Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತನ್ನ ಮುಖ, ಮೈಯಲ್ಲೆಲ್ಲ ಮಣ್ಣಿದ್ದರೂ ನನ್ನ ಮುಖ ಒರೆಸಿದ್ದರು- ಅಪ್ಪು ನೆನಪಿಸಿಕೊಂಡು ಹರ್ಷಿಕಾ ಕಣ್ಣೀರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ತನ್ನ ಮುಖ, ಮೈಯಲ್ಲೆಲ್ಲ ಮಣ್ಣಿದ್ದರೂ ನನ್ನ ಮುಖ ಒರೆಸಿದ್ದರು- ಅಪ್ಪು ನೆನಪಿಸಿಕೊಂಡು ಹರ್ಷಿಕಾ ಕಣ್ಣೀರು

Bengaluru City

ತನ್ನ ಮುಖ, ಮೈಯಲ್ಲೆಲ್ಲ ಮಣ್ಣಿದ್ದರೂ ನನ್ನ ಮುಖ ಒರೆಸಿದ್ದರು- ಅಪ್ಪು ನೆನಪಿಸಿಕೊಂಡು ಹರ್ಷಿಕಾ ಕಣ್ಣೀರು

Public TV
Last updated: November 25, 2021 6:39 pm
Public TV
Share
3 Min Read
PUNEETH HARSHIKA
SHARE

ಬೆಂಗಳೂರು: ನಟಿ ಹರ್ಷಿಕಾ ಪೂನಚ್ಚ ಅವರು ಪುನೀತ್ ರಾಜ್ ಕುಮಾರ್ ಅವರನ್ನು ನೆನಪು ಮಾಡಿಕೊಂಡು ಕಣ್ಣೀರು ಹಾಕಿದ್ದಾರೆ.

ಬೇಲೂರಿನಲ್ಲಿ ಇನ್ ಸ್ಟಾದಲ್ಲಿ ಲೈವ್ ಬಂದು ಮಾತನಾಡಿದ ಅವರು, ಈಗಲೂ ಅರಗಿಸಿಕೊಳ್ಳಲು ಕಷ್ಟ ಆಗುತ್ತಿದೆ. ಅಪ್ಪು ಸರ್ ಅವರು ನಮ್ಮ ಸುತ್ತ ಮುತ್ತ ಇಲ್ಲ ಅನ್ನೋ ಮಾತನ್ನು ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಅಪ್ಪು ಸರ್ ಅವರ ಮನೆಯಲ್ಲಿ ಇದ್ದಾರೆ. ಅವರನ್ನು ಆದಷ್ಟು ಬೇಗ ಭೇಟಿಯಾಗ್ತೀವಿ ಅಂತಾನೇ ನನಗೆ ಈಗಲೂ ಅನಿಸ್ತಿದೆ ಎಂದರು.

PUNEETH RAJ KUMAR 4

ಅಪ್ಪು ಸರ್ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ಕುಟುಂಬದವರ ಜೊತೆ ಇದ್ದಾರೆ. ಅವರು ಸಿಕ್ಕಾಗ ಮಾತಾಡಿಸಬೇಕು ಅಂತೆಲ್ಲ ಅನಿಸ್ತಿದೆ. ಸದ್ಯ ನಾನು ಬೇಲೂರಿನಲ್ಲಿ ಶೂಟಿಂಗ್ ನಲ್ಲಿ ಇದ್ದೇನೆ. ಕ್ಯಾರವಾನ್ ಅಥವಾ ವ್ಯಾನಿಟಿ ವ್ಯಾನ್ ಅನ್ನು ಮೊದಲು ಪರಿಚಯಿಸಿದ್ದು ಅಪ್ಪು ಸರ್. 15-16ನೇ ವಯಸ್ಸಿನಲ್ಲಿ ನನ್ನ ಎರಡನೇಯ ಸಿನಿಮಾ ಜಾಕಿ ಶೂಟಿಂಗ್ ಸಮಯದಲ್ಲಿ ಸೆಟ್ ನಲ್ಲಿ ಕುಳಿತುಕೊಂಡು ಮಾತನಾಡುತ್ತಿದ್ದಾಗ ಅಪ್ಪು ಸರ್ ಅವರು. ಯಾಕಮ್ಮಾ ಹರ್ಷಿಕಾ ನನ್ನ ಕ್ಯಾರವನ್ ನಲ್ಲಿ ಹೋಗಿ ಕುಳಿತುಕೊಳ್ಳಬಹುದಲ್ವಾ..? ಎಂದು ಹೇಳಿದ್ದರು. ಯಾಕಂದ್ರೆ ಆ ಸಮಯದಲ್ಲಿ ಸ್ಟಂಟ್, ಫೈಟ್ ನಡೀತಾ ಇತ್ತು. ಧೂಳು ತುಂಬಿತ್ತು. ಹೀಗಾಗಿ ಅಪ್ಪು ಸರ್ ನನ್ನ ಅಲ್ಲಿಂದ ಹೋಗುವಂತೆ ಹೇಳಿದ್ದರು.

actress-harshika-poonachcha
actress-harshika-poonachcha

ಆಗ ನಾನು ಇಲ್ಲ ಸರ್ ಪರವಾಗಿಲ್ಲ ನಾನು ಇಲ್ಲೇ ಕುಳಿತಿರುತ್ತೇನೆ ಅಂತ ಹೇಳಿದೆ. ಇಲ್ಲ ನೀನು ಹೋಗು ಅಲ್ಲಿ ಡ್ರೈಫ್ರೂಟ್ಸ್, ಹಣ್ಣುಗಳಿವೆ. ನಿಂಗೆ ಏನು ಬೇಕು ತಿನ್ನು, ರೆಸ್ಟ್ ಮಾಡು ಅಂತೆಲ್ಲ ಹೇಳಿದರು. ಇದೇ ಮಾತನ್ನು ನನ್ನ ತಾಯಿಗೂ ಹೇಳಿದರು. ಹೀಗಾಗಿ ನಂಗೆ ಹಾಗೂ ನನ್ನ ಅಮ್ಮನಿಗೆ ಅರಗಿಸಿಕೊಳ್ಳಲು ಆಗ್ತಿಲ್ಲ ಎಂದು ಗದ್ಗದಿತರಾದರು. ಇದನ್ನೂ ಓದಿ: ಮೈತ್ರಿ ಸರ್ಕಾರದಲ್ಲಿ ಕಡಿಮೆಯಾಗಿದ್ದ ಆತ್ಮಹತ್ಯೆ ಪ್ರಕರಣಗಳು ಈಗ ಹೆಚ್ಚಾಗ್ತಿವೆ: ಹೆಚ್‍ಡಿಕೆ

PUNEETH RAJ KUMAR 3

ಎಷ್ಟು ದೊಡ್ಡ ಮನುಷ್ಯ. ಎಷ್ಟು ಒಳ್ಳೆಯ ಫ್ಯಾಮಿಲಿಯಿಂದ ಬಂದಿದ್ದಾರೆ. ಆಗಿನ್ನು ನಾನು ಇಂಡಸ್ಟಿಗೆ ಹೊಸಬಳು. ಆದರೆ ನನಗೆ ಅವರ ಜೊತೆ ನಟಿಸಲು ಅವಕಾಶ ಮಾಡಿಕೊಟ್ಟರು. ದೇವರು ಯಾಕೆ ಇಷ್ಟೊಂದು ಕಟುಕ ಆದರು. ಯಾವ ಕಾರಣಕ್ಕೆ ಅವರನ್ನು ಕರೆದುಕೊಂಡ್ರು. ಅವರು ಮಾಡಿರುವ ಒಳ್ಳೆಯ ವಿಚಾರಗಳು ಈವಾಗ ಬಯಲಾಗುತ್ತಿವೆ ಎಂದು ಅಪ್ಪು ನೆನಪಿಸಿಕೊಂಡು ಹರ್ಷಿಕಾ ಬೇಸರ ವ್ಯಕ್ತಪಡಿಸಿದರು.

harshika poonacha

ಜಾಕಿ ಸಿನಿಮಾ ಶೂಟಿಂಗ್ ಸಮಯದಲ್ಲಿ ಕ್ಲೈಮ್ಯಾಕ್ಸ್ ಸೀನ್ ನಲ್ಲಿ ನನ್ನ ಹಾಗೂ ಅಪ್ಪು ಸರ್ ನ ಒಂದು ಗುಂಡಿ ತೋಡಿ ಒಳಗೆ ಹಾಕಿರುತ್ತಾರೆ. ಆ ಬಳಿಕ ನಮ್ಮ ಮೇಲೆ ಮಣ್ಣು ಹಾಕಿರುತ್ತಾರೆ. ಅದರ ಮೇಲೆ ಒಂದು ಕಲ್ಲು ಹಾಕಿ ಕ್ಲೋಸ್ ಮಾಡಿ ಬಿಡುತ್ತಾರೆ. ಆ ಸಂದರ್ಭದಲ್ಲಿ ಒಂದಷ್ಟು ಸೆಕೆಂಡ್ ನಲ್ಲಿ ಅದರೊಳಗಡೆಯೇ ಉಸಿರಾಡದೆ ನಾವು ಇರಬೇಕಿತ್ತು. ಇದಾದ ಬಳಿಕ ನಮ್ಮನ್ನ ಆ ಗುಂಡಿಯಿಂದ ನಮ್ಮನ್ನು ಹೊರಗೆ ತೆಗೆಯುತ್ತಾರೆ. ಈ ವೇಳೆ ಅಪ್ಪು ಸರ್ ಮೈ, ಮುಖದಲ್ಲೆಲ್ಲ ಪೂರ್ತಿ ಮಣ್ಣಿದೆ. ಆದರೆ ಮೊದಲು ನನ್ನ ಮುಖ ಒರೆಸಿ ನೀರು ಹಾಕಿ ಹರ್ಷಿಕಾ ಆರ್ ಯು ಓಕೆ ಅಂತೆಲ್ಲ ಕೇಳಿದ್ರು. ಆದರೆ ಇಂದು ಇಂತಹ ಒಂದು ಒಬ್ಬ ದೇವತಾ ಮನುಷ್ಯನನ್ನು ಕರೆದುಕೊಳ್ಳುವಷ್ಟು ದೇವರು ಕಟುಕ ಯಾಕೆ ಆದ ಅಂತ ಕಣ್ಣೀರಾಕಿದ್ರು.  ಇದನ್ನೂ ಓದಿ: ಮೆಟ್ರೋ ಕಾಸ್ಟ್ ಇಂಡಿಯಾದ ನೂತನ ಕಚೇರಿ ಬೆಂಗಳೂರಿನಲ್ಲಿ ಉದ್ಘಾಟನೆ

PUNEETH RAJ KUMAR 1 1

ಅನೇಕ ಮಂದಿ ಕಟುಕರು ಈ ಭೂಮಿ ಮೇಲೆ ಇದ್ದಾರೆ. ಆದರೆ ಇಂತಹ ಒಳ್ಳೆಯ ಮನುಷ್ಯನನ್ನು ದೇವರು ಯಾಕೆ ಕರೆದುಕೊಂಡು ಹೋದ್ರು ಅಂತ ದೇವರ ಮೇಲೆ ಕೋಪ ಬರುತ್ತಿದೆ. ಅಪ್ಪು ಸರ್ ತುಂಬಾ ಜನರನ್ನು ತಮ್ಮದೇ ಕುಟುಂಬದವರಂತೆ ನೋಡಿಕೊಳ್ಳುತ್ತಾರೆ. ಸಿಕ್ಕಾಗಲ್ಲೆಲ್ಲಾ ಆರೋಗ್ಯದ ಬಗ್ಗೆಯೇ ಮಾತಾಡ್ತಾರೆ. ಹೇಗೆ ಸಣ್ಣ ಆಗಿದ್ದೀಯಾ.. ಏನು ಡಯೆಟ್ ಮಾಡ್ತೀಯಾ ಅಂತೆಲ್ಲ ಕೇಳುತ್ತಿದ್ದರು. ಹಾಗೆಯೇ ಅವರನ್ನು ಕೊನೆಯ ಬಾರಿ ಆಸ್ಪತ್ರೆಗೆ ನೋಡಲು ಹೋದಾಗಲೂ ಎದ್ದು ಮಾತನಾಡಿಸುತ್ತಾರೆ ಅಂತ ಅಂದುಕೊಂಡೆ ಆದರೆ ಅವರು ಎದ್ದು ಮಾತನಾಡಲೇ ಇಲ್ಲ ಎಂದು ಹರ್ಷಿಕಾ ಗಳ ಗಳನೇ ಅತ್ತರು.

