Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆಯುಷ್ಮಾನ್ ಭಾರತ್ ವ್ಯಾಪ್ತಿಗೆ ಹೃದಯಾಘಾತ, ಪಾರ್ಶ್ವವಾಯುಗೆ ಚಿಕಿತ್ಸೆ ತರಲು ಹೆಚ್.ಡಿ.ದೇವೇಗೌಡರ ಒತ್ತಾಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಆಯುಷ್ಮಾನ್ ಭಾರತ್ ವ್ಯಾಪ್ತಿಗೆ ಹೃದಯಾಘಾತ, ಪಾರ್ಶ್ವವಾಯುಗೆ ಚಿಕಿತ್ಸೆ ತರಲು ಹೆಚ್.ಡಿ.ದೇವೇಗೌಡರ ಒತ್ತಾಯ

Latest

ಆಯುಷ್ಮಾನ್ ಭಾರತ್ ವ್ಯಾಪ್ತಿಗೆ ಹೃದಯಾಘಾತ, ಪಾರ್ಶ್ವವಾಯುಗೆ ಚಿಕಿತ್ಸೆ ತರಲು ಹೆಚ್.ಡಿ.ದೇವೇಗೌಡರ ಒತ್ತಾಯ

Public TV
Last updated: March 19, 2025 9:49 pm
Public TV
Share
4 Min Read
h.d.deve gowda
SHARE

– ಗ್ರಾಮೀಣ ವೈದ್ಯರು, ಆಸ್ಪತ್ರೆ ಸಿಬ್ಬಂದಿ, ದಾದಿಯರ ವೇತನ ಹೆಚ್ಚಳಕ್ಕೆ ಸಲಹೆ
– ರಾಜ್ಯಸಭೆಯಲ್ಲಿ ಆರೋಗ್ಯ ಕ್ಷೇತ್ರದ ಬಗ್ಗೆ ಮಾಜಿ ಪ್ರಧಾನಿಗಳ ಚರ್ಚೆ
– ಆರೋಗ್ಯ ಕ್ಷೇತ್ರಕ್ಕೆ ಬಜೆಟ್ ಹಂಚಿಕೆ 99,058 ಕೋಟಿಗೆ ಏರಿಕೆ; ಪ್ರಧಾನಿ ಮೋದಿ ಅವರಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಪ್ರಧಾನಿ

ನವದೆಹಲಿ: ಆಯುಷ್ಮಾನ್ ಭಾರತ್ ಕಾರ್ಯಕ್ರಮದಡಿಯಲ್ಲಿ ಹೃದಯಾಘಾತ ಮತ್ತು ಪಾರ್ಶ್ವವಾಯುಗೆ ಚಿಕಿತ್ಸೆ ಪಡೆಯಲು ರಾಷ್ಟ್ರವ್ಯಾಪಿ ಯೋಜನೆ ರೂಪಿಸಬೇಕು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ಮನವಿ ಮಾಡಿದರು.

ರಾಜ್ಯಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಪ್ರಧಾನಿಗಳು, ಹೃದಯಾಘಾತ ಮತ್ತು ಪಾರ್ಶ್ವವಾಯುನಿಂದ ಮರಣ ಹೊಂದುವವರು ಭಾರತದಲ್ಲಿ ಹೆಚ್ಚುತ್ತಿದ್ದಾರೆ. ಪ್ರತಿ ವರ್ಷ ನಾವು ಲಕ್ಷಾಂತರ ಜನರನ್ನು ಕಳೆದುಕೊಳ್ಳುತ್ತಿದ್ದೇವೆ ಮತ್ತು ದುರದೃಷ್ಟವಶಾತ್ ಶೇ.30 ರಷ್ಟು ಹೃದಯಾಘಾತಗಳು 45 ವರ್ಷಕ್ಕಿಂತ ಕಡಿಮೆ ವಯಸ್ಸಿನ ವ್ಯಕ್ತಿಗಳಲ್ಲಿ ಸಂಭವಿಸುತ್ತವೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.

ಗ್ರಾಮೀಣ ಪ್ರದೇಶದಲ್ಲಿ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಿರುವ ಸಲುವಾಗಿ ತಾಲ್ಲೂಕು ಆಸ್ಪತ್ರೆಗಳಲ್ಲಿ 18,000 ರೂ.ಗೆ ರಕ್ತ ಹೆಪ್ಪುಗಟ್ಟುವಿಕೆ ಕರಗಿಸುವ ಇಂಜೆಕ್ಷನ್‌ಗಳು ಲಭ್ಯವಾಗುವಂತೆ ಮಾಡಬೇಕೆಂದು ಕೋರಿದರು. ಹೀಗೆ ಮಾಡುವುದರಿಂದ ಗೋಲ್ಡನ್. ಅವರ್ ನಲ್ಲಿಯೇ, ಆರು ಗಂಟೆಗಳ ಒಳಗಾಗಿ ಜೀವಗಳನ್ನು ಉಳಿಸಬಹುದು. ಆರಂಭಿಕವಾಗಿ ಆಯುಷ್ಮಾನ್ ಭಾರತ್ ಅಡಿಯಲ್ಲಿ ಆಂಜಿಯೋಪ್ಲ್ಯಾಸ್ಟಿ ಮತ್ತು ಸ್ಟಂಟ್ ಅಳವಡಿಸುವುದಕ್ಕಾಗಿ ರೋಗಿಗಳನ್ನು ಹತ್ತಿರದ ನಗರಗಳಿಗೆ ಸ್ಥಳಾಂತರಿಸುವ ವ್ಯವಸ್ಥೆ ಮಾಡಬೇಕು ಎಂದು ಹೇಳಿದರು.

ಆಯುಷ್ಮಾನ್ ಭಾರತ್ ಅಡಿಯಲ್ಲಿ ಆಂಜಿಯೋಪ್ಲ್ಯಾಸ್ಟಿ ಒಳಗೊಳ್ಳಲ್ಪಟ್ಟಿದ್ದರೂ ಜೀವ ರಕ್ಷಕ ಔಷಧಿಗಳನ್ನು ಸಹ ಈ ಯೋಜನೆಯಲ್ಲಿ ಸೇರಿಸಬೇಕು ಎಂದು ಮನವಿ ಮಾಡಿದರು.

ಕಳೆದ ಹತ್ತು ವರ್ಷಗಳಲ್ಲಿ ರಾಷ್ಟ್ರದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ತೀವ್ರಗತಿಯ ಸುಧಾರಣೆಗೆಲೈ ಆಗುತ್ತಿವೆ. 2013-14ರಲ್ಲಿ ಆರೋಗ್ಯ ಕ್ಷೇತ್ರಕ್ಕೆ ಬಜೆಟ್ ಹಂಚಿಕೆ ಕೇವಲ 37,000 ಕೋಟಿ ರೂ.ಗಳಷ್ಟಿತ್ತು. ಈಗ ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಈ ಹಂಚಿಕೆ 99,058 ಕೋಟಿ ರೂ.ಗಳಿಗೆ ಏರಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಹೇಳಿದರು. ಎನ್‌ಡಿಎ ಹಾಗೂ ಯುಪಿಎ ಸರ್ಕಾರಗಳ ಅವಧಿಯಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಆಗಿರುವ ಬೆಳವಣಿಗೆಯನ್ನು ಹೋಲಿಸಿ ಮಾತನಾಡಿದರು.

ಗ್ರಾಮೀಣ ಆಸ್ಪತ್ರೆಗಳಲ್ಲಿ ವೈದ್ಯರು ಮತ್ತು ದಾದಿಯರ ಕೊರತೆ ನೀಗಿಸಿ
ಗ್ರಾಮೀಣ ಪ್ರದೇಶಗಳಲ್ಲಿ ಕೆಲಸ ಮಾಡುವ ಎಂಬಿಬಿಎಸ್ ವೈದ್ಯರ ವೇತನ ಹೆಚ್ಚಳಕ್ಕೆ ದೇವೇಗೌಡರು ಬಲವಾಗಿ ಪ್ರತಿಪಾದಿಸಿದರು. ಗ್ರಾಮೀಣ ವೈದ್ಯರು ಪ್ರಸ್ತುತ ತಿಂಗಳಿಗೆ 50,000-60,000 ರೂ. ವೇತನ ಪಡೆಯುತ್ತಿದ್ದಾರೆ. ಕಡಿಮೆ ಸಂಬಳದಿಂದಾಗಿ ವೈದ್ಯರು ಸಹ ಗ್ರಾಮೀಣ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸಲು ಸಿದ್ಧರಿಲ್ಲ. ಪಿಎಚ್‌ಸಿಗಳು, ಸಿಎಚ್‌ಸಿಗಳು ಮತ್ತು ತಾಲ್ಲೂಕು ಆಸ್ಪತ್ರೆಗಳಿಗೆ ಹೆಚ್ಚಿನ ವೃತ್ತಿಪರರನ್ನು ಆಕರ್ಷಿಸಲು ಸರ್ಕಾರ ಅವರ ವೇತನವನ್ನು ಕನಿಷ್ಠ 80,000-90,000 ರೂ.ಗೆ ಹೆಚ್ಚಿಸಬೇಕು ಎಂದು ಮಾಜಿ ಪ್ರಧಾನಿಗಳು ಒತ್ತಾಯಿಸಿದರು.

ಗ್ರಾಮೀಣ ಪ್ರದೇಶಗಳಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರಿಗೆ ಪ್ರೋತ್ಸಾಹ ಧನ ನೀಡಬೇಕು. ಗ್ರಾಮೀಣ ಆರೋಗ್ಯವನ್ನು ನಾವು ಸುಧಾರಿಸದೇ ಇದ್ದರೆ, ನಮ್ಮ ಹಳ್ಳಿಗಳು ಸರಿಯಾದ ವೈದ್ಯಕೀಯ ಆರೈಕೆಯ ಕೊರತೆಯಿಂದ ಬಳಲುತ್ತಲೇ ಇರುತ್ತವೆ ಎಂದು ಅವರು ಎಚ್ಚರಿಸಿದರು.

ಅದೇ ರೀತಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಮತ್ತು ದಾದಿಯರಿಗೆ ಕಡಿಮೆ ಸಂಬಳದ ಬಗ್ಗೆ ಅವರು ಕಳವಳ ವ್ಯಕ್ತಪಡಿಸಿದರು. ಅವರಿಗೆ ಪ್ರಸ್ತುತ ತಿಂಗಳಿಗೆ ಕೇವಲ 13,000 ರೂ. ವೇತನ ನೀಡಲಾಗುತ್ತದೆ. ಈ ವೇತನವು ದೈನಂದಿನ ವೇತನ ಮಾನದಂಡಕ್ಕಿಂತ ಕಡಿಮೆಯಾಗಿದೆ. ದಾದಿಯರು ತಮ್ಮ ಕುಟುಂಬಗಳನ್ನು ಉಳಿಸಿಕೊಳ್ಳಲು ಮತ್ತು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುವುದನ್ನು ಮುಂದುವರಿಸಲು ವೇತನವನ್ನು ಕನಿಷ್ಠ 20,000-28,000 ರೂ.ಗೆ ಹೆಚ್ಚಿಸಬೇಕು ಎಂದು ಕೋರಿದರು.

HPV ಲಸಿಕೆ ಮತ್ತು ಕ್ಯಾನ್ಸರ್ ತಡೆಗಟ್ಟುವಿಕೆ
ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು ರಾಷ್ಟ್ರೀಯ ರೋಗನಿರೋಧಕ ಕಾರ್ಯಕ್ರಮದಲ್ಲಿ HPV ಲಸಿಕೆಯನ್ನು ಸೇರಿಸಬೇಕೆಂದು ದೇವೇಗೌಡರು ಮನವಿ ಮಾಡಿದರು. ಗರ್ಭಕಂಠದ ಕ್ಯಾನ್ಸರ್ ಮಹಿಳೆಯರಲ್ಲಿ ಸಾಮಾನ್ಯವಾಗಿ ಕಂಡುಬರುವ ಕ್ಯಾನ್ಸರ್‌ಗಳಲ್ಲಿ ಒಂದಾಗಿದೆ. HPV ಲಸಿಕೆಯು ಅದರ ಸಂಭವವನ್ನು ಶೇ.80-90ರಷ್ಟು ಕಡಿಮೆ ಮಾಡುತ್ತದೆ. ರಾಷ್ಟ್ರೀಯ ರೋಗನಿರೋಧಕ ಕಾರ್ಯಕ್ರಮದ ಭಾಗವಾಗಿ ಪ್ರೌಢಶಾಲಾ ಹುಡುಗಿಯರಿಗೆ ಲಸಿಕೆ ಹಾಕುವುದು ಉತ್ತಮ ಪರಿಹಾರೋಪಾಯ ಆಗಿದೆ ಅವರು ಒತ್ತಿ ಹೇಳಿದರು.

