Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಲೀಲಾವತಿ ಅವರೇ ಮತ್ತೊಂದು ಸತ್ಯವನ್ನೂ ಒಪ್ಪಿಕೊಂಡು ಬಿಡಿ : ನಿರ್ದೇಶಕ ಪ್ರಕಾಶ್ ರಾಜ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಲೀಲಾವತಿ ಅವರೇ ಮತ್ತೊಂದು ಸತ್ಯವನ್ನೂ ಒಪ್ಪಿಕೊಂಡು ಬಿಡಿ : ನಿರ್ದೇಶಕ ಪ್ರಕಾಶ್ ರಾಜ್

Cinema

ಲೀಲಾವತಿ ಅವರೇ ಮತ್ತೊಂದು ಸತ್ಯವನ್ನೂ ಒಪ್ಪಿಕೊಂಡು ಬಿಡಿ : ನಿರ್ದೇಶಕ ಪ್ರಕಾಶ್ ರಾಜ್

Public TV
Last updated: April 14, 2023 9:13 am
Public TV
Share
3 Min Read
Leelavati 5
SHARE

ಮಗನ ಮದುವೆ (Marriage) ಮತ್ತು ಪತಿಯ ವಿಚಾರವಾಗಿ ನಟಿ ಲೀಲಾವತಿ (Leelavati) ಅವರು ಮೇಲೆ ನಿರ್ದೇಶಕ ಪ್ರಕಾಶ್ ರಾಜ್ ಮೆಹು (Prakash Raj Mehu) ಹಲವು ಪ್ರಶ್ನೆಗಳನ್ನು ಮಾಡಿದ್ದರು. ಅದಕ್ಕೆ ಪೂರಕ ಎನ್ನುವಂತೆ ದಾಖಲೆಗಳನ್ನು ನೀಡಿದ್ದರು. ಸೋಷಿಯಲ್ ಮೀಡಿಯಾದಲ್ಲಿ ಈ ವಿಚಾರವಾಗಿ ಸಾಕಷ್ಟು ಚರ್ಚೆ ನಡೆದಿತ್ತು. ಈ ಕುರಿತಂತೆ ಲೀಲಾವತಿ ಅವರು ಪ್ರತಿಕ್ರಿಯೆ ನೀಡಿ ವಿನೋದ್ ಮದುವೆ ವಿಚಾರವನ್ನು ಗುಟ್ಟಾಗಿ ಇಟ್ಟಿರಲಿಲ್ಲ ಎಂದಿದ್ದರು. ಈ ರೀತಿ ಪ್ರಶ್ನೆ ಮಾಡಿದವರಿಗೆ ನರಕ ಪ್ರಾಪ್ತಿಯಾಗಲಿ ಎಂದಿದ್ದರು.

Leelavati 6 1

ಲೀಲಾವತಿ ಅವರ ಪ್ರತಿಕ್ರಿಯೆಗೆ ಪ್ರಕಾಶ್ ರಾಜ್ ಮೆಹು ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ‘ಒಂದು ಸತ್ಯವನ್ನು ಒಪ್ಪಿಕೊಂಡಿದ್ದಕ್ಕೆ ಅಮ್ಮ ಮಗನಿಗೆ ಧನ್ಯವಾದಗಳು. ಹಾಗೆ ಆ ಇನ್ನೊಂದು ಸತ್ಯವನ್ನೂ ಒಪ್ಪಿಕೊಂಡು ಧರ್ಮರಾಯನಂತೆ ನೇರವಾಗಿ ಸ್ವರ್ಗಕ್ಕೆ ನಡೆದುಕೊಂಡೇ ಹೊರಟು ಬಿಡಿ. ಆ ಮಹಾಲಿಂಗ ಭಾಗವತರ ಆತ್ಮಕ್ಕೆ ಶಾಂತಿಯಾದರು ಸಿಗಲಿ. ನಿಮ್ಮನ್ನು ಪ್ರಶ್ನಿಸಿದ ನನ್ನಂತ ಪಾಪಿಗೆ ನರಕ ಪ್ರಾಪ್ತಿಯಾದರೂ ಚಿಂತೆಯಿಲ್ಲ’ ಎಂದು ಬರೆದುಕೊಂಡಿದ್ದಾರೆ.  ಇದನ್ನೂ ಓದಿ:ಖುಷ್ಬೂ ಮೊದಲ ಸಂಬಂಧದ ಬಗ್ಗೆ ಶಾಕಿಂಗ್‌ ಹೇಳಿಕೆ ನೀಡಿದ ತೆಲುಗು ನಟಿ

