Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: #MeToo ಅಭಿಯಾನವನ್ನು ಸಮರ್ಥಿಸಿಕೊಂಡ್ರು ಶೃತಿ ಹರಿಹರನ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | #MeToo ಅಭಿಯಾನವನ್ನು ಸಮರ್ಥಿಸಿಕೊಂಡ್ರು ಶೃತಿ ಹರಿಹರನ್

Cinema

#MeToo ಅಭಿಯಾನವನ್ನು ಸಮರ್ಥಿಸಿಕೊಂಡ್ರು ಶೃತಿ ಹರಿಹರನ್

Public TV
Last updated: October 20, 2018 11:40 am
Public TV
Share
3 Min Read
SHRUTHI HARIHARAN
SHARE

ಬೆಂಗಳೂರು: ಬಹುಭಾಷಾ ನಟ ಅರ್ಜುನ್ ಸರ್ಜಾ ವಿರುದ್ಧ ಮಾಡಿದ ಆರೋಪವನ್ನು ನಟಿ ಶೃತಿ ಹರಿಹರನ್ ಸಮರ್ಥಿಸಿಕೊಂಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ.

ಫೇಸ್ ಬುಕ್ ನಲ್ಲಿ ಏನಿದೆ?:
ನಮ್ಮ ಮೇಲೆ ನಡೆದ ಲೈಂಗಿಕ ದೌರ್ಜನ್ಯಗಳನ್ನು ಹೇಳಿಕೊಳ್ಳಲು #MeToo ಅಭಿಯಾನವೊಂದು ವೇದಿಕೆಯಾಗಿದೆ. ಈ ಮೂಲಕ ಸಮಾಜದಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ಹೊರಹಾಕಲಾಗುತ್ತಿದೆ.

ಹಾಗೆಯೇ ನನಗೂ ಇಂದು ನನ್ನ ಮೌನ ಮುರಿಯುವ ಸಮಯವಿದು. ನನ್ನಂತೆ ಸಮಾಜದ ಬಹಳಷ್ಟು ಹೆಣ್ಣು ಮಕ್ಕಳು ಯಾತನೆ ಅನುಭವಿಸಿದ್ದಾರೆ. ಇಲ್ಲಿ ನಾನು ಅನುಭವಿಸಿದ ಯಾತನೆಯನ್ನು ಬಹಿರಂಗಪಡಿಸಿದ್ದೇನೆ. ನನಗೆ ಅರ್ಜುನ್ ಸರ್ಜಾ ಮಾತ್ರವಲ್ಲದೇ ಬಹಳಷ್ಟು ಮಂದಿಯಿಂದ ಮೀಟೂ ಅನುಭವವಾಗಿದೆ. ಈ ಬಗ್ಗೆ ಹೇಳಿಕೊಳ್ಳಲು ಧೈರ್ಯ ಮಾಡಿದ್ದೇನೆ. ಮಾತ್ರವಲ್ಲದೇ ಈ ಬಗ್ಗೆ ಶೀಘ್ರವೇ ಪತ್ರಿಕಾಗೋಷ್ಠಿ ನಡೆಸಿ ಇನ್ನೊಂದಷ್ಟು ವಿಚಾರಗಳನ್ನು ತಿಳಿಸುವುದಾಗಿ ಪೋಸ್ಟ್ ನಲ್ಲಿ ಬರೆದುಕೊಂಡಿದ್ದಾರೆ.

18 ವರ್ಷದವಳಿದ್ದಾಗಲೇ ನನಗೆ ಚಿತ್ರರಂಗದ ದೌರ್ಜನ್ಯದ ಬಗ್ಗೆ ಅನುಭವವಾಗಿದೆ. ಚಿತ್ರರಂಗದ ಹಿರಿಯರೊಬ್ಬರು ನನ್ನ ಕಾಲನ್ನೂ ಕೂಡ ಹಿಡಿದಿದ್ರೂ, ನಾನು ಭಯದಿಂದ ಓಡಿಹೋಗಿದ್ದೆ ಅಂತ ಚಿಂತ್ರರಂಗದಲ್ಲಿ ಅನುಭವಿಸಿದ್ದ ಯಾತನೆಗಳನ್ನು ಈ ಹಿಂದೆ ಶೃತಿ ಅವರು ಎಳೆಎಳೆಯಾಗಿ ಪಬ್ಲಿಕ್ ಟಿವಿಯೊಂದಿಗೆ ಮಾತನಾಡುತ್ತಾ ಬಿಚ್ಚಿಟ್ಟಿದ್ದರು.

