Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸೋನಲ್ ಬಣ್ಣದ ಹೆಜ್ಜೆಗೆ ಐದು ವಸಂತದ ಸಂಭ್ರಮ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಸೋನಲ್ ಬಣ್ಣದ ಹೆಜ್ಜೆಗೆ ಐದು ವಸಂತದ ಸಂಭ್ರಮ!

Cinema

ಸೋನಲ್ ಬಣ್ಣದ ಹೆಜ್ಜೆಗೆ ಐದು ವಸಂತದ ಸಂಭ್ರಮ!

Public TV
Last updated: April 26, 2020 4:48 pm
Public TV
Share
2 Min Read
sonal monteiro
SHARE

ಯೋಗರಾಜ್ ಭಟ್ ನಿರ್ದೇಶನದ ಪಂಚತಂತ್ರ ಚಿತ್ರದ ಮೂಲಕವೇ ನಾಯಕಿಯಾಗಿ ಗುರುತಾದವರು ಸೋನಲ್ ಮೊಂತೆರೋ. ಕನ್ನಡ ಚಿತ್ರರಂಗಕ್ಕೆ ಈಗಾಗಲೇ ಹಲವಾರು ಪ್ರತಿಭೆಗಳನ್ನು ಕೊಡುಗೆಯಾಗಿ ಕೊಡಮಾಡಿರುವ ಮಂಗಳೂರಿನ ಹುಡುಗಿ ಸೋನಲ್. ಹೊರ ಜಗತ್ತಿನ ಪಾಲಿಗೆ ಪಂಚತಂತ್ರದ ಪ್ರಭೆ ಮಾತ್ರವೇ ಸೋನಲ್ ಸುತ್ತ ಗೋಚರಿಸುತ್ತೆ. ನಟಿಸಿದ ಮೊದಲ ಚಿತ್ರದಿಂದಲೇ ಟೇಕಾಫ್ ಆದ ಬಗ್ಗೆ ಹಲವರಲ್ಲೊಂದು ಅಚ್ಚರಿಯೂ ಇದೆ. ವಾಸ್ತವವಾಗಿ ಮಾಡೆಲಿಂಗ್ ಲೋಕದಿಂದ ತುಳು ಚಿತ್ರರಂಗವನ್ನು ಹಾದು ಬಂದು ಕನ್ನಡದಲ್ಲಿ ನೆಲೆ ಕಂಡುಕೊಂಡಿರುವ ಸೋನಲ್ ಈ ಹಂತ ತಲುಪಿಕೊಳ್ಳಲು ಒಂದಷ್ಟು ಸರ್ಕಸ್ಸು ನಡೆಸಿದ್ದಾರೆ. ಅಷ್ಟೆಲ್ಲ ಪರಿಶ್ರಮ ಮತ್ತು ತುಂಬು ಆಹ್ಲಾದವನ್ನು ಮೆತ್ತಿಕೊಂಡಂತಿರೋ ಸೋನಲ್‍ರ ಬಣ್ಣದ ಹೆಜ್ಜೆಗೀಗ ಭರ್ತಿ ಐದು ವರ್ಷ ತುಂಬಿದೆ.

sonal monteiro a

ಸೋನಲ್ ಮೊಂತೆರೋ ಈಗ ಕನ್ನಡ ಚಿತ್ರರಂಗದಲ್ಲಿ ಬಹು ಬೇಡಿಕೆಯ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಯೋಗರಾಜ್ ಭಟ್ ನಿರ್ದೇಶನದ ಪಂಚತಂತ್ರ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾದಾಗ ತುಳು ಚಿತ್ರಪ್ರೇಮಿಗಳಿಗೆ ಬಿಟ್ಟರೆ ಬೇರೆಲ್ಲರಿಗೂ ಈಕೆ ಅಪರಿಚಿತೆಯಾಗಿದ್ದರು. ಆದರೆ ಅದರಲ್ಲಿನ ಪಾತ್ರ ಮತ್ತು ಅದನ್ನವರು ನಿರ್ವಹಿಸಿದ್ದ ರೀತಿಗಳನ್ನೆಲ್ಲ ಪ್ರೇಕ್ಷಕರು ಬಹುವಾಗಿ ಮೆಚ್ಚಿಕೊಂಡಿದ್ದರು. ಕೆಲವೊಮ್ಮೆ ಕೆಲ ನಟ ನಟಿಯರು ಹಲವಾರು ವರ್ಷಗಳ ಕಾಲ ಸೈಕಲ್ಲು ಹೊಡೆದರೂ ದಕ್ಕಿಸಿಕೊಳ್ಳಲಾಗದಂಥಾ ಗೆಲುವನ್ನು ಸೋನಲ್ ಪಂಚತಂತ್ರದ ಮೂಲಕ ಗಿಟ್ಟಿಸಿಕೊಂಡಿದ್ದರು.

