ಲಕ್ನೋ: ಚಂದ್ರನನ್ನು (Moon) ಹಿಂದೂ ರಾಷ್ಟ್ರವೆಂದು ಘೋಷಿಸಿ, ಭಯೋತ್ಪಾದಕರು ಅಲ್ಲಿಗೆ ತಲುಪದಂತೆ ನೋಡಿಕೊಳ್ಳಬೇಕು ಎಂದು ಅಖಿಲ ಭಾರತ ಹಿಂದೂ ಮಹಾಸಭಾದ (Hindu Mahasabha) ರಾಷ್ಟ್ರೀಯ ಅಧ್ಯಕ್ಷ ಸ್ವಾಮಿ ಚಕ್ರಪಾಣಿ ಮಹಾರಾಜ್ (Swami Chakrapani Maharaj) ಸರ್ಕಾರದ ಮುಂದೆ ಬೇಡಿಕೆ ಇಟ್ಟಿದ್ದಾರೆ.
ಈ ಬಗ್ಗೆ ಟ್ವಿಟ್ಟರ್ನಲ್ಲಿ ವೀಡಿಯೋ ಹಂಚಿಕೊಂಡಿರುವ ಅವರು, ಚಂದ್ರನನ್ನು ಹಿಂದೂ ಸನಾತನ ರಾಷ್ಟ್ರ ಎಂದು ಸಂಸತ್ತಿನಲ್ಲಿ ಘೋಷಿಸಬೇಕು. ಚಂದ್ರಯಾನ-3 (Chandrayaan-3) ಇಳಿದಿರುವ ಶಿವಶಕ್ತಿ ಪಾಯಿಂಟ್ನ್ನು ಅದರ ರಾಜಧಾನಿಯಾಗಿ ಅಭಿವೃದ್ಧಿಪಡಿಸಬೇಕು. ಆದ್ದರಿಂದ ಯಾವುದೇ ಭಯೋತ್ಪಾದಕ ಜಿಹಾದಿ ಮನಸ್ಥಿತಿಗಳು ಅಲ್ಲಿಗೆ ತಲುಪಬಾರದು ಎಂದಿದ್ದಾರೆ. ಇದನ್ನೂ ಓದಿ: ಅನಾರೋಗ್ಯದಿಂದ ಮೃತಪಟ್ಟರೂ ಬಾರದ ವಿದೇಶದಲ್ಲಿರೋ ಮಕ್ಕಳು – ಅಂತ್ಯಕ್ರಿಯೆ ಮಾಡಿ ಮಾನವೀಯತೆ ಮೆರೆದ ಪೊಲೀಸರು
ಚಂದ್ರಯಾನ-3 ಚಂದ್ರನ ದಕ್ಷಿಣ ಧ್ರುವದಲ್ಲಿ ಯಶಸ್ವಿಯಾಗಿ ಲ್ಯಾಂಡಿಂಗ್ ಮಾಡಿದ ಜಾಗಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಶಿವಶಕ್ತಿ ಎಂದು ಹೆಸರಿಟ್ಟಿದ್ದರು. ಅಲ್ಲದೇ ಚಂದ್ರಯಾನ-2 ಪತನಗೊಂಡ ಜಾಗಕ್ಕೆ ತಿರಂಗ ಎಂದು ಹೆಸರಿಟ್ಟಿದ್ದರು. ಇದಾದ ಬಳಿಕ ಕಾಂಗ್ರೆಸ್ ನಾಯಕ ರಶಿದ್ ಅಲ್ವಿ ಮೋದಿ ಹೆಸರಿಟ್ಟಿರುವುದನ್ನು ವ್ಯಂಗ್ಯ ಮಾಡಿದ್ದರು. ಇದಕ್ಕೆ ಪ್ರತಿಯಾಗಿ ಬಿಜೆಪಿ ನಾಯಕ ಶೆಹಜಾದ್ ಪೂನವಾಲ ತಿರುಗೇಟು ನೀಡಿ ಕಾಂಗ್ರೆಸ್ ಹಿಂದೂ ವಿರೋಧಿ ತನವನ್ನು ಪ್ರದರ್ಶಿಸುತ್ತಿದೆ ಎಂದಿದ್ದರು.
ಇದಾದ ಬಳಿಕ ಇಸ್ರೋ ಅಧ್ಯಕ್ಷ ಸೋಮನಾಥ್ ಅವರು ಈ ಹೆಸರಿನ ಬಗ್ಗೆ ವಿವಾದದ ಅಗತ್ಯವಿಲ್ಲ. ಹೊರಗಿನ ಹುಡುಕಾಟಕ್ಕೆ ವಿಜ್ಞಾನ ಹಾಗೂ ಅಂತರಂಗದ ಹುಡುಕಾಟಕ್ಕೆ ಆಧ್ಯಾತ್ಮದ ಅಗತ್ಯವಿದೆ ಎಂದಿದ್ದರು. ಇದನ್ನೂ ಓದಿ: ಪಾಲಿಕೆ ಸದಸ್ಯನಿಂದ ಸ್ನೇಹಿತನಿಗೆ ಜೀವ ಬೆದರಿಕೆ – ಆತ್ಮಹತ್ಯೆಗೆ ಯತ್ನ
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]