Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಕಾನೂನಿಗಿಂತ ಯಾರು ಮೇಲಲ್ಲ, ಈ ಕೃತ್ಯ ಮಾಡುವ ವ್ಯಕ್ತಿತ್ವ ದರ್ಶನ್‌ದಲ್ಲ- ಮೌನ ಮುರಿದ ಸುಮಲತಾ

Public TV
Last updated: July 4, 2024 4:15 pm
Public TV
Share
5 Min Read
sumalatha 2
SHARE

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ (Renukaswamy Murder Case) ಪ್ರಕರಣವಾಗಿ ಆರೋಪಿಯಾಗಿರುವ ನಟ ದರ್ಶನ್ ಬಗ್ಗೆ ನಟಿ ಸುಮಲತಾ ಮೌನ ಮುರಿದಿದ್ದಾರೆ. ದರ್ಶನ್ (Darshan) ಕುರಿತು ಸೋಷಿಯಲ್ ಮೀಡಿಯಾದಲ್ಲಿ ಸುದೀರ್ಘವಾಗಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ:ಶೀಘ್ರದಲ್ಲೇ ‘ಬಿಗ್ ಬಾಸ್’ ಶೋ ಶುರು- ಸ್ಪರ್ಧಿಗಳ ಲಿಸ್ಟ್‌ ಔಟ್‌

SUMALATHA 3

ದರ್ಶನ್ ಪ್ರಕರಣದ ಬಗ್ಗೆ ಇದುವರೆಗೂ ಸುಮಲತಾ ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ ಎಂದು ಅನೇಕರು ಟೀಕಿಸಿದ್ದರು. ಈ ಬೆನ್ನಲ್ಲೇ ಪ್ರತಿಕ್ರಿಯಿಸಿ, ಎಲ್ಲರಿಗೂ ಸಹಾಯ ಮಾಡುವ ಮನೋಭಾವವು ದರ್ಶನ್‌ಗಿದೆ. ರೇಣುಕಾಸ್ವಾಮಿ ಕೊಲೆ ಮಾಡುವ ವ್ಯಕ್ತಿತ್ವ ದರ್ಶನ್ ಅವರದ್ದಲ್ಲ ಎಂದು ನಾನು ನಂಬಿದ್ದೇನೆ. ರೇಣುಕಾಸ್ವಾಮಿ ಕುಟುಂಬಕ್ಕೂ ನ್ಯಾಯ ಸಿಗಲಿ. ಈ ಪ್ರಕರಣ ನ್ಯಾಯಾಲಯದಲ್ಲಿರುವುದರಿಂದ ಈ ಬಗ್ಗೆ ಸದ್ಯಕ್ಕೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ನಟಿ ಸುಮಲತಾ (Actress Sumalatha) ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ಸತ್ಯಮೇವ ಜಯತೆ ????
???????????????????????????????????? ???????????????????????? ???????? pic.twitter.com/LR998OpZ3S

— Sumalatha Ambareesh ???????? ಸುಮಲತಾ ಅಂಬರೀಶ್ (@sumalathaA) July 4, 2024

ಸ್ಟೋರಿಯಲ್ಲಿ ಏನಿದೆ?

ಎಲ್ಲರಿಗೂ ನಮಸ್ಕಾರ, ನಾನು 44 ವರ್ಷಗಳಿಂದ ನಟಿಯಾಗಿ, ಕಲಾವಿದೆಯಾಗಿ ಸಾರ್ವಜನಿಕ ಜೀವನದಲ್ಲಿದ್ದೇನೆ ಮತ್ತು ಕಳೆದ 5 ವರ್ಷಗಳಿಂದ ಸಂಸದೆಯಾಗಿದ್ದೆ. ಅಲ್ಲದೇ, ನಾನು ಕಲಾವಿದೆಯಾಗಿ, ಪತ್ನಿಯಾಗಿ ಮತ್ತು ತಾಯಿಯಾಗಿ ಅಥವಾ ಸಂಸದೆಯಾಗಿ ಮತ್ತು ಒಬ್ಬ ವ್ಯಕ್ತಿಯಾಗಿ ನನ್ನ ಜೀವನದಲ್ಲಿ ಪ್ರತಿಯೊಂದು ಜವಾಬ್ದಾರಿಯನ್ನು ಗಂಭೀರವಾಗಿ ತೆಗೆದುಕೊಂಡಿದ್ದೇನೆ. ಸಮಾಜದಲ್ಲಿ ಜವಾಬ್ದಾರಿಯುತ ವ್ಯಕ್ತಿಯಾಗಿ, ನನ್ನ ಬಳಿ ಯಾವುದೇ ಸತ್ಯ ಅಥವಾ ಮಾಹಿತಿಯಿಲ್ಲದೆ ನಾನು ಅಸಡ್ಡೆಯ, ಅನಗತ್ಯ, ಬೇಜವಾಬ್ದಾರಿ ಹೇಳಿಕೆಗಳನ್ನು ನೀಡಲು ಸಾಧ್ಯವಿಲ್ಲ.