sonal monteiro d

ಇದೊಂದೇ ಸಿನಿಮಾದ ನಂತರದಲ್ಲಿ ಅವರು ಪಡೆದುಕೊಳ್ಳುತ್ತಾ ಸಾಗಿ ಬರುತ್ತಿರೋ ಅವಕಾಶಗಳನ್ನು ಕಂಡರೆ ಯಾರೇ ಆದರೂ ಚಕಿತರಾಗುವಂತಿದೆ. ಯಾಕೆಂದರೆ, ದೊಡ್ಡ ಸಿನಿಮಾಗಳಲ್ಲಿ, ಸ್ಟಾರ್ ನಟರ ಜೊತೆ ನಟಿಸೋ ಅವಕಾಶಗಳನ್ನು ಸೋನಲ್ ಗಿಟ್ಟಿಸಿಕೊಳ್ಳುತ್ತಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಚಿತ್ರದಲ್ಲಿಯೂ ಅವರು ನಾಯಕಿಯರಲ್ಲೊಬ್ಬರಾಗಿದ್ದಾರೆ. ಅದೇ ಹೊತ್ತಿನಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಜೊತೆ ಬುದ್ಧಿವಂತ-2 ಚಿತ್ರದಲ್ಲಿಯೂ ನಟಿಸುತ್ತಿದ್ದಾರೆ. ಇದೆಲ್ಲದರ ನಡುವೆ ಪರಭಾಷೆಗಳಿಂದಲೂ ಕೂಡಾ ಸೋನಲ್‍ಗೆ ಬಿಗ್ ಆಫರ್‌ಗಳು ಬರಲಾರಂಭಿಸಿವೆ. ಇಂಥಾದ್ದೊಂದು ಸಂಕ್ರಮಣ ಕಾಲದಲ್ಲಿಯೇ ತಮ್ಮ ಸಿನಿಮಾ ಯಾನಕ್ಕೆ ಐದು ವರ್ಷ ತುಂಬಿದ ಖುಷಿಯೂ ಅವರನ್ನಾವರಿಸಿಕೊಂಡಿದೆ.

sonal monteiro official 69880882 478421196340248 2883786991466675915 n 1

ಮಂಗಳೂರಿನ ಚೆಲುವೆ ಸೋನಲ್ ಮೊಂತೇರೋ ಬಣ್ಣದ ಲೋಕಕ್ಕೆ ಪಾದಾರ್ಪಣೆ ಮಾಡಿದ್ದೇ ಮಾಡೆಲಿಂಗ್ ಲೋಕದ ಮುಖಾಂತರ. ಮಂಗಳೂರು ಮಂದಿಗೆ ಯಕ್ಷಗಾನ, ನಾಟಕ ಮತ್ತು ಸಿನಿಮಾ ಗೀಳು ಇದ್ದೇ ಇರುತ್ತದೆ. ಅಂಥಾ ವಾತಾವರಣದಲ್ಲಿಯೇ ಬೆಳೆದು ಬಂದಿದ್ದ ಸೋನಲ್ ಮನಸು ಕಲಿಕೆಯ ದಿನಗಳಲ್ಲಿಯೇ ಬಣ್ಣದ ಲೋಕದತ್ತ ವಾಲಿಕೊಂಡಿತ್ತು. ನಂತರ ಮಾಡೆಲಿಂಗ್ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಿದ್ದವರು ತುಳುವಿನ ಚಿತ್ರದಲ್ಲಿ ನಾಯಕಿಯಾಗೋ ಅವಕಾಶ ಪಡೆದುಕೊಂಡಿದ್ದರು. ಆ ಮೊದಲ ಚಿತ್ರವೇ ನೂರು ದಿನ ಯಶಸ್ವೀ ಪ್ರದರ್ಶನ ಕಾಣುವ ಮೂಲಕ ತುಳು ನಾಡಿನ ತುಂಬ ಸೋನಲ್ ಹೆಸರುವಾಸಿಯಾಗಿದ್ದರು.

