21 ವರ್ಷಗಳ ಕಾಲ ಭಾರತಾಂಬೆಯ ಸೇವೆ ಸಲ್ಲಿಸಿ ಸ್ವಗ್ರಾಮಕ್ಕೆ ಬಂದ ಯೋಧನಿಗೆ ಅದ್ಧೂರಿ ಸ್ವಾಗತ

Public TV
1 Min Read
Yoddha Swagrama Devanur Village Pushparchane Hubli

ಹುಬ್ಬಳ್ಳಿ: ಸತತ 21 ವರ್ಷಗಳ ಕಾಲ ಭಾರತಾಂಬೆಯ ಸೇವೆ ಸಲ್ಲಿಸಿ ಸೇನಾ ನಿವೃತ್ತಿ ಹೊಂದಿ ಗ್ರಾಮಕ್ಕೆ ಆಗಮಿಸಿದ ಯೋಧನನ್ನು ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ದೇವನೂರು ಗ್ರಾಮಸ್ಥರು ಅದ್ಧೂರಿಯಾಗಿ ಬರಮಾಡಿಕೊಂಡಿದ್ದಾರೆ.

Yoddha Swagrama Devanur Village Pushparchane Hubli 3

ಗ್ರಾಮದ ಸುರೇಶ್ ಬಸಪ್ಪ ನೇಗಿನಾಳ ಅವರು ಸೇನಾ ನಿವೃತ್ತಿ ಹೊಂದಿ ಸ್ವಗ್ರಾಮಕ್ಕೆ ಆಗಮಿಸಿದರು. ಇವರು ಬಿಎಸ್‍ಎಫ್ ಯೋಧರಾಗಿ ಪಶ್ಚಿಮ ಬಂಗಾಳ, ಪಂಜಾಬ್, ಜಮ್ಮು-ಕಾಶ್ಮೀರ ಸೇರಿದಂತೆ ವಿವಿಧೆಡೆ ಸೇವೆ ಸಲ್ಲಿಸಿ ವಯೋನಿವೃತ್ತಿ ಪಡೆದಿದ್ದಾರೆ. ಪ್ರಸ್ತುತ ಅವರು ಸ್ವಗ್ರಾಮಕ್ಕೆ ಮರಳಿದ್ದು, ಅವರ ಬರುವಿಕೆಯನ್ನು ಇಡೀ ಗ್ರಾಮದ ಜನರು ಹಬ್ಬದ ರೀತಿ ಮಾಡಿದ್ದಾರೆ. ಇದನ್ನೂ ಓದಿ: RX100 ಬೈಕಿನ ಹುಟ್ಟುಹಬ್ಬ – ಗೆಳೆಯರಿಗೆ ಬಿಂದಾಸ್ ಪಾರ್ಟಿ ಕೊಟ್ಟ 

Yoddha Swagrama Devanur Village Pushparchane Hubli 1

ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಮೆರವಣಿಗೆ ನಡೆಸಿ ಜಯಘೋಷ ಹಾಕಿ, ಆರತಿ ಬೆಳಗಿ, ಕೇಕ್ ಕಟ್ ಮಾಡಿ, ಪುಷ್ಪಾರ್ಚನೆ ಮಾಡಿ ಅದ್ಧೂರಿಯಾಗಿ ಸ್ವಾಗತಿಸಿದರು.

Yoddha Swagrama Devanur Village Pushparchane Hubli 2

ಯೋಧನನ್ನು ತೆರೆದ ವಾಹನದಲ್ಲಿ ದೇವನೂರ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ಬಳಿಕ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಸುರೇಶ್ ಬಸಪ್ಪ ನೇಗಿನಾಳ ತಮ್ಮ ಸೇನಾ ದಿನಗಳ ನೆನಪು ಮಾಡಿಕೊಂಡರು. ಇದನ್ನೂ ಓದಿ:  ಮೂಢನಂಬಿಕೆಗೆ ಮಗಳು ಬಲಿ – ಹೊಡೆದು ಕೊಂದ ಪೋಷಕರು ಈಗ ಅಂದರ್‌ 

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *