ಬೆಂಗಳೂರು: ಭಾರತಕ್ಕೆ ಗೌರವ ತರುವ ಕೆಲಸವನ್ನ ಕರ್ನಾಟಕದಿಂದ ಇಸ್ರೋ (ISRO) ಮಾಡುತ್ತಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಸ್ರೋ ವಿಜ್ಞಾನಿಗಳು ಸಾಹಸ, ಪ್ರಯೋಗ ಎಲ್ಲ ಮಾಡುತ್ತಿದ್ದಾರೆ. ಇಸ್ರೋ ಕೈಗೊಂಡಿರುವ ಸೂರ್ಯಯಾನಕ್ಕೆ ಶುಭಕೋರುತ್ತೇನೆ. ಯಶಸ್ವಿಯಾಗಲಿ, ದೇಶದ ಜನ ಪ್ರಾರ್ಥನೆ ಮಾಡುತ್ತಿದ್ದಾರೆ. ಇಡೀ ವಿಶ್ವದಲ್ಲೇ ಇಸ್ರೋ ಶ್ರಮದ ಬಗ್ಗೆ ಮಾತಾಡುತ್ತಿದ್ದಾರೆ ಎಂದು ತಿಳಿಸಿದರು.
ಸೂರ್ಯಶಿಕಾರಿ: ಜುಲೈ 14 ರಂದು ಶ್ರೀಹರಿಕೋಟಾದ ಬಾಹ್ಯಾಕಾಶದಿಂದ ಉಡಾವಣೆಯಾಗಿದ್ದ ಚಂದ್ರಯಾನ-3 ಜಗತ್ತಿನೆಲ್ಲೆಡೆ ಸಂಚಲನ ಸೃಸ್ಠಿಸಿತ್ತು. ಸತತವಾಗಿ 41 ದಿನಗಳ ಕಾಲ ನಿರಂತರವಾಗಿ ಚಂದ್ರ ನತ್ತ ಕ್ರಮಿಸಿ ಚಂದ್ರನ ಅಂಗಳದಲ್ಲಿ ಇಳಿದು ಯಶಸ್ವಿ ಕಂಡಿತ್ತು. ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಚಂದ್ರನ ದಕ್ಷಿಣ ಧ್ರುವವನ್ನು ತಲುಪುವಲ್ಲಿ ಸಕ್ಸಸ್ ಹೆಜ್ಜೆಯನ್ನಿಟ್ಟಿದ್ದು, ಲ್ಯಾಂಡರ್, ರೋವರ್ ಚಂದ್ರನ ಅಧ್ಯಯನದಲ್ಲಿ ತೊಡಗಿದ್ದು, ಇಡೀ ದೇಶವೆ ತನ್ನತ ತಿರುಗಿ ನೋಡುವಂತೆ ಮಾಡಿದೆ. ಇದನ್ನೂ ಓದಿ: ಸೂರ್ಯ ಶಿಕಾರಿಗೆ ಕೌಂಟ್ಡೌನ್- ಬೆಳಗ್ಗೆ 11:50ಕ್ಕೆ ಆದಿತ್ಯ ಎಲ್1 ಉಡಾವಣೆ
ಇದರ ಬೆನ್ನಲ್ಲೇ ಇಸ್ರೋ ಸಂಸ್ಥೆ ಮತ್ತೊಂದು ಮಹತ್ವದ ಕಾರ್ಯ ಕೈಗೊಂಡಿದ್ದು, ಸೂರ್ಯನನ್ನು ಅಧ್ಯಯನ ಮಾಡಲು ಆದಿತ್ಯ ಐ1 ಮಿಷನ್ ಲಾಂಚ್ ಮಾಡುತ್ತಿದೆ. ಇದಕ್ಕಾಗಿ ಈಗಾಗಲೇ ಕ್ಷಣಗಣನೆ ಪ್ರಾರಂಭವಾಗಿದ್ದು, ಈ ಐತಿಹಾಸಿಕ ಕ್ಷಣಕ್ಕೆ ಜನ ಕಾಯುತ್ತಿದ್ದಾರೆ.
Web Stories