Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಿರಿಯ ನಟಿ ಲೀಲಾವತಿ ನಿಧನಕ್ಕೆ ಗಣ್ಯರ ಸಂತಾಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಹಿರಿಯ ನಟಿ ಲೀಲಾವತಿ ನಿಧನಕ್ಕೆ ಗಣ್ಯರ ಸಂತಾಪ

Cinema

ಹಿರಿಯ ನಟಿ ಲೀಲಾವತಿ ನಿಧನಕ್ಕೆ ಗಣ್ಯರ ಸಂತಾಪ

Public TV
Last updated: December 8, 2023 9:14 pm
Public TV
Share
3 Min Read
leelavathi1
SHARE

ಕನ್ನಡ ಚಿತ್ರರಂಗ ಕಂಡ ಮೇರು ನಟಿ ಡಾ. ಲೀಲಾವತಿ (Leelavathi) ಅವರ ನಿಧನಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್, ಮಾಜಿ ಸಿಎಂ  ಕುಮಾರಸ್ವಾಮಿ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಹಿರಿಯ ನಟಿ ಲೀಲಾವತಿ ಅವರ ಅಗಲಿಕೆಯ ಸುದ್ದಿ ಅತೀವ ದುಃಖ ಉಂಟುಮಾಡಿದೆ. ಇತ್ತೀಚೆಗಷ್ಟೇ ಅವರು ನೆಲಮಂಗಲ ಬಳಿಯ ಸೋಲದೇವನಹಳ್ಳಿಯಲ್ಲಿ ನಿರ್ಮಿಸಿದ್ದ ಪಶು ಆಸ್ಪತ್ರೆಯನ್ನು ಉದ್ಘಾಟಿಸಿದ್ದೆ. ಸಂಕಷ್ಟದಲ್ಲಿದ್ದರೂ ಸಮಾಜ ಸೇವೆ ಮಾಡಬೇಕೆನ್ನುವ ಅವರ ಕಳಕಳಿ ನನ್ನ ಹೃದಯ ಮುಟ್ಟಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಭಗವಂತನಲ್ಲಿ… pic.twitter.com/vxiUH5ceKB

— DK Shivakumar (@DKShivakumar) December 8, 2023

ಕನ್ನಡ ಚಿತ್ರರಂಗ ಕಂಡ ಮೇರು ನಟಿಯರಲ್ಲಿ ಲೀಲಾವತಿ ಅವರೂ ಒಬ್ಬರು. ಅವರೊಬ್ಬ ಕಲಾತಪಸ್ವಿ. ತಮ್ಮ ಮನೋಜ್ಞ ಅಭಿನಯದಿಂದ ಅಮ್ಮ ಎಂದೇ ಖ್ಯಾತಿ ಪಡೆದಿದ್ದರು. ಕಪ್ಪು ಬಿಳುಪು ಚಿತ್ರದಿಂದ ಆಧುನಿಕ ಚಿತ್ರರಂಗದವರೆಗೂ ಕ್ರಿಯಾಶೀಲರಾಗಿ ಕಲಾಸೇವೆ ಸಲ್ಲಿಸಿದ್ದರು ಎಂದು ಲೀಲಾವತಿ ಅವರನ್ನ ಡಿ.ಕೆ ಶಿವಕುಮಾರ್ ಅವರು ಸ್ಮರಿಸಿದ್ದಾರೆ. ಇತ್ತೀಚೆಗೆ ಅನಾರೋಗ್ಯದ ನಡುವೆಯೂ ನನ್ನ ಮನೆಗೆ ಬಂದು ಅವರು ಕಟ್ಟಿರುವ ಆಸ್ಪತ್ರೆ ಉದ್ಘಾಟನೆಗೆ ಆಹ್ವಾನಿಸಿದ್ದರು. ಅವರ ಇಚ್ಛೆಯಂತೆ ನಾನು ಹೋಗಿ ಆಸ್ಪತ್ರೆ ಉದ್ಘಾಟನೆ ಮಾಡಿ, ಆ ತಾಯಿಯ ಆಶೀರ್ವಾದ ಪಡೆದು ಬಂದಿದ್ದೆ. ಲೀಲಾವತಿ ಅಮ್ಮನವರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಈ ನೋವಿನ ಕ್ಷಣದಲ್ಲಿ ನಾವು ಲೀಲಾವತಿ ಅವರ ಪುತ್ರ ವಿನೋದ್ ರಾಜ್ ಅವರ ಜೊತೆ ನಿಲ್ಲುತ್ತೇವೆ ಎಂದು ಶಿವಕುಮಾರ್ ತಿಳಿಸಿದ್ದಾರೆ. ಇದನ್ನೂ ಓದಿ:ಲೀಲಾವತಿ ಖಾಸಗಿ ವಿಷಯ ಹೇಳಿ ತುಂಬಾ ಅತ್ತಿದ್ದರು: ನಟಿ ಸರೋಜಾದೇವಿ