Leelavati 4

ಪ್ರಕಾಶ್ ರಾಜ್ ಮೆಹು ಅವರ ಈ ನಡೆಗೆ ವಿನೋದ್ ರಾಜ್ (Vinod Raj) ಬೇಸರವನ್ನು ವ್ಯಕ್ತಪಡಿಸಿದ್ದು ‘ಅಮ್ಮ ಇಳಿವಯಸ್ಸಿನಲ್ಲಿ ನೆಮ್ಮದಿಯಾಗಿ ಇದ್ದಾರೆ. ಅವರು ಕರ್ನಾಟಕದ ಆಸ್ತಿ. ದಯವಿಟ್ಟು ಅವರನ್ನು ನೆಮ್ಮದಿಯಾಗಿ ಇರಲಿಬಿಡಿ’ ಎಂದು ಮನವಿ ಮಾಡಿಕೊಂಡಿದ್ದಾರೆ. ಮಗನ ಮದುವೆ ಹಾಗೂ ಪತಿಯ ಕುರಿತಾಗಿ ವಿಷಯವನ್ನು ಕೆದಕಿ ನೋವು ಮಾಡುತ್ತಿರುವವರು ಕುರಿತು ಲೀಲಾವತಿ ಅವರು ನೋವಿನಿಂದಲೇ ಮಾತನಾಡಿ, ‘ಈ ರೀತಿ ಪದೇ ಪದೇ ನನ್ನ ವಿಚಾರಗಳನ್ನು ಮಾತನಾಡಿ ನೋವು ಮಾಡುವವರು ನರಕಕ್ಕೆ ಬೀಳ್ತಾರೆ. ನಮ್ಮ ಅಂತರಂಗದ ಸುದ್ದಿಯನ್ನು ಈ ರೀತಿ ಕೇಳುತ್ತಾರೆ ಅಂತ ಬೇಸರವಾಗುತ್ತಿದೆ. ಯಾರು ಏನಾದರೂ ಹೇಳಲಿ, ನನ್ನ ಆತ್ಮಸಾಕ್ಷಿಯಂತೆ ನಾನು ನಡೆದುಕೊಂಡಿದ್ದೇನೆ’ ಎಂದಿದ್ದಾರೆ.

Leelavati 3

ಯೂಟ್ಯೂಬ್ ಚಾನೆಲ್ ವೊಂದಕ್ಕೆ ಪ್ರತಿಕ್ರಿಯೆ ನೀಡಿರುವ ಲೀಲಾವತಿ ಅವರು ಮಗನ ಮದುವೆ ವಿಚಾರವನ್ನೂ ಮಾತನಾಡಿದ್ದಾರೆ. ‘ನನ್ನ ಮಗನ ಮದುವೆ ಆಗಿದೆ. ಅದರಲ್ಲಿ ಮುಚ್ಚಿಡುವಂಥದ್ದು ಏನೂ ಇಲ್ಲ. ಆದರೆ, ಸಿಂಪಲ್ ಆಗಿ ಮದುವೆ ಮಾಡಿದೆ. ನನ್ನ ಹತ್ತಿರ ದುಡ್ಡಿಲ್ಲದ್ದಕ್ಕೆ   ತಿರುಪತಿ ಬೆಟ್ಟದ ಮೇಲೆ ಮಾಡಿದೆ. ಎಂತೆಂಥವರ ಮದುವೆ ಎಲ್ಲೆಲ್ಲೋ ಆಗಿದೆ. ಪ್ಯಾಲೇಸ್ ಗಳಲ್ಲಿ ಮಾಡಿದ್ದಾರೆ. ಆದರೆ, ನನಗೆ ಆ ಶಕ್ತಿ ಇರಲಿಲ್ಲ. ಅನೇಕರು ಈ ಕುರಿತು ಹೀಯಾಳಿಸಿದರು. ಹಾಗಾಗಿ ಚರ್ಚೆ ಮಾಡಲಿಲ್ಲ’ ಎಂದು ಹೇಳಿದ್ದಾರೆ.