 

View this post on Instagram

 

A post shared by Harshika Poonacha (@harshikapoonachaofficial)

TAGGED:bengaluruharshika poonachchaPuneeth Raj Kumarsandalwoodಪುನೀತ್ ರಾಜ್ ಕುಮಾರ್ಬೆಂಗಳೂರುಸ್ಯಾಂಡಲ್‍ವುಡ್ಹರ್ಷಿಕಾ ಪೂಣಚ್ಚ
Share This Article
Facebook Whatsapp Whatsapp Telegram

Cinema news

CM Nandini
ಖ್ಯಾತ ಕಿರುತೆರೆ ನಟಿ ಆತ್ಮಹತ್ಯೆಗೆ ಶರಣು
Bengaluru City Cinema Crime Latest Main Post TV Shows
Raj B Shetty 1
ರಾಜ್ ಬಿ ಶೆಟ್ಟಿ ನಟನೆಯ ರಕ್ಕಸಪುರದೊಳ್ ರಿಲೀಸ್ ಡೇಟ್ ಫಿಕ್ಸ್
Cinema Latest Sandalwood Top Stories
K POP Kannada Movie
ಕೊರಿಯನ್ ಪಾಪ್ ಸಂಸ್ಕೃತಿ ಬಿಂಬಿಸುವ ಕನ್ನಡದ ʻಕೆ-ಪಾಪ್ʼ
Cinema Latest Sandalwood
Prabhas
ಸಂಕ್ರಾಂತಿ ಹಬ್ಬಕ್ಕೆ ʻದಿ ರಾಜಾ ಸಾಬ್ʼ ಅಬ್ಬರ; ಪ್ರೀ-ರಿಲೀಸ್ ಈವೆಂಟ್‌ನಲ್ಲಿ ಮಿಂಚಿದ ರೆಬೆಲ್ ಸ್ಟಾರ್ ಪ್ರಭಾಸ್
Cinema Latest South cinema

You Might Also Like

bengaluru drugs
Bengaluru City

ಬೆಂಗ್ಳೂರಿನ ಮೂರು ಕಡೆ ಮಾದಕ ವಸ್ತು ಫ್ಯಾಕ್ಟರಿ ಪತ್ತೆ ಕೇಸ್ – ಮೂವರು ಪೊಲೀಸ್ ಇನ್ಸ್‌ಪೆಕ್ಟರ್‌ ಸಸ್ಪೆಂಡ್

Public TV
By Public TV
59 minutes ago
TB Dam Janardhana Reddy 2
Bellary

ತುಂಗಭದ್ರಾ ಜಲಾಶಯದ ಕ್ರಸ್ಟ್‌ಗೇಟ್‌ ಅಳವಡಿಕೆ ಪರಿಶೀಲಿಸಿದ ಜನಾರ್ದನ ರೆಡ್ಡಿ

Public TV
By Public TV
1 hour ago
siddaramaiah 1 3
Bengaluru City

Kogilu layout Demolition | ಅರ್ಹರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಸರ್ಕಾರ ತೀರ್ಮಾನ: ಸಿದ್ದರಾಮಯ್ಯ

Public TV
By Public TV
1 hour ago
NAMMA METRO 4
Bengaluru City

ನ್ಯೂ ಇಯರ್‌ಗೆ ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್ – ಡಿ.31ರಂದು ಮೂರು ಮಾರ್ಗದಲ್ಲಿ ಸೇವಾ ಸಮಯ ವಿಸ್ತರಣೆ

Public TV
By Public TV
2 hours ago
AragaJnanendra
Districts

ಯುವಕರನ್ನು ಸರಿ ದಾರಿಗೆ ತರುವ ಹೊಣೆ ರಾಜ್ಯ ಸರ್ಕಾರಕ್ಕೆ ಇದ್ದಂತಿಲ್ಲ: ಆರಗ ಕಿಡಿ

Public TV
By Public TV
2 hours ago
HD Revanna
Bengaluru City

ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಬಿಗ್‌ ರಿಲೀಫ್‌; ಹೆಚ್‌.ಡಿ ರೇವಣ್ಣ ವಿರುದ್ಧದ ಪ್ರಕರಣ ಕೈಬಿಟ್ಟ ಕೋರ್ಟ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?