Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಫಸ್ಟ್ ಟೈಂ ಮುಳುಗಿತು ನೆಲ್ಲಿಬೀಡು ಸೇತುವೆ- ಚಾರ್ಮಾಡಿ ಆಯ್ತು, ಈಗ ಬದಲಿ ಕುದುರೆಮುಖ ರಸ್ತೆಯೂ ಬಂದ್!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ಫಸ್ಟ್ ಟೈಂ ಮುಳುಗಿತು ನೆಲ್ಲಿಬೀಡು ಸೇತುವೆ- ಚಾರ್ಮಾಡಿ ಆಯ್ತು, ಈಗ ಬದಲಿ ಕುದುರೆಮುಖ ರಸ್ತೆಯೂ ಬಂದ್!

Chikkamagaluru

ಫಸ್ಟ್ ಟೈಂ ಮುಳುಗಿತು ನೆಲ್ಲಿಬೀಡು ಸೇತುವೆ- ಚಾರ್ಮಾಡಿ ಆಯ್ತು, ಈಗ ಬದಲಿ ಕುದುರೆಮುಖ ರಸ್ತೆಯೂ ಬಂದ್!

Public TV
Last updated: June 14, 2018 2:49 pm
Public TV
Share
2 Min Read
CKM RAIN COLLAGE
SHARE

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಮಲೆನಾಡು ಭಾಗದ ಪ್ರಮುಖ ರಸ್ತೆಗಳು ಬಂದ್ ಆಗಿದೆ.

ಜಿಲ್ಲೆಯ ಮಲೆನಾಡು ಭಾಗದ ಪ್ರಮುಖ ರಸ್ತೆಗಳಾದ ಚಾರ್ಮಾಡಿ ಘಾಟ್, ಕಳಸ-ಕುದುರೆಮುಖ-ಮಂಗಳೂರು ರಸ್ತೆ ಸಂಚಾರ, ಕಳಸ-ಹೊರನಾಡು ರಸ್ತೆ ಸಂಚಾರ, ಶೃಂಗೇರಿ-ದಕ್ಷಿಣ ಕನ್ನಡ ರಾಷ್ಟ್ರೀಯ ಹೆದ್ದಾರಿ 169 ಬಂದ್ ಆಗಿದ್ದು, ಪ್ರಯಾಣಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಭದ್ರಾ ಹಾಗೂ ಶೃಂಗೇರಿ ಶಾರದಾಂಭ ದೇವಾಲಯದ ಪಕ್ಕದಲ್ಲಿರುವ ತುಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಸಂಧ್ಯವಂದನಾ ಮಂಟಪ ಹಾಗೂ ಕಪ್ಪೆ ಶಂಕರ ದೇವಸ್ಥಾನ ಮುಳುಗಡೆಯಾಗಿದೆ. ಶೃಂಗೇರಿ ದೇವಸ್ಥಾನಕ್ಕೆ ಸಾಗುವ ಪ್ಯಾರಲಲ್ ರಸ್ತೆ ಸಹ ಮುಳುಗಡೆಯಾಗಿದೆ.

CKM RAIN 4

ಇನ್ನೂ ರಾಷ್ಟ್ರೀಯ ಹೆದ್ದಾರಿ 169 ಶೃಂಗೇರಿ ಕೆರೆಕಟ್ಟೆ ಮಂಗಳೂರು ಬಸ್ ಸಂಚಾರ ಸ್ಥಗಿತವಾಗಿದ್ದು, ದಕ್ಷಿಣ ಕನ್ನಡದಿಂದ ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ. ಸದ್ಯಕ್ಕೆ ಶಿವಮೊಗ್ಗ ಜಿಲ್ಲೆಯ ಅಗುಂಬೆ ಘಾಟ್ ನಲ್ಲಿ ಮಿನಿ ವಾಹನಗಳು ಸಂಚರಿಸುತ್ತಿದೆ.

ಚಿಕ್ಕಮಗಳೂರಲ್ಲಿ ಮುಂದುವರೆದ ಮಳೆಯಿಂದಾಗಿ ಚಿಕ್ಕಮಗಳೂರು-ಮಂಗಳೂರು ಬದಲಿ ಮಾರ್ಗವೂ ಬಂದ್ ಆಗಿದೆ. ಕಳಸ, ಕುದುರೆಮುಖ, ಮಂಗಳೂರು ಮಾರ್ಗವೂ ಬಂದ್ ಆಗಿದ್ದು, ಚಾರ್ಮಾಡಿ ರಸ್ತೆ ಬಂದ್ ಆದ ಮೇಲೆ ಕುದುರೆಮುಖ ಮಾರ್ಗವಾಗಿ ವಾಹನಗಳು ಸಂಚರಿಸುತ್ತಿತ್ತು. ಆದರೆ ಈಗ ಕಳಸ ಕುದುರೆಮುಖ ಮಾರ್ಗವೂ ಜಲಾವೃತಗೊಂಡಿದ್ದು, ಕಳಸಾದ 150 ಅಡಿ ನೆಲ್ಲಿಬೀಡು ಸೇತುವೆ ಇತಿಹಾಸದಲ್ಲಿ ಮೊದಲ ಬಾರಿ ಮುಳುಗಿದೆ.

CKM RAIN 8

ಇನ್ನೂ ಮೂಡಿಗೆರೆ ತಾಲೂಕಿನ ಕಳಸ ಹಾಗೂ ಕುದುರೆಮುಖದಲ್ಲಿ ಬಾರಿ ಮಳೆಯಿಂದ ರಸ್ತೆ ಮೇಲೆ ನೀರು ಹರಿಯುತ್ತಿದ್ದು, ಒಂದು ಕಿ.ಮೀವರೆಗೂ ವಾಹನಗಳು ಸಾಲುಗಟ್ಟಿ ನಿಂತಿದೆ. ಶೃಂಗೇರಿಯ ಎಸ್.ಕೆ.ಬಾರ್ಡ್ ರಸ್ತೆ ಮಧ್ಯೆಯೇ ಮರ ಬಿದ್ದು ಹಾಗೂ ಮಣ್ಣು ಕುಸಿತವಾಗಿದೆ. ಹಾಗಾಗಿ ಬೈಕ್ ಹಾಗೂ ಲಘು ವಾಹನಗಳಿಗೆ ಮಾತ್ರ ಸಂಚಾರಕ್ಕೆ ಅವಕಾಶ ನೀಡಲಾಗುತ್ತಿದೆ. ಇನ್ನೂ ಬಾರಿ ವಾಹನ ಸಂಚಾರಕ್ಕೆ ಪೊಲೀಸರು ತಡೆ ನೀಡಿದ್ದಾರೆ. ಕಳೆದೊಂದು ವಾರದಿಂದ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ರಸ್ತೆಗಳು ಕೆರೆಯಂತಾಗಿದ್ದು, ಕೊಟ್ಟಿಗೆಹಾರದ ರಸ್ತೆ ಮೇಲೆ ನೀರಿ ವೈಭವ ಹರಿಯುತ್ತಿದೆ. ಅನೇಕ ಕಡೆಗಳಲ್ಲಿ ರಸ್ತೆ ಕಾಣದಂತೆ ಸಂಪೂರ್ಣ ನೀರು ಆವರಿಸಿದೆ. ಹಾಗಾಗಿ ರಸ್ತೆ ಸಂಚಾರಕ್ಕೆ ತೊಂದರೆ ಆಗಿದೆ. ಗುಡ್ಡದ ಮೇಲಿನಿಂದ ನೀರು ಹರಿದು ಬರುತ್ತಿರುವ ದೃಶ್ಯ ಸ್ಥಳೀಯರ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕಳೆದೊಂದು ವಾರದಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದೆ.

CKM RAIN 5

ಇನ್ನೂ ಮೂಡಿಗೆರೆ ತಾಲೂಕಿನ ಹೊರನಾಡು ಸಮೀಪದಲ್ಲಿರುವ ಹೆಬ್ಬಾಳೆ ಸೇತುವೆ ಕಾಣದಂತೆ ನೀರು ಹರಿಯುತ್ತಿದ್ದು, ಸೇತುವೆ ಸಂಪೂರ್ಣ ಮುಳುಗಿದೆ. ಕಳಸ – ಹೊರನಾಡು – ಕುದುರೆಮುಖ ಭಾಗದಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ನೀರಿನ ಪ್ರಮಾಣ ತಗ್ಗುವವರೆಗೂ ಖಾಸಗಿ ಬಸ್, ಪ್ರವಾಸಿ ವಾಹನಗಳಿಗೆ ಸಂಚಾರ ಇಲ್ಲ. ಅಲ್ಲದೇ ಕಳಸ- ಹೊರನಾಡು ಸಂಪರ್ಕ ಬಂದ್ ಆಗಿದೆ. ಭದ್ರಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನದಿ ಪಾತ್ರದ ಜನರು ಆತಂಕದಲ್ಲಿದ್ದಾರೆ.

CKM RAIN 9

ಚಿಕ್ಕಮಗಳೂರಲ್ಲಿ ಮುಂದುವರಿದ ಮಳೆಯ ಅಬ್ಬರಕ್ಕೆ ಶೃಂಗೇರಿಯ ಭಾರತಿ ಬೀದಿ ಹಾಗೂ ರಸ್ತೆಗಳು ಕೆರೆಯಂತಾಗಿದೆ. ಕಳೆದೊಂದು ವಾರದಿಂದ ಧಾರಾಕಾರವಾಗಿ ಸುರಿಯುತ್ತಿರುವ ಮಳೆಗೆ ಶಂಗೇರಿಯ ಅನೇಕ ಕಡೆಗಳಲ್ಲಿ ರಸ್ತೆ ಕಾಣದಂತೆ ಸಂಪೂರ್ಣ ನೀರು ಆವರಿಸಿದೆ. ರಸ್ತೆಯ ತುಂಬೆಲ್ಲ ನೀರು ಹರಿಯುತ್ತಿದ್ದು ಸಂಚಾರಕ್ಕೆ ತೊಂದರೆ ಆಗಿದೆ. ಅಲ್ಲದೇ ತುಂಗಾ ನದಿ ತುಂಬಿ ಅಕ್ಕಪಕ್ಕದ ಜಮೀನಿಗೂ ನೀರು ನುಗ್ಗುತ್ತಿದೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

ಮಳೆಯಿಂದಾಗಿ ಶೃಂಗೇರಿ, ಕೊಪ್ಪ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಿದ್ದಾರೆ. ಭದ್ರಾ, ತುಂಗಾ, ಹೇಮಾವತಿ ನದಿಗಳ ಒಳಹರಿವು ಭಾರೀ ಪ್ರಮಾಣದಲ್ಲಿ ಹೆಚ್ಚಾಗಿದ್ದು, ಅಪಾಯ ಮಟ್ಟವನ್ನು ಮೀರಿ ನೀರು ಹರಿಯುತ್ತಿದೆ.

TAGGED:bridgeChikkamagalurPublic TVrainriverಚಿಕ್ಕಮಗಳೂರುನದಿಪಬ್ಲಿಕ್ ಟಿವಿಮಳೆಸೇತುವೆ
Share This Article
Facebook Whatsapp Whatsapp Telegram

Cinema news

Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema
Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories
Vijay Deverakonda
Rashmika-Vijay | ʻವಿರೋಶ್ʼ ಕಲ್ಯಾಣ – ಸತಿಪತಿಯಾದ ವಿಜಯ್, ರಶ್ಮಿಕಾ!
Cinema Latest Main Post Sandalwood
Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories

You Might Also Like

vijayapura JDS
Districts

ವಿಜಯಪುರದಲ್ಲಿಂದು ಜೆಡಿಎಸ್ ಬೆಳ್ಳಿಹಬ್ಬ – ಹೆಲಿಕಾಪ್ಟರ್ ಮೂಲಕ ಗುಮ್ಮಟನಗರಕ್ಕೆ ಹೆಚ್‌ಡಿಡಿ

Public TV
By Public TV
7 minutes ago
Pakistan Strikes
Latest

Afghanistan-Pakistan conflict | ಪಾಕ್‌ನ F-16 ಜೆಟ್‌ ಉಡೀಸ್‌ – ಬಹಿರಂಗ ಯುದ್ಧ ಘೋಷಿಸಿದ ಶೆಹಬಾಜ್ ಷರೀಫ್‌

Public TV
By Public TV
49 minutes ago
Amuku Dumku Manju 2
Bengaluru City

ಸಿನಿಮಾ ಪ್ರಚಾರಕ್ಕಾಗಿ ಕೀಳು ಮಟ್ಟದ ಡ್ರಾಮಾ – FIR ಬೆನ್ನಲ್ಲೇ ʻಅಮುಕು ಡುಮುಕುʼ ಮಂಜು ಯೂಟರ್ನ್‌

Public TV
By Public TV
1 hour ago
passport
Bengaluru City

ಬೆಂಗ್ಳೂರಲ್ಲಿ ಪಾಸ್‌ಪೋರ್ಟ್ ವೆರಿಫಿಕೇಶನ್‌ಗೆ ಹೊಸ ರೂಲ್ಸ್

Public TV
By Public TV
2 hours ago
PM Modi Arvind Bellad
Bengaluru City

ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ಕಲ್ಪಿಸುವಂತೆ ಮನವಿ – ಪ್ರಧಾನಿ ಮೋದಿ, ರಾಜ್ಯಪಾಲರಿಗೆ ಪತ್ರ ಬರೆದ ಅರವಿಂದ ಬೆಲ್ಲದ

Public TV
By Public TV
2 hours ago
Kolara Milk 2
Districts

ಕಲಬೆರಕೆ ಹಾಲಿನ ದಂಧೆ ವಿರುದ್ಧ ಸಮರ – ಆಂಧ್ರ ಮೂಲದ 8 ಮಂದಿ ಬಂಧನ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?