Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನೀರಿಗಾಗಿ ಹಾಹಾಕಾರ – ಇನ್ನು 5ವರ್ಷ ಮಾತ್ರ ಬಾಕಿ.. ಈ ನಗರದಲ್ಲಿ ನೀರೇ ಇರಲ್ಲ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನೀರಿಗಾಗಿ ಹಾಹಾಕಾರ – ಇನ್ನು 5ವರ್ಷ ಮಾತ್ರ ಬಾಕಿ.. ಈ ನಗರದಲ್ಲಿ ನೀರೇ ಇರಲ್ಲ!

Latest

ನೀರಿಗಾಗಿ ಹಾಹಾಕಾರ – ಇನ್ನು 5ವರ್ಷ ಮಾತ್ರ ಬಾಕಿ.. ಈ ನಗರದಲ್ಲಿ ನೀರೇ ಇರಲ್ಲ!

Public TV
Last updated: July 16, 2025 7:35 am
Public TV
Share
3 Min Read
KABUL WATER
SHARE

ಅಫ್ಘಾನಿಸ್ತಾನದ (Afghanistan) ರಾಜಧಾನಿ ಕಾಬೂಲ್​ನಲ್ಲಿ (Kabul) ನೀರಿನ ತೀವ್ರ ಸಂಕಷ್ಟ ಎಂದುರಾಗಿದೆ. ಕೇವಲ 5 ವರ್ಷಗಳಲ್ಲಿ ಈ ಮಹಾನಗರ ನೀರಿಲ್ಲದೇ (Water) ಒಣಗಿ ಹೋಗುವ ಸಾಧ್ಯತೆ ಇದೆ ಎಂದು ಅಂತಾರಾಷ್ಟ್ರೀಯ ಸಂಸ್ಥೆ ಮರ್ಸಿ ಕಾರ್ಪ್ಸ್ ಎಚ್ಚರಿಕೆಯ ವರದಿಯನ್ನು ನೀಡಿದೆ.

ನೀರಿನ ಸಮಸ್ಯೆಯಿಂದಾಗಿ ಜನ ತಳ್ಳುವ ಗಾಡಿಗಳಲ್ಲಿ ನೀರು ಸಂಗ್ರಹಿಸಲು ಕಿಲೋ ಮೀಟರ್‌ಗಟ್ಟಲೇ ಅಲೆಯಬೇಕಾಗಿದೆ. ಕಾಬೂಲ್​ನಲ್ಲಿರುವ ತೋಟಗಳು, ಮರಗಳೆಲ್ಲಾ ಒಣಗಿ ಹೋಗುತ್ತಿವೆ. ಈಗಾಗಲೇ ನಗರದ ಅರ್ಧದಷ್ಟು ಬೋರ್‌ವೆಲ್‌ಗಳು ನೀರಿಲ್ಲದೆ ಬತ್ತಿ ಹೋಗಿವೆ. ನೀರಿನ ಕೊರತೆ ಆ ದೇಶಕ್ಕೆ ಮಾರಕವಾಗಿ ಕಾಡುತ್ತಿದೆ.

KABUL WATER 3

ನೀರಿನ ಕೊರತೆ ಉಂಟಾಗಿದ್ದು ಯಾಕೆ? 

ಅಫ್ಘಾನಿಸ್ಥಾನದಲ್ಲಿ ಹವಾಮಾನ ವೈಪರೀತ್ಯ ಹೆಚ್ಚಾಗಿದೆ. ಅದರ ಜೊತೆಗೆ ಜನ ಸಂಖ್ಯೆ ಭಾರೀ ಪ್ರಮಾಣದಲ್ಲಿ ಹೆಚ್ಚಾಗಿದೆ. 2001ರಲ್ಲಿ ಕಾಬೂಲ್​​ನಲ್ಲಿ 1 ಮಿಲಿಯನ್‌ಗಿಂತಲೂ ಕಡಿಮೆ ಜನರಿದ್ದರು. ಆದರೆ ಆ ಸಂಖ್ಯೆ ಈಗ 7 ಪಟ್ಟು ಹೆಚ್ಚಾಗಿದೆ! ಇದರಿಂದ ನೀರಿನ ಬಳಕೆ ಕೂಡ ಹೆಚ್ಚಾಗಿದೆ. ಇಲ್ಲಿನ ನೀರನ್ನೂ ಪ್ರತಿದಿನದ ದಿನಸಿ ಸಾಮಾನುಗಳಂತೆ ಕೊಂಡುಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ. ಆ ಮಟ್ಟದಲ್ಲಿ ನೀರಿನ ಬರ ಎದುರಾಗಿದೆ.

