ಬೆಂಗಳೂರು: ಸ್ಯಾಂಡಲ್ವುಡ್ ನಟಿ ಅಮೂಲ್ಯ ಮತ್ತು ಜಗದೀಶ್ ದಂಪತಿ ಇಂದು ವಿಜಯನಗರದ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದರು. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.
ಇಂದು ವಿಜಯನಗರದ ಶ್ರೀ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ, ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರ ಆಶೀರ್ವಾದ ಪಡೆಯಲಾಯಿತು. ಈ ಸಂದರ್ಭದಲ್ಲಿ ಸ್ವಾಮೀಜಿ ಅವರಿಂದ ಭಗವದ್ಗೀತೆ ಗ್ರಂಥವನ್ನು ಪಡೆದಿದ್ದು, ಮನಸ್ಸಿಗೆ ಸಂತೋಷ ನೀಡಿತು ಎಂದು ತಿಳಿಸಿದ್ದಾರೆ.
2017ರಲ್ಲಿ ಜಗದೀಶ್ ಜೊತೆ ಅಮೂಲ್ಯ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಇತ್ತೀಚಿನ ವರ್ಷಗಳಲ್ಲಿ ಅವರು ಸಿನಿಮಾಗಳಿಗಿಂತಲೂ ಹೆಚ್ಚಾಗಿ ಕುಟುಂಬದ ಕಡೆಗೆ ಜಾಸ್ತಿ ಗಮನ ನೀಡುತ್ತಿದ್ದಾರೆ. ತಾವು ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿ ಇರುವ ವಿಚಾರವನ್ನು ಕೆಲವೇ ದಿನಗಳ ಹಿಂದೆ ಅಮೂಲ್ಯ ಮತ್ತು ಜಗದೀಶ್ ದಂಪತಿ ತಿಳಿಸಿದ್ದರು. ಇದನ್ನೂ ಓದಿ: ಬಿಕಿನಿ ಫೋಟೋಗೆ ಕಾಮೆಂಟ್ ಮಾಡಿದ್ದ ಅರ್ಜುನ್ಗೆ ಚೋರ್ ಎಂದ ಮಲೈಕಾ
ಕೆಲವು ದಿನಗಳ ಹಿಂದೆ ಅಮೂಲ್ಯ ಬೇಬಿ ಬಂಪ್ ಫೋಟೋಶೂಟ್ ಮಾಡಿಸಿದ್ದರು. ಅದ್ದೂರಿಯಾಗಿ ಸೀಮಂತ ಶಾಸ್ತ್ರ ನಡೆದಿದೆ. ಸೀಮಂತದ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿತ್ತು. ಅಭಿಮಾನಿಗಳು ಮೆಚ್ಚುಗೆ ಸೂಚಿಸಿ ಕಾಮೆಂಟ್ ಮಾಡಿದ್ದರು. ಇದನ್ನೂ ಓದಿ: ಸಖತ್ ಹಾಟ್ ಫೋಟೋಗಳಿಂದ ಮೋಡಿ ಮಾಡಿದ ರಾಯ್ ಲಕ್ಷ್ಮೀ