ನಟಿ ಅದಿತಿ ಪ್ರಭುದೇವ್ (Aditi Prabhudeva) ನಾಳೆ ಹೊಸ ಜೀವನಕ್ಕೆ ಕಾಲಿಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಅರಮನೆ ಮೈದಾನದಲ್ಲಿ ಅದ್ದೂರಿಯಾಗಿ ಆರತಕ್ಷತೆ ಸಮಾರಂಭ ನಡೆಯುತ್ತಿದೆ.
ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ನಡೆಯುತ್ತಿರುವ ಆರತಕ್ಷತೆಯಲ್ಲಿ ಗುಲಾಬಿ ಬಣ್ಣದ ಲೆಹಂಗಾ ಧರಿಸಿ ವಧು ಅದಿತಿ ಹಾಗೂ ನೀಲಿ ಬಣ್ಣದ ಶೆರ್ವಾನಿ ಸೂಟ್ ಧರಿಸಿ ವರ ಯಶಸ್ವಿ ಮಿಂಚುತ್ತಿದ್ದಾರೆ. ಯಶ್, ರಾಧಿಕಾ ಪಂಡಿತ್, ಲಹರಿ ವೇಲು , ಕಟ್ಟಾ ಸುಬ್ರಹ್ಮಣ್ಯ ನಾಯ್ಡು , ಹಿರಿಯ ನಟಿ ತ್ರಿವೇಣಿ , ನಿರ್ಮಾಪಕ ಉದಯ್ ಕೆ ಮೆಹ್ತಾ, ನಟ ನವೀನ್ ಕೃಷ್ಣ, ಸಚಿವ ಸೋಮಣ್ಣ ಸೇರಿ ಸಿನಿಮಾ ಹಾಗೂ ರಾಜಕೀಯ ಗಣ್ಯರು ಭಾಗಿಯಾಗಿದ್ದಾರೆ.
ಅದಿತಿ ಪ್ರಭುದೇವ್ ಕನ್ನಡ ಸಿನಿಮಾ ರಂಗದ ಬಹುಬೇಡಿಕೆಯ ನಟಿಯಾಗಿದ್ದು, ಒಂದೇ ಒಂದು ವಿವಾದವಿಲ್ಲದೇ ಸ್ಟಾರ್ ನಟಿಯಾಗಿ ಬೆಳೆದಿರುವ ಅದಿತಿ ಪ್ರಭುದೇವ ಅವರ ಅರಿಶಿನ ಶಾಸ್ತ್ರ ನಿನ್ನೆ ನಡೆದಿದ್ದು, ಆ ಫೋಟೋಗಳನ್ನು ಅದಿತಿ ಪ್ರಭುದೇವ ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಅಭಿಷೇಕ್ ಅಂಬರೀಶ್ ಹೊಸ ಸಿನಿಮಾಗೆ ಕಾಂತಾರ ಸಪ್ತಮಿ ನಾಯಕಿ
ಉದ್ಯಮಿ ಯಶಸ್ವಿ ಅವರ ಜೊತೆ ಹೊಸ ಜೀವನಕ್ಕೆ ಅದಿತಿ ಕಾಲಿಡುತ್ತಿದ್ದು, ಈಗಾಗಲೇ ತಮ್ಮ ಭಾವಿ ಪತಿಯನ್ನು ಅಭಿಮಾನಿಗಳಿಗೆ ಹಲವಾರು ಬಾರಿ ಪರಿಚಯಿಸಿದ್ದಾರೆ. ಒಂದು ದಿನ ತಮ್ಮ ಯಶಸ್ವಿ ಜೊತೆ ಕಾಡಿನಲ್ಲಿ ಕಳೆದ ಅನುಭವವನ್ನೂ ಅವರು ಹಂಚಿಕೊಂಡಿದ್ದರು. ಇದೊಂದು ಅರೇಂಜ್ಡ್ ಮ್ಯಾರೇಜ್ ಆಗಿದ್ದು, ಮನೆಯವರೇ ತೋರಿಸಿದಿ ಯಶಸ್ವಿ ಜೊತೆ ನಾಳೆ ವಿವಾಹ ಬಂಧನಕ್ಕೆ ಒಳಗಾಗಲಿದ್ದಾರೆ. ಇದನ್ನೂ ಓದಿ: ಅದಿತಿ ಪ್ರಭುದೇವ ವಿವಾಹಕ್ಕೆ ಸಿದ್ಧಗೊಂಡ ಅರಮನೆ ಮೈದಾನ