ಕಾಬೂಲ್​ ನಗರದಲ್ಲಿ 80% ಅಂತರ್ಜಲ ಇದೆ. ಆದರೆ​ ಆ ನೀರು  ಕಲುಷಿತಗೊಂಡಿದೆ. ಇಲ್ಲಿ ಹೆಚ್ಚಿನ ಮಟ್ಟದಲ್ಲಿ ಒಳಚರಂಡಿ, ಲವಣಾಂಶ ಮತ್ತು ಆರ್ಸೆನಿಕ್ ಸೇರಿರುವ ನೀರು ಸೇರಿಕೊಂಡಿದೆ. ಇದು ಕುಡಿಯಲು ಹಾಗೂ ಕೃಷಿಗೆ ಬಳಸಲು ಯೋಗ್ಯವಾಗಿಲ್ಲ. ಈಗಾಗಲೇ ಕಾಬೂಲ್​ನ ಜನ ನೀರಿನ ಸಮಸ್ಯೆಯಿಂದ ವಲಸೆ ಹೋಗುತ್ತಿದ್ದಾರೆ. 

KABUL WATER 2

ನೀರಿಗಾಗಿ ಪಂಜ್‌ಶೀರ್ ನದಿ ಪೈಪ್‌ಲೈನ್

ಪಂಜ್‌ಶೀರ್ ನದಿ ಪೈಪ್‌ಲೈನ್ ಯೋಜನೆ ಮೂಲಕ ಕಾಬೂಲ್‌ಗೆ ನೀರು ತರಲು ಪ್ರಯತ್ನಿಸಲಾಗುತ್ತಿದೆ. ಈ ಯೋಜನೆಯ ಕಾಮಗಾರಿ ಇನ್ನೂ ನಡೆಯುತ್ತಿದೆ. ಈ ಯೋಜನೆ ಪೂರ್ತಿಯಾದರೆ ನಗರದ ಅಂತರ್ಜಲ ಮಟ್ಟ  ಹೆಚ್ಚಾಗುವ ಸಾಧ್ಯತೆ ಕೂಡ ಇದೆ. ಈ ಯೋಜನೆಯ ಪೂರ್ತಿಗೊಳಿಸಲು ಬಜೆಟ್​ ಅನುಮೋದನೆಗಾಗಿ ಕಾಯಲಾಗುತ್ತಿದೆ.

ಕಾರ್ಪ್ಸ್ ವರದಿಯಲ್ಲಿ ಏನಿದೆ?

ಕಾಬೂಲ್‌ನಲ್ಲಿ ಪ್ರತೀ ವರ್ಷ ಬಳಸುವ ನೀರಿನ ಪ್ರಮಾಣವು ಪ್ರಕೃತಿಯಿಂದ ಮರುಪೂರಣಗೊಳ್ಳುವುದಕ್ಕಿಂತ 44 ಮಿಲಿಯನ್ ಘನ ಮೀಟರ್ ಹೆಚ್ಚಾಗಿದೆ. ಇದರ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳದಿದ್ದರೆ, ಕಾಬೂಲ್ ತೀವ್ರ ನೀರಿನ ಬಿಕ್ಕಟ್ಟನ್ನು ಎದುರಿಸಬೇಕಾಗುತ್ತದೆ. ಕಳೆದ ದಶಕದಲ್ಲಿ, ಕಾಬೂಲ್‌ನ ಅಂತರ್ಜಲ ಮಟ್ಟವು 25 ರಿಂದ 30 ಮೀಟರ್‌ಗಳಷ್ಟು (82 ರಿಂದ 98 ಅಡಿ) ಕುಸಿದಿದೆ. ವರ್ಷಕ್ಕೆ 44 ಮಿಲಿಯನ್ ಘನ ಮೀಟರ್‌ಗಳಷ್ಟು ನೀರನ್ನು ಹೊರತೆಗೆಯುತ್ತಿರುವುದೇ ಈ ಪರಿಸ್ಥಿತಿಗೆ ಕಾರಣವಾಗಿದೆ. ಇದು ಮುಂದುವರಿದರೆ, 2030 ರ ವೇಳೆಗೆ ಕಾಬೂಲ್‌ನ ಅಂತರ್ಜಲ ಮಟ್ಟ ಮತ್ತಷ್ಟು ಕುಸಿದು ನೀರೇ ಇಲ್ಲದ ನಗರವಾಗುತ್ತದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. 

