ತೆಲುಗಿನ ನಟಿ ಊರ್ವಶಿ ರೌಟೇಲಾ (Urvashi Rautela) ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸುದ್ದಿಯಾಗಿದ್ದಾರೆ. ಆಂಧ್ರ ಪ್ರದೇಶದಲ್ಲಿ (Andhra Pradesh) ಯಾವುದೇ ಚುನಾವಣೆ ನಡೆಯದೇ ಇದ್ದರೂ, ಮುಖ್ಯಮಂತ್ರಿಯನ್ನೇ ರೌಟೇಲಾ ಬದಲಾಯಿಸಿದ್ದಾರೆ. ಆಂಧ್ರ ಪ್ರದೇಶದ ಮುಖ್ಯಮಂತ್ರಿ ನಟ ಪವನ್ ಕಲ್ಯಾಣ್ (Pawan Kalyan) ಎಂದು ಅವರು ಸೋಷಿಯಲ್ ಮೀಡಿಯಾದಲ್ಲಿ ಬರೆದಿದ್ದಾರೆ. ಈ ನಡೆಗೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ.
ರಾಜಕೀಯ ಪಡಸಾಲೆಯಲ್ಲಿ ಪವನ್ ಕಲ್ಯಾಣ್ ಹೆಸರು ಇದೀಗ ಪ್ರಮುಖವಾಗಿ ಕೇಳಿ ಬರುತ್ತಿದೆ. ಮುಂದಿನ ಚುನಾವಣೆಯನ್ನು ಗುರಿಯಾಗಿಟ್ಟುಕೊಂಡು ಪವನ್ ರಾಜ್ಯದ ಪ್ರವಾಸ ಮಾಡುತ್ತಿದ್ದಾರೆ. ಅಲ್ಲದೇ, ಚುನಾವಣೆಗೆ ಈಗಿನಿಂದಲೇ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ರೌಟೇಲಾ ಬರೆದುಕೊಂಡು ಬರಹ ವೈರಲ್ ಆಗಿದೆ. ಇದನ್ನೂ ಓದಿ:‘ನಾಗರಹಾವು’ ಚಿತ್ರದ ನಂತರ ಮತ್ತೆ ಒಂದಾಗಲಿದ್ದಾರೆ ದಿಗಂತ್-ರಮ್ಯಾ
ಆಂಧ್ರದ ಮುಖ್ಯಮಂತ್ರಿ (Chief Minister)ಪವನ್ ಕಲ್ಯಾಣ್ ಎಂದು ಉದ್ದೇಶಪೂರ್ವಕವಾಗಿಯೇ ಬರೆದಿರುವ ರೌಟೇಲಾ, ಅದರ ಪರಿಣಾಮವನ್ನು ನಾನಾ ರೀತಿಯಲ್ಲಿ ಅನುಭವಿಸುತ್ತಿದ್ದಾರೆ. ಕೆಲವರು ಪವನ್ ಕಲ್ಯಾಣ್ ಪರ ಕಾಮೆಂಟ್ ಮಾಡಿದ್ದರೆ, ಸಾಕಷ್ಟು ಮಂದಿ ರೌಟೇಲಾರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ರಾಜ್ಯದಿಂದಲೇ ಈ ನಟಿಯನ್ನು ಗಡಿಪಾರು ಮಾಡಿ ಎಂದು ಸಿಎಂಗೆ ಮನವಿ ಮಾಡಿಕೊಂಡಿದ್ದಾರೆ.
ಊರ್ವಶಿ ರೌಟೇಲಾ ನಟನೆಯ ‘ಬ್ರೋ’ ಸಿನಿಮಾದಲ್ಲಿ ಪವನ್ ಕಲ್ಯಾಣ್ ಕೂಡ ಪಾತ್ರ ಮಾಡಿದ್ದಾರೆ. ಈ ಸಿನಿಮಾದ ಕಾರ್ಯಕ್ರಮವೊಂದರ ಫೋಟೋ ಹಂಚಿಕೊಂಡಿದ್ದ ಊರ್ವಶಿ, ‘ಗೌರವಾನ್ವಿತ ಮುಖ್ಯಮಂತ್ರಿಗಳಾದ ಪವನ್ ಕಲ್ಯಾಣ್ ಅವರು ನಮ್ಮ ಸಿನಿಮಾದಲ್ಲಿ ನಟಿಸಿದ್ದಾರೆ’ ಎಂದು ಬರೆದುಕೊಂಡಿದ್ದಾರೆ. ಅದೇ ಇದೀಗ ಚರ್ಚೆಯನ್ನು ಹುಟ್ಟು ಹಾಕಿದೆ.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]