ಮೈಸೂರಿನ ಆದಿಲ್ ಮನೆ ಮುಂದೆ ನಟಿ ರಾಖಿ ಸಾವಂತ್ ಹೈಡ್ರಾಮಾ

Public TV
2 Min Read
Rakhi

ಬಾಲಿವುಡ್ ನಟಿ ರಾಖಿ ಸಾವಂತ್ (Rakhi Sawant) ಮೈಸೂರಿನಲ್ಲಿ (Mysore) ಬೀಡು ಬಿಟ್ಟಿದ್ದಾರೆ. ತನಗೆ ನ್ಯಾಯ ಬೇಕು ಎಂದು ಆಗ್ರಹಿಸಿ ಪತಿ ಆದಿಲ್ (Adil) ಮನೆಯ ಮುಂದೆ ಹೈಡ್ರಾಮಾ ಕ್ರಿಯೇಟ್ ಮಾಡಿದ್ದಾರೆ. ನನ್ನ ಗಂಡನ ಮನೆಯಲ್ಲಿ ಇರುವುದಕ್ಕೆ ನನಗೆ ಅವಕಾಶ ಬೇಕು ಎಂದು ಆದಿಲ್ ಮನೆಗೆ ಬಂದ ರಾಖಿಯನ್ನು ಆದಿಲ್ ಕುಟುಂಬ ಒಳಗೆ ಬಿಟ್ಟುಕೊಂಡಿಲ್ಲ. ಬಾಗಿಲು ತಗೆಯದೇ ಇರುವ ಕಾರಣಕ್ಕಾಗಿ ಮತ್ತೆ ಕಣ್ಣೀರು ಸುರಿಸಿದ್ದಾರೆ ರಾಖಿ.

Rakhi Adil Khan 1

ಕೌಟುಂಬಿಕ ಕಲಹ ಪ್ರಕರಣ‌ಕ್ಕೆ ಸಂಬಂಧಿಸಿದಂತೆ ಮೊನ್ನೆಯಷ್ಟೇ ರಾಖಿ ಸಾವಂತ್ ಮೈಸೂರು ಕೋರ್ಟ್ ಗೆ ಹಾಜರಾಗಿದ್ದರು. ಈ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು,  ‘ನನ್ನ ಪತಿಯನ್ನು ಮುಂಬೈ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕೋರ್ಟ್ ಅವರಿಗೆ ಏಳು ದಿನ ಪೊಲೀಸ್ ಕಸ್ಟಡಿ ಕೊಟ್ಟಿದೆ. ನಾನು ನ್ಯಾಯಾಧೀಶರ ಮುಂದೆ ಹಾಜರಾಗಲು ಬಂದಿದ್ದೇನೆ‌. ನನಗೆ ನ್ಯಾಯ ಬೇಕು, ಆತನಿಗೆ ಜಾಮೀನು ಯಾವುದೇ ಕಾರಣಕ್ಕೂ ಸಿಗಬಾರದು’ ಎಂದಿದ್ದರು.

Rakhi Adil Khan 2

ಮುಂದುವರೆದು ಮಾತನಾಡಿದ ರಾಖಿ, ‘ಆತ ಕಾನೂನು ಬದ್ಧವಾಗಿ ಮದುವೆಯಾಗಿದ್ದಾನೆ. ಅದರ ಎಲ್ಲಾ ದಾಖಲಾತಿ ನನ್ನ ಬಳಿ ಇದೆ. ನಾನು ಇಂದು ಬೆಳಿಗ್ಗೆ ಆದಿಲ್ ಖಾನ್ ತಂದೆ ಜೊತೆ ಮಾತನಾಡಿದೆ‌. ನಾನು ಹಿಂದೂ ಎಂಬ ಕಾರಣಕ್ಕೆ ಅವರು ಸ್ವೀಕಾರ ಮಾಡುತ್ತಿಲ್ಲ. ಹಾಗಾದ್ರೆ ನಾನು ಏನು ಮಾಡಲಿ. ನನ್ನ ಬಳಿ 1.65 ಕೋಟಿ ಹಣ ಪಡೆದಿದ್ದಾನೆ‌. ಆದರೆ ನನಗೆ ಒಂದು ಪೈಸೆ ಕೊಟ್ಟಿಲ್ಲ‌’ ಎಂದು ಆರೋಪ ಮಾಡಿದ್ದರು. ಇದನ್ನೂ ಓದಿ: ಹೊಂಬಾಳೆ ಫಿಲ್ಮ್ ಯುವ ಚಿತ್ರಕ್ಕೆ ರುಕ್ಮಿಣಿ ವಸಂತ್ ನಾಯಕಿನಾ? ಸ್ಪಷ್ಟನೆ ನೀಡಿದ ನಟಿ

rakhi sawant 2

‘ಆದಿಲ್ ಮೈಸೂರು ಜನ ಸರಿ ಇಲ್ಲ ಎಂದು ನನ್ನ ಬಳಿ ಹೇಳಿದ. ಇದಕ್ಕಾಗಿಯೇ ಮುಂಬೈಗೆ ಬರುತ್ತೇನೆ ಎಂದು ಹೇಳಿದ್ದ. ಆ ನಂತರ ಮುಂಬೈನಲ್ಲಿ ಸಾಕಷ್ಟು ಬಾರಿ ನನ್ನ ಮೇಲೆ ಹಲ್ಲೆ ಮಾಡಿದ್ದ. ಮೈಸೂರು ಕೋರ್ಟ್ ಮೇಲೆ ವಿಶ್ವಾಸ ಇದೆ. ನನಗೆ ನ್ಯಾಯ ಕೊಡಿಸಿ’ ಎಂದು ಮಾಧ್ಯಮಗಳ ಮುಂದೆ ರಾಖಿ ಗಳಗಳನೆ ಅತ್ತರು.  ಇದೀಗ ನ್ಯಾಯಕ್ಕಾಗಿ ಆದಿಲ್ ಮನೆಯ ಮುಂದೆಯೇ ಪ್ರತಿಭಟಿಸಿದ್ದಾರೆ.

LIVE TV
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *