Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಭಿಮನ್ಯು ನೇತೃತ್ವದಲ್ಲಿ ಅರ್ಜುನನ ಕೊಂದಿದ್ದ ಆನೆ ಸೆರೆ ಕಾರ್ಯಾಚರಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Hassan | ಅಭಿಮನ್ಯು ನೇತೃತ್ವದಲ್ಲಿ ಅರ್ಜುನನ ಕೊಂದಿದ್ದ ಆನೆ ಸೆರೆ ಕಾರ್ಯಾಚರಣೆ

Hassan

ಅಭಿಮನ್ಯು ನೇತೃತ್ವದಲ್ಲಿ ಅರ್ಜುನನ ಕೊಂದಿದ್ದ ಆನೆ ಸೆರೆ ಕಾರ್ಯಾಚರಣೆ

Public TV
Last updated: January 12, 2024 11:21 pm
Public TV
Share
3 Min Read
abhimanyu team hassan
SHARE

ಹಾಸನ: ಜಿಲ್ಲೆಯ ವಿವಿಧ ಭಾಗಗಳಲ್ಲಿ ಉಪಟಳ ನೀಡುತ್ತಿರುವ ಕಾಡಾನೆಗಳ ಸೆರೆ ಕಾರ್ಯಾಚರಣೆ ನಾಳೆಯಿಂದ (ಶನಿವಾರ) ಮತ್ತೆ ಆರಂಭಗೊಳ್ಳಲಿದೆ. ದುಬಾರೆ ಹಾಗೂ ಮತ್ತಿಗೋಡು ಶಿಬಿರದಿಂದ ಎಂಟು ಸಾಕಾನೆಗಳು ಆಗಮಿಸಿದ್ದು, ಬೇಲೂರು ತಾಲ್ಲೂಕಿನ ಬಿಕ್ಕೋಡು ಗ್ರಾಮದ ಬಳಿಯ ಕ್ಯಾಂಪ್‌ನಲ್ಲಿವೆ. ಈ ಭಾರಿ ನುರಿತ ತಂಡದೊಂದಿಗೆ ಕಾರ್ಯಾಚರಣೆ ಆಗಮಿಸಲಿದ್ದು ಇದಕ್ಕೆ ಬೇಕಾದ ಎಲ್ಲಾ ರೀತಿಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ.

ಅಂಬಾರಿ ಹೊತ್ತಿದ್ದ ಅಭಿಮನ್ಯು (Abhimanyu Elephant) ಸಹ ಕಾಡಾನೆಗಳ ಹಂಟಿಂಗ್ ಕಾರ್ಯಾಚರಣೆಯಲ್ಲಿ ಭಾಗವಹಿಸಲಿದೆ. ಇಂದು (ಶುಕ್ರವಾರ) ಎಂಟು ಸಾಕಾನೆಗಳಿಗೆ ಪೂಜೆ ಸಲ್ಲಿಸಿ ಕಬ್ಬು, ಬೆಲ್ಲ ನೀಡಲಾಯಿತು. ಈಗಾಗಲೇ ಸೆರೆ ಹಿಡಿಯುವ ಸಲಗಗಳನ್ನು ಗುರುತಿಸಲಾಗಿದ್ದು, ನಾಳೆಯಿಂದ ಸತತ ಒಂದು ತಿಂಗಳ ಕಾಲ ಕಾರ್ಯಾಚರಣೆ ನಡೆಯಲಿದೆ. ಇದನ್ನೂ ಓದಿ: ಅರ್ಜುನನ ಕಾಲಿಗೆ ಗುಂಡೇಟು ಬಿದ್ದಿಲ್ಲ, ಯಾವುದೇ ಲೋಪ ಆಗಿಲ್ಲ: ವೈದ್ಯ ರಮೇಶ್ ಸ್ಪಷ್ಟನೆ

abhimanyu team hassan 1

ಮಲೆನಾಡ ಭಾಗದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾದ ಹಿನ್ನೆಲೆಯಲ್ಲಿ ನ.24 ರಿಂದ ಕ್ಯಾಪ್ಟನ್ ಅರ್ಜುನ ನೇತೃತ್ವದಲ್ಲಿ ಆರು ಸಾಕಾನೆಗಳೊಂದಿಗೆ ಕಾಡಾನೆ ಸೆರೆ ಕಾರ್ಯಾಚರಣೆ ಆರಂಭಿಸಲಾಗಿತ್ತು. ಎರಡು ಹೆಣ್ಣಾನೆಗಳಿಗೆ ರೇಡಿಯೋ ಕಾಲರ್ ಅಳವಡಿಸಿ ಅಲ್ಲಿಯೇ ಬಿಡಲಾಗಿದ್ದರೆ, ಮೂರು ಪುಂಡಾನೆಗಳನ್ನು ಹಿಡಿದು ರೇಡಿಯೋ ಕಾಲರ್ ಅಳವಡಿಸಿ ಬೇರೆಡೆಗೆ ಸ್ಥಳಾಂತರ ಮಾಡಲಾಗಿತ್ತು. ಡಿ.4 ರಂದು ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಮದಗಜದೊಂದಿಗೆ ಕಾದಾಟದ ವೇಳೆ ಅರ್ಜುನ ವೀರಮರಣವನ್ನಪ್ಪಿದ್ದ. ಅಂದಿನಿಂದ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿತ್ತು. ಇದೀಗ ಮತ್ತೆ ಕಾರ್ಯಾಚರಣೆ ಮುಂದುವರೆಸಲು ತೀರ್ಮಾನಿಸಲಾಗಿದ್ದು, ನಾಳೆಯಿಂದ ಕಾಡಾನೆ ಹಂಟಿಂಗ್ ಆಪರೇಷನ್ ಶುರುವಾಗಲಿದೆ.

ದುಬಾರೆ, ಮತ್ತಿಗೋಡು ಆನೆ ಶಿಬಿರದಿಂದ ಅಭಿಮನ್ಯು, ಪ್ರಶಾಂತ, ಸುಗ್ರೀವ, ಅಶ್ವತ್ಥಾಮ, ಕರ್ನಾಟಕ ಭೀಮ, ಹರ್ಷ, ಮಹೇಂದ್ರ, ಧನಂಜಯ ಸೇರಿ ಎಂಟು ಸಾಕಾನೆಗಳು ಬಿಕ್ಕೋಡು ಬಳಿಯ ಶಿಬಿರಕ್ಕೆ ಆಗಮಿಸಿದ್ದು ಇಂದು ಸ್ಥಳೀಯ ಶಾಸಕ ಹೆಚ್.ಕೆ.ಸುರೇಶ್ ಹಾಗೂ ಅರಣ್ಯ ಅಧಿಕಾರಿಗಳು ಪೂಜೆ ಸಲ್ಲಿಸಿ ಕಬ್ಬು, ಬೆಲ್ಲ ನೀಡಿ ಆಪರೇಷನ್ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು. ಬೇಲೂರು ಭಾಗದಲ್ಲಿ ಸುಮಾರು ನಲವತ್ತು ಕಾಡಾನೆಗಳ ಹಿಂಡು ಬೀಡುಬಿಟ್ಟಿದ್ದು ಕಳೆದ ವಾರ ಮತ್ತಾವರ ಗ್ರಾಮದಲ್ಲಿ ಕಾಡಾನೆ ದಾಳಿಗೆ ವಸಂತ ಎಂಬವರು ಬಲಿಯಾಗಿದ್ದರು. ಇದರಿಂದ ಸರ್ಕಾರದ ಹಾಗೂ ಅರಣ್ಯ ಇಲಾಖೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಆದ್ದರಿಂದ ನಾಳೆ ಬೇಲೂರು ಭಾಗದಿಂದಲೇ ನರಹಂತಕ ಆನೆ ಸೆರೆ ಹಿಡಿಯುವ ಕಾರ್ಯಾಚರಣೆ ಆರಂಭವಾಗಲಿದ್ದು, ಜನರಿಗೆ ಆಗುವ ಸಮಸ್ಯೆಯನ್ನು ನಿವಾರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕ ಹೆಚ್.ಕೆ.ಸುರೇಶ್ ಹೇಳಿದ್ದಾರೆ. ಇದನ್ನೂ ಓದಿ: ಸಕಲೇಶಪುರದ ಗ್ರಾಮದೊಳಗೆ ಎಂಟ್ರಿ ಕೊಟ್ಟ ಗಜಪಡೆ – ಗುಂಪಿನಲ್ಲಿ ಸೇರಿಕೊಂಡ ಅರ್ಜುನನನ್ನು ಕೊಂದ ಪುಂಡಾನೆ

Captain Elephant Arjuna killer

ಕಳೆದ ಬಾರಿಯ ಕಾರ್ಯಾಚರಣೆಯಲ್ಲಿ ಆದ ಅನಾಹುತದಿಂದ ಎಚ್ಚೆತ್ತಿರುವ ಅರಣ್ಯ ಇಲಾಖೆ ಅಧಿಕಾರಿಗಳು ಈ ಸಲ ನುರಿತ ಅರವಳಿಕೆ ವೈದ್ಯರು ಹಾಗೂ ತಂಡದೊಂದಿಗೆ ಕಾರ್ಯಾಚರಣೆ ನಡೆಸಲಿದ್ದಾರೆ. ಇಂದು ಪೂಜೆ ನಂತರ ಕಾರ್ಯಾಚರಣೆಯಲ್ಲಿ ಭಾಗಿಯಾಗುವ ತಂಡದ ಜೊತೆ ಹಿರಿಯ ಅರಣ್ಯ ಇಲಾಖೆ ಅಧಿಕಾರಿಗಳು ಸಮಾಲೋಚನೆ ನಡೆಸಿ ಅಗತ್ಯ ಸಲಹೆ ಹಾಗೂ ಎಚ್ಚರಿಕೆಯಿಂದ ಕಾರ್ಯಾಚರಣೆ ನಡೆಸುವಂತೆ ಸೂಚನೆ ನೀಡಿದರು. ಮೊದಲು ಮುಂದುವರಿದ ಭಾಗವಾಗಿ ಮೂರು ಸಲಗಗಳನ್ನು ಸೆರೆ ಹಿಡಿದು ಸ್ಥಳಾಂತರ ಮಾಡಲಾಗುವುದು. ನಂತರ ಹೆಚ್ಚು ಉಪಟಳ ನೀಡುತ್ತಿರುವ ಕಾಡಾನೆಗಳ ಜೊತೆಗೆ ಅರ್ಜುನನ ಸಾವಿಗೆ ಕಾರಣವಾದ ನರಹಂತಕ ಆನೆಯನ್ನು ಸೆರೆ ಹಿಡಿದು ಸ್ಥಳಾಂತರ ಮಾಡಲಾಗುವುದು. ಇದಕ್ಕೆ ಬೇಕಾದಂತಹ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದ್ದು ಎಲ್ಲರೂ ಸಹಕಾರ ನೀಡಬೇಕೆಂದು ಸಿಸಿಎಫ್ ರವಿಶಂಕರ್ ಮನವಿ ಮಾಡಿದ್ದಾರೆ.

ಕಳೆದ ಎರಡು ದಶಗಳಿಂದ ಸಕಲೇಶಪುರ, ಆಲೂರು ಹಾಗೂ ನಾಲ್ಕೈದು ವರ್ಷಗಳಿಂದ ಬೇಲೂರು ಭಾಗದಲ್ಲಿ ಗಜಪಡೆ ಗಲಾಟೆ ಮಿತಿಮೀರಿದ್ದು ರೈತರು ಹಾಗೂ ಕಾಫಿ ಬೆಳೆಗಾರರು ಕಂಗಾಲಾಗಿ ಹೋಗಿದ್ದಾರೆ. ಆದರೆ ಸರ್ಕಾರಗಳು ಒಂದೆರಡು ಕಾಡಾನೆಗಳನ್ನು ಹಿಡಿದು ಸ್ಥಳಾಂತರ ಮಾಡಿದರೆ ಸಾಲದು. ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡು ಹಿಡಿಯಬೇಕೆಂಬುದು ಎಲ್ಲರ ಒಕ್ಕೊರಲ ಒತ್ತಾಯವಾಗಿದೆ. ಆದರೆ ಭರವಸೆಗಳನ್ನು ನೀಡುತ್ತಲೇ ಇರುವ ಸರ್ಕಾರ ಹಾಗೂ ಅರಣ್ಯ ಇಲಾಖೆ ಮಲೆನಾಡು ಭಾಗದ ಜನರ ನೆಮ್ಮದಿ ಕೆಡಿಸಿರುವ ಪುಂಡಾನೆಗಳನ್ನು ಸೆರೆ ಹಿಡಿದು ಸ್ಥಳಾಂತರ ಮಾಡುವ ಮೂಲಕ ತಾತ್ಕಾಲಿಕ ಪರಿಹಾರ ನೀಡಲು ಮುಂದಾಗಿವೆ. ಇದನ್ನೂ ಓದಿ: ಅರ್ಜುನನ ದುರಂತ ಅಂತ್ಯ – ಕಾಡಾನೆ ಸೆರೆ ಕಾರ್ಯಾಚರಣೆ ಸ್ಥಗಿತ

TAGGED:Abhimanyu elephantArjuna Elephantdasara elephanthassanಅಭಿಮನ್ಯುಅರ್ಜುನ ಆನೆದಸರಾ ಆನೆಹಾಸನ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood

You Might Also Like

Ahmedabad Modi Stadium
Cricket

ಸತತ 13 ಪಂದ್ಯ ಗೆಲ್ಲುವ ಕನಸು ಭಗ್ನ – ಸೋತರೂ ಮೊದಲ ಸ್ಥಾನದಲ್ಲಿದೆ ಭಾರತ

Public TV
By Public TV
7 minutes ago
Ind vs Sa 2
Cricket

ಕಳಪೆ ಬೌಲಿಂಗ್‌, ಬ್ಯಾಟಿಂಗ್‌ಗೆ ಬೆಲೆತೆತ್ತ ಭಾರತ – ದಕ್ಷಿಣ ಆಫ್ರಿಕಾ ವಿರುದ್ಧ ಹೀನಾಯ ಸೋಲು

Public TV
By Public TV
21 minutes ago
suspicions about his pregnant wife
Bengaluru City

ಹೆರಿಗೆ ನಂತರ ಮನೆಗೆ ಬಂದ ಪತ್ನಿಯನ್ನು ಹೊರ ಹಾಕಿದ ಪತಿ ವಿರುದ್ಧ ಕೇಸ್‌

Public TV
By Public TV
1 hour ago
Jasprit Bumrah 2
Cricket

ವಿಶ್ವಕಪ್‌ನಲ್ಲಿ ಹೊಸ ದಾಖಲೆ ಬರೆದ ಬೂಮ್​ ಬೂಮ್​ ಬೂಮ್ರಾ

Public TV
By Public TV
2 hours ago
Daughter in law prays to God for mother in law to die Raibag Temple 1
Belgaum

ಅತ್ತೆ ಸಾಯಲಿ ಎಂದು ದೇವರ ಮುಂದೆ ಸೊಸೆಯಿಂದ ಪ್ರಾರ್ಥನೆ

Public TV
By Public TV
2 hours ago
US Secret Service agents killed man trying to unlawfully enter DonaldTrumps Mar a Lago resort in West Palm Beach Florida
Latest

ಫ್ಲೋರಿಡಾದಲ್ಲಿರುವ ಟ್ರಂಪ್‌ ರೆಸಾರ್ಟ್‌ಗೆ ನುಗ್ಗಿದ್ದ ಯವಕನ ಹತ್ಯೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?