Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತನ್ನ ಮುಖ, ಮೈಯಲ್ಲೆಲ್ಲ ಮಣ್ಣಿದ್ದರೂ ನನ್ನ ಮುಖ ಒರೆಸಿದ್ದರು- ಅಪ್ಪು ನೆನಪಿಸಿಕೊಂಡು ಹರ್ಷಿಕಾ ಕಣ್ಣೀರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ತನ್ನ ಮುಖ, ಮೈಯಲ್ಲೆಲ್ಲ ಮಣ್ಣಿದ್ದರೂ ನನ್ನ ಮುಖ ಒರೆಸಿದ್ದರು- ಅಪ್ಪು ನೆನಪಿಸಿಕೊಂಡು ಹರ್ಷಿಕಾ ಕಣ್ಣೀರು

Bengaluru City

ತನ್ನ ಮುಖ, ಮೈಯಲ್ಲೆಲ್ಲ ಮಣ್ಣಿದ್ದರೂ ನನ್ನ ಮುಖ ಒರೆಸಿದ್ದರು- ಅಪ್ಪು ನೆನಪಿಸಿಕೊಂಡು ಹರ್ಷಿಕಾ ಕಣ್ಣೀರು

Public TV
Last updated: November 25, 2021 6:39 pm
Public TV
Share
3 Min Read
PUNEETH HARSHIKA
SHARE

ಬೆಂಗಳೂರು: ನಟಿ ಹರ್ಷಿಕಾ ಪೂನಚ್ಚ ಅವರು ಪುನೀತ್ ರಾಜ್ ಕುಮಾರ್ ಅವರನ್ನು ನೆನಪು ಮಾಡಿಕೊಂಡು ಕಣ್ಣೀರು ಹಾಕಿದ್ದಾರೆ.

ಬೇಲೂರಿನಲ್ಲಿ ಇನ್ ಸ್ಟಾದಲ್ಲಿ ಲೈವ್ ಬಂದು ಮಾತನಾಡಿದ ಅವರು, ಈಗಲೂ ಅರಗಿಸಿಕೊಳ್ಳಲು ಕಷ್ಟ ಆಗುತ್ತಿದೆ. ಅಪ್ಪು ಸರ್ ಅವರು ನಮ್ಮ ಸುತ್ತ ಮುತ್ತ ಇಲ್ಲ ಅನ್ನೋ ಮಾತನ್ನು ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಅಪ್ಪು ಸರ್ ಅವರ ಮನೆಯಲ್ಲಿ ಇದ್ದಾರೆ. ಅವರನ್ನು ಆದಷ್ಟು ಬೇಗ ಭೇಟಿಯಾಗ್ತೀವಿ ಅಂತಾನೇ ನನಗೆ ಈಗಲೂ ಅನಿಸ್ತಿದೆ ಎಂದರು.

PUNEETH RAJ KUMAR 4

ಅಪ್ಪು ಸರ್ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ಕುಟುಂಬದವರ ಜೊತೆ ಇದ್ದಾರೆ. ಅವರು ಸಿಕ್ಕಾಗ ಮಾತಾಡಿಸಬೇಕು ಅಂತೆಲ್ಲ ಅನಿಸ್ತಿದೆ. ಸದ್ಯ ನಾನು ಬೇಲೂರಿನಲ್ಲಿ ಶೂಟಿಂಗ್ ನಲ್ಲಿ ಇದ್ದೇನೆ. ಕ್ಯಾರವಾನ್ ಅಥವಾ ವ್ಯಾನಿಟಿ ವ್ಯಾನ್ ಅನ್ನು ಮೊದಲು ಪರಿಚಯಿಸಿದ್ದು ಅಪ್ಪು ಸರ್. 15-16ನೇ ವಯಸ್ಸಿನಲ್ಲಿ ನನ್ನ ಎರಡನೇಯ ಸಿನಿಮಾ ಜಾಕಿ ಶೂಟಿಂಗ್ ಸಮಯದಲ್ಲಿ ಸೆಟ್ ನಲ್ಲಿ ಕುಳಿತುಕೊಂಡು ಮಾತನಾಡುತ್ತಿದ್ದಾಗ ಅಪ್ಪು ಸರ್ ಅವರು. ಯಾಕಮ್ಮಾ ಹರ್ಷಿಕಾ ನನ್ನ ಕ್ಯಾರವನ್ ನಲ್ಲಿ ಹೋಗಿ ಕುಳಿತುಕೊಳ್ಳಬಹುದಲ್ವಾ..? ಎಂದು ಹೇಳಿದ್ದರು. ಯಾಕಂದ್ರೆ ಆ ಸಮಯದಲ್ಲಿ ಸ್ಟಂಟ್, ಫೈಟ್ ನಡೀತಾ ಇತ್ತು. ಧೂಳು ತುಂಬಿತ್ತು. ಹೀಗಾಗಿ ಅಪ್ಪು ಸರ್ ನನ್ನ ಅಲ್ಲಿಂದ ಹೋಗುವಂತೆ ಹೇಳಿದ್ದರು.

actress-harshika-poonachcha
actress-harshika-poonachcha

ಆಗ ನಾನು ಇಲ್ಲ ಸರ್ ಪರವಾಗಿಲ್ಲ ನಾನು ಇಲ್ಲೇ ಕುಳಿತಿರುತ್ತೇನೆ ಅಂತ ಹೇಳಿದೆ. ಇಲ್ಲ ನೀನು ಹೋಗು ಅಲ್ಲಿ ಡ್ರೈಫ್ರೂಟ್ಸ್, ಹಣ್ಣುಗಳಿವೆ. ನಿಂಗೆ ಏನು ಬೇಕು ತಿನ್ನು, ರೆಸ್ಟ್ ಮಾಡು ಅಂತೆಲ್ಲ ಹೇಳಿದರು. ಇದೇ ಮಾತನ್ನು ನನ್ನ ತಾಯಿಗೂ ಹೇಳಿದರು. ಹೀಗಾಗಿ ನಂಗೆ ಹಾಗೂ ನನ್ನ ಅಮ್ಮನಿಗೆ ಅರಗಿಸಿಕೊಳ್ಳಲು ಆಗ್ತಿಲ್ಲ ಎಂದು ಗದ್ಗದಿತರಾದರು. ಇದನ್ನೂ ಓದಿ: ಮೈತ್ರಿ ಸರ್ಕಾರದಲ್ಲಿ ಕಡಿಮೆಯಾಗಿದ್ದ ಆತ್ಮಹತ್ಯೆ ಪ್ರಕರಣಗಳು ಈಗ ಹೆಚ್ಚಾಗ್ತಿವೆ: ಹೆಚ್‍ಡಿಕೆ

PUNEETH RAJ KUMAR 3

ಎಷ್ಟು ದೊಡ್ಡ ಮನುಷ್ಯ. ಎಷ್ಟು ಒಳ್ಳೆಯ ಫ್ಯಾಮಿಲಿಯಿಂದ ಬಂದಿದ್ದಾರೆ. ಆಗಿನ್ನು ನಾನು ಇಂಡಸ್ಟಿಗೆ ಹೊಸಬಳು. ಆದರೆ ನನಗೆ ಅವರ ಜೊತೆ ನಟಿಸಲು ಅವಕಾಶ ಮಾಡಿಕೊಟ್ಟರು. ದೇವರು ಯಾಕೆ ಇಷ್ಟೊಂದು ಕಟುಕ ಆದರು. ಯಾವ ಕಾರಣಕ್ಕೆ ಅವರನ್ನು ಕರೆದುಕೊಂಡ್ರು. ಅವರು ಮಾಡಿರುವ ಒಳ್ಳೆಯ ವಿಚಾರಗಳು ಈವಾಗ ಬಯಲಾಗುತ್ತಿವೆ ಎಂದು ಅಪ್ಪು ನೆನಪಿಸಿಕೊಂಡು ಹರ್ಷಿಕಾ ಬೇಸರ ವ್ಯಕ್ತಪಡಿಸಿದರು.

harshika poonacha

ಜಾಕಿ ಸಿನಿಮಾ ಶೂಟಿಂಗ್ ಸಮಯದಲ್ಲಿ ಕ್ಲೈಮ್ಯಾಕ್ಸ್ ಸೀನ್ ನಲ್ಲಿ ನನ್ನ ಹಾಗೂ ಅಪ್ಪು ಸರ್ ನ ಒಂದು ಗುಂಡಿ ತೋಡಿ ಒಳಗೆ ಹಾಕಿರುತ್ತಾರೆ. ಆ ಬಳಿಕ ನಮ್ಮ ಮೇಲೆ ಮಣ್ಣು ಹಾಕಿರುತ್ತಾರೆ. ಅದರ ಮೇಲೆ ಒಂದು ಕಲ್ಲು ಹಾಕಿ ಕ್ಲೋಸ್ ಮಾಡಿ ಬಿಡುತ್ತಾರೆ. ಆ ಸಂದರ್ಭದಲ್ಲಿ ಒಂದಷ್ಟು ಸೆಕೆಂಡ್ ನಲ್ಲಿ ಅದರೊಳಗಡೆಯೇ ಉಸಿರಾಡದೆ ನಾವು ಇರಬೇಕಿತ್ತು. ಇದಾದ ಬಳಿಕ ನಮ್ಮನ್ನ ಆ ಗುಂಡಿಯಿಂದ ನಮ್ಮನ್ನು ಹೊರಗೆ ತೆಗೆಯುತ್ತಾರೆ. ಈ ವೇಳೆ ಅಪ್ಪು ಸರ್ ಮೈ, ಮುಖದಲ್ಲೆಲ್ಲ ಪೂರ್ತಿ ಮಣ್ಣಿದೆ. ಆದರೆ ಮೊದಲು ನನ್ನ ಮುಖ ಒರೆಸಿ ನೀರು ಹಾಕಿ ಹರ್ಷಿಕಾ ಆರ್ ಯು ಓಕೆ ಅಂತೆಲ್ಲ ಕೇಳಿದ್ರು. ಆದರೆ ಇಂದು ಇಂತಹ ಒಂದು ಒಬ್ಬ ದೇವತಾ ಮನುಷ್ಯನನ್ನು ಕರೆದುಕೊಳ್ಳುವಷ್ಟು ದೇವರು ಕಟುಕ ಯಾಕೆ ಆದ ಅಂತ ಕಣ್ಣೀರಾಕಿದ್ರು.  ಇದನ್ನೂ ಓದಿ: ಮೆಟ್ರೋ ಕಾಸ್ಟ್ ಇಂಡಿಯಾದ ನೂತನ ಕಚೇರಿ ಬೆಂಗಳೂರಿನಲ್ಲಿ ಉದ್ಘಾಟನೆ

