ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. ಆದ್ರೂ ಕೆಲ ರಾಜಕೀಯ ಮುಖಂಡರು ಮತ್ತು ಆಪ್ತರು ಸರ್ಕಾರ ನೀಡಿರುವ ಸೌಲಭ್ಯಗಳನ್ನು ಮಾತ್ರ ಹಿಂದಕ್ಕೆ ನೀಡುತ್ತಿಲ್ಲ. ಸಿಎಂ ಸಿದ್ದರಾಮಯ್ಯ, ಸಚಿವರಾದ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವರು ಸರ್ಕಾರಿ ವಾಹನಗಳನ್ನು ಬಿಟ್ಟು, ಖಾಸಗಿ ವಾಹನಗಳಲ್ಲಿ ಪ್ರಯಾಣಿಸುತ್ತಿದ್ದಾರೆ.
ಸಚಿವ ಡಿ.ಕೆ.ಶಿವಕುಮಾರ್ ಆಪ್ತ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಅಧ್ಯಕ್ಷ ಕೆ. ಶೇಷಾದ್ರಿ ಈಗಲೂ ಸರ್ಕಾರಿ ವಾಹನವನ್ನೇ ಬಳಕೆ ಮಾಡ್ತಿದ್ದಾರೆ. ಆದ್ರೆ ಚುನಾವಣಾ ಅಧಿಕಾರಿಗಳಿಗೆ ತಿಳಿಯದಂತೆ ಸರ್ಕಾರಿ ವಾಹನವನ್ನು ಮಾರ್ಪಾಡು ಮಾಡಿಕೊಂಡಿದ್ದಾರೆ.
ಏನದು ಮಾರ್ಪಾಡು?: ಸರ್ಕಾರಿ ವಾಹನ ಅಂತ ಇರೋ ಸ್ಟಿಕ್ಕರ್ ಗಳನ್ನ ತೆಗೆದು, ನಂಬರ್ ಪ್ಲೇಟ್ ನ್ನೂ ಕಿತ್ತು ಹಾಕಿ ರಾಜಾರೋಷವಾಗಿ ಓಡಾಡ್ತಿದ್ದಾರೆ. ಸ್ಟಿಕ್ಕರ್ ಗಳನ್ನು ಕಿತ್ತು ಹಾಕಿ ಸರ್ಕಾರಿ ವಾಹನದಲ್ಲಿ ಶೇಷಾದ್ರಿ ಅವರು ಪ್ರಯಾಣಿಸುವ ದೃಶ್ಯಗಳು ಪಬ್ಲಿಕ್ ಟಿವಿಗೆ ಲಭ್ಯವಾಗಿವೆ.