ನನ್ನ ಪತಿ ದಪ್ಪ ಇದ್ದಾರೆ. ಹಾಗಂತ ಅವರನ್ನು ಅವಮಾನ ಮಾಡಬೇಡಿ ಎಂದು ನಟಿ ಮಹಾಲಕ್ಷ್ಮಿ (Mahalakshmi) ಸೋಷಿಯಲ್ ಮೀಡಿಯಾದಲ್ಲಿ ಲೈವ್ ಗೆ ಬಂದು ಮನವಿ ಮಾಡಿಕೊಂಡಿದ್ದಾರೆ. ದಪ್ಪ ಇದ್ದಾರೆ ಅನ್ನುವ ಕಾರಣಕ್ಕೆ ಟ್ರೋಲ್ (Troll) ಮಾಡುತ್ತಿದ್ದೀರಿ. ಕೆಟ್ಟದ್ದಾಗಿ ಕಾಮೆಂಟ್ ಮಾಡಲಾಗುತ್ತಿದೆ. ಇದರಿಂದಾಗಿ ಅವರಿಗೆ ನೋವಾಗುತ್ತದೆ. ನಮ್ಮ ಪಾಡಿಗೆ ನಮ್ಮನ್ನು ನೆಮ್ಮದಿಯಾಗಿ ಇರುವುದಕ್ಕೆ ಬಿಡಿ ಎಂದು ಮಹಾಲಕ್ಷ್ಮಿ ಮನವಿ ಮಾಡಿಕೊಂಡಿದ್ದಾರೆ.
ನಟಿ ಮಹಾಲಕ್ಷ್ಮಿ ಅವರನ್ನು ನಿರ್ಮಾಪಕ ರವೀಂದರ್ ಚಂದ್ರಶೇಖರನ್ (Ravinder Chandrasekaran) ಮದುವೆಯಾದ ನಂತರ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್ ಆಗಿದ್ದಾರೆ. ಪ್ರತಿಯೊಂದು ಸಂಗತಿಯನ್ನೂ ಅವರು ಅಭಿಮಾನಿಗಳ ಜೊತೆ ಹಂಚಿಕೊಳ್ಳುತ್ತಿದ್ದಾರೆ. ಪ್ರೈವೆಟ್ ಜಟ್ ನಲ್ಲಿ ಹನಿಮೂನಿಗೆ ಹೋಗುವ ಮುನ್ನ ಅವರು ಮನೆದೇವರ ಗುಡಿಗೆ ಹೋಗಿ ಆಶೀರ್ವಾದ ಪಡೆದಿದ್ದಾರೆ. ಆ ಫೋಟೋವನ್ನೂ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ:ಯಶ್ ಮುಂದಿನ ಚಿತ್ರಕ್ಕೆ ಪೂಜಾ ಹೆಗ್ಡೆ ನಾಯಕಿನಾ?
ಮಿಸ್ ಮ್ಯಾಚ್ ಜೋಡಿ ಎಂದೇ ಟ್ರೋಲ್ ಆಗುತ್ತಿರುವ ನಟಿ ಮಹಾಲಕ್ಷ್ಮಿ ಹಾಗೂ ನಿರ್ಮಾಪಕ ರವೀಂದರ್ ಜೋಡಿಯ ಹನಿಮೂನ್ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಮದುವೆಯಾಗಿ (Marriage) ಅಚ್ಚರಿ ಮೂಡಿಸಿದ್ದ ಈ ಜೋಡಿ, ಮದುವೆಯಾದ ಮೂರನೇ ದಿನಕ್ಕೆ ಹನಿಮೂನ್ ಟೂರ್ ಮಾಡಿದ್ದಾರೆ. ಹನಿಮೂನ್ ಸ್ಪಾಟ್ ನಿಂದಲೇ ಅವರು ಫೋಟೋಗಳನ್ನು ಶೇರ್ ಮಾಡಿದ್ದಾರೆ. ಆ ಫೋಟೋ ಸಖತ್ ವೈರಲ್ ಕೂಡ ಆಗಿವೆ.
ಮಹಾಲಕ್ಷ್ಮಿ ಮತ್ತು ರವೀಂದರ್ ಜೋಡಿ ಮೇಲೆ ಸಾಕಷ್ಟು ಜೋಕ್ ಗಳು ಹರಿದಾಡುತ್ತಿದ್ದರೂ, ಗಾಸಿಪ್ ಗಳು ಸೃಷ್ಟಿ ಆಗುತ್ತಿದ್ದರೂ ಅದಕ್ಕೆಲ್ಲ ತಲೆ ಕೆಡಿಸಿಕೊಳ್ಳದೇ ಹನಿಮೂನ್ ಎಂಜಾಯ್ ಮಾಡುತ್ತಿದೆ ಈ ಜೋಡಿ. ಸದ್ಯ ಈ ದಂಪತಿ ಮಹಾಬಲಿಪುರಂ ಇಂಟರ್ ಕಾಂಟಿನೆಂಟಲ್ ರೆಸಾರ್ಟ್ ನಲ್ಲಿ ತಂಗಿದ್ದು, ಅಲ್ಲಿಂದಲೇ ಅಭಿಮಾನಿಗಳು ಸಂದೇಶ ರವಾನಿಸಿದ್ದಾರೆ. ಮಹಾಲಕ್ಷ್ಮಿ ‘ಲೈಫ್ ಇಸ್ ಬ್ಯೂಟಿಫುಲ್’ ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರೆ, ರವೀಂದರ್ ‘ಲೈಫ್ ಗೆ ಪ್ರೀತಿ ಬೇಕು, ಈ ಪ್ರೀತಿಗೆ ಮಹಾಲಕ್ಷ್ಮಿ ಇರಬೇಕು’ ಎಂದು ಕಾವ್ಯಾತ್ಮಕವಾಗಿ ಭಾವನೆ ಹೊರ ಹಾಕಿದ್ದಾರೆ.