Leelavathi 1 1

ಕನ್ನಡ ಚಿತ್ರರಂಗದ ಶ್ರೇಷ್ಠ ನಟಿಯರಲ್ಲಿ ಒಬ್ಬರು, ಬಹುಭಾಷಾ ಕಲಾವಿದರಾದ ಲೀಲಾವತಿ ಅವರ ನಿಧನದ ವಾರ್ತೆ ಕೇಳಿ ಬಹಳ ನೋವುಂಟಾಯಿತು. ನಾಯಕಿಯಾಗಿ ಮಾತ್ರವಲ್ಲದೆ, ಪೋಷಕ ಪಾತ್ರಗಳಿಗೂ ಜೀವ ತುಂಬಿ ಬೆಳ್ಳಿತೆರೆಯ ಮೇಲೆ ಅವುಗಳ ಹೆಜ್ಜೆ ಗುರುತುಗಳು ಮೂಡುವಂತೆ ಮಾಡಿದವರು ಅವರು. ಭಕ್ತ ಕುಂಬಾರ, ವೀರ ಕೇಸರಿ, ಭಾಗ್ಯದೇವತೆ, ಸೋತು ಗೆದ್ದವಳು, ನಂದಾದೀಪ, ವಿಧಿ ವಿಲಾಸ, ಸಂತ ತುಕಾರಾಂ, ರಣಧೀರ ಕಂಠೀರವ ಸೇರಿ ಅವರು ನಟಿಸಿದ್ದ ಅನೇಕ ಚಿತ್ರಗಳು ಕನ್ನಡಿಗರ ಮನೆ ಮನಗಳನ್ನು ತುಂಬಿರುತ್ತವೆ. ಲೀಲಾವತಿ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಪುತ್ರ ವಿನೋದ್ ರಾಜ್ ಅವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅವರು ಸಾಮಾಜಿಕ ಜಾಲತಾಣದಲ್ಲಿ ಸಂತಾಪ ಸೂಚಿಸಿದ್ದಾರೆ.

ಕನ್ನಡ ಚಿತ್ರರಂಗದ ಶ್ರೇಷ್ಠ ನಟಿಯರಲ್ಲಿ ಒಬ್ಬರು, ಬಹುಭಾಷಾ ಕಲಾವಿದರಾದ ಲೀಲಾವತಿ ಅವರ ನಿಧನದ ವಾರ್ತೆ ಕೇಳಿ ಬಹಳ ನೋವುಂಟಾಯಿತು. ನಾಯಕಿಯಾಗಿ ಮಾತ್ರವಲ್ಲದೆ, ಪೋಷಕ ಪಾತ್ರಗಳಿಗೂ ಜೀವ ತುಂಬಿ ಬೆಳ್ಳಿತೆರೆಯ ಮೇಲೆ ಅವುಗಳ ಹೆಜ್ಜೆಗುರುತುಗಳು ಮೂಡುವಂತೆ ಮಾಡಿದವರು ಅವರು. ಅಮ್ಮ, ಅಕ್ಕ, ಅತ್ತೆ ಸೇರಿ ಅನೇಕ ಪಾತ್ರಗಳಲ್ಲಿ ಪರಕಾಯ ಪ್ರವೇಶ ಮಾಡಿ… pic.twitter.com/lVu2kBkgnw