ಇಂದು ನಾನು ಕೆಲವು ಸಂಗತಿಗಳನ್ನು ಸ್ಪಷ್ಟಪಡಿಸಲು, ನನ್ನ ಆಲೋಚನೆಗಳು ಮತ್ತು ನೋವನ್ನು ಹಂಚಿಕೊಳ್ಳಲು ಪೋಸ್ಟ್ ಮಾಡುತ್ತಿದ್ದೇನೆ ಏಕೆಂದರೆ ಮಾಧ್ಯಮ ಅಥವಾ ಸಾಮಾಜಿಕ ಮಾಧ್ಯಮದಲ್ಲಿ ಯಾವುದೇ ಹೆಚ್ಚಿನ ಊಹಾಪೋಹಗಳನ್ನು ಪ್ರೋತ್ಸಾಹಿಸಲು ಅಥವಾ ನನ್ನ ನಿಲುವಿನ ಬಗ್ಗೆ ಅಭಿಮಾನಿಗಳಲ್ಲಿ ಯಾವುದೇ ಗೊಂದಲಗಳಿಗೆ ಎಡೆ ಮಾಡಿಕೊಡಲು ನಾನು ಬಯಸುವುದಿಲ್ಲ.

ನಾನು ಮೊದಲಿಗೆ ತಮ್ಮ ಮಗ ಮತ್ತು ಪತಿಯನ್ನು ಹೃದಯವಿದ್ರಾವಕ ರೀತಿಯಲ್ಲಿ ಕಳೆದುಕೊಂಡಿರುವ ರೇಣುಕಾಸ್ವಾಮಿ ಅವರ ಹೆತ್ತವರು ಮತ್ತು ಪತ್ನಿಗೆ ನನ್ನ ಸಂತಾಪವನ್ನು ಸೂಚಿಸುತ್ತೇನೆ ಮತ್ತು ಈ ದುರಂತವನ್ನು ಎದುರಿಸಲು ಮತ್ತು ಆ ನೋವನ್ನು ಭರಿಸಲು ಶಕ್ತಿಯನ್ನು ದೇವರು ನೀಡಲಿ ಎಂದು ನಾನು ಪ್ರಾರ್ಥಿಸುತ್ತೇನೆ. ನಮ್ಮ ಕಾನೂನು ವ್ಯವಸ್ಥೆಯಿಂದ ಅವರಿಗೆ ಸಿಗಬೇಕಾದ ನ್ಯಾಯ ದೊರಕಲಿ ಎಂದು ಪ್ರಾರ್ಥಿಸುತ್ತೇನೆ.

ಈ ಘಟನೆಯು ನನ್ನ ಹೃದಯವನ್ನು ಛಿದ್ರಗೊಳಿಸಿತು ಮತ್ತು ನಾನು ಅದನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾಗದೆ ಹಲವಾರು ದಿನಗಳವರೆಗೆ ಆಘಾತ ಮತ್ತು ನೋವಿನ ಸ್ಥಿತಿಯಲ್ಲಿದ್ದೆ. ನನ್ನ “ಮೌನ” ದ ಬಗ್ಗೆ ಕಾಮೆಂಟ್ ಮಾಡುತ್ತಿರುವ ಕೆಲವರು, ನನ್ನ ಮತ್ತು ದರ್ಶನ್, ಅವರ ಕುಟುಂಬ ಮತ್ತು ನಾವು ವರ್ಷಗಳಿಂದ ಹಂಚಿಕೊಂಡಿರುವ ಬಾಂಧವ್ಯದ ನಡುವಿನ ಅಗಾಧತೆಯನ್ನು ಅರ್ಥಮಾಡಿಕೊಳ್ಳುವುದಿಲ್ಲ. ಅವರು ಸ್ಟಾರ್ ಮತ್ತು ಸೂಪಸ್ಟಾರ್ ಆಗುವ ಮೊದಲು ನಾನು ಅವರನ್ನು 25 ವರ್ಷಗಳಿಂದ ಬಲ್ಲೆ. ಯಾವುದೇ ಸ್ಟಾರ್‌ಡಂಗಿಂತ ಹೆಚ್ಚಾಗಿ, ಅವರು ನನ್ನ ಕುಟುಂಬದ ಸದಸ್ಯ ಮತ್ತು ಯಾವಾಗಲೂ ನನಗೆ ಮಗನಂತೆ, ಅವರು ಅಂಬರೀಶ್ ಅವರನ್ನು ಯಾವಾಗಲೂ ತಮ್ಮ ಅಪ್ಪಾಜಿ ಎಂದು ಪರಿಗಣಿಸಿದ್ದಾರೆ ಹಾಗೂ ನನಗೆ ಅವರ ತಾಯಿಯ ಗೌರವ ಮತ್ತು ಸ್ಥಾನ ಮತ್ತು ಮಗನ ಪ್ರೀತಿಯನ್ನು ನೀಡಿದ್ದಾರೆ.

