Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತನ್ನ ಮುಖ, ಮೈಯಲ್ಲೆಲ್ಲ ಮಣ್ಣಿದ್ದರೂ ನನ್ನ ಮುಖ ಒರೆಸಿದ್ದರು- ಅಪ್ಪು ನೆನಪಿಸಿಕೊಂಡು ಹರ್ಷಿಕಾ ಕಣ್ಣೀರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ತನ್ನ ಮುಖ, ಮೈಯಲ್ಲೆಲ್ಲ ಮಣ್ಣಿದ್ದರೂ ನನ್ನ ಮುಖ ಒರೆಸಿದ್ದರು- ಅಪ್ಪು ನೆನಪಿಸಿಕೊಂಡು ಹರ್ಷಿಕಾ ಕಣ್ಣೀರು

Bengaluru City

ತನ್ನ ಮುಖ, ಮೈಯಲ್ಲೆಲ್ಲ ಮಣ್ಣಿದ್ದರೂ ನನ್ನ ಮುಖ ಒರೆಸಿದ್ದರು- ಅಪ್ಪು ನೆನಪಿಸಿಕೊಂಡು ಹರ್ಷಿಕಾ ಕಣ್ಣೀರು

Public TV
Last updated: November 25, 2021 6:39 pm
Public TV
Share
3 Min Read
PUNEETH HARSHIKA
SHARE

ಬೆಂಗಳೂರು: ನಟಿ ಹರ್ಷಿಕಾ ಪೂನಚ್ಚ ಅವರು ಪುನೀತ್ ರಾಜ್ ಕುಮಾರ್ ಅವರನ್ನು ನೆನಪು ಮಾಡಿಕೊಂಡು ಕಣ್ಣೀರು ಹಾಕಿದ್ದಾರೆ.

ಬೇಲೂರಿನಲ್ಲಿ ಇನ್ ಸ್ಟಾದಲ್ಲಿ ಲೈವ್ ಬಂದು ಮಾತನಾಡಿದ ಅವರು, ಈಗಲೂ ಅರಗಿಸಿಕೊಳ್ಳಲು ಕಷ್ಟ ಆಗುತ್ತಿದೆ. ಅಪ್ಪು ಸರ್ ಅವರು ನಮ್ಮ ಸುತ್ತ ಮುತ್ತ ಇಲ್ಲ ಅನ್ನೋ ಮಾತನ್ನು ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಅಪ್ಪು ಸರ್ ಅವರ ಮನೆಯಲ್ಲಿ ಇದ್ದಾರೆ. ಅವರನ್ನು ಆದಷ್ಟು ಬೇಗ ಭೇಟಿಯಾಗ್ತೀವಿ ಅಂತಾನೇ ನನಗೆ ಈಗಲೂ ಅನಿಸ್ತಿದೆ ಎಂದರು.

