅರ್ಜುನ್ ಸರ್ಜಾಧೃವ ಸರ್ಜಾನಟ ಚೇತನ್ಪಬ್ಲಿಕ್ ಟಿವಿಬೆಂಗಳೂರುಮೀಟೂಶೃತಿ ಹರಿಹರನ್
Share This Article
Facebook Whatsapp Whatsapp Telegram

Cinema news

santosh kumar sukhibhava movie
‘ಸುಖೀಭವ’ ಚಿತ್ರ ನಿರ್ಮಾಣಕ್ಕೆ ಉದ್ಯಮಿ ಸಂತೋಷ್ ಕುಮಾರ್ ಸಾಥ್
Cinema Latest Sandalwood Top Stories
Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories
arvind reddy threat
ಉದ್ಯಮಿ ಅರವಿಂದ್‌ ರೆಡ್ಡಿಗೆ ಕೊಲೆ ಬೆದರಿಕೆ; ಆರೋಪಿ ಬಂಧನ
Bengaluru City Cinema Latest Main Post Sandalwood
again Bigg Boss Rajat controversy photo shoot in villain look while smoking a cigarette Mysuru
ಸಿಗರೇಟ್ ಸೇದುತ್ತಾ ವಿಲನ್ ಲುಕ್‌ನಲ್ಲಿ ಫೋಟೋ ಶೂಟ್ – ಮತ್ತೆ ರಜತ್‌ ವಿವಾದ
Cinema Crime Karnataka Latest Mysuru Top Stories TV Shows

You Might Also Like

Namma Metro Greenline
Bengaluru City

ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಮೆಟ್ರೋ ನಿಲ್ದಾಣಗಳ ಹತ್ತಿರದಲ್ಲೇ ಬಸ್ ನಿಲ್ದಾಣ ಓಪನ್

Public TV
By Public TV
5 hours ago
T20 Team India
Cricket

ಸೂರ್ಯ, ಸಿರಾಜ್‌ ಮಿಂಚು; ಯುಎಸ್‌ಎ ವಿರುದ್ಧ ಭಾರತಕ್ಕೆ 29 ರನ್‌ಗಳ ಗೆಲುವು

Public TV
By Public TV
6 hours ago
Elephant
Bengaluru Rural

ಬೈಕ್‌ನಲ್ಲಿ ತೆರಳುವಾಗ ಏಕಾಏಕಿ ಆನೆ ದಾಳಿ – ಅಪ್ಪ ಸಾವು, ಮಗನ ಸ್ಥಿತಿ ಗಂಭೀರ

Public TV
By Public TV
6 hours ago
01 1
Big Bulletin

ಬಿಗ್‌ ಬುಲೆಟಿನ್‌ 07 February 2026 ಭಾಗ- 1

Public TV
By Public TV
6 hours ago
02 2
Big Bulletin

ಬಿಗ್‌ ಬುಲೆಟಿನ್‌ 07 February 2026 ಭಾಗ- 2

Public TV
By Public TV
6 hours ago
Man dies after setting himself on fire inside car in Wayanad
Crime

ಕೇರಳದಲ್ಲಿ ಕಾರಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಕೊಡಗಿನ ಉದ್ಯಮಿ – ಹೆಂಡತಿ ಮಕ್ಕಳ ಸ್ಥಿತಿ ಗಂಭೀರ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?