Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Search
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dakshina Kannada

ಕುಟುಂಬದಿಂದಲೇ ಹೊರ ಹಾಕಿದ್ದೇವೆ, 2 ವರ್ಷದಿಂದ ಸಂಪರ್ಕ ಇಲ್ಲ – ಅಕ್ಷತ್ ರಾವ್

Public TV
Last updated: January 22, 2020 1:42 pm
Public TV
Share
2 Min Read
aditya rao brother copy
SHARE

– ಬುದ್ಧಿ ಹೇಳಿದ್ದರೂ ಬದಲಾಗದ ಆದಿತ್ಯ ರಾವ್
– ಮನೆಗೆ ಬರಬೇಡ ಎಂದಿದ್ದ ತಂದೆ
– ಬೆದರಿಕೆ ಕರೆಯಿಂದ ತಂದೆಗೆ ನೋವಾಗಿದೆ

ಮಂಗಳೂರು: ಆದಿತ್ಯ ರಾವ್ ನನ್ನ ಅಣ್ಣ ಹೌದು, ಆದರೆ ಕಳೆದ ಬಾರಿ ಬಾಂಬ್ ಬೆದರಿಕೆ ಹಾಕಿದಾಗಲೇ ನಾವು ಆತನನ್ನು ಬಿಟ್ಟಿದ್ದೇವೆ. ಮನೆಗೆ ಬರಬೇಡ ಎಂದು ತಂದೆ ಸಹ ಹೇಳಿದ್ದಾರೆ. ಚಿಕ್ಕವನಿದ್ದಾಗ ಒಳ್ಳೆಯವನಾಗಿಯೇ ಇದ್ದ. ಇತ್ತೀಚೆಗೆ ಈ ರೀತಿ ಮಾಡುತ್ತಿದ್ದಾನೆ ಎಂದು ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಇಟ್ಟಿದ್ದ ಆರೋಪಿ ಆದಿತ್ಯ ರಾವ್ ಸಹೋದರ ಅಕ್ಷತ್ ರಾವ್ ವಿವರಿಸಿದ್ದಾರೆ.

ಮಂಗಳೂರಿನ ಚಿಲಿಂಬಿಯಲ್ಲಿ ಪ್ರತಿಕ್ರಿಯಿಸಿದ ಅವರು, ಬೆದರಿಕೆ ಕರೆ ಮಾಡಿದಾಗ ಆದಿತ್ಯನಿಗೆ ಬುದ್ಧಿ ಹೇಳಿದ್ದೇವೆ. ಬುದ್ಧಿ ಮಾತು ಕೇಳದಿದ್ದಾಗ ಅವನನ್ನು ಮನೆಯಿಂದಲೇ ಹೊರಗೆ ಹಾಕಿದ್ದೇವೆ. ಈಗ ನಮ್ಮ ಜೊತೆ ಅವನ ಸಂಪರ್ಕ ಇಲ್ಲ. ನಾವು ನಮ್ಮ ಪಾಡಿಗೆ ಕೆಲಸ ಮಾಡಿಕೊಂಡು ಬದುಕುತ್ತಿದ್ದೇವೆ. ಅವನ ಕೃತ್ಯಕ್ಕೆ ಜವಬ್ದಾರರಾಗಲು ನಮ್ಮಿಂದ ಸಾಧ್ಯವಿಲ್ಲ. ಕಳೆದ ಎರಡು ವರ್ಷಗಳಿಂದ ಅವನ ಜೊತೆ ನಮಗೆ ಸಂಪರ್ಕ ಇಲ್ಲ. ಅವನ ಪಾಡಿಗೆ ಅವನನ್ನು ಬಿಟ್ಟಿದ್ದೇವೆ. ನಾವು ಇಬ್ಬರೇ ಮಕ್ಕಳು, ಮೂಲತಃ ಮಣಿಪಾಲದವರಾದ ನಾವು ಮಂಗಳೂರಿಗೆ ಬಂದು 6 ತಿಂಗಳಾಯಿತು ಎಂದು ಮಾಹಿತಿ ನೀಡಿದರು.