Shruthi Hariharan 4

ಆರೋಪವೇನು?:
ಕಳೆದ ವರ್ಷ ‘ವಿಸ್ಮಯ’ ಅನ್ನೋ ಸಿನಿಮಾವೊಂದನ್ನು ನಾನು ಮಾಡಿದ್ದೆ. ಚಿತ್ರದಲ್ಲಿ ಅರ್ಜುನ್ ಅರ್ಜಾ ಅವರು ನನ್ನ ಸಹನಟನಾಗಿ ಅಭಿನಯಿಸಿದ್ದರು. ‘ವಿಸ್ಮಯ’ ಸಿನಿಮಾಕ್ಕೂ ಮೊದಲು ನಾನು ಹಲವು ಸಿನಿಮಾಗಳನ್ನು ಮಾಡಿದ್ದೇನೆ. ಹಲವು ನಟರ ಜೊತೆಯೂ ಅಭಿನಯಿಸಿದ್ದೇನೆ. ಇಂದಿಗೂ ನನಗೆ ಬೇರೆ ನಟರ ಜೊತೆ ನಟಿಸುವಾಗ ಯಾವ ತೊಂದರೆಗಳೂ ಆಗಿಲ್ಲ. ಚಿತ್ರೀಕರಣದ ಸಂದರ್ಭದಲ್ಲಿ ನಾವು ಪರಸ್ಪರ ಗೌರವದಿಂದಲೇ ನಡೆದುಕೊಳ್ಳುತ್ತಿದ್ದೇವು. ನಾಯಕ-ನಾಯಕಿಯ ನಡುವಿನ ಪ್ರಣಯದ ದೃಶ್ಯಗಳನ್ನು ಚಿತ್ರೀಕರಿಸುವ ಸಂದರ್ಭಗಳಲ್ಲಿಯೂ ಕಲಾವಿದರ ನಡುವೆ ಬಹುಸೂಕ್ಷ್ಮವಾದ ಒಂದು ಗಡಿ ರೇಖೆ ಇರುತ್ತದೆ. ಅದನ್ನು ಮೀರಿ ನಾವು ನಡೆದುಕೊಳ್ಳುತ್ತಿರಲಿಲ್ಲ. ಒಂದು ವೇಳೆ ಆ ರೇಖೆಯನ್ನು ದಾಟಿದ್ರೆ ಹೆಣ್ಣಿಗೆ ಇರುಸು ಮುರುಸು ಉಂಟಾಗಲು ಆರಂಭವಾಗುತ್ತದೆ. ‘ವಿಸ್ಮಯ’ ಚಿತ್ರದ ಶೂಟಿಂಗ್ ವೇಳೆ ಆಗಿದ್ದು ಇದೇ. ಚಿತ್ರೀಕರಣದ ವೇಳೆ ನಟ ಅರ್ಜುನ್ ಸರ್ಜಾ ಅವರು ಗಡಿರೇಖೆ ದಾಟಿದ್ದರು ಅಂತ ಅವರು ಮ್ಯಾಗಜಿನ್ ಒಂದು ಸಂದಶನದ ವೇಳೆ ನಡೆದಿದ್ದ ಘಟನೆಯ ಮೆಲುಕು ಹಾಕಿದ್ದರು.

