Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್‌ ಗೆದ್ದಿದ್ಹೇಗೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್‌ ಗೆದ್ದಿದ್ಹೇಗೆ?

Latest

ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್‌ ಗೆದ್ದಿದ್ಹೇಗೆ?

Public TV
Last updated: December 8, 2022 4:02 pm
Public TV
Share
3 Min Read
Congress flag 2 e1573529275338
SHARE

ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ (Himachal Pradesh) ಒಟ್ಟು 68 ಸ್ಥಾನಗಳ ಪೈಕಿ 40 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಕಾಂಗ್ರೆಸ್ (Congress) ಬಿಜೆಪಿಗಿಂತ (BJP) ಗಮನಾರ್ಹ ಓಟ ಮುಂದುವರಿಸಿದೆ.

ಹಿಮಾಚಲ ಪ್ರದೇಶದಲ್ಲಿ ಪ್ರತಿ ಚುನಾವಣೆಯಲ್ಲಿ ಸರ್ಕಾರ ಬದಲಾಗುತ್ತಿರುತ್ತದೆ. 2017ರಲ್ಲಿ ಬಿಜೆಪಿ 44 ಸ್ಥಾನ ಹಾಗೂ ಕಾಂಗ್ರೆಸ್ 21 ಸ್ಥಾನ ಗಳಿಸಿತ್ತು. ಆದರೆ ಈ ಬಾರಿ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ. ಆಡಳಿತ ವೈಫಲ್ಯ, ಪಕ್ಷದೊಳಗೆ ಎದ್ದ ಬಂಡಾಯ ಬಿಜೆಪಿ ಹಿನ್ನಡೆಗೆ ಕಾರಣವಾಗಿದೆ. ಕಾಂಗ್ರೆಸ್ ನೀಡಿದ ಹೊಸ ಭರವಸೆಗಳಿಗೆ ಜನ ಮನಸೋತು ‘ಕೈ’ ಹಿಡಿದಿದ್ದಾರೆ. ಇದನ್ನೂ ಓದಿ: ಹಿಮಾಚಲದಲ್ಲಿ ಕಾಂಗ್ರೆಸ್‌ಗೆ ಅಧಿಕಾರ – ಛತ್ತೀಸ್‌ಗಢಕ್ಕೆ ಶಾಸಕರು ಶಿಫ್ಟ್‌

CONGRESS

ಅಧಿಕಾರ ವಿರೋಧಿ ಮತ್ತು ಹಾಲಿ ಸರ್ಕಾರವನ್ನು ಪುನರಾವರ್ತಿಸದಿರುವ ಗುಡ್ಡಗಾಡು ರಾಜ್ಯ ಸಂಪ್ರದಾಯ ಮುಂದುವರಿಕೆ
ಹಿಮಾಚಲ ಪ್ರದೇಶವು ಯಾವುದೇ ಆಡಳಿತ ಪಕ್ಷವನ್ನು ಮುಂದುವರಿಸಲು ಬಿಡಲ್ಲ ಎಂಬಂತಿದೆ. ಕಳೆದ 37 ವರ್ಷಗಳಿಂದ, ಅದು ಹಾಲಿ ಸರ್ಕಾರಕ್ಕೆ ಮತ ಹಾಕಿಲ್ಲ. ಇದು ಈ ಬಾರಿಯ ಚುನಾವಣೆ ಫಲಿತಾಂಶದಲ್ಲೂ ಗೋಚರಿಸಿದಂತೆ ಕಾಣುತ್ತಿದೆ. ರಾಜ್ಯದ ಇಬ್ಬರು ಜನಪ್ರಿಯ ಮುಖ್ಯಮಂತ್ರಿಗಳಾಗಿದ್ದ ಕಾಂಗ್ರೆಸ್‌ನ ವೀರಭದ್ರ ಸಿಂಗ್ ಮತ್ತು ಬಿಜೆಪಿಯ ಪ್ರೇಮ್ ಕುಮಾರ್ ಧುಮಾಲ್ ಕೂಡ ಈ ರಾಜಕೀಯ ಸಂಸ್ಕೃತಿಯನ್ನು ಬದಲಾಯಿಸಲು ವಿಫಲರಾಗಿದ್ದಾರೆ. ಈ ಚುನಾವಣೆಗಳಲ್ಲಿಯೂ ಮತದಾರರು ಈ ಸಂಪ್ರದಾಯಕ್ಕೆ ಬದ್ಧರಾಗಿರುವಂತೆ ತೋರುತ್ತಿದೆ.

bjp flag

ಆರು ಬಾರಿ ಮುಖ್ಯಮಂತ್ರಿಯಾಗಿದ್ದ ವೀರಭದ್ರ ಸಿಂಗ್ ಅವರು ಕಳೆದ ವರ್ಷ ನಿಧನರಾಗಿದ್ದು, ಪಕ್ಷದ ಬಗ್ಗೆ ಜನರಲ್ಲಿ ಮರುಕವುಂಟಾಗಿರುವುದು ಕಾಂಗ್ರೆಸ್ ಆಯ್ಕೆಗೆ ಪೂರಕವಾದಂತಿದೆ. ಗುಜರಾತ್‌ನಲ್ಲಿ ಬಿಜೆಪಿಗೆ ಅಪಾರ ಬೆಂಬಲದ ಅಲೆಯಿದ್ದರೂ, ಕಾಂಗ್ರೆಸ್ ಬಗೆಗೆ ಜನ ಸ್ವಲ್ಪ ಪ್ರೀತಿ ಉಳಿಸಿಕೊಂಡಿದ್ದಾರೆ. ಇಂದಿರಾ ಗಾಂಧಿ ಅವರು ನೀಡಿದ ಕೊಡುಗೆಯೇ ಇದಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಗುಜರಾತ್‌ ಚುನಾವಣೆ – ಕಾಂಗ್ರೆಸ್‌ ಹೀನಾಯ ಸೋಲಿಗೆ ಕಾರಣ ಏನು?

ಸರ್ಕಾರಿ ನೌಕರರ ಬೆಂಬಲ ಮತ್ತು ಹಳೆಯ ಪಿಂಚಣಿ ಯೋಜನೆ
ಹಿಮಾಚಲ ಪ್ರದೇಶದಲ್ಲಿ ಸರ್ಕಾರಿ ನೌಕರರ ಮತಬ್ಯಾಂಕ್ ಪ್ರಮುಖವಾಗಿದೆ. 2 ಲಕ್ಷಕ್ಕೂ ಹೆಚ್ಚು ಸಂಖ್ಯೆಯಲ್ಲಿದ್ದಾರೆ ಮತ್ತು ಶೇಕಡಾ 5 ರಷ್ಟು ಮತಗಳನ್ನು ಹೊಂದಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹಳೇ ಪಿಂಚಣಿ ಯೋಜನೆಯನ್ನು ಮತ್ತೆ ಜಾರಿಗೆ ತರಲಾಗುವುದು ಎಂದು ಪ್ರಚಾರದ ಸಂದರ್ಭದಲ್ಲಿ ಪ್ರಿಯಾಂಕಾ ಗಾಂಧಿ (Priyanka Gandhi Vadra) ಅವರು ಭರವಸೆ ನೀಡಿದ್ದರು. ಅದು ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ವರದಾನವಾಗಿದೆ.

Priyanka Gandhi Vadra

ಆಡಳಿತದಲ್ಲಿ ವೈಫಲ್ಯ ಮತ್ತು ಬಿಜೆಪಿಯಲ್ಲಿ ಬಂಡಾಯ
ಸಿಎಂ ಜೈ ರಾಮ್ ಠಾಕೂರ್ ಅವರು ಉತ್ತಮ ವ್ಯಕ್ತಿತ್ವದವರಾದರೂ, ತಮ್ಮ ಹತ್ತಿರವಿರುವ ಕುತಂತ್ರಿಗಳ ಗುಂಪಿಗೆ ಸರ್ಕಾರ ನಡೆಸಲು ಬಿಡುತ್ತಿದ್ದಾರೆ ಎಂಬ ಭಾವನೆ ಜನರಲ್ಲಿತ್ತು.

ಮುಖ್ಯ ಕಾರ್ಯದರ್ಶಿಗಳ ಆಗಾಗ್ಗೆ ಬದಲಾವಣೆ ಮಾಡಲಾಗುತ್ತಿತ್ತು. ಕಳೆದ ಐದು ವರ್ಷಗಳಲ್ಲಿ ರಾಜ್ಯವು ಏಳು ಅಧಿಕಾರಿಗಳನ್ನು ಹುದ್ದೆಯಲ್ಲಿ ನೋಡಿದೆ. ಪೊಲೀಸ್ ನೇಮಕಾತಿ ಹಗರಣ ಹಾಗೂ ಆರಿ ನಗರ ಪಂಚಾಯತ್ ಅಧಿಸೂಚನೆ ಮತ್ತು ಕರಡು ಶಿಮ್ಲಾ ಅಭಿವೃದ್ಧಿ ಯೋಜನೆಗಳ ವಿಚಾರದಲ್ಲಿ ತರಾತುರಿ ನಿರ್ಧಾರಗಳನ್ನು ತೆಗೆದುಕೊಳ್ಳಲಾಯಿತು. ಅಲ್ಲದೇ 11 ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸುವ ಮೂಲಕ ಬಿಜೆಪಿ ಆಡಳಿತ ವಿರೋಧಿ ಅಲೆಗೆ ಕಾರಣವಾಯಿತು. ಇದನ್ನೂ ಓದಿ: ಗುಜರಾತ್‌ನಲ್ಲಿ ಆಪ್‌ಗೆ ಬಿಜೆಪಿಯಿಂದಲೇ ಫಂಡಿಂಗ್: ಸಿದ್ದರಾಮಯ್ಯ

Agnipath scheme protest

ಅಗ್ನಿಪಥ್, ನಿರುದ್ಯೋಗ, ಬೆಲೆ ಏರಿಕೆ
ಹಿಮಾಚಲ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯ ಯುವಕರು ಪ್ರತಿ ವರ್ಷ ಸಶಸ್ತ್ರ ಪಡೆಗಳನ್ನು ಸೇರುತ್ತಾರೆ. ಕೇಂದ್ರ ಸರ್ಕಾರದ ‘ಅಗ್ನಿಪಥ್’ ಯೋಜನೆಯಲ್ಲಿ ಸೈನಿಕರನ್ನು ಕೇವಲ ನಾಲ್ಕು ವರ್ಷಗಳವರೆಗೆ ನೇಮಕ ಮಾಡಿಕೊಳ್ಳುವುದಾಗಿ ಹೇಳಿದ್ದು, ರಾಜ್ಯದಲ್ಲಿ ಯುವಜನರ ಆಕ್ರೋಶಕ್ಕೆ ಕಾರಣವಾಯಿತು. ಚುನಾವಣೆಯ ಹೊಸ್ತಿಲಲ್ಲಿ ಬಿಜೆಪಿ ಬೆಂಬಲಿಸಿದ್ದ ಮೇಜರ್ ವಿಜಯ್ ಮಂಕೋಟಿಯಾ ಅವರಂತಹ ಹಿರಿಯರು ಕೂಡ ಈ ಯೋಜನೆಯ ಬಗ್ಗೆ ಆತಂಕ ವ್ಯಕ್ತಪಡಿಸಿದ್ದರು. ಅಷ್ಟೇ ಅಲ್ಲ ಎಲ್‌ಪಿಜಿ ಸಿಲಿಂಡರ್ ದರ ಏರಿಕೆಯು ಮಹಿಳೆಯರ ವಿರೋಧಕ್ಕೆ ಕಾರಣವಾಗಿರಬಹುದು ಎಂಬ ವಿಶ್ಲೇಷಣೆ ಕೇಳಿ ಬಂದಿದೆ.

Live Tv
[brid partner=56869869 player=32851 video=960834 autoplay=true]

TAGGED:bjpcongressHimachal Pradesh Assembly Electionಕಾಂಗ್ರೆಸ್ಬಿಜೆಪಿಹಿಮಾಚಲ ಪ್ರದೇಶ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

Shehbaz Sharif
Latest

ಇಂಧನ ಹೊಡೆತಕ್ಕೆ ಪಾಕ್ ತತ್ತರ – ಶಾಲೆಗಳಿಗೆ 2 ವಾರ ರಜೆ, ಸರ್ಕಾರಿ ಕಚೇರಿಗಳಿಗೆ 4 ದಿನ ಕೆಲಸ

Public TV
By Public TV
3 minutes ago
Davangere South Ticket Fight Siraj Ahmed
Davanagere

ಜಮೀರ್‌ ಬಳಿ ಕ್ಷಮೆ ಕೇಳದೇ ಇದ್ರೆ ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಎಫೆಕ್ಟ್ ಆಗುತ್ತೆ: ಮಲ್ಲಿಕಾರ್ಜುನ್‌ಗೆ ಸಿರಾಜ್ ಅಹ್ಮದ್‌ ವಾರ್ನಿಂಗ್‌

Public TV
By Public TV
7 minutes ago
Raichur Couple Death
Districts

ನಿರ್ಮಾಣ ಹಂತದ ಮನೆಯ ಮೆಟ್ಟಿಲು ಕುಸಿದು ದಂಪತಿ ಸಾವು

Public TV
By Public TV
32 minutes ago
lpg sylender
Latest

ಇರಾನ್‌ ಯುದ್ಧ| ಎಲ್‌ಪಿಜಿ ಕನಿಷ್ಠ ಬುಕ್ಕಿಂಗ್‌ ಅವಧಿಯನ್ನು ಹೆಚ್ಚಿಸಿದ ಕೇಂದ್ರ

Public TV
By Public TV
2 hours ago
GBA Maheshwar Rao
Bengaluru City

ಪರಿಷ್ಕೃತ ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡಿದ ಜಿಬಿಎ

Public TV
By Public TV
2 hours ago
HD Devegowda
Karnataka

ರಾಜ್ಯ ಸರ್ಕಾರದಿಂದಲೇ ಎತ್ತಿನಹೊಳೆಗೆ ಆಮೆಗತಿ, ಮೇಕೆದಾಟು ವಿಳಂಬವಾಗುತ್ತಿದೆ: ಕಾಂಗ್ರೆಸ್‌ ವಿರುದ್ಧ ಹೆಚ್‌ಡಿಡಿ ಕಿಡಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?