ಯಾವ ತಾಯಿಯೂ ತನ್ನ ಮಗುವನ್ನು ಈ ರೀತಿಯ ಪರಿಸ್ಥಿತಿಯಲ್ಲಿ ನೋಡುವುದನ್ನು ಸಹಿಸುವುದಿಲ್ಲ. ನಾನು ದರ್ಶನ್ ಅವರನ್ನು ಪ್ರೀತಿಸುವ ಹೃದಯ ಹೊಂದಿರುವ, ಅತ್ಯಂತ ಕಾಳಜಿಯುಳ್ಳ ಮತ್ತು ಉದಾರ ವ್ಯಕ್ತಿ ಎಂದು ತಿಳಿದಿದ್ದೇನೆ. ಪ್ರಾಣಿಗಳ ಬಗ್ಗೆ ಅವನ ಸಹಾನುಭೂತಿ ಮತ್ತು ನಹಾಯ ಮಾಡುವ ಮನೋಭಾವವು ಯಾವಾಗಲೂ ಅವನ ಸ್ವಭಾವದ ಭಾಗವಾಗಿದೆ. ಈ ಕೃತ್ಯವನ್ನು ಮಾಡುವ ವ್ಯಕ್ತಿತ್ವ ದರ್ಶನ್ ಅವರದ್ದಲ್ಲ ಎಂದು ನಾನು ನಂಬಿದ್ದೇನೆ. ಈ ಪ್ರಕರಣ ನ್ಯಾಯಾಲಯದಲ್ಲಿರುವುದರಿಂದ ಈ ಬಗ್ಗೆ ಸದ್ಯಕ್ಕೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ.

ದರ್ಶನ್ ಜೊತೆಗೆ ಅವನ ಪತ್ನಿ ವಿಜಯಲಕ್ಷ್ಮಿ ಮತ್ತು ಮುಗ್ಧ ಮಗನನ್ನು ಸಾಮಾಜಿಕ ಮಾಧ್ಯಮದಲ್ಲಿ ಗುರಿಯಾಗಿಸಿಕೊಂಡಿರುವುದು ತುಂಬಾ ಅನ್ಯಾಯವಾಗಿದೆ. ಅಷ್ಟೇ ಅಲ್ಲದೆ ಇತರೆ ಆರೋಪಿಗಳ ಬಡ ಕುಟುಂಬಗಳು ಕೂಡ ಸಂಕಷ್ಟಕ್ಕೆ ಸಿಲುಕಿರುವುದು ನೋವಿನ ಸಂಗತಿಯಾಗಿದೆ. ಸೋಷಿಯಲ್ ಮೀಡಿಯಾ ಬಳಕೆದಾರರು ಮತ್ತು ಸಾರ್ವಜನಿಕರು ಸಂತ್ರಸ್ತ ಅಥವಾ ಆರೋಪಿಯ ಕುಟುಂಬಗಳು,  ಈಗಾಗಲೇ ಈ ಭಯಾನಕ ಪರಿಸ್ಥಿತಿಯನ್ನು ಎದುರಿಸುತ್ತಿರುವವರ ಮೇಲೆ ತಮ್ಮ ಕಾಮೆಂಟ್‌ಗಳು ಹೇಗೆ ಪರಿಣಾಮ ಬೀರಬಹುದು ಎಂಬುದನ್ನು ಪರಿಗಣಿಸಬೇಕು.

