ಸಂಕಷ್ಟ ಎದುರಾದ ಬೆನ್ನಲ್ಲೇ ಮಂಗಳೂರಿಗೆ ಬಂದು ದೇವರಿಗೆ ಮೊರೆ ಹೋದ ಶಿಲ್ಪಾ ಶೆಟ್ಟಿ

Public TV
2 Min Read
Shilpa Shetty 3

ಡಿ ಕಡೆಯಿಂದ ಆಸ್ತಿ ಜಪ್ತಿ ