ಹೈದರಾಬಾದ್: ಟಾಲಿವುಡ್ ನಟಿ ಸಮಂತಾ, ನಾಗಚೈತನ್ಯ ಅವರೊಂದಿಗೆ ವಿಚ್ಛೇದನ ಪಡೆದುಕೊಂಡ ನಂತರ ಚಾರ್ ಧಾಮ್ ಯಾತ್ರೆಯನ್ನು ಮಾಡಿದ್ದಾರೆ.
ನಟಿ ಸಮಂತಾ ತಮ್ಮ ನಾಲ್ಕು ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಿದ ನಂತರ ಸ್ನೇಹಿತರ ಜೊತೆ ಹೆಚ್ಚಾಗಿ ಕಾಲ ಕಳೆಯುತ್ತಿದ್ದಾರೆ. ನಾಗ ಚೈತನ್ಯ ಅವರ ಜೊತೆಗಿನ ವಿಚ್ಛೇದನ ವಿಷಯವನ್ನು ಅಧಿಕೃತವಾಗಿ ಪ್ರಕಟಿಸಿದಾಗಿನಿಂದ ನೋವಿನಲ್ಲೇ ದಿನ ಕಳೆಯುತ್ತಿದ್ದಾರೆ. ಇದೀಗ ಅವರು ಚಾರ್ ಧಾಮ್ ಯಾತ್ರೆ ಮಾಡುತ್ತಿರುವ ಕುರಿತಾಗಿ ಬರೆದುಕೊಂಡು ಸೋಶಿಯಲ್ ಮೀಡಿಯಾದಲ್ಲಿ ಕೆಲವು ಫೊಟೋಗಳನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಸ್ವಿಮ್ಮಿಂಗ್ಪೂಲ್ನಲ್ಲಿ ಐರಾ, ಯಥರ್ವ್ ಮೋಜು ಮಸ್ತಿ
View this post on Instagram
ಯಶಸ್ವಿಯಾಗಿ ಚಾರ್ ಧಾಮ್ ಯಾತ್ರೆ ಪೂರ್ಣಗೊಳಿಸಿದ್ದೇನೆ. ಹಿಮಾಲಯ ಎಂದರೆ ತುಂಬಾ ಇಷ್ಟ. ಮಹಾಭಾರತ ಓದಿದಾಗಿನಿಂದ ಭೂಮಿಯ ಮೇಲಿನ ಈ ಸ್ವರ್ಗಕ್ಕೆ ಭೇಟಿ ಕೊಡಬೇಕೆಂದು ಅಂದುಕೊಂಡಿದ್ದೆ. ಹಿಮಾಲಯಕ್ಕೆ ನನ್ನ ಹೃದಯದಲ್ಲಿ ವಿಶೇಷವಾದ ಸ್ಥಾನವಿದೆ. ಈ ಯಾತ್ರೆಯ ಅನುಭವ ನಿಜಕ್ಕೂ ವಿಶೇಷ ಎಂದು ಸಮಂತಾ ಬರೆದುಕೊಂಡಿದ್ದಾರೆ. ಅಲ್ಲಿ ಸುತ್ತಾಡಿದ ಕೆಲವು ಸುಂದರಕ್ಷಣಗಳ ಫೋಟೋವನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಜೀವನದ ಹೊಸದೊಂದು ಹೆಜ್ಜೆ, ನಿಮ್ಮೊಂದಿಗೆ ಹಂಚಿಕೊಳ್ಳುವ ಆಸೆ: ನಟಿ ಚಂದನಾ
View this post on Instagram
ಕೆಲ ಸಮಯ ರಿಷಿಕೇಷದಲ್ಲಿದ್ದ ಸಮಂತಾ ಅಲ್ಲಿನ ದೇವಾಯಲಗಳು ಮಠಗಳಿಗೆ ಭೇಟಿ ಕೊಟ್ಟಿದ್ದಾರೆ. ಜೊತೆಗೆ ಗಂಗೆಯ ತೀರದಲ್ಲಿ ನಡೆಯುವ ಪೊಜೆ ಹಾಗೂ ಹೋಮದಲ್ಲಿ ಭಾಗಿಯಾಗಿದ್ದಾರೆ. ಸ್ನೇಹಿತೆ ಶಿಲ್ಪಾ ರೆಡ್ಡಿ ಜೊತೆ ಸಮಂತಾ ಅವರು ಚಾರ್ ಧಾಮ್ ಯಾತ್ರೆಯನ್ನು ಮಾಡಿದ್ದಾರೆ. ಯಾತ್ರೆಯ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಸಮಂತಾ, ನಾಗಚೈತನ್ಯ ವಿಚ್ಛೇದನ ಕುರಿತಾಗಿ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿಸುವ ಸುದ್ದಿಗಳ ಕುರಿತಾಗಿ ಹಾಗೂ ಸುಳ್ಳು ಆರೋಪಗಳನ್ನು ಮಾಡುತ್ತಾ, ಟ್ರೋಲ್ ಮಾಡುವುದನ್ನು ನಿಲ್ಲಿಸದೇ ಹೋದರೆ, ಕಾನೂನು ರೀತಿಯ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ಕೊಟ್ಟಿದ್ದರು. ಕೆಲವು ಯೂಟ್ಯೂಬ್ ಚಾನಲ್ಗಳ ಮೇಲೆ ದೂರು ಸಹ ದಾಖಲಿಸಿದ್ದಾರೆ ಸಮಂತಾ.