ADITYA RAO arrest

ಚಿಕ್ಕಂದಿನಿಂದ ಸರಿಯಾಗಿಯೇ ಇದ್ದ, ನಂತರ ನಾನು 8ನೇ ತರಗತಿಯಿಂದ ಹಾಸ್ಟೆಲಿಗೆ ಸೇರಿಕೊಂಡೆ. ಆತನೂ ಸಹ ಹಾಸ್ಟೆಲ್ ಸೇರಿದ, ನಂತರ ನಾವಿಬ್ಬರೂ ಒಟ್ಟಿಗೆ ಇದ್ದದ್ದು ಕಡಿಮೆ. ಕುಟುಂಬದವರೆಲ್ಲ ಸೇರಿದಾಗ ನಾವೂ ಸೇರುತ್ತಿದ್ದೆವು. ಆದಿತ್ಯ ಎಂಬಿಎ ಮತ್ತು ಬಿಇ ವಿದ್ಯಾಭ್ಯಾಸ ಮಾಡಿದ್ದಾನೆ. ಇತ್ತೀಚೆಗೆ ಇಂತಹ ಕೃತ್ಯಗಳನ್ನು ಎಸಗುತ್ತಿದ್ದಾನೆ. ಅವನನ್ನು ಸರಿ ಮಾಡಲು ತಂದೆ ಸಹ ಪ್ರಯತ್ನಿಸಿದರು. ಆದರೆ ಸಾಧ್ಯವಾಗಲಿಲ್ಲ, ಹೀಗಾಗಿ ನಾವು ಅವನನನ್ನು ಬಿಟ್ಟಿದ್ದೇವೆ. ಕಳೆದ ಎರಡು ವರ್ಷಗಳಿಂದ ಅವನ ನಮ್ಮ ನಡುವೆ ಯಾವುದೇ ರೀತಿಯ ಸಂಪರ್ಕವಿಲ್ಲ ಎಂದು ತಿಳಿಸಿದರು.

ಕೊನೆಯದಾಗಿ 2019ರ ಫೆಬ್ರವರಿಯಲ್ಲಿ ತಾಯಿ ತೀರಿಕೊಂಡಾಗ ಆದಿತ್ಯಗೆ ಕರೆ ಮಾಡಿದ್ದೆವು. ಆಗ ಆತ ಚಿಕ್ಕಬಳ್ಳಾಪುರದ ಜೈಲಿನಲ್ಲಿದ್ದ. ಹಿರಿಯ ಮಗನಾದ ಹಿನ್ನೆಲೆಯಲ್ಲಿ ಆತನಿಗೆ ಕರೆ ಮಾಡಿ ವಿಚಾರ ತಿಳಿಸಿದ್ದೆವು. ಜೈಲಾಧಿಕಾರಿಗಳಿಗೆ ತಿಳಿಸಿ ಕಳುಹಿಸಲು ತಿಳಿಸಿದೆವು, ಆತ ಬರಲಿಲ್ಲ. ಹೀಗಾಗಿ ನಾನೇ ತಾಯಿಯ ಸಾವಿನ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಿದ್ದೆ. ಅವನ ಕೃತ್ಯದ ಬಗ್ಗೆ ತಿಳಿಯುವ ಆಸಕ್ತಿ ನಮಗಿಲ್ಲ. ಈ ವಿಚಾರದಲ್ಲಿ ನಾವು ಅವನಿಗೆ ಬೆಂಬಲ ನೀಡಿಲ್ಲ, ಪೊಲೀಸರ ಎಲ್ಲ ತನಿಖೆಗೆ ಸಹಕರಿಸಿದ್ದೇವೆ. ಅಲ್ಲದೆ ಆತನಿಗೆ ಜಾಮೀನು ಪಡೆಯಲು ಸಹಾಯ ಮಾಡಿಲ್ಲ, ಮಾಡುವುದೂ ಇಲ್ಲ. ಅವನ ಬಗ್ಗೆ ನಮಗೂ ಭಯವಿದೆ. ಹೀಗಾಗಿ ನಮ್ಮ ಕುಟುಂಬಕ್ಕೆ ಭದ್ರತೆ ನೀಡುವಂತೆ ಪೊಲೀಸರಲ್ಲಿ ಕೇಳಿಕೊಂಡಿದ್ದೇವೆ ಎಂದರು.