PUNEETH RAJ KUMAR 1 1

ಅನೇಕ ಮಂದಿ ಕಟುಕರು ಈ ಭೂಮಿ ಮೇಲೆ ಇದ್ದಾರೆ. ಆದರೆ ಇಂತಹ ಒಳ್ಳೆಯ ಮನುಷ್ಯನನ್ನು ದೇವರು ಯಾಕೆ ಕರೆದುಕೊಂಡು ಹೋದ್ರು ಅಂತ ದೇವರ ಮೇಲೆ ಕೋಪ ಬರುತ್ತಿದೆ. ಅಪ್ಪು ಸರ್ ತುಂಬಾ ಜನರನ್ನು ತಮ್ಮದೇ ಕುಟುಂಬದವರಂತೆ ನೋಡಿಕೊಳ್ಳುತ್ತಾರೆ. ಸಿಕ್ಕಾಗಲ್ಲೆಲ್ಲಾ ಆರೋಗ್ಯದ ಬಗ್ಗೆಯೇ ಮಾತಾಡ್ತಾರೆ. ಹೇಗೆ ಸಣ್ಣ ಆಗಿದ್ದೀಯಾ.. ಏನು ಡಯೆಟ್ ಮಾಡ್ತೀಯಾ ಅಂತೆಲ್ಲ ಕೇಳುತ್ತಿದ್ದರು. ಹಾಗೆಯೇ ಅವರನ್ನು ಕೊನೆಯ ಬಾರಿ ಆಸ್ಪತ್ರೆಗೆ ನೋಡಲು ಹೋದಾಗಲೂ ಎದ್ದು ಮಾತನಾಡಿಸುತ್ತಾರೆ ಅಂತ ಅಂದುಕೊಂಡೆ ಆದರೆ ಅವರು ಎದ್ದು ಮಾತನಾಡಲೇ ಇಲ್ಲ ಎಂದು ಹರ್ಷಿಕಾ ಗಳ ಗಳನೇ ಅತ್ತರು.

 

View this post on Instagram

 

A post shared by Harshika Poonacha (@harshikapoonachaofficial)

TAGGED:bengaluruharshika poonachchaPuneeth Raj Kumarsandalwoodಪುನೀತ್ ರಾಜ್ ಕುಮಾರ್ಬೆಂಗಳೂರುಸ್ಯಾಂಡಲ್‍ವುಡ್ಹರ್ಷಿಕಾ ಪೂಣಚ್ಚ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Shreyas Iyer 4
Cricket

ಮನೆಮಗನ ಆಟಕ್ಕೆ ಮಲಗಿದ ಮುಂಬೈ – ಪಂಜಾಬ್‌ಗೆ 7 ವಿಕೆಟ್‌ಗಳ ಭರ್ಜರಿ ಜಯ, 2ನೇ ಸ್ಥಾನಕ್ಕೆ ಕುಸಿದ RCB

Public TV
By Public TV
3 hours ago
HIGHCOURT
Bengaluru City

ಗಲಾಟೆ ಪ್ರಕರಣ – ಅನಂತಕುಮಾರ್ ಹೆಗಡೆ ಪುತ್ರ ಅಶುತೋಷ್ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆ

Public TV
By Public TV
3 hours ago
Shivamogga Snake Bite Child Death
Districts

ಶಿವಮೊಗ್ಗದಲ್ಲಿ ಹಾವು ಕಡಿದು 2 ವರ್ಷದ ಮಗು ಸಾವು

Public TV
By Public TV
4 hours ago
hassana rain
Districts

ಗದಗ, ಹಾಸನದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ

Public TV
By Public TV
4 hours ago
Karwar Port
Districts

6,000 ಮೆಟ್ರಿಕ್ ಟನ್ ಕಚ್ಚಾ ಡಾಂಬರ್ ತುಂಬಿದ ಹಡಗು ಯುಎಇ ಯಿಂದ ಕಾರವಾರಕ್ಕೆ ಆಗಮನ

Public TV
By Public TV
4 hours ago
Chamarajanagar BRT Forest Fire
Chamarajanagar

ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತ ಅರಣ್ಯದಲ್ಲಿ ಮತ್ತೆ ಬೆಂಕಿ – ಅಪಾರ ಪ್ರಮಾಣದ ಕಾಡು ಭಸ್ಮ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?