ಬೆಂಗಳೂರು: ಪ್ರೇಮಿಗಳು ರೊಮ್ಯಾನ್ಸ್ ಮಾಡುತ್ತಿರೋದು ನೋಡಿದರೆ ನನಗೆ ಕಲ್ಲು ಹೊಡೆಯಬೇಕು ಅನ್ನಿಸುತ್ತದೆ ಎಂದು ನಟಿ ರಶ್ಮಿಕಾ ಮಂದಣ್ಣ ಸಂದರ್ಶನವೊಂದರಲ್ಲಿ ಹೇಳಿದ್ದಾರೆ. ಇದನ್ನೂ ಓದಿ: ನಾಯಿ ಬಿಸ್ಕೆಟ್ ತಿಂದಿದ್ದ ರಶ್ಮಿಕಾ – ಸೀಕ್ರೆಟ್ ಬಿಚ್ಚಿಟ್ಟ ನಿತಿನ್
ರಶ್ಮಿಕಾ ಮಂದಣ್ಣ ಮತ್ತು ತೆಲುಗು ನಟ ನಿತಿನ್ ಅಭಿನಯದ ‘ಭೀಷ್ಮ’ ಸಿನಿಮಾ ಫೆಬ್ರವರಿ 21ರಂದು ರಿಲೀಸ್ ಆಗುತ್ತಿದೆ. ಸದ್ಯಕ್ಕೆ ಇಬ್ಬರು ಸಿನಿಮಾ ಪ್ರಚಾರದ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚೆಗಷ್ಟೆ ರಶ್ಮಿಕಾ ಮತ್ತು ನಿತಿನ್ ಮಾಧ್ಯಮಕ್ಕೆ ಸಂದರ್ಶನವೊಂದನ್ನು ನೀಡಿದ್ದಾರೆ. ಈ ಸಂದರ್ಶನದಲ್ಲಿ ರಶ್ಮಿಕಾ ಲವ್, ಮದುವೆ, ಕ್ರಶ್ ಬಗ್ಗೆ ಮಾತನಾಡಿರೋದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಮೊದಲಿಗೆ ನಿರೂಪಕಿ ರಶ್ಮಿಕಾ ಮದುವೆ ಬಗ್ಗೆ ಪ್ರಶ್ನೆ ಕೇಳಿದ್ದಾರೆ. ನಾನು ಅರೇಂಜ್ ಮ್ಯಾರೇಜ್ ಆಗುತ್ತೇನೆ. ಆದರೆ ಎಂಟು ವರ್ಷ ನಾನು ಮದುವೆಯಾಗೋದಿಲ್ಲ. ಇದೇ ಗುಣ ಆಗಬೇಕು ಎಂಬ ಡಿಮ್ಯಾಂಡ್ ಇಲ್ಲ. ಆದರೆ ಒಳ್ಳೆಯ ಹುಡುಗ ಸಿಕ್ಕಿದರೆ ಮದುವೆಯಾಗುತ್ತೇನೆ ಎಂದಿದ್ದಾರೆ.
ಹೀರೋಯಿನ್ ಆಗುವ ಮೊದಲು ಮತ್ತು ನಂತರ ನಿಮಗೆ ಪ್ರೇಮಿಗಳ ದಿನ ಹೇಗೆ ಅನ್ನಿಸುತ್ತದೆ ಎಂದು ಪ್ರಶ್ನೆ ಮಾಡಿದ್ದಾರೆ. ಈ ವೇಳೆ ನನಗೆ ವ್ಯಾಲೆಂಟೈನ್ಸ್ ಡೇ ಅಂದರೆ ಇಷ್ಟ ಇಲ್ಲ. ಪ್ರೇಮಿಗಳು ಕೈ ಕೈ ಹಿಡಿದುಕೊಂಡು ಹೋಗುವುದನ್ನು ನೋಡಿದರೆ ಕೋಪ ಬರುತ್ತೆ. ಅದರಲ್ಲೂ ಪ್ರೇಮಿಗಳು ರೊಮ್ಯಾನ್ಸ್ ಮಾಡುತ್ತಿರುವುದನ್ನು ನೋಡಿದರೆ ಕಲ್ಲಲ್ಲಿ ಹೊಡಿಯಬೇಕು ಎನ್ನಿಸುತ್ತದೆ. ಯಾಕೆ ಅಂತ ಗೊತ್ತಿಲ್ಲ ಎಂದು ರಶ್ಮಿಕಾ ಹೇಳಿದ್ದಾರೆ.
ನಾನು ಪ್ರೇಮಿಗಳ ದಿನಾಚರಣೆ ಸೆಲೆಬ್ರೆಷನ್ ಮಾಡಿಲ್ಲ. ನನಗೆ ಯಾರೂ ಪ್ರಪೋಸ್ ಮಾಡಿಲ್ಲ ಎಂದರು. ಇನ್ನೂ ಯಾರ ಮೇಲೆ ಕ್ರಶ್ ಆಗಿದೆ ಎಂಬುದರ ಬಗ್ಗೆ ಕೇಳಿದಾಗ, ನನಗೆ ಚಿಕ್ಕ ವಯಸ್ಸಿನಲ್ಲಿದ್ದಾಗ ದಳಪತಿ ವಿಜಯ್ ಮೇಲೆ ಕ್ರಶ್ ಆಗಿತ್ತು ಎಂದರು.