PUNEETH RAJ KUMAR 4

ಅಪ್ಪು ಸರ್ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ಕುಟುಂಬದವರ ಜೊತೆ ಇದ್ದಾರೆ. ಅವರು ಸಿಕ್ಕಾಗ ಮಾತಾಡಿಸಬೇಕು ಅಂತೆಲ್ಲ ಅನಿಸ್ತಿದೆ. ಸದ್ಯ ನಾನು ಬೇಲೂರಿನಲ್ಲಿ ಶೂಟಿಂಗ್ ನಲ್ಲಿ ಇದ್ದೇನೆ. ಕ್ಯಾರವಾನ್ ಅಥವಾ ವ್ಯಾನಿಟಿ ವ್ಯಾನ್ ಅನ್ನು ಮೊದಲು ಪರಿಚಯಿಸಿದ್ದು ಅಪ್ಪು ಸರ್. 15-16ನೇ ವಯಸ್ಸಿನಲ್ಲಿ ನನ್ನ ಎರಡನೇಯ ಸಿನಿಮಾ ಜಾಕಿ ಶೂಟಿಂಗ್ ಸಮಯದಲ್ಲಿ ಸೆಟ್ ನಲ್ಲಿ ಕುಳಿತುಕೊಂಡು ಮಾತನಾಡುತ್ತಿದ್ದಾಗ ಅಪ್ಪು ಸರ್ ಅವರು. ಯಾಕಮ್ಮಾ ಹರ್ಷಿಕಾ ನನ್ನ ಕ್ಯಾರವನ್ ನಲ್ಲಿ ಹೋಗಿ ಕುಳಿತುಕೊಳ್ಳಬಹುದಲ್ವಾ..? ಎಂದು ಹೇಳಿದ್ದರು. ಯಾಕಂದ್ರೆ ಆ ಸಮಯದಲ್ಲಿ ಸ್ಟಂಟ್, ಫೈಟ್ ನಡೀತಾ ಇತ್ತು. ಧೂಳು ತುಂಬಿತ್ತು. ಹೀಗಾಗಿ ಅಪ್ಪು ಸರ್ ನನ್ನ ಅಲ್ಲಿಂದ ಹೋಗುವಂತೆ ಹೇಳಿದ್ದರು.

actress-harshika-poonachcha
actress-harshika-poonachcha

ಆಗ ನಾನು ಇಲ್ಲ ಸರ್ ಪರವಾಗಿಲ್ಲ ನಾನು ಇಲ್ಲೇ ಕುಳಿತಿರುತ್ತೇನೆ ಅಂತ ಹೇಳಿದೆ. ಇಲ್ಲ ನೀನು ಹೋಗು ಅಲ್ಲಿ ಡ್ರೈಫ್ರೂಟ್ಸ್, ಹಣ್ಣುಗಳಿವೆ. ನಿಂಗೆ ಏನು ಬೇಕು ತಿನ್ನು, ರೆಸ್ಟ್ ಮಾಡು ಅಂತೆಲ್ಲ ಹೇಳಿದರು. ಇದೇ ಮಾತನ್ನು ನನ್ನ ತಾಯಿಗೂ ಹೇಳಿದರು. ಹೀಗಾಗಿ ನಂಗೆ ಹಾಗೂ ನನ್ನ ಅಮ್ಮನಿಗೆ ಅರಗಿಸಿಕೊಳ್ಳಲು ಆಗ್ತಿಲ್ಲ ಎಂದು ಗದ್ಗದಿತರಾದರು. ಇದನ್ನೂ ಓದಿ: ಮೈತ್ರಿ ಸರ್ಕಾರದಲ್ಲಿ ಕಡಿಮೆಯಾಗಿದ್ದ ಆತ್ಮಹತ್ಯೆ ಪ್ರಕರಣಗಳು ಈಗ ಹೆಚ್ಚಾಗ್ತಿವೆ: ಹೆಚ್‍ಡಿಕೆ

PUNEETH RAJ KUMAR 3

ಎಷ್ಟು ದೊಡ್ಡ ಮನುಷ್ಯ. ಎಷ್ಟು ಒಳ್ಳೆಯ ಫ್ಯಾಮಿಲಿಯಿಂದ ಬಂದಿದ್ದಾರೆ. ಆಗಿನ್ನು ನಾನು ಇಂಡಸ್ಟಿಗೆ ಹೊಸಬಳು. ಆದರೆ ನನಗೆ ಅವರ ಜೊತೆ ನಟಿಸಲು ಅವಕಾಶ ಮಾಡಿಕೊಟ್ಟರು. ದೇವರು ಯಾಕೆ ಇಷ್ಟೊಂದು ಕಟುಕ ಆದರು. ಯಾವ ಕಾರಣಕ್ಕೆ ಅವರನ್ನು ಕರೆದುಕೊಂಡ್ರು. ಅವರು ಮಾಡಿರುವ ಒಳ್ಳೆಯ ವಿಚಾರಗಳು ಈವಾಗ ಬಯಲಾಗುತ್ತಿವೆ ಎಂದು ಅಪ್ಪು ನೆನಪಿಸಿಕೊಂಡು ಹರ್ಷಿಕಾ ಬೇಸರ ವ್ಯಕ್ತಪಡಿಸಿದರು.