ಗ್ರಾಮೀಣ ಆರೋಗ್ಯ ರಕ್ಷಣೆಯಲ್ಲಿ ಖಾಸಗಿ ವಲಯದ ಹೂಡಿಕೆಯನ್ನು ಪ್ರೋತ್ಸಾಹಿಸಿ
ಸೇವೆಯಲ್ಲಿ ಹಿಂದುಳಿದ ಪ್ರದೇಶಗಳಲ್ಲಿ ಆರೋಗ್ಯ ಸೇವೆಯನ್ನು ಸುಧಾರಿಸಲು, ಗ್ರಾಮೀಣ ಪ್ರದೇಶಗಳಲ್ಲಿ ಸಣ್ಣ ವಿಶೇಷ ಕೇಂದ್ರಗಳನ್ನು ಸ್ಥಾಪಿಸುವ ಖಾಸಗಿ ಆಸ್ಪತ್ರೆಗಳಿಗೆ ಐದು ವರ್ಷಗಳ ತೆರಿಗೆ ವಿನಾಯಿತಿ ನೀಡುವ ಬಗ್ಗೆ ದೇವೇಗೌಡರು ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದರು.

ಸಾರ್ವಜನಿಕ ಆರೋಗ್ಯ ಸೇವೆಯಲ್ಲಿ ನಿರ್ಣಾಯಕ ಪಾತ್ರ ವಹಿಸುವ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಉತ್ತಮ ಆರ್ಥಿಕ ನೆರವು ನೀಡಬೇಕೆಂದು ಅವರು ಒತ್ತಾಯಿಸಿದ ಅವರು, ಈ ಕಾರ್ಯಕರ್ತರು ನಮ್ಮ ಗ್ರಾಮೀಣ ಆರೋಗ್ಯ ವ್ಯವಸ್ಥೆಯ ಬೆನ್ನೆಲುಬು. ಜನರಿಗೆ ಸೇವೆ ಸಲ್ಲಿಸಲು ಅವರ ಪ್ರೇರಣೆ ಮತ್ತು ಬದ್ಧತೆಯನ್ನು ಖಚಿತಪಡಿಸಿಕೊಳ್ಳಲು ಅವರ ಗೌರವಧನವನ್ನು ನಿಯತಕಾಲಿಕವಾಗಿ ಪರಿಷ್ಕರಿಸಬೇಕು ಎಂದು ಅವರು ಸರ್ಕಾರದ ಗಮನ ಸೆಳೆದರು.

ಆಯುಷ್ಮಾನ್ ಭಾರತ್ ಯೋಜನೆ ಬಲಪಡಿಸಿ
ಆಯುಷ್ಮಾನ್ ಭಾರತ್ ಯೋಜನೆಯ ಯಶಸ್ಸನ್ನು ದೇವೇಗೌಡರು ಶ್ಲಾಘಿಸಿದರು. ಭಾರತದ ಜನಸಂಖ್ಯೆಯ ಶೇ.70ಕ್ಕೂ ಹೆಚ್ಚು ಜನರು ಈ ಯೋಜನೆಯ ಪ್ರಯೋಜನ ಪಡೆಯುತ್ತಿದ್ದಾರೆ. 2018ರಲ್ಲಿ ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಪ್ರಾರಂಭಿಸಲಾದ ಈ ಉಪಕ್ರಮವು ಲಕ್ಷಾಂತರ ಜನರಿಗೆ ಆರೋಗ್ಯ ಸೇವೆಯನ್ನು ಕಲ್ಪಿಸಿದೆ. ಬಡ ನಾಗರಿಕರು ಸಹ ಗುಣಮಟ್ಟದ ಆರೋಗ್ಯ ಸೇವೆಯನ್ನು ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮತ್ತು ಆರೋಗ್ಯ ಸಚಿವರನ್ನು ಅಭಿನಂದಿಸುತ್ತೇನೆ ಎಂದು ಅವರು ಹೇಳಿದರು.