ಈ ವೇಳೆ ಮಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ಎನ್ನುವ ಪ್ರಶ್ನೆಗೆ, ಆತ ಎಲ್ಲಿದ್ದಾನೆ ಎನ್ನುವುದು ನಮಗೆ ಗೊತ್ತಿಲ್ಲ. ಮಾಧ್ಯಮಗಳಿಂದಾಗಿ  ಮಂಗಳೂರಿನಲ್ಲಿದ್ದಾನೆ ಎನ್ನುವ ವಿಚಾರ ತಿಳಿಯುತು ಎಂದು ಉತ್ತರಿಸಿದರು.

TAGGED:Aditya RaoAkshat RaobrotherMangalurupolicePublic TVಅಕ್ಷತ್ ರಾವ್ಆದಿತ್ಯ ರಾವ್ಪಬ್ಲಿಕ್ ಟಿವಿಪೊಲೀಸರುಮಂಗಳೂರುಸಹೋದರ
Share This Article
Facebook Whatsapp Whatsapp Telegram

You Might Also Like

Hubballi Reels
Dharwad

ರೀಲ್ಸ್‌ ರಾಜನಿಗೆ ಬಿಸಿ ಮುಟ್ಟಿಸಿದ ಹುಬ್ಬಳ್ಳಿ ಪೊಲೀಸ್‌ – ನಿಮಗೂ ಈ ಅನುಭವ ಆಗಿರಬೇಕಲ್ವಾ?

Public TV
By Public TV
7 minutes ago
CRIME
Crime

ಖಾಸಗಿ ಅಂಗದ ಮೇಲೆ ಕಾದ ಕಬ್ಬಿಣದಿಂದ ಬರೆ ಹಾಕಿ ಚಿತ್ರಹಿಂಸೆ – ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಬಲಿ

Public TV
By Public TV
20 minutes ago
Heavy Rain
Belgaum

ರಾಜ್ಯದ ಹಲವೆಡೆ ವರುಣಾರ್ಭಟ – ಭಾರೀ ಮಳೆಗೆ ರಸ್ತೆ ಮುಳುಗಡೆ, ಅವಾಂತರ ಸೃಷ್ಟಿ

Public TV
By Public TV
57 minutes ago
Temba Bavuma 2
Cricket

ಆಸೀಸ್‌ ಲಕ್ಕಿ ಚಾರ್ಮ್‌ಗಳಿಗೆ ಸೋಲಿನ ರುಚಿ ತೋರಿಸಿದ ಹರಿಣರು – ಹೇಜಲ್ವುಡ್‌ ಗೆಲುವಿನ ನಾಗಾಲೋಟಕ್ಕೆ ಬ್ರೇಕ್‌

Public TV
By Public TV
1 hour ago
Koppal nava brindavana
Districts

ರಘುವರ್ಯ ತೀರ್ಥರ ಮಧ್ಯಾರಾಧನೆ ಮಹೋತ್ಸವ ಸಂಪನ್ನ

Public TV
By Public TV
1 hour ago
WTC SA 3
Cricket

ದ. ಆಫ್ರಿಕಾ ಈಗ ʻವಿಶ್ವ ಟೆಸ್ಟ್‌ ಚಾಂಪಿಯನ್‌ʼ – 27 ವರ್ಷಗಳ ಬಳಿಕ ಐಸಿಸಿ ಪ್ರಶಸ್ತಿ ಬರ ನೀಗಿಸಿಕೊಂಡ ಹರಿಣರು

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?