ನೀರಿಲ್ಲದೆ ಕಾಬೂಲ್‌ನ ಜನರು ತಮ್ಮ ಮನೆಗಳನ್ನು ತೊರೆಯಬೇಕಾಗುತ್ತದೆ. ಈಗ ಕ್ರಮ ಕೈಗೊಳ್ಳದಿದ್ದರೆ, ದೇಶಾದ್ಯಂತ ವ್ಯಾಪಕ ವಲಸೆ ಮತ್ತು ಬಿಕ್ಕಟ್ಟು ಉಂಟಾಗುತ್ತದೆ. ಕಾಬೂಲ್‌ನ ಕುಡಿಯುವ ನೀರಿನ ಪ್ರಮುಖ ಮೂಲವಾಗಿದ್ದ ಭೂಗತ ಕೊಳವೆಬಾವಿಗಳಲ್ಲಿ ಅರ್ಧದಷ್ಟು ಈಗಾಗಲೇ ಬತ್ತಿಹೋಗಿವೆ. 2001 ರಿಂದ ಕಾಬೂಲ್‌ನ ಜನಸಂಖ್ಯೆ 7 ಪಟ್ಟು ಹೆಚ್ಚಾಗಿದೆ. ಇದರಿಂದ ನೀರಿನ ಸಮಸ್ಯೆ ಮತ್ತಷ್ಟು ಹೆಚ್ಚಾಗಿದೆ. ಪಂಜ್‌ಶೀರ್ ನದಿಯಿಂದ ನೀರಿನ ಪೈಪ್‌ಲೈನ್ ಯೋಜನೆಯು ಕಾಬೂಲ್‌ನ ಸುಮಾರು 20 ಲಕ್ಷ ಜನರಿಗೆ ನೀರನ್ನು ಒದಗಿಸಬಹುದು. ಆದರೆ ಇದಕ್ಕೆ ಭಾರೀ ಹಣ ಖರ್ಚುಮಾಡಬೇಕಿದೆ.

ಹಲವು ವರ್ಷಗಳಿಂದ ಮಳೆ ಕೊರತೆ 

ಕಾಬೂಲ್‌ನಲ್ಲಿ ಕಳೆದ ಕೆಲವು ವರ್ಷಗಳಿಂದ ಮಳೆ ತೀವ್ರವಾಗಿ ಕಡಿಮೆಯಾಗಿದೆ. ಅಂತರ್ಜಲವು ಮುಖ್ಯವಾಗಿ ಹಿಂದೂ ಕುಶ್ ಪರ್ವತಗಳಿಂದ ಬರುವ ಹಿಮ ಕರಗುವಿಕೆ ಮತ್ತು ಹಿಮನದಿಗಳಿಂದ ಮರುಪೂರಣಗೊಳ್ಳುತ್ತದೆ. ಆದರೆ ಅಕ್ಟೋಬರ್ 2023 ರಿಂದ ಜನವರಿ 2024 ರವರೆಗೆ, ಅಫ್ಘಾನಿಸ್ತಾನವು ತನ್ನ ಸಾಮಾನ್ಯ ಚಳಿಗಾಲದ ಮಳೆಯ ಕೇವಲ 45 ರಿಂದ 60% ಮಾತ್ರ ಪಡೆದಿದೆ. ಇದರ ಪರಿಣಾಮವಾಗಿ, ಭವಿಷ್ಯದಲ್ಲಿ ನೀರಿನ ಸಮಸ್ಯೆ ತೀವ್ರಗೊಳ್ಳುವ ಸಾಧ್ಯತೆಯಿದೆ.

ಈ ಬಿಕ್ಕಟ್ಟಿನ ಪರಿಣಾಮವಾಗಿ, ಕನಿಷ್ಠ 30 ಲಕ್ಷ ಜನರು ತಮ್ಮ ಮನೆಗಳನ್ನು ತೊರೆದು ಸ್ಥಳಾಂತರಗೊಳ್ಳಬೇಕಾಗಬಹುದು. ಯುನಿಸೆಫ್ ನೀಡಿರುವ ಮಾಹಿತಿ ಪ್ರಕಾರ, 50% ಬಾವಿಗಳು ಬತ್ತಿ ಹೋಗಿವೆ. ಇವು ನಗರದ ಹೆಚ್ಚಿನ ಜನರಿಗೆ ಕುಡಿಯುವ ನೀರಿನ ಮೂಲವಾಗಿದ್ದವು. ಈಗ ಜನರು ನೀರಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.  

TAGGED:afghanistanKabulKabul Water Crisiswater
Share This Article
Facebook Whatsapp Whatsapp Telegram

Cinema news

YASH 5
ಮುಂಬೈ ಏರ್‌ಪೋರ್ಟ್‌ನಲ್ಲಿ ಕ್ಯಾಮೆರಾ ಕಣ್ಣಿಗೆ ಬಿದ್ದ ರಾಕಿಭಾಯ್
Cinema Sandalwood
TVK Vijay
ಕರೂರು ಕಾಲ್ತುಳಿತ ಪ್ರಕರಣ – 7 ಗಂಟೆಗೂ ಹೆಚ್ಚು ಕಾಲ ನಟ ವಿಜಯ್‌ಗೆ CBI ಗ್ರಿಲ್
Bengaluru City Cinema Latest Sandalwood Top Stories
Toxic
ಯಶ್ ʻಟಾಕ್ಸಿಕ್ʼ ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ದೂರು!
Bengaluru City Cinema Districts Karnataka Latest Sandalwood Top Stories
Karikaada
ʻಕರಿಕಾಡʼ ಸಿನಿಮಾದ ಮಾದಕ ಸಾಂಗ್‌ಗೆ ಸೊಂಟ ಬಳುಕಿಸಿದ ಕೃತಿ ವರ್ಮಾ
Cinema Latest Sandalwood

You Might Also Like

Mallikarjun Kharge
Districts

ಡಿಕೆ ಶಿವಕುಮಾರ್‌ ನೀವು ಇಲ್ಲಿ ಹುಟ್ಟೋದು ಬೇಡ, ಅಭಿವೃದ್ಧಿ ಮಾಡಿದ್ರೆ ಸಾಕು: ಮಲ್ಲಿಕಾರ್ಜುನ ಖರ್ಗೆ

Public TV
By Public TV
31 minutes ago
M.P Renukacharya
Davanagere

ಬಿಎಸ್‌ವೈನ್ನು ಲಿಂಗಾಯತ ಮಹಾಸಭೆ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿ: ರೇಣುಕಾಚಾರ್ಯ

Public TV
By Public TV
37 minutes ago
Husband And Wife
Crime

8 ವರ್ಷಗಳಿಂದ ಸೆಕ್ಸ್‌ಗೆ ಒಪ್ಪದ ಪತ್ನಿಯನ್ನು ಕತ್ತು ಹಿಸುಕಿ ಕೊಂದ ಪತಿ

Public TV
By Public TV
1 hour ago
Shikhar Dhawan
Cricket

ಶಿಖರ್ ಧವನ್ ಎಂಗೇಜ್‌ – 2ನೇ ಮದ್ವೆಗೆ ರೆಡಿಯಾದ ʻಗಬ್ಬರ್‌ ಸಿಂಗ್‌ʼ

Public TV
By Public TV
1 hour ago
nipah virus
Latest

ಬಂಗಾಳದಲ್ಲಿ 2 ಶಂಕಿತ ನಿಫಾ ವೈರಸ್‌ ಪ್ರಕರಣ ಪತ್ತೆ – ಕೇಂದ್ರದಿಂದ ವಿಶೇಷ ತಂಡ ರವಾನೆ

Public TV
By Public TV
2 hours ago
Nayana Motamma
Chikkamagaluru

ನಯನಾ ಮೋಟಮ್ಮಗೆ ಅಶ್ಲೀಲ ಸಂದೇಶ – ಪುಂಡರ ವಿರುದ್ಧ ಗುಡುಗಿದ ಶಾಸಕಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?