Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಭಿಮನ್ಯು ನೇತೃತ್ವದಲ್ಲಿ ಅರ್ಜುನನ ಕೊಂದಿದ್ದ ಆನೆ ಸೆರೆ ಕಾರ್ಯಾಚರಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Hassan | ಅಭಿಮನ್ಯು ನೇತೃತ್ವದಲ್ಲಿ ಅರ್ಜುನನ ಕೊಂದಿದ್ದ ಆನೆ ಸೆರೆ ಕಾರ್ಯಾಚರಣೆ

Hassan

ಅಭಿಮನ್ಯು ನೇತೃತ್ವದಲ್ಲಿ ಅರ್ಜುನನ ಕೊಂದಿದ್ದ ಆನೆ ಸೆರೆ ಕಾರ್ಯಾಚರಣೆ

Public TV
Last updated: January 12, 2024 11:21 pm
Public TV
Share
3 Min Read
abhimanyu team hassan
SHARE

ಹಾಸನ: ಜಿಲ್ಲೆಯ ವಿವಿಧ ಭಾಗಗಳಲ್ಲಿ ಉಪಟಳ ನೀಡುತ್ತಿರುವ ಕಾಡಾನೆಗಳ ಸೆರೆ ಕಾರ್ಯಾಚರಣೆ ನಾಳೆಯಿಂದ (ಶನಿವಾರ) ಮತ್ತೆ ಆರಂಭಗೊಳ್ಳಲಿದೆ. ದುಬಾರೆ ಹಾಗೂ ಮತ್ತಿಗೋಡು ಶಿಬಿರದಿಂದ ಎಂಟು ಸಾಕಾನೆಗಳು ಆಗಮಿಸಿದ್ದು, ಬೇಲೂರು ತಾಲ್ಲೂಕಿನ ಬಿಕ್ಕೋಡು ಗ್ರಾಮದ ಬಳಿಯ ಕ್ಯಾಂಪ್‌ನಲ್ಲಿವೆ. ಈ ಭಾರಿ ನುರಿತ ತಂಡದೊಂದಿಗೆ ಕಾರ್ಯಾಚರಣೆ ಆಗಮಿಸಲಿದ್ದು ಇದಕ್ಕೆ ಬೇಕಾದ ಎಲ್ಲಾ ರೀತಿಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ.

ಅಂಬಾರಿ ಹೊತ್ತಿದ್ದ ಅಭಿಮನ್ಯು (Abhimanyu Elephant) ಸಹ ಕಾಡಾನೆಗಳ ಹಂಟಿಂಗ್ ಕಾರ್ಯಾಚರಣೆಯಲ್ಲಿ ಭಾಗವಹಿಸಲಿದೆ. ಇಂದು (ಶುಕ್ರವಾರ) ಎಂಟು ಸಾಕಾನೆಗಳಿಗೆ ಪೂಜೆ ಸಲ್ಲಿಸಿ ಕಬ್ಬು, ಬೆಲ್ಲ ನೀಡಲಾಯಿತು. ಈಗಾಗಲೇ ಸೆರೆ ಹಿಡಿಯುವ ಸಲಗಗಳನ್ನು ಗುರುತಿಸಲಾಗಿದ್ದು, ನಾಳೆಯಿಂದ ಸತತ ಒಂದು ತಿಂಗಳ ಕಾಲ ಕಾರ್ಯಾಚರಣೆ ನಡೆಯಲಿದೆ. ಇದನ್ನೂ ಓದಿ: ಅರ್ಜುನನ ಕಾಲಿಗೆ ಗುಂಡೇಟು ಬಿದ್ದಿಲ್ಲ, ಯಾವುದೇ ಲೋಪ ಆಗಿಲ್ಲ: ವೈದ್ಯ ರಮೇಶ್ ಸ್ಪಷ್ಟನೆ