ತನಿಖೆ ನಡೆಯುತ್ತಿದೆ ಮತ್ತು ಪೊಲೀಸರು ತಮ್ಮ ಕೆಲಸವನ್ನು ಮಾಡುತ್ತಿದ್ದಾರೆ ಮತ್ತು ನಮ್ಮ ನ್ಯಾಯ ವ್ಯವಸ್ಥೆಯಲ್ಲಿ ನನಗೆ ಅಪಾರ ನಂಬಿಕೆಯಿದೆ. ದರ್ಶನ್ ಈ ಪ್ರಕರಣದಲ್ಲಿ ಆರೋಪಿಯಾಗಿದ್ದು, ಇನ್ನೂ ಯಾವುದೂ ಸಾಬೀತಾಗಿಲ್ಲ ಅಥವಾ ಶಿಕ್ಷೆಯಾಗಿಲ್ಲ. ಇದು ಕಾನೂನಿಗೆ ಬಿಟ್ಟದ್ದು ಮತ್ತು ಈ ಕುರಿತು ಈಗಾಗಲೇ ನಿರ್ಣಯಿಸುವುದು ಮತ್ತು ಶಿಕ್ಷೆ ವಿಧಿಸುವುದು ಬೇರೆ ಯಾರೂ ಅಲ್ಲ. ಈ ವಿಚಾರದಲ್ಲಿ ಅವರ ನಿಲುವು, ಸತ್ಯಾಸತ್ಯತೆಗಳನ್ನು ಸ್ಪಷ್ಟಪಡಿಸುವ ಅವಕಾಶವಾದರೂ ಇರಲಿ.

ಈ ಪರಿಸ್ಥಿತಿಯಲ್ಲಿ ನಾನು ನೆಮ್ಮದಿಯಿಂದ ಈ ಸಮಸ್ಯೆಯಿಂದ ದೂರವಿರುವುದು ಅಸಾಧ್ಯ. ಇದು ನನ್ನದೇ ಕೌಟುಂಬಿಕ ಸಮಸ್ಯೆ. ಇದು ಅವರ ಜೀವನ ಮತ್ತು ಕುಟುಂಬದ ನೆಮ್ಮದಿ, ಭದ್ರತೆ, ಭವಿಷ್ಯಕ್ಕೆ ಸಂಬಂಧಪಟ್ಟಂತೆ ಅತ್ಯಂತ ಗಂಭೀರ ವಿಷಯ. ನಮಗೆಲ್ಲ ನೋವಾಗುತ್ತಿದೆ. ಚಿತ್ರರಂಗ ಅಸ್ತವ್ಯಸ್ತವಾಗಿದೆ. ಸಾವಿರ ಜನರ ಜೀವನೋಪಾಯ ಅವರ ಚಲನಚಿತ್ರ ನಿರ್ಮಾಣಗಳ ಮೇಲೆ ಅವಲಂಬಿತವಾಗಿದೆ. ಇದನ್ನು ಎದುರಿಸುವುದು ಯಾರಿಗೂ ಸುಲಭವಾಗಿರಲಿಲ್ಲ.

ಆಘಾತ ಮತ್ತು ಯಾತನೆಯ ಮನಸ್ಸಿನ ಸ್ಥಿತಿಯಿಂದ ಹೊರಬರಲು ಮತ್ತು ಹಲವು ಮೂಲಗಳಿಂದ ಬರುವ ಎಲ್ಲಾ ಗೊಂದಲಮಯ ಸುದ್ದಿಗಳನ್ನು ಅರ್ಧಮಾಡಿಕೊಳ್ಳಲು ನನ್ನನ್ನು ನಾನೇ ಸಮಾಧಾನಗೊಳಿಸಬೇಕಿತ್ತು. ಇದು ನಾನು ಸಾಂದರ್ಭಿಕವಾಗಿ ಪ್ರತಿಕ್ರಿಯಿಸಲು ಯಾವುದೋ ಸಿನಿಮಾ ಅಥವಾ ರಾಜಕೀಯ ಘಟನೆಯಲ್ಲ, ಈ ಬಗ್ಗೆ ಚರ್ಚಿಸಲು ಅಥವಾ ಅಂತಹ ಅಪರಾಧದಲ್ಲಿ ಆರೋಪಿಯಾಗಿ ದರ್ಶನ್ ನಿಂತಿರುವುದನ್ನು ನೋಡುವುದು ನನಗೆ ತುಂಬಾ ನೋವಿನ ಸಂಗತಿ ಎಂದು ಜನರು ಅರ್ಥಮಾಡಿಕೊಳ್ಳುತ್ತಾರೆ ಎಂದು ನಾನು ಭಾವಿಸುತ್ತೇನೆ. ಆರೋಪಿಯಾಗಿರುವುದು ಎಂದರೆ ಅವನು ಅಪರಾಧಿ ಎಂದು ಅರ್ಥವಲ್ಲ ಎಂಬುದನ್ನು ನೆನಪಿನಲ್ಲಿಡೋಣ. ಬೇರೆಯವರಂತೆ ಕಾನೂನಾತ್ಮಕವಾಗಿ ತನ್ನನ್ನು ತಾನು ಸಮರ್ಥಿಸಿಕೊಳ್ಳುವ ಹಕ್ಕು ಅವರಿಗೂ ಇದೆ.