Leelavati 2

ಮುಂದುವರೆದು ಮಾತನಾಡಿರುವ ಲೀಲಾವತಿ, ‘ನನ್ನ ಮಗನ ಮದುವೆಗೆ ಏಳು ಜನ ಕನ್ನಡಿಗರು ಬಂದಿದ್ದರು. ಏನ್ ಲೀಲಾವತಿ ಅವರೇ ನಿಮ್ಮ ಮಗನ ಮದುವೆಗೆ ಏಳೇ ಏಳು ಜನ ಬಂದಿದ್ದಾರೆ. ಜನ ಸಿಗಲಿಲ್ಲವಾ ಎಂದು ಕುಹಕವಾಡಿದರು. ಯಾವುದಕ್ಕೂ ನಾನು ತಲೆ ಕೆಡಿಸಿಕೊಳ್ಳಲಿಲ್ಲ. ಮೊಮ್ಮಗ ಮತ್ತು ಸೊಸೆ ಚೆನ್ನಾಗಿದ್ದಾರೆ. ಅವರಿಗೆ ಯಾವುದೇ ಕೊರತೆ ಮಾಡಿಲ್ಲ. ಅಂತರಂಗದ ಸುದ್ದಿಯನ್ನು ಈ ರೀತಿ ಕೇಳುತ್ತಾರೆ ಅಂತ ಬೇಸರವಾಗುತ್ತದೆ. ಯಾರು ಏನೇ ಹೇಳಲಿ ನನ್ನ ಆತ್ಮಸಾಕ್ಷಿಯಂತೆ ನಡೆದುಕೊಳ್ಳುವೆ’ ಎಂದಿದ್ದಾರೆ.

leelavathi1

ಕೆಲ ದಿನಗಳ ಹಿಂದೆ ನಿರ್ದೇಶಕ ಮೆಹು ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಲೀಲಾವತಿ ಮತ್ತು ಅವರ ಪುತ್ರನ ಬಗ್ಗೆ ಪೋಸ್ಟ್ ವೊಂದನ್ನು ಹಾಕಿದ್ದರು. ಅದರಲ್ಲಿ ‘ವಿನೋದ್ ರಾಜ್ ಅವರಿಗೆ ಮದುವೆಯಾಗಿ ಪುತ್ರನಿದ್ದು, ಚೆನ್ನೈನಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ. ವಿನೋದ್ ಪತ್ನಿ ಮತ್ತು ಮಗ ಚೆನ್ನೈನಲ್ಲಿ ವಾಸಿಸುತ್ತಿದ್ದಾರೆ’ ಎಂದು ಬರೆದಿದ್ದರು. ಲೀಲಾವತಿಯವರ ಜೊತೆಗೆ ಕುಳಿತಿರುವ ಫೋಟೋವನ್ನು ಫೇಸ್‌ಬುಕ್‌ನಲ್ಲಿ ಮೆಹು ಪ್ರಕಟಿಸಿದ್ದಾರೆ. ಅದರಲ್ಲಿ ಮಹಾಲಿಂಗ ಭಾಗವತರ್ ಪತ್ನಿ ಲೀಲಾವತಿ ಅಮ್ಮಾಳ್ ಎಂದು ಬರೆದುಕೊಂಡಿದ್ದಾರೆ. ವಿನೋದ್ ಪುತ್ರನ ಹೆಸರು ಯುವರಾಜ್ ಎಂದು ಇದ್ದು, ಈ ಸಂಬಂಧ ಆತನ ಅಂಕಪಟ್ಟಿಯ ಫೋಟೋವನ್ನು ಕೂಡ ಹಾಕಿದ್ದಾರೆ. ಅದರಲ್ಲಿ ತಾಯಿ ಹೆಸರು ಅನು ಬಿ ಎಂದಿದೆ. ತಂದೆ/ಗಾರ್ಡಿಯನ್ ಜಾಗದಲ್ಲಿ ವಿನೋದ್ ರಾಜ್ ಎಂದಿದೆ.

Leelavati 1 1

ಸದ್ಯ ವಯೋಸಹಜ ಅನಾರೋಗ್ಯದಿಂದ (Health Issue) ಇರುವ ಲೀಲಾವತಿ ಅವರನ್ನು ಅವರ ಪುತ್ರ ವಿನೋದ್ ರಾಜ್ ನೋಡಿಕೊಳ್ಳುತ್ತಿದ್ದು, ಇದರ ಜೊತೆಗೆ ಕೃಷಿ ಕೆಲಸದಲ್ಲಿ ತೊಡಗಿಸಿಕೊಂಡು ನೆಲಮಂಗಲ ಹತ್ತಿರ ನೆಲೆಸಿದ್ದಾರೆ.

TAGGED:ControversyLeelavatimarriagePrakash Raj Mehuvinod rajಪ್ರಕಾಶ್ ರಾಜ್ ಮೆಹುಮದುವೆಲೀಲಾವತಿವಿನೋದ್ ರಾಜ್ವಿವಾದ
Share This Article
Facebook Whatsapp Whatsapp Telegram

Cinema news

Rashika
ರಾಶಿಕಾ ಹೇಳೋ ಆ 5 ಫೈನಲಿಸ್ಟ್‌ಗಳ್ಯಾರು?
Cinema Districts Karnataka Latest Sandalwood Top Stories
Allu Arjun Lokesh Kanagaraj
ಅಲ್ಲು ಅರ್ಜುನ್, ಲೋಕೇಶ್ ಕಾಂಬಿನೇಷನ್ ಅದ್ಧೂರಿ ಬಜೆಟ್ ಚಿತ್ರ..!
Cinema Latest South cinema Top Stories
yash
ನಟ ಯಶ್ ಬರ್ತಡೇಗೆ ರಸ್ತೆಯಲ್ಲಿ ಬ್ಯಾನರ್ ಹಾಕಿದ್ದಕ್ಕೆ FIR
Bengaluru City Cinema Districts Karnataka Latest Main Post Sandalwood
YASH 5
ಮುಂಬೈ ಏರ್‌ಪೋರ್ಟ್‌ನಲ್ಲಿ ಕ್ಯಾಮೆರಾ ಕಣ್ಣಿಗೆ ಬಿದ್ದ ರಾಕಿಭಾಯ್
Cinema Sandalwood

You Might Also Like

Makara Jyothi Sabarimala
Latest

ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ – ದಿವ್ಯಜ್ಯೋತಿ ದರ್ಶನಕ್ಕಾಗಿ ಕಾಯುತ್ತಿರುವ ಭಕ್ತಗಣ

Public TV
By Public TV
2 minutes ago
Sankranthi Bhavishya Horoscope 2026
Astrology

ಸಂಕ್ರಾಂತಿ ಭವಿಷ್ಯ – ಯಾವ ರಾಶಿಯವರಿಗೆ ಏನು?

Public TV
By Public TV
13 minutes ago
daily horoscope dina bhavishya
Astrology

ದಿನ ಭವಿಷ್ಯ 14-01-2026

Public TV
By Public TV
36 minutes ago
rowdy sheeter murder
Bengaluru City

ಬೆಂಗಳೂರಿನಲ್ಲಿ ರೌಡಿಶೀಟರ್ ಬರ್ಬರ ಹತ್ಯೆ

Public TV
By Public TV
8 hours ago
ksrtc accident chamarajanagara
Chamarajanagar

KSRTC ಬಸ್‌-ಬೈಕ್ ನಡುವೆ ಡಿಕ್ಕಿ; ಇಬ್ಬರು ಸೋಲಿಗ ಯುವಕರು ಸಾವು

Public TV
By Public TV
8 hours ago
Harmanpreet Kaur
Cricket

WPL 2026: ಹರ್ಮನ್‌ಪ್ರೀತ್‌ ಬೆಂಕಿ ಬ್ಯಾಟಿಂಗ್ -‌ ಗುಜರಾತ್‌ ವಿರುದ್ಧ ಮುಂಬೈಗೆ 7 ವಿಕೆಟ್‌ಗಳ ಭರ್ಜರಿ ಜಯ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?