abhimanyu team hassan 1

ಮಲೆನಾಡ ಭಾಗದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾದ ಹಿನ್ನೆಲೆಯಲ್ಲಿ ನ.24 ರಿಂದ ಕ್ಯಾಪ್ಟನ್ ಅರ್ಜುನ ನೇತೃತ್ವದಲ್ಲಿ ಆರು ಸಾಕಾನೆಗಳೊಂದಿಗೆ ಕಾಡಾನೆ ಸೆರೆ ಕಾರ್ಯಾಚರಣೆ ಆರಂಭಿಸಲಾಗಿತ್ತು. ಎರಡು ಹೆಣ್ಣಾನೆಗಳಿಗೆ ರೇಡಿಯೋ ಕಾಲರ್ ಅಳವಡಿಸಿ ಅಲ್ಲಿಯೇ ಬಿಡಲಾಗಿದ್ದರೆ, ಮೂರು ಪುಂಡಾನೆಗಳನ್ನು ಹಿಡಿದು ರೇಡಿಯೋ ಕಾಲರ್ ಅಳವಡಿಸಿ ಬೇರೆಡೆಗೆ ಸ್ಥಳಾಂತರ ಮಾಡಲಾಗಿತ್ತು. ಡಿ.4 ರಂದು ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಮದಗಜದೊಂದಿಗೆ ಕಾದಾಟದ ವೇಳೆ ಅರ್ಜುನ ವೀರಮರಣವನ್ನಪ್ಪಿದ್ದ. ಅಂದಿನಿಂದ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿತ್ತು. ಇದೀಗ ಮತ್ತೆ ಕಾರ್ಯಾಚರಣೆ ಮುಂದುವರೆಸಲು ತೀರ್ಮಾನಿಸಲಾಗಿದ್ದು, ನಾಳೆಯಿಂದ ಕಾಡಾನೆ ಹಂಟಿಂಗ್ ಆಪರೇಷನ್ ಶುರುವಾಗಲಿದೆ.

ದುಬಾರೆ, ಮತ್ತಿಗೋಡು ಆನೆ ಶಿಬಿರದಿಂದ ಅಭಿಮನ್ಯು, ಪ್ರಶಾಂತ, ಸುಗ್ರೀವ, ಅಶ್ವತ್ಥಾಮ, ಕರ್ನಾಟಕ ಭೀಮ, ಹರ್ಷ, ಮಹೇಂದ್ರ, ಧನಂಜಯ ಸೇರಿ ಎಂಟು ಸಾಕಾನೆಗಳು ಬಿಕ್ಕೋಡು ಬಳಿಯ ಶಿಬಿರಕ್ಕೆ ಆಗಮಿಸಿದ್ದು ಇಂದು ಸ್ಥಳೀಯ ಶಾಸಕ ಹೆಚ್.ಕೆ.ಸುರೇಶ್ ಹಾಗೂ ಅರಣ್ಯ ಅಧಿಕಾರಿಗಳು ಪೂಜೆ ಸಲ್ಲಿಸಿ ಕಬ್ಬು, ಬೆಲ್ಲ ನೀಡಿ ಆಪರೇಷನ್ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು. ಬೇಲೂರು ಭಾಗದಲ್ಲಿ ಸುಮಾರು ನಲವತ್ತು ಕಾಡಾನೆಗಳ ಹಿಂಡು ಬೀಡುಬಿಟ್ಟಿದ್ದು ಕಳೆದ ವಾರ ಮತ್ತಾವರ ಗ್ರಾಮದಲ್ಲಿ ಕಾಡಾನೆ ದಾಳಿಗೆ ವಸಂತ ಎಂಬವರು ಬಲಿಯಾಗಿದ್ದರು. ಇದರಿಂದ ಸರ್ಕಾರದ ಹಾಗೂ ಅರಣ್ಯ ಇಲಾಖೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಆದ್ದರಿಂದ ನಾಳೆ ಬೇಲೂರು ಭಾಗದಿಂದಲೇ ನರಹಂತಕ ಆನೆ ಸೆರೆ ಹಿಡಿಯುವ ಕಾರ್ಯಾಚರಣೆ ಆರಂಭವಾಗಲಿದ್ದು, ಜನರಿಗೆ ಆಗುವ ಸಮಸ್ಯೆಯನ್ನು ನಿವಾರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕ ಹೆಚ್.ಕೆ.ಸುರೇಶ್ ಹೇಳಿದ್ದಾರೆ. ಇದನ್ನೂ ಓದಿ: ಸಕಲೇಶಪುರದ ಗ್ರಾಮದೊಳಗೆ ಎಂಟ್ರಿ ಕೊಟ್ಟ ಗಜಪಡೆ – ಗುಂಪಿನಲ್ಲಿ ಸೇರಿಕೊಂಡ ಅರ್ಜುನನನ್ನು ಕೊಂದ ಪುಂಡಾನೆ