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 8, 2023

ಕನ್ನಡ ಚಿತ್ರರಂಗದ ಕಲಾ ಸರಸ್ವತಿ ಎಂದೇ ಖ್ಯಾತರಾಗಿದ್ದ ಹಿರಿಯ ನಟಿ ಲೀಲಾವತಿ ನಿಧನರಾಗಿರುವ ಸುದ್ದಿ ಕೇಳಿ ಮುನಸ್ಸಿಗೆ ದುಖವಾಯಿತು. ಅವರ ಅಗಲಿಕೆಯಿಂದ ಕನ್ನಡ ನಾಡು ಹಾಗೂ ಕಲಾರಂಗ ಒಬ್ಬ ಮನೆಯ ಹಿರಿಯರನ್ನು ಕಳೆದುಕೊಂಡು ಬಡವಾದಂತಾಗಿದೆ. ಅವರ ಪುತ್ರ ವಿನೋದ್ ರಾಜ್ ಅವರಿಗೆ ತಾಯಿಯ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ಕನ್ನಡ ಚಿತ್ರರಂಗದ ಹಿರಿಯ ಕಲಾವಿದೆ ಲೀಲಾವತಿ ಅವರು ವಿಧಿವಶರಾದ ವಿಷಯ ತಿಳಿದು ಅತೀವ ದುಃಖವಾಗಿದೆ. ದಕ್ಷಿಣ ಭಾರತದ ಸುಮಾರು 600ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿ, ಚಿತ್ರರಂಗಕ್ಕೆ ಅಪಾರ ಸೇವೆ ಸಲ್ಲಿಸಿದ ಅವರ ಅಗಲಿಕೆಯಿಂದ ಕಲಾಪ್ರಪಂಚ ತನ್ನ ಮಾತೃಸದೃಶ ಕಲಾವಿದೆಯನ್ನು ಕಳೆದುಕೊಂಡಿದೆ. ಅವರ ಆತ್ಮಕ್ಕೆ ಚಿರಶಾಂತಿ ಕೋರುತ್ತಾ, ಅವರ ಕುಟುಂಬ ಹಾಗೂ…

— B.S.Yediyurappa (@BSYBJP) December 8, 2023

ಕನ್ನಡ ಚಿತ್ರರಂಗದ ಹಿರಿಯ ಕಲಾವಿದೆ ಲೀಲಾವತಿ ಅವರು ವಿಧಿವಶರಾದ ವಿಷಯ ತಿಳಿದು ಅತೀವ ದುಃಖವಾಗಿದೆ. ಚಿತ್ರರಂಗಕ್ಕೆ ಅಪಾರ ಸೇವೆ ಸಲ್ಲಿಸಿದ ಅವರ ಅಗಲಿಕೆಯಿಂದ ಕಲಾಪ್ರಪಂಚ ತನ್ನ ಮಾತೃಸದೃಶ ಕಲಾವಿದೆಯನ್ನು ಕಳೆದುಕೊಂಡಿದೆ. ಅವರ ಆತ್ಮಕ್ಕೆ ಚಿರಶಾಂತಿ ಕೋರುತ್ತಾ, ಅವರ ಕುಟುಂಬ ಹಾಗೂ ಅಭಿಮಾನಿ ವರ್ಗದವರಲ್ಲಿ ಸಂತಾಪಗಳನ್ನು ಸಲ್ಲಿಸುತ್ತೇನೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ಇನ್ನೂ ಲೀಲಾವತಿ ಅವರ ನಿಧನಕ್ಕೆ ಹಿರಿಯ ನಟಿ ಉಮಾಶ್ರೀ, ಬಿ. ಸರೋಜದೇವಿ, ಶಿವಣ್ಣ, ಲಹರಿ ವೇಲು ಸೇರಿದಂತೆ ಹಲವು ಚಿತ್ರರಂಗದ ಕಲಾವಿದರು ಸಂತಾಪ ಸೂಚಿಸಿದ್ದಾರೆ.

