ಮಡಿಕೇರಿ: ಬೆಂಗಳೂರಿನಲ್ಲಿ ಕಿರುತೆರೆ ನಟಿ ಸೌಜನ್ಯ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ಮಗಳು ಆತ್ಮಹತ್ಯೆ ಮಾಡಿಕೊಳ್ಳುವಷ್ಟು ಹೇಡಿ ಅಲ್ಲ. ಸಾವಿನ ಬಗ್ಗೆ ಅನುಮಾನ ಇದೆ ಎಂದು ತಂದೆ ಮಾದಪ್ಪ ಅವರು ಪಬ್ಲಿಕ್ ಟಿವಿ ಜೊತೆ ಹೇಳಿಕೊಂಡಿದ್ದಾರೆ.
ದೂರವಾಣಿ ಮೂಲಕ ಪಬ್ಲಿಕ್ ಟಿವಿ ಜೊತೆ ಮಾತನಾಡಿರುವ ಅವರು, ನನ್ನ ಮಗಳು ಹಾಗೂ ಮಗ ಬೆಂಗಳೂರಿನಲ್ಲಿ ವಾಸವಾಗಿದ್ದು, ಅವರಿಬ್ಬರೂ ಕೂಡ ಬೇರೆ, ಬೇರೆ ಕಡೆ ವಾಸ ಮಾಡುತ್ತಿದ್ದಾರೆ. ನಿನ್ನೆ ಸಂಜೆ ಕರೆ ಮಾಡಿ ಇಬ್ಬರು ಕೊಡಗಿಗೆ ಬರುವುದಾಗಿ ತಿಳಿಸಿದ್ದರು. ಇಂದು ಅವರು ಬರಬೇಕಿತ್ತು ಅದರೆ ಈ ರೀತಿಯಲ್ಲಿ ಅಗುತ್ತದೆ ಎಂದು ನಿರೀಕ್ಷೆ ಮಾಡಿರಲ್ಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಕಿರುತೆರೆ ನಟಿ ಸೌಜನ್ಯ ಆತ್ಮಹತ್ಯೆ
ನಿನ್ನೆ ಸಂಜೆ ಕರೆ ಮಾಡಿದಾಗ ತನ್ನ ಬಳಿ 6 ಲಕ್ಷ ರೂಪಾಯಿ ಹಣ ಇದೆ ಎಂದು ಸೌಜನ್ಯ ಹೇಳಿದ್ದಳು. ಅದರೆ ಇದೀಗ ಏಕಾಏಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಾಳೆ ಅಂದರೆ ಅನುಮಾನ ಮೂಡಿದೆ. ಅಲ್ಲಿಯ ಪೊಲೀಸರು ನಾವು ಹೋಗುವ ಮೊದಲೇ ಶವ ಪರೀಕ್ಷೆಗೆ ತೆಗೆದುಕೊಂಡು ಹೋಗಿದ್ದಾರೆ. ಇದು ನಮಗೆ ಇನ್ನಷ್ಟು ಅನುಮಾನ ಮೂಡುವಂತೆ ಮಾಡಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಅರವಿಂದ್ ಬೈಕ್ ಮುಂದೆ ದಿವ್ಯಾ ಉರುಡುಗ ಸ್ಟೈಲಿಶ್ ಪೋಸ್