ಕಾಂಗ್ರೆಸ್ ಮುಕ್ತ ಭಾರತದ ಬಳಿಕ ಮೋದಿ, ಅಮಿತ್ ಶಾ ಹೊಸ ಟಾರ್ಗೆಟ್ ಇದು

Public TV
2 Min Read
Modi AmitShah

ನವದೆಹಲಿ: ಕಾಂಗ್ರೆಸ್ ಮುಕ್ತ ಭಾರತದ ಗುರಿ ಹಾಕಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಯ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮುಂದೆ ಪ್ರಾದೇಶಿಕ ಪಕ್ಷ ಮುಕ್ತ ಭಾರತವನ್ನು ನಿರ್ಮಿಸುವ ಗುರಿಯನ್ನು ಹಾಕಿಕೊಂಡಿದ್ದಾರೆ.

ಪ್ರಾದೇಶಿಕ ಪಕ್ಷ ಮುಕ್ತ ಭಾರತದ ಮೊದಲ ಹೆಜ್ಜೆಯಾಗಿ ಒಡಿಶಾದಲ್ಲಿ ಭುವನೇಶ್ವರದಲ್ಲಿ ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಣಿಯನ್ನು ಆಯೋಜನೆ ಮಾಡಲಾಗಿತ್ತು ಎನ್ನುವ ವಿಚಾರ ಈಗ ತಿಳಿದು ಬಂದಿದೆ.

‘ನರೇಂದ್ರ ಮೋದಿ, ದಿ ಮ್ಯಾನ್ ದಿ ಟೈಮ್ಸ್’ ಪುಸ್ತಕ ಬರೆದ ನೀಲಾಂಜನ್ ಮುಖ್ಯೋಪಾಧ್ಯಯ್ ಈ ಎಕಾನಮಿಕ್ ಟೈಮ್ಸ್ ನಲ್ಲಿ ಈ ವಿಚಾರದ ಬಗ್ಗೆ ಬರೆದಿದ್ದಾರೆ. ಭುವನೇಶ್ವರದಲ್ಲಿ ಬಿಜೆಪಿ ತಳಮಟ್ಟದಲ್ಲಿ ಹೇಗೆ ಸಂಘಟನೆಗೊಳ್ಳಬೇಕು ಎನ್ನುವುದರ ಬಗ್ಗೆ ಚರ್ಚೆ ನಡೆಸಿದೆ ಎಂದು ಅವರು ಬರಹದಲ್ಲಿ ತಿಳಿಸಿದ್ದಾರೆ.

ಪಿ2ಪಿ ಟಾರ್ಗೆಟ್: ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಸುವರ್ಣಯುಗ ಆಗುವುದಿಲ್ಲ. ತಳಮಟ್ಟದಲ್ಲಿ ಪಕ್ಷ ಸಂಘಟನೆಯಾಗಬೇಕು. ತಳಮಟ್ಟದಲ್ಲಿ ಪಕ್ಷ ಸಂಘಟನೆಯಾಗಬೇಕಾದರೆ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಬೇಕು. ಪಿ2ಪಿ (ಪಂಚಾಯತ್ ಟು ಪಾರ್ಲಿಮೆಂಟ್) ಗುರಿಯನ್ನು ಹಾಕಿ ಯಶಸ್ವಿಯಾದಾಗ ಮಾತ್ರ ಬಿಜೆಪಿಯ ಸುವರ್ಣಯುಗವಾಗುತ್ತದೆ. ಈ ನಿಟ್ಟಿನಲ್ಲಿ ರಾಜ್ಯಗಳ ನಾಯಕರ ಗಮನಹರಿಸಬೇಕೆಂದು ಅಮಿತ್ ಶಾ ಕಾರ್ಯಕಾರಣಿಯಲ್ಲಿ ಹೇಳಿದ್ದಾರೆ.

ಪಂಚರಾಜ್ಯಗಳ ಚುನಾವಣೆಯಲ್ಲಿ ಉತ್ತರ ಪ್ರದೇಶ, ಗೋವಾ, ಮಣಿಪುರದಲ್ಲಿ ಬಿಜೆಪಿ ಸರ್ಕಾರಕ್ಕೆ ಅಧಿಕಾರಕ್ಕೆ ಬಂದ ಹಿನ್ನೆಲೆಯಲ್ಲಿ ಈಗ ಬಿಜೆಪಿ ಪಿ2ಪಿ ಗುರಿಯನ್ನು ಹಾಕಿಕೊಂಡಿದೆ.

ಒಡಿಶಾ, ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ, ಈಶಾನ್ಯದ ಕೆಲವು ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷಗಳು ಗಟ್ಟಿಯಾಗಿ ನೆಲೆ ನಿಂತಿರುವ ಪರಿಣಾಮ ಸರ್ಕಾರದ ಮಸೂದೆಗಳಿಗೆ ಈ ಪಕ್ಷಗಳಿಂದ ವಿರೋಧ ವ್ಯಕ್ತವಾಗುತ್ತಿದೆ. ಈ ಹಿನ್ನೆಯಲ್ಲಿ ಮುಂದೆ ಅಲ್ಲಿ ನಡೆಯಲಿರುವ ಸ್ಥಳೀಯ ಚುನಾವಣೆಗಳಲ್ಲಿ ಪಕ್ಷವನ್ನು ಅಧಿಕಾರಕ್ಕೆ ತಂದರೆ 2019ರ ಲೋಕಸಭಾ ಚುನಾವಣೆಯಲ್ಲಿ ಈ ರಾಜ್ಯಗಳಲ್ಲೂ ಹೆಚ್ಚಿನ ಸ್ಥಾನವನ್ನು ಗಳಿಸಬಹುದು ಎನ್ನುವ ಲೆಕ್ಕಾಚಾರವನ್ನು ಬಿಜೆಪಿ ಹಾಕಿಕೊಂಡಿದೆ.

ಸಂಘಟನೆಯ ವೇಳೆ ಈ ಹಿಂದಿನ ಹಿಂದುತ್ವ ಪ್ರಚಾರ ತಂತ್ರ ಮತ್ತು ಕೇಂದ್ರದ ಅಭಿವೃದ್ಧಿ ವಿಚಾರ, ಬಡವರ ಪರ ಪಕ್ಷ ಇದೆ ಎನ್ನುವುದನ್ನು ಬಿಂಬಿಸಿ ಈ ಎರಡು ವಿಚಾರಗಳ ಮಧ್ಯೆ ಸಮತೋಲನ ಕಾಯ್ದುಕೊಳ್ಳಬೇಕೆಂದು ನಾಯಕರಿಗೆ ತಿಳಿಸಲಾಗಿದೆ ಎಂದು ನೀಲಾಂಜನ್ ಮುಖ್ಯೋಪಾಧ್ಯಯ್ ತಮ್ಮ ಬರಹದಲ್ಲಿ ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಆಗುತ್ತಾ?
ನರೇಂದ್ರ ಮೋದಿ, ಅಮಿತ್ ಶಾ ಅವರ ಅಶ್ವಮೇಧದ ವಿಜಯದ ಕುದುರೆಯ ಆಟ ಕರ್ನಾಟಕದಲ್ಲಿ ನಡೆಯಲ್ಲ. ಈ ಕುದುರೆಯನ್ನು ಕರ್ನಾಟಕದಲ್ಲಿ ಜೆಡಿಎಸ್ ಕಟ್ಟಿಹಾಕುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ಈಗಾಗಲೇ ಹೇಳಿದ್ದಾರೆ. ಹೀಗಾಗಿ ಪ್ರಾದೇಶಿಕ ಪಕ್ಷವಾಗಿರುವ ಜೆಡಿಎಸ್ ಎಷ್ಟು ಸ್ಥಾನಗಳನ್ನು ಗೆಲ್ಲಲ್ಲಿದೆ? ಸರ್ಕಾರ ರಚನೆ ಮಾಡುತ್ತಾ? ಅಥವಾ ರಾಷ್ಟ್ರೀಯ ಪಕ್ಷಗಳ ಜೊತೆ ಕೈ ಜೋಡಿಸುತ್ತಾ? ಬಿಜೆಪಿ ಪ್ರಾದೇಶಿಕ ಪಕ್ಷ ಮುಕ್ತ ಭಾರತ ಕರ್ನಾಟಕದಲ್ಲಿ ಆಗುತ್ತಾ ಎನ್ನುವ ಪ್ರಶ್ನೆಗಳಿಗೆ 2018ರ ವಿಧಾನಸಭೆ ಚುನಾವಣೆಯ ಫಲಿತಾಂಶ ಉತ್ತರ ನೀಡಲಿದೆ.

ಇದನ್ನೂ ಓದಿ: ಕಾಂಗ್ರೆಸ್ ಮುಕ್ತ ಅನ್ನೋ ಬಿಜೆಪಿ ಸಂಸದರಿಂದ ಕೈಗೆ ಮತ!

bjp leaders 2 3

bjp leaders 2

bjp leaders

Share This Article
Leave a Comment

Leave a Reply

Your email address will not be published. Required fields are marked *