harshika poonacha

ಜಾಕಿ ಸಿನಿಮಾ ಶೂಟಿಂಗ್ ಸಮಯದಲ್ಲಿ ಕ್ಲೈಮ್ಯಾಕ್ಸ್ ಸೀನ್ ನಲ್ಲಿ ನನ್ನ ಹಾಗೂ ಅಪ್ಪು ಸರ್ ನ ಒಂದು ಗುಂಡಿ ತೋಡಿ ಒಳಗೆ ಹಾಕಿರುತ್ತಾರೆ. ಆ ಬಳಿಕ ನಮ್ಮ ಮೇಲೆ ಮಣ್ಣು ಹಾಕಿರುತ್ತಾರೆ. ಅದರ ಮೇಲೆ ಒಂದು ಕಲ್ಲು ಹಾಕಿ ಕ್ಲೋಸ್ ಮಾಡಿ ಬಿಡುತ್ತಾರೆ. ಆ ಸಂದರ್ಭದಲ್ಲಿ ಒಂದಷ್ಟು ಸೆಕೆಂಡ್ ನಲ್ಲಿ ಅದರೊಳಗಡೆಯೇ ಉಸಿರಾಡದೆ ನಾವು ಇರಬೇಕಿತ್ತು. ಇದಾದ ಬಳಿಕ ನಮ್ಮನ್ನ ಆ ಗುಂಡಿಯಿಂದ ನಮ್ಮನ್ನು ಹೊರಗೆ ತೆಗೆಯುತ್ತಾರೆ. ಈ ವೇಳೆ ಅಪ್ಪು ಸರ್ ಮೈ, ಮುಖದಲ್ಲೆಲ್ಲ ಪೂರ್ತಿ ಮಣ್ಣಿದೆ. ಆದರೆ ಮೊದಲು ನನ್ನ ಮುಖ ಒರೆಸಿ ನೀರು ಹಾಕಿ ಹರ್ಷಿಕಾ ಆರ್ ಯು ಓಕೆ ಅಂತೆಲ್ಲ ಕೇಳಿದ್ರು. ಆದರೆ ಇಂದು ಇಂತಹ ಒಂದು ಒಬ್ಬ ದೇವತಾ ಮನುಷ್ಯನನ್ನು ಕರೆದುಕೊಳ್ಳುವಷ್ಟು ದೇವರು ಕಟುಕ ಯಾಕೆ ಆದ ಅಂತ ಕಣ್ಣೀರಾಕಿದ್ರು.  ಇದನ್ನೂ ಓದಿ: ಮೆಟ್ರೋ ಕಾಸ್ಟ್ ಇಂಡಿಯಾದ ನೂತನ ಕಚೇರಿ ಬೆಂಗಳೂರಿನಲ್ಲಿ ಉದ್ಘಾಟನೆ