TAGGED:Ayushman BharatH.D.Deve Gowdaಆಯುಷ್ಮಾನ್ ಭಾರತ್ಹೆಚ್.ಡಿ.ದೇವೇಗೌಡ
Share This Article
Facebook Whatsapp Whatsapp Telegram

Cinema news

gilli fan tattoo bigg boss
BBK 12: ಬಿಗ್‌ಬಾಸ್ ಗಿಲ್ಲಿಯ ಅಭಿಮಾನಿ ಕೈ ಮೇಲೆ ಟ್ಯಾಟೂ!
Cinema Latest Top Stories TV Shows
rakshitha rashika bigg boss
ನಿಂಗೆ ಗಿಲ್ಲಿ ಬೇಕು: ರಕ್ಷಿತಾ ವಿರುದ್ಧ ಗುಡುಗಿ ಕಳಪೆ ಕೊಟ್ಟ ರಾಶಿಕಾ
Cinema Latest Top Stories TV Shows
Samantha
`ಮಾ ಇಂಟಿ ಬಂಗಾರಂ’.. ಸಮಂತಾ ರಗಡ್ ಅವತಾರ..!
Cinema Latest South cinema Top Stories
Bigg Boss Ashwini Gowda and dhruvanth
ಇನ್ನೆರಡೇ ದಿನದಲ್ಲಿ ಮನೆಯಿಂದ ಇಬ್ರು ಹೋಗ್ತಾರೆ ಎಂದಿದ್ದಕ್ಕೆ ಬಿಕ್ಕಿ ಬಿಕ್ಕಿ ಅತ್ತ ಧ್ರುವಂತ್
Cinema Latest Top Stories TV Shows

You Might Also Like

Nadine de Klerks
Cricket

WPL 2026: ಬೌಲಿಂಗ್‌ನಲ್ಲಿ 4 ವಿಕೆಟ್‌, ಬ್ಯಾಟಿಂಗ್‌ನಲ್ಲಿ ಫಿಫ್ಟಿ- ಡಿ ಕ್ಲರ್ಕ್‌ ಆಲ್‌ರೌಂಡ್‌ ಆಟಕ್ಕೆ ಒಲಿದ ಜಯ – RCB ಶುಭಾರಂಭ

Public TV
By Public TV
5 hours ago
dandeli advocate ajit naik murder case
Court

ದಾಂಡೇಲಿ ವಕೀಲ ಅಜಿತ್ ನಾಯ್ಕ ಹತ್ಯೆ ಕೇಸ್;‌ ಆರೋಪಿ ದೋಷಿ ಅಂತ ಕೋರ್ಟ್‌ ತೀರ್ಪು

Public TV
By Public TV
6 hours ago
Sabarimala chief priest Kandararu Rajeev
Latest

ಶಬರಿಮಲೆ ಚಿನ್ನ ಕಳ್ಳತನ ಕೇಸ್ – SITಯಿಂದ ಪ್ರಧಾನ ಅರ್ಚಕ ಕಂದರಾರು ರಾಜೀವ್ ಅರೆಸ್ಟ್

Public TV
By Public TV
6 hours ago
Koppal Anjanadri Hills
Districts

ಅಂಜನಾದ್ರಿಗೆ ಭೇಟಿ ನೀಡಿದ ಟೀಂ ಇಂಡಿಯಾ ಕ್ರಿಕೆಟಿಗ ಇಶಾಂತ್ ಶರ್ಮಾ

Public TV
By Public TV
6 hours ago
Pavithra Gowda 1
Bengaluru City

ಪವಿತ್ರಗೌಡಗೆ ಜೈಲೂಟದಿಂದ ಚರ್ಮರೋಗ ಸಮಸ್ಯೆ – ಜ.12ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್

Public TV
By Public TV
7 hours ago
stone pelting in front of Reddys house over banner issue police lathi charge Ballari
Bellary

ಬಳ್ಳಾರಿ ಗಲಭೆ ಕೇಸ್; ಪ್ರಕರಣ ಸಿಐಡಿಗೆ ವಹಿಸಿ ಸರ್ಕಾರ ಆದೇಶ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?