ನ್ಯಾಯಾಂಗದ ಬಗ್ಗೆ ಗೌರವವಿದೆ, ಅಪರಾಧ ಸಾಬೀತಾದ್ರೆ ಯಾರೇ ಆಗಿದ್ರೂ ಶಿಕ್ಷೆ ಆಗಲಿ: ಅನು ಪ್ರಭಾಕರ್

Public TV
1 Min Read
FotoJet 49

ರೇಣುಕಾಸ್ವಾಮಿ ಕೊಲೆ (Renukaswamy Murder Case) ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ (Darshan) ಕುರಿತು ಈಗಾಗಲೇ ಸ್ಯಾಂಡಲ್‌ವುಡ್‌ನ ಹಲವು ನಟ, ನಟಿಯರು ಪ್ರತಿಕ್ರಿಯೆ ನೀಡಿದ್ದಾರೆ. ಈ ಬೆನ್ನಲ್ಲೇ, ಈ ಪ್ರಕರಣದ ಬಗ್ಗೆ ನಟಿ ಅನು ಪ್ರಭಾಕರ್ ನೀಡಿರುವ ಹೇಳಿಕೆ ಈಗ ಸದ್ದು ಮಾಡುತ್ತಿದೆ. ನ್ಯಾಯಾಂಗದ ಬಗ್ಗೆ ಗೌರವವಿದೆ, ಅಪರಾಧ ಸಾಬೀತಾದ್ರೆ ಯಾರೇ ಆಗಿದ್ರೂ ಶಿಕ್ಷೆ ಆಗಲಿ ಎಂದು ‘ಪಬ್ಲಿಕ್‌ ಟಿವಿ’ಗೆ ಅನು ಪ್ರಭಾಕರ್ (Anu Prabhakar) ಮಾತನಾಡಿದ್ದಾರೆ.

Darshan 9

ಕೊಲೆ ಕೇಸ್‌ನಲ್ಲಿ ನಟ ದರ್ಶನ್ ವಿಚಾರಣಾಧೀನ ಕೈದಿಯಾಗಿದ್ದಾರೆ. ಈ ಕೇಸ್ ಕೋರ್ಟ್ನಲ್ಲಿದೆ. ತನಿಖೆ ನಡೆಯುತ್ತಿದೆ. ಅವರಿಗೆ ಈ ರೀತಿ ಪರಿಸ್ಥಿತಿ ಆಯ್ತು ಅಲ್ಲ ಅಂತ ಬೇಜಾರಿದೆ. ಈ ಪ್ರಕರಣದಿಂದ ಇಡೀ ಚಿತ್ರರಂಗ ಮಂಕಾಗಿದೆ. ಹಾಗೆಯೇ ನ್ಯಾಯಾಂಗದ ಬಗ್ಗೆ ಗೌರವವಿದೆ, ಅಪರಾಧ ಸಾಬೀತಾದ್ರೆ ಯಾರೇ ಆಗಿದ್ರೂ ಶಿಕ್ಷೆ ಆಗಲಿ ಎಂದು ಅನು ಪ್ರಭಾಕರ್ ಮಾತನಾಡಿದ್ದಾರೆ. ಇದನ್ನೂ ಓದಿ:2023ರ ಸೈಮಾ ನಾಮಿನೇಷನ್-ರೇಸ್‌ನಲ್ಲಿ ಕಾಟೇರ, ಸಪ್ತ ಸಾಗರದಾಚೆ ಎಲ್ಲೋ ಸೈಡ್ ಎ

ನ್ಯಾಯಾಂಗ ಎಲ್ಲರಿಗೂ ಒಂದೇ. ಯಾರು ತಪ್ಪು ಮಾಡಿದ್ದಾರೋ ಅವರಿಗೆ ಶಿಕ್ಷೆಯಾಗಲಿ. ಯಾರಿಗೆ ಅನ್ಯಾಯ ಆಗಿದೆಯೋ ಅವರಿಗೆ ನ್ಯಾಯ ಸಿಗಲಿ ಎಂದು ನಟಿ ಹೇಳಿದ್ದಾರೆ. ಪಬ್ಲಿಕ್ ಫಿಗರ್ ಆಗಿದ್ದಾಗ ಸಾಮಾಜಿಕ ಜವಾಬ್ದಾರಿ ಮುಖ್ಯ, ಆ ಜವಾಬ್ದಾರಿಗೆ ಚ್ಯುತಿ ಬಂದರೆ ಯಾರಿಗೇ ಆಗಿದ್ರೂ ಶಿಕ್ಷೆ ಆಗುತ್ತದೆ. ಇದನ್ನು ಘನ ನ್ಯಾಯಾಲಯ ನೋಡಿಕೊಳ್ಳುತ್ತದೆ. ನಾವು ಮಾತನಾಡುವುದು ಸರಿ ಅಲ್ಲ ಎಂದಿದ್ದಾರೆ ಅನು ಪ್ರಭಾಕರ್.

Share This Article