ಟ್ರೈನಿ ವೈದ್ಯೆ ಹತ್ಯೆ ಪ್ರಕರಣ: ಆರೋಪಿಗೆ ತಕ್ಕ ಶಿಕ್ಷೆಯಾಗಬೇಕು ಎಂದ ಆಶಿಕಾ ರಂಗನಾಥ್

Public TV
1 Min Read
ashika ranganath 1 1

ಕೊಲ್ಕತ್ತಾದ ಆರ್‌ಜಿ ಕರ್ ಮೆಡಿಕಲ್ ಕಾಲೇಜಿನಲ್ಲಿ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಈ ಬೆನ್ನಲ್ಲೇ ಹಲವು ನಟ- ನಟಿಯರು ಈ ಕುರಿತು ಧ್ವನಿಯೆತ್ತಿದ್ದಾರೆ. ನೈಟ್ ಡ್ಯೂಟಿ ಟ್ರೈನಿ ವೈದ್ಯೆಗೆ ರೇಪ್‌ ಆದರೆ ಇನ್ನೆಲಿ ರಕ್ಷಣೆ ಎಂದು ನಟಿ ಆಶಿಕಾ ರಂಗನಾಥ್ (Ashika Ranganath) ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ:100 ಜನ್ಮದಲ್ಲೂ ನಿಮ್ಮನ್ನೇ ಆಯ್ಕೆ ಮಾಡಿಕೊಳ್ಳುತ್ತೇನೆ: ಯಶ್ ಕುರಿತು ರಾಧಿಕಾ ಲವ್ಲಿ ಪೋಸ್ಟ್

kolkata doctor rape and murder caseಕೊಲ್ಕತ್ತಾದ ಬರ್ಬರತೆಯ (Kolkata Rape-Murder) ಕುರಿತು ತಮ್ಮ ಇನ್ಸ್ಟಾಗ್ರಾಂ ಬರೆದುಕೊಂಡಿರುವ ಆಶಿಕಾ ರಂಗನಾಥ್, ಆರ್‌ಜಿ ಕರ್ ಮೆಡಿಕಲ್ ಕಾಲೇಜ್‌ನಲ್ಲಿ ನಡೆದ ಘಟನೆ ಕೇವಲ ವೈದ್ಯರಿಗೆ ಸಂಬಂಧಿಸಿದ ಸಮಸ್ಯೆಯಲ್ಲ, ಎಲ್ಲ ವೈದ್ಯಕೀಯೇತರ ವೃತ್ತಿಯಲ್ಲಿರುವವರೇ ಇದನ್ನು ದಯವಿಟ್ಟು ಅರ್ಥ ಮಾಡಿಕೊಳ್ಳಿ, ಆ ಮಹಿಳೆ ಕೆಲಸ ಮಾಡುವ ಜಾಗದಲ್ಲಿಯೇ ಸುರಕ್ಷಿತವಾಗಿಲ್ಲ ಅಂದ್ರೆ ಮತ್ತೆಲ್ಲಿ? ಇದು ನಿರ್ಭಯಾ ಪ್ರಕರಣಕ್ಕಿಂತ ಏನು ಕಡಿಮೆಯಿಲ್ಲ ಎಂದಿದ್ದಾರೆ ಆಶಿಕಾ.

ashika ranganath 1

ಕೆಲವು ನಾಯಕರು ಹೇಳುವ ಪ್ರಕಾರ, ಮಧ್ಯರಾತ್ರಿ ಹೆಣ್ಣು ಮಕ್ಕಳು ರಸ್ತೆಯಲ್ಲಿ ಓಡಾಡಬಾರದು ಅಂತೆ. ಆದ್ರೆ ಅವಳು ಹೋಗಿದ್ದು ನೈಟ್ ಡ್ಯೂಟಿಗೆ, ಅತ್ಯಂತ ನೆಮ್ಮದಿಯ ವಲಯದಲ್ಲಿ ಇದ್ದಂತವಳು. ಅವಳಿಗೆ ಅಲ್ಲಾದರೂ ರಕ್ಷಣೆ ಸಿಕ್ಕಿದ್ಯಾ. ಈ ತರಹದ್ದು ಯಾರಿಗೆ ಬೇಕಾದರೂ, ಎಲ್ಲಿ ಬೇಕಾದರೂ, ಯಾವ ಸಮಯದಲ್ಲಿ ಬೇಕಾದರೂ ಕೂಡ ಆಗಬಹುದು. ಇದನ್ನೂ ಆದಷ್ಟು ಗಂಭೀರವಾಗಿ ಪರಿಗಣಿಸಬೇಕು. ಆರೋಪಿಗೆ ತಕ್ಕ ಶಿಕ್ಷೆಯಾಗಬೇಕು. ಆ ಶಿಕ್ಷೆ ಇಂತಹ ಸೈಕೋಪಾತ್‌ಗಳಿಗೆ ಎಚ್ಚರಿಕೆಯ ಘಂಟೆಯಾಗಬೇಕು ಎಂದು ಆಶಿಕಾ ರಂಗನಾಥ್ ಆಗ್ರಹಿಸಿದ್ದಾರೆ.

ಅಂದಹಾಗೆ, ಮೆಗಾಸ್ಟಾರ್‌ ಚಿರಂಜೀವಿ ಜೊತೆ ತೆಲುಗಿನ ‘ವಿಶ್ವಾಂಭರ’, ತಮಿಳಿನ ನಟ ಕಾರ್ತಿ ಜೊತೆ ‘ಸರ್ದಾರ್‌ 2’ ಸಿನಿಮಾದಲ್ಲಿ ಕನ್ನಡದ ನಟಿ ಆಶಿಕಾ ರಂಗನಾಥ್‌ ಬ್ಯುಸಿಯಾಗಿದ್ದಾರೆ.

Share This Article