Captain Elephant Arjuna killer

ಕಳೆದ ಬಾರಿಯ ಕಾರ್ಯಾಚರಣೆಯಲ್ಲಿ ಆದ ಅನಾಹುತದಿಂದ ಎಚ್ಚೆತ್ತಿರುವ ಅರಣ್ಯ ಇಲಾಖೆ ಅಧಿಕಾರಿಗಳು ಈ ಸಲ ನುರಿತ ಅರವಳಿಕೆ ವೈದ್ಯರು ಹಾಗೂ ತಂಡದೊಂದಿಗೆ ಕಾರ್ಯಾಚರಣೆ ನಡೆಸಲಿದ್ದಾರೆ. ಇಂದು ಪೂಜೆ ನಂತರ ಕಾರ್ಯಾಚರಣೆಯಲ್ಲಿ ಭಾಗಿಯಾಗುವ ತಂಡದ ಜೊತೆ ಹಿರಿಯ ಅರಣ್ಯ ಇಲಾಖೆ ಅಧಿಕಾರಿಗಳು ಸಮಾಲೋಚನೆ ನಡೆಸಿ ಅಗತ್ಯ ಸಲಹೆ ಹಾಗೂ ಎಚ್ಚರಿಕೆಯಿಂದ ಕಾರ್ಯಾಚರಣೆ ನಡೆಸುವಂತೆ ಸೂಚನೆ ನೀಡಿದರು. ಮೊದಲು ಮುಂದುವರಿದ ಭಾಗವಾಗಿ ಮೂರು ಸಲಗಗಳನ್ನು ಸೆರೆ ಹಿಡಿದು ಸ್ಥಳಾಂತರ ಮಾಡಲಾಗುವುದು. ನಂತರ ಹೆಚ್ಚು ಉಪಟಳ ನೀಡುತ್ತಿರುವ ಕಾಡಾನೆಗಳ ಜೊತೆಗೆ ಅರ್ಜುನನ ಸಾವಿಗೆ ಕಾರಣವಾದ ನರಹಂತಕ ಆನೆಯನ್ನು ಸೆರೆ ಹಿಡಿದು ಸ್ಥಳಾಂತರ ಮಾಡಲಾಗುವುದು. ಇದಕ್ಕೆ ಬೇಕಾದಂತಹ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದ್ದು ಎಲ್ಲರೂ ಸಹಕಾರ ನೀಡಬೇಕೆಂದು ಸಿಸಿಎಫ್ ರವಿಶಂಕರ್ ಮನವಿ ಮಾಡಿದ್ದಾರೆ.

ಕಳೆದ ಎರಡು ದಶಗಳಿಂದ ಸಕಲೇಶಪುರ, ಆಲೂರು ಹಾಗೂ ನಾಲ್ಕೈದು ವರ್ಷಗಳಿಂದ ಬೇಲೂರು ಭಾಗದಲ್ಲಿ ಗಜಪಡೆ ಗಲಾಟೆ ಮಿತಿಮೀರಿದ್ದು ರೈತರು ಹಾಗೂ ಕಾಫಿ ಬೆಳೆಗಾರರು ಕಂಗಾಲಾಗಿ ಹೋಗಿದ್ದಾರೆ. ಆದರೆ ಸರ್ಕಾರಗಳು ಒಂದೆರಡು ಕಾಡಾನೆಗಳನ್ನು ಹಿಡಿದು ಸ್ಥಳಾಂತರ ಮಾಡಿದರೆ ಸಾಲದು. ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡು ಹಿಡಿಯಬೇಕೆಂಬುದು ಎಲ್ಲರ ಒಕ್ಕೊರಲ ಒತ್ತಾಯವಾಗಿದೆ. ಆದರೆ ಭರವಸೆಗಳನ್ನು ನೀಡುತ್ತಲೇ ಇರುವ ಸರ್ಕಾರ ಹಾಗೂ ಅರಣ್ಯ ಇಲಾಖೆ ಮಲೆನಾಡು ಭಾಗದ ಜನರ ನೆಮ್ಮದಿ ಕೆಡಿಸಿರುವ ಪುಂಡಾನೆಗಳನ್ನು ಸೆರೆ ಹಿಡಿದು ಸ್ಥಳಾಂತರ ಮಾಡುವ ಮೂಲಕ ತಾತ್ಕಾಲಿಕ ಪರಿಹಾರ ನೀಡಲು ಮುಂದಾಗಿವೆ. ಇದನ್ನೂ ಓದಿ: ಅರ್ಜುನನ ದುರಂತ ಅಂತ್ಯ – ಕಾಡಾನೆ ಸೆರೆ ಕಾರ್ಯಾಚರಣೆ ಸ್ಥಗಿತ