sonal monteiro b

ಆ ಕಾಲದಲ್ಲಿ ಕನ್ನಡ ಚಿತ್ರರಂಗದಲ್ಲಿ ನಾಯಕಿಯಾಗಿ ನಟಿಸಬೇಕೆಂಬುದು ಸೋನಲ್ ಅವರ ಮಹಾ ಕನಸಾಗಿತ್ತು. ಅದೇ ಗುಂಗಿನಲ್ಲಿ ಚಿತ್ರರಂಗದೊಳಕ್ಕೆ ಪ್ರವೇಶ ಪಡೆಯಲು ಪ್ರಯತ್ನಿಸಿದರೂ ಆರಂಭದಲ್ಲಿ ದೊರೆತದ್ದು ಸಣ್ಣ ಪುಟ್ಟ ಅವಕಾಶಗಳು ಮಾತ್ರ. ಅದರ ನಡುವೆಯೂ ಅಭಿಸಾರಿಕೆ, ಎಂಎಲ್‍ಎ ಮುಂತಾದ ಚಿತ್ರಗಳಲ್ಲಿ ನಟಿಸಿದ್ದರಾದರೂ ಹೇಳಿಕೊಳ್ಳುವಂಥ ಗೆಲುವೇನೂ ಸಿಕ್ಕಿರಲಿಲ್ಲ. ಆದರೆ ಒಂದಷ್ಟು ಕಾಲದ ಸರ್ಕಸ್ಸುಗಳೆಲ್ಲವೂ ಸಾರ್ಥಕವಾಗುವಂಥ ಗೆಲುವನ್ನು ಪಂಚತಂತ್ರ ತಂದುಕೊಟ್ಟಿದೆ. ಸದ್ಯ ಲಾಕ್‍ಡೌನ್ ಸಮಯವನ್ನು ಬಹು ಕಾಲದ ನಂತರ ಕುಟುಂಬಿಕರ ಜೊತೆ ಕಳೆಯುತ್ತಿರೋ ಸೋನಲ್ ಅದರ ನಡುವೆಯೇ ಮುಂದಿನ ಸಿನಿಮಾಗಳಿಗೆ ತಯಾರಿ ನಡೆಸುತ್ತಿದ್ದಾರೆ. ಈ ಔದರ ಸಂಭ್ರಮವನ್ನವರು ಮುಂದಿನ ದಿನಗಳಲ್ಲಿ ಮತ್ತೊಂದಷ್ಟು ಚಿತ್ರಗಳೊಂದಿಗೆ ಸಂಪನ್ನಗೊಳಿಸಿಕೊಳ್ಳಲಿದ್ದಾರೆ.

sonal monteiro c

TAGGED:Buddhivantha-2Challenging star DarshanModelingPanchatantrareal star upendraRobertSonal Monteirotulu cinemaYogaraj Bhatಚಾಲೆಂಜಿಂಗ್ ಸ್ಟಾರ್ ದರ್ಶನ್ತುಳು ಚಿತ್ರರಂಗಪಂಚತಂತ್ರಬುದ್ಧಿವಂತ 2ಮಾಡೆಲಿಂಗ್ಯೋಗರಾಜ್ ಭಟ್ರಾಬರ್ಟ್ರಿಯಲ್ ಸ್ಟಾರ್ ಉಪೇಂದ್ರಸೋನಲ್ ಮೊಂತೆರೋ
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

SN Narayanaswamy Bangarpet MLA
Bengaluru City

ಮೇ 15ರೊಳಗೆ ಸಂಪುಟ ಪುನರ್ ರಚನೆಯ ಸುದ್ದಿ ಸಿಗಲಿದೆ: ಬಂಗಾರಪೇಟೆ ನಾರಾಯಣಸ್ವಾಮಿ

Public TV
By Public TV
12 minutes ago
Madhu Bangarappa 1
Bagalkot

SSLC ಪರೀಕ್ಷೆಯಲ್ಲಿ 45 ಸಾವಿರ ವಿದ್ಯಾರ್ಥಿಗಳು ಫೇಲ್: ಮಧು ಬಂಗಾರಪ್ಪ

Public TV
By Public TV
12 minutes ago
R Ashok 1
Bengaluru City

ಸರ್ಕಾರ ಗುಂಡಿ ಮುಚ್ಚಿದ ಹಣವನ್ನು ಗುಂಡಿಗೆ ಹಾಕಿದೆ – ಅಶೋಕ್‌ ವಾಗ್ದಾಳಿ

Public TV
By Public TV
30 minutes ago
Suhas Sudhakar H.D Kumaraswamy
Chitradurga

ಹೆಚ್‌ಡಿಕೆ ʻಹೆಬ್ಬೆಟ್ಟು’ ಹೇಳಿಕೆಯಿಂದ ನೋವಾಗಿದೆ – ಬೇಸರ ಹೊರಹಾಕಿದ ಡಿ.ಸುಧಾಕರ್ ಪುತ್ರ

Public TV
By Public TV
30 minutes ago
DK Shivakumar Iqbal Hussain
Districts

ಮೇ 15ಕ್ಕೆ ಡಿಕೆಶಿ ಸಿಎಂ ಆಗೋದು ಫಿಕ್ಸ್, ಇದೇ ನನ್ನ ಅಂತಿಮ ದಿನಾಂಕ: ಇಕ್ಬಾಲ್ ಹುಸೇನ್

Public TV
By Public TV
51 minutes ago
PM Narendra Modi joins youngsters for friendly football game in Gangtok during Sikkim visit 1
Cricket

ಮಕ್ಕಳ ಜೊತೆ ಫುಟ್‌ಬಾಲ್ – ಗೋಲ್‌ ಹೊಡೆದು ಸಂಭ್ರಮಿಸಿದ ಮೋದಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?