TAGGED:leelavathisandalwoodvinod rajಲೀಲಾವತಿವಿನೋದ್ ರಾಜ್ಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Raghavendra Chitravani 1
ರಾಘವೇಂದ್ರ ಚಿತ್ರವಾಣಿಗೆ 50ರ ಸಂಭ್ರಮ – ಸಿನಿ ಗಣ್ಯರಿಂದ ಲೋಗೋ ಲಾಂಚ್
Cinema Latest Sandalwood Top Stories
Gilli Nata 6
ಚನ್ನಪಟ್ಟಣದಲ್ಲಿ ಗಿಲ್ಲಿ ಕ್ರೇಜ್ – ವೇದಿಕೆ ಏರಿದ ಅಭಿಮಾನಿಗಳ ನಿಯಂತ್ರಣಕ್ಕೆ ಪೊಲೀಸರ ಹರಸಾಹಸ
Cinema Districts Karnataka Latest Ramanagara States Top Stories
Anantha Padmanabha
ಹಿಟ್‌ ಡೈಲಾಗ್‌ ರೈಟರ್‌ ಪ್ರಶಾಂತ್‌ ರಾಜಪ್ಪ ನಿರ್ದೇಶನದ ಚೊಚ್ಚಲ ಚಿತ್ರದ ಟೈಟಲ್ ರಿವೀಲ್
Cinema Latest Sandalwood
rashmika vijay devarakonda geetha govindam
ರಶ್ಮಿಕಾ, ವಿಜಯ್‌ ಮದುವೆಗೆ ಬೆಂಗಳೂರಿನಿಂದ ಹೂ ಪೂರೈಕೆ
Bengaluru City Cinema Latest Main Post Sandalwood South cinema Top Stories

You Might Also Like

Richa Ghosh
Cricket

ಕೊನೆಯಲ್ಲಿ ರೊಚ್ಚಿಗೆದ್ದ ರಿಚಾ, ಹೋರಾಡಿ ಸೋತ ಆರ್‌ಸಿಬಿ – ಮುಂಬೈಗೆ 15 ರನ್‌ ಜಯ

Public TV
By Public TV
2 hours ago
Yadagiri Fire Accident
Districts

ಆಕಸ್ಮಿಕ ಬೆಂಕಿಗೆ 10 ಲಕ್ಷ ರೂ. ಮೌಲ್ಯದ ಪೈಪ್‌ಗಳು ಸುಟ್ಟು ಭಸ್ಮ

Public TV
By Public TV
3 hours ago
Narendra Modi breaks protocol goes to airport to welcome UAE President Sheikh Mohamed bin Zayed Al Nahyan
Latest

ಮೋದಿ ಜೊತೆ ಮಾತುಕತೆ ನಡೆದ ಕೆಲ ದಿನಗಳಲ್ಲೇ ಪಾಕ್‌ ವಿಮಾನ ನಿಲ್ದಾಣ ನಿರ್ವಹಣೆಯಿಂದ ಹಿಂದೆ ಸರಿದ ಯುಎಇ

Public TV
By Public TV
3 hours ago
BMTC bus
Bengaluru City

ಟಿಕೆಟ್ ಇಲ್ಲದೇ ಬಸ್ಸಿನಲ್ಲಿ ಪ್ರಯಾಣಿಸಿದವರಿಗೆ ಬಿಸಿ – 6.34 ಲಕ್ಷ ದಂಡ ವಸೂಲಿ

Public TV
By Public TV
4 hours ago
Udupi Tourist Boat
Crime

ಉಡುಪಿಯಲ್ಲಿ ಮಗುಚಿದ ಬೋಟ್ – ಮೈಸೂರಿನ ಇಬ್ಬರು ಸಾವು, ಇನ್ನಿಬ್ಬರು ಗಂಭೀರ

Public TV
By Public TV
4 hours ago
𝗙𝗜𝗥𝗦𝗧 𝗛𝗨𝗡𝗗𝗥𝗘𝗗 𝗜𝗡 𝗧𝗛𝗘 𝗪𝗣𝗟 Nat Sciver Brunt makes history for Mumbai Indians against RCB 1
Cricket

WPL ಮೊದಲ ಶತಕ – ಸ್ಫೋಟಕ ಬ್ಯಾಟಿಂಗ್‌, ಇತಿಹಾಸ ಸೃಷ್ಟಿಸಿದ ಸಿವರ್ ಬ್ರಂಟ್

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?