TAGGED:Abhimanyu elephantArjuna Elephantdasara elephanthassanಅಭಿಮನ್ಯುಅರ್ಜುನ ಆನೆದಸರಾ ಆನೆಹಾಸನ
Share This Article
Facebook Whatsapp Whatsapp Telegram

Cinema news

chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories
Aamir Khan birthday
ಗರ್ಲ್‌ಫ್ರೆಂಡ್‌, ಮಾಜಿ ಪತ್ನಿಯರ ಜೊತೆ ಸೇರಿ ಹುಟ್ಟುಹಬ್ಬ ಆಚರಿಸಿಕೊಂಡ ಆಮೀರ್‌ ಖಾನ್‌
Bollywood Cinema Latest Top Stories
vijay thalapathy
ಕರೂರ್‌ ಕಾಲ್ತುಳಿತ ಕೇಸ್‌ – CBI ಮುಂದೆ ವಿಚಾರಣೆಗೆ ಹಾಜರಾದ ವಿಜಯ್‌
Cinema Latest Main Post South cinema
Anushka Shetty
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ – ಬೆಂಗಳೂರು ಮೂಲದ ಉದ್ಯಮಿ ಜೊತೆ ಮದ್ವೆ?
Cinema Latest South cinema

You Might Also Like

Daiva nartana by a person from the Christian community new controversy Tulunadu Dakshina Kannada 2
Dakshina Kannada

ದೈವಾರಾಧನೆಯ ಕಟ್ಟುಪಾಡು ಮುರಿದು ನೇಮೋತ್ಸವ – ಕ್ರೈಸ್ತ ಸಮುದಾಯದ ವ್ಯಕ್ತಿಯಿಂದ ದೈವ ನರ್ತನ!

Public TV
By Public TV
10 minutes ago
Chikkamagaluru Rain
Chikkamagaluru

ಚಿಕ್ಕಮಗಳೂರಲ್ಲಿ ಭಾರೀ ಮಳೆ – ರಸ್ತೆಗುರುಳಿದ ಬೃಹತ್‌ ಮರ, 5 ಕಿಮೀ ಟ್ರಾಫಿಕ್‌ ಜಾಮ್‌!

Public TV
By Public TV
40 minutes ago
hardik pandyas new ferrari worth rs 12 cr all you need to know about the supercar
Automobile

ಗೆಳತಿ ಜೊತೆ 12 ಕೋಟಿ ಮೌಲ್ಯದ ಫೆರಾರಿಯಲ್ಲಿ ಪಾಂಡ್ಯ ಸುತ್ತಾಟ – ಕಾರಿನ ವಿಶೇಷತೆ ಏನು?

Public TV
By Public TV
1 hour ago
padma awards
Latest

ನಿಮ್ಮ ನೆಚ್ಚಿನ ಸಾಧಕರನ್ನು ಪದ್ಮ ಪ್ರಶಸ್ತಿಗೆ ಶಿಫಾರಸು ಮಾಡಿ!

Public TV
By Public TV
2 hours ago
byelections for davangere south press meet by five bjp ticket aspirants
Davanagere

ದಾವಣಗೆರೆ | ಯಾರಿಗೆ ಟಿಕೆಟ್‌ ಕೊಟ್ಟರೂ ಬಿಜೆಪಿ ಗೆಲ್ಲಿಸ್ತೇವೆ – ಐವರು ಟಿಕೆಟ್ ಆಕಾಂಕ್ಷಿಗಳಿಂದ ಒಗ್ಗಟ್ಟು ಪ್ರದರ್ಶನ

Public TV
By Public TV
2 hours ago
LPG Gas Shortage
Explainer

PublicTV Explainer: ಪೈಪ್‌ಗಳು v/s ಸಿಲಿಂಡರ್‌ಗಳು – ಎಲ್‌ಪಿಜಿ ಬಿಕ್ಕಟ್ಟಿಗೆ ಪಿಎನ್‌ಜಿ ಪರಿಹಾರ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?