ದರ್ಶನ್ ಯಾವಾಗಲೂ ನನ್ನನ್ನು ಮದರ್ ಇಂಡಿಯಾ ಎಂದು ಕರೆಯುತ್ತಾರೆ ಮತ್ತು ನಾನು ಬದುಕಿರುವವರೆಗೂ ಅವನು ನನ್ನ ಹಿರಿಯ ಮಗನಾಗಿರುತ್ತಾನೆ. ನಮ್ಮ ಬಂಧ ಒಂದೇ ಮತ್ತು ಯಾವುದೂ ಅದನ್ನು ಬದಲಾಯಿಸಲು ಸಾಧ್ಯವಿಲ್ಲ. ಅವರ ತಾಯಿಯಾಗಿ ನಾನು ಸತ್ಯ ಹೊರಬರಲಿ ಮತ್ತು ಎಲ್ಲರಿಗೂ ನ್ಯಾಯ ಸಿಗಲಿ ಎಂದು ದೇವರಲ್ಲಿ ನಿರಂತರವಾಗಿ ಪ್ರಾರ್ಥಿಸುತ್ತಿದ್ದೇನೆ. ಅವರು ತಮ್ಮನ್ನು ತಾವು ನಿರಪರಾಧಿ ಎಂದು ಸಾಬೀತುಪಡಿಸಿ ಹೊರಬರುತ್ತಾರೆ ಮತ್ತು ಚಿತ್ರೀಕರಣ, ನಾಮಾನ್ಯ ಜೀವನವನ್ನು ಪುನರಾರಂಭಿಸುತ್ತಾರೆ ಎಂದು ನಾನು ಭರವಸೆ ಹೊಂದಿದ್ದೇನೆ.

ದರ್ಶನ್ ಅಭಿಮಾನಿಗಳಿಗೆ ಒಂದು ಹೃತ್ಪೂರ್ವಕ ವಿನಂತಿ, ದಯವಿಟ್ಟು ಶಾಂತವಾಗಿರಿ ಮತ್ತು ಈ ಕ್ಷಣದಲ್ಲಿ ಹೇಳಿಕೆಗಳನ್ನು ನೀಡಬೇಡಿ ಅಥವಾ ಯಾವುದೇ ನಕಾರಾತ್ಮಕತೆಗೆ ಪ್ರತಿಕ್ರಿಯಿಸಬೇಡಿ. ಅದು ಅವರ ಕುಟುಂಬ ಅಥವಾ ಹತ್ತಿರದವರ ಮೇಲೆ ಪರಿಣಾಮ ಬೀರಬಹುದು. ಇದು ಕೇವಲ ಕೆಟ್ರ ಹಂತ, ಆದರೆ ಅವರಿಗೆ ನಮ್ಮೆಲ್ಲರ ನೈತಿಕ ಬೆಂಬಲದ ಅಗತ್ಯವಿದೆ. ಆದ್ದರಿಂದ ಎದೆಗುಂದಬೇಡಿ. ನಮ್ಮಲ್ಲಿ ಯಾರೂ ಕಾನೂನಿಗಿಂತ ಮೇಲಲ್ಲ ಮತ್ತು ನಾವು ಅದನ್ನು ಗೌರವಿಸಬೇಕು, ಮತ್ತು ತಾಳ್ಮೆಯಿಂದ ಕಾಯಬೇಕು, ಒಳ್ಳೆಯ ಸಮಯ ಮರಳಲು ಪ್ರಾರ್ಥಿಸಬೇಕು.