PUNEETH RAJ KUMAR 1 1

ಅನೇಕ ಮಂದಿ ಕಟುಕರು ಈ ಭೂಮಿ ಮೇಲೆ ಇದ್ದಾರೆ. ಆದರೆ ಇಂತಹ ಒಳ್ಳೆಯ ಮನುಷ್ಯನನ್ನು ದೇವರು ಯಾಕೆ ಕರೆದುಕೊಂಡು ಹೋದ್ರು ಅಂತ ದೇವರ ಮೇಲೆ ಕೋಪ ಬರುತ್ತಿದೆ. ಅಪ್ಪು ಸರ್ ತುಂಬಾ ಜನರನ್ನು ತಮ್ಮದೇ ಕುಟುಂಬದವರಂತೆ ನೋಡಿಕೊಳ್ಳುತ್ತಾರೆ. ಸಿಕ್ಕಾಗಲ್ಲೆಲ್ಲಾ ಆರೋಗ್ಯದ ಬಗ್ಗೆಯೇ ಮಾತಾಡ್ತಾರೆ. ಹೇಗೆ ಸಣ್ಣ ಆಗಿದ್ದೀಯಾ.. ಏನು ಡಯೆಟ್ ಮಾಡ್ತೀಯಾ ಅಂತೆಲ್ಲ ಕೇಳುತ್ತಿದ್ದರು. ಹಾಗೆಯೇ ಅವರನ್ನು ಕೊನೆಯ ಬಾರಿ ಆಸ್ಪತ್ರೆಗೆ ನೋಡಲು ಹೋದಾಗಲೂ ಎದ್ದು ಮಾತನಾಡಿಸುತ್ತಾರೆ ಅಂತ ಅಂದುಕೊಂಡೆ ಆದರೆ ಅವರು ಎದ್ದು ಮಾತನಾಡಲೇ ಇಲ್ಲ ಎಂದು ಹರ್ಷಿಕಾ ಗಳ ಗಳನೇ ಅತ್ತರು.

 

View this post on Instagram

 

A post shared by Harshika Poonacha (@harshikapoonachaofficial)

TAGGED:bengaluruharshika poonachchaPuneeth Raj Kumarsandalwoodಪುನೀತ್ ರಾಜ್ ಕುಮಾರ್ಬೆಂಗಳೂರುಸ್ಯಾಂಡಲ್‍ವುಡ್ಹರ್ಷಿಕಾ ಪೂಣಚ್ಚ
Share This Article
Facebook Whatsapp Whatsapp Telegram

Cinema news

d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories

You Might Also Like

Central government delegation KEA
Bengaluru City

ಕೆಇಎ ಪರೀಕ್ಷಾ ವ್ಯವಸ್ಥೆ ಅಧ್ಯಯನಕ್ಕೆ ಬಂದ ಕೇಂದ್ರ ಸರ್ಕಾರದ ನಿಯೋಗ

Public TV
By Public TV
8 minutes ago
Thai Cargo Ship Sailing
Latest

ಭಾರತಕ್ಕೆ ಪ್ರಯಾಣಿಸುತ್ತಿದ್ದ ಥಾಯ್‌ ಸರಕು ಹಡಗಿನ ಮೇಲೆ ಇರಾನ್‌ ದಾಳಿ

Public TV
By Public TV
22 minutes ago
Om Birla 4
Latest

ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

Public TV
By Public TV
48 minutes ago
RCB vs SRH
Cricket

IPL 2026 ವೇಳಾಪಟ್ಟಿ ರಿಲೀಸ್‌ – ಮಾ.28 ರಿಂದ ಪಂದ್ಯ ಆರಂಭ; ಬೆಂಗಳೂರಲ್ಲಿ ಎಸ್‌ಆರ್‌ಹೆಚ್‌ vs ಆರ್‌ಸಿಬಿ ಫೈಟ್‌

Public TV
By Public TV
53 minutes ago
Ramoji Gowda MLC
Bengaluru City

ನೈಸ್ ಕಂಪನಿಗೆ ಟೌನ್‌ಶಿಪ್ ಮಾಡಲು ಅವಕಾಶ ಕೊಡಬಾರದು: ರಾಮೋಜಿಗೌಡ

Public TV
By Public TV
2 hours ago
N S Bosaraju
Bengaluru City

ಕೋಲಿ, ಕಬ್ಬಲಿಗ, ಬೆಸ್ತ, ಅಂಬಿಗಣ ಬಾರ್ಕಿ ಜಾತಿಗಳನ್ನು STಗೆ ಸೇರಿಸಲು ಕ್ರಮ: ಬೋಸರಾಜು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?