SARJA SHRUTI

ಚಿತ್ರದಲ್ಲಿ ನಾನು ಅವರ ಹೆಂಡತಿಯಾಗಿ ನಟಿಸುತ್ತಿದ್ದೆ, ಅದರ ಪ್ರ್ಯಾಕ್ಟೀಸ್ ಮಾಡುತ್ತಿದ್ದೆವು. ಆಗ ಸರ್ಜಾ ‘ಇನ್ನೊಂಚೂರು ಹೀಗೆ ಪ್ರಾಕ್ಟೀಸ್ ಮಾಡಬಹುದಲ್ವಾ?’ ಅಂತ ಹೇಳಿ ಅವರು ನನ್ನನ್ನು ಜೋರಾಗಿ ತಬ್ಬಿಕೊಂಡರು. ಅವರ ಆ ಅಪ್ಪುಗೆಯಿಂದ ಒಮ್ಮೆಲೆ ನಾನು ತಬ್ಬಿಬ್ಬಾಗಿದ್ದು, ಆ ವರ್ತನೆ ತುಂಬಾನೇ ಅಸಹ್ಯವಾಗಿತ್ತು. ಇದರಿಂದ ನನಗೆ ಇರಿಸು ಮುರುಸು ಉಂಟಾಗಿದ್ದು, ಕೂಡಲೇ ನಿರ್ದೇಸಕರ ಬಳಿ ತೆರಳಿ ‘ಇನ್ನು ಮುಂದೆ ನಾನು ರಿಹರ್ಸಲ್ ಗೆ ಬರಲ್ಲ, ಬರೀ ಶೂಟಿಂಗ್ ಗಷ್ಟೇ ಕರೆಯಿರಿ’ ಅಂತ ಹೇಳಿ ಬಂದುಬಿಟ್ಟೆ. ಆ ಬಳಿಕ ನಾನು ಬರೀ ಶೂಟಿಂಗ್ ಗೆ ಮಾತ್ರ ಹೋಗಿ ಬರುತ್ತಿದ್ದೆ ಅಂತ ಶೃತಿ ಹೇಳಿದ್ದರು.

ARJUN SARJA

ಇಷ್ಟೆಲ್ಲಾ ಆದ್ರೂ ಅರ್ಜುನ್ ಸರ್ಜಾ ಮಾತ್ರ ವಿಚಲಿತನಾದಂತೆ ಕಾಣಲಿಲ್ಲ. ಯಾಕಂದ್ರೆ ಅದಾದ ಬಳಿಕ ಅವರು ನನ್ನ ಜೊತೆ ಮಾತನಾಡುವಾಗಲೂ ಬಳಸಿದ ಭಾಷೆ ಸಭ್ಯವಾಗಿರಲಿಲ್ಲ. ಪದೇ ಪದೇ ಡಿನ್ನರ್ ಗೆ ಕರೆಯುತ್ತಿದ್ದರು. ‘ರೆಸಾರ್ಟ್ ಗೆ ಹೋಗೋಣ ಬಾ’ ಎಂದು ಕರೆಯಲು ಆರಂಭಿಸಿದ್ರು. ಹೀಗೆ ಕರೆಯುವಾಗ ನಾನು ನೇರವಾಗಿ ‘ಇಲ್ಲ, ನಾನು ಬರಲ್ಲ’ ಅಂತ ಹೇಳುತ್ತಿದ್ದೆನು. ನನ್ನ ಈ ಮಾತುಗಳನ್ನೂ ಅವರು ಗಂಭೀರವಾಗಿ ತೆಗೆದುಕೊಳ್ಳುತ್ತಿರಲಿಲ್ಲ. ‘ನೋ ಅಂದ್ರೆ ನೋ’ ಎಂಬುದರ ಅರ್ಥವೇ ಅವರಿಗೆ ಆಗುತ್ತಿಲ್ಲವಲ್ಲ ಅಂತ ನನಗೆ ನಿಜವಾಗಿಯೂ ಅಚ್ಚರಿಯಾಗುತ್ತಿತ್ತು. ಯಾಕಂದ್ರೆ ಅವರಿಗೆ ಹೀಗೆ ಕರೆದಾಗ ಯಾರೂ `ನೋ’ ಅಂತ ಹೇಳಿರಲಿಲ್ಲವೋ ಏನೋ, ಅದಕ್ಕೆ ಅವರು ನನ್ನ ನೇರ ಮಾತುಗಳನ್ನು ಕಡೆಗಣಿಸುತ್ತಿದ್ದರು ಅಂತ ಅವರು ತನಗಾದ ಅನುಭವವನ್ನು ಬಿಚ್ಚಿಟ್ಟಿದ್ದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