ನಮ್ಮ ಕಾನೂನು ವ್ಯವಸ್ಥೆಯ ಮೇಲೆ ನಂಬಿಕೆ ಇರಲಿ. ದೇವರಲ್ಲಿ ನಂಬಿಕೆಯಿರಲಿ, ಎಲ್ಲವೂ ಸರಿಯಾಗುತ್ತವೆ. ಸತ್ಯಮೇವ ಜಯತೇ ಎಂದು ನಟಿ ಸುಮಲತಾ ಪೋಸ್ಟ್ ಮಾಡಿದ್ದಾರೆ.

TAGGED:darshanRenukaswamy Murder casesandalwoodದರ್ಶನ್ರೇಣುಕಸ್ವಾಮಿ ಕೊಲೆ ಪ್ರಕರಣಸುಮಲತಾ
Share This Article
Facebook Whatsapp Whatsapp Telegram

Cinema Updates

Thug Life Trisha Kamal Haasan
ತ್ರಿಷಾ ಜೊತೆ ರೊಮ್ಯಾನ್ಸ್.. ಅಭಿರಾಮಿಗೆ ಲಿಪ್‌ಲಾಕ್ – ಕಮಲ್ ಹಾಸನ್ ʻಥಗ್ ಲೈಫ್‌ʼ!
7 hours ago
Poonam Pandey
ತುಂಡು ಬಟ್ಟೆಯಿಲ್ಲದೇ ಪೇಪರ್‌ನಿಂದ ಮೈಮುಚ್ಚಿಕೊಂಡ ಪೂನಂ ಪಾಂಡೆ – ಓದ್ಬಿಟ್ಟು ಕೊಡ್ತೀನಿ ಕೊಡಿ ಅಂದ್ರು ನೆಟ್ಟಿಗರು
13 hours ago
prithwi bhat reception
ಪೋಷಕರ ವಿರೋಧದ ನಡುವೆಯೂ ಗಾಯಕಿ ಪೃಥ್ವಿ ಭಟ್‌ ಅದ್ದೂರಿ ರಿಸೆಪ್ಷನ್‌
16 hours ago
pawan kalyan
ಆಪರೇಷನ್ ಸಿಂಧೂರದ ಬಗ್ಗೆ ಸೆಲೆಬ್ರಿಟಿಗಳು ಮಾತಾಡ್ತಿಲ್ಲ: ಪವನ್ ಕಲ್ಯಾಣ್ ಅಸಮಾಧಾನ
17 hours ago

You Might Also Like

Jyoti Malhotra
Latest

ಪಹಲ್ಗಾಮ್‌ಗೂ ಭೇಟಿ ನೀಡಿದ್ದಳು ಯೂಟ್ಯೂಬರ್‌ ಜ್ಯೋತಿ ಮಲ್ಹೋತ್ರಾ!

Public TV
By Public TV
5 hours ago
Kopala Murder
Latest

100 ರೂಪಾಯಿಗೆ ಅಜ್ಜಿಯನ್ನೇ ಕೊಂದ ಮೊಮ್ಮಗ

Public TV
By Public TV
6 hours ago
Accident Hulikal
Crime

ನಿಯಂತ್ರಣ ತಪ್ಪಿ ನದಿಗೆ ಉರುಳಿದ ಲಾರಿ – ಚಾಲಕ ಪಾರು

Public TV
By Public TV
6 hours ago
WEATHER 3
Bengaluru City

ರಾಜ್ಯದಲ್ಲಿ ಭಾರೀ ಮಳೆ – 16 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಜಾರಿ

Public TV
By Public TV
6 hours ago
Rain
Bengaluru City

ಸಿಲಿಕಾನ್ ಸಿಟಿಯಲ್ಲಿ ಅಬ್ಬರಿಸಿದ ವರುಣರಾಯ – ಎಲ್ಲೆಲ್ಲಿ ಏನಾಗಿದೆ?

Public TV
By Public TV
6 hours ago
virat kohli rcb 2025
Bengaluru City

ಮಳೆಯಿಂದ ಪಂದ್ಯ ರದ್ದು, ಕೋಲ್ಕತ್ತಾ ಔಟ್‌ – ಪ್ಲೇ ಆಫ್‌ ಸನಿಹದಲ್ಲಿ ಆರ್‌ಸಿಬಿ

Public TV
By Public TV
6 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?