https://www.youtube.com/watch?v=Pvb9crCfEe4

https://www.youtube.com/watch?v=uw6_G0ZSGlY

https://www.youtube.com/watch?v=b38lBhiL-y8

TAGGED:#ಒeಖಿooactressArjun SarjabengaluruMeTooPublic TVsandalwoodSruthi Hariharanಅರ್ಜುನ್ ಸರ್ಜಾನಟಿಪಬ್ಲಿಕ್ ಟಿವಿಬೆಂಗಳೂರುಶೃತಿ ಹರಿಹರನ್ಸ್ಯಾಂಡಲ್ ವುಡ್
Share This Article
Facebook Whatsapp Whatsapp Telegram

Cinema news

AR Rahman
8 ವರ್ಷಗಳಿಂದ ಬಾಲಿವುಡ್‌ನಲ್ಲಿ ಅವಕಾಶ ಸಿಕ್ಕಿಲ್ಲ, ಇದಕ್ಕೆ ಕೋಮುವಾದಿ ಮನಸ್ಥಿತಿ ಕಾರಣವಿರಬಹುದು: ಎ.ಆರ್ ರೆಹಮಾನ್
Bollywood Cinema Latest Main Post National
Khushi Mukherjee 2
ʻನನಗೆ ಸೂರ್ಯಕುಮಾರ್‌ ತುಂಬಾ ಮೆಸೇಜ್ ಕಳಿಸ್ತಿದ್ದʼ ಎಂದಿದ್ದ ನಟಿ ವಿರುದ್ಧ 100 ಕೋಟಿ ಮಾನನಷ್ಟ ಮೊಕದ್ದಮೆ!
Bollywood Cinema Cricket Latest Sports Top Stories
suresh gopi udupi sri krishna matha
ಉಡುಪಿ ಶ್ರೀಕೃಷ್ಣ ಮಠಕ್ಕೆ ಮಲೆಯಾಳಂ ನಟ, ಕೇಂದ್ರ ಸಚಿವ ಸುರೇಶ್‌ ಗೋಪಿ ಭೇಟಿ
Cinema Latest South cinema Top Stories Udupi
Shivarajkumar
100% ಗಿಲ್ಲಿನೇ ಬಿಗ್‌ ಬಾಸ್‌ ಗೆಲ್ಲೋದು – ಟೇಬಲ್‌ ಕುಟ್ಟಿ ಹೇಳಿದ ಶಿವಣ್ಣ
Cinema Latest Main Post Sandalwood

You Might Also Like

RCB 4
Cricket

ಶ್ರೇಯಾಂಕ ಪುಟ್ಟಿಯ ಸ್ಪಿನ್‌ ಮ್ಯಾಜಿಕ್‌ಗೆ ಗುಜರಾತ್‌ ಪಲ್ಟಿ – ಆರ್‌ಸಿಬಿಗೆ ಹ್ಯಾಟ್ರಿಕ್‌ ಜಯ

Public TV
By Public TV
4 hours ago
Bhimanna Khandre 2
Bidar

ಶತಾಯುಷಿ, ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ

Public TV
By Public TV
4 hours ago
Laal Bagh Flower Show
Bengaluru City

ಲಾಲ್‌ಬಾಗ್ ಪ್ಲವರ್ ಶೋಗೆ ಭರ್ಜರಿ ರೆಸ್ಪಾನ್ಸ್ – ಎರಡೇ ದಿನದಲ್ಲಿ 28.3 ಲಕ್ಷ ರೂ. ಆದಾಯ

Public TV
By Public TV
4 hours ago
01 15
Big Bulletin

ಬಿಗ್‌ ಬುಲೆಟಿನ್‌ 16 January 2026 ಭಾಗ-1

Public TV
By Public TV
5 hours ago
02 15
Big Bulletin

ಬಿಗ್‌ ಬುಲೆಟಿನ್‌ 16 January 2026 ಭಾಗ-2

Public TV
By Public TV
5 hours ago
033
Big Bulletin

ಬಿಗ್‌ ಬುಲೆಟಿನ್‌ 16 January 2026 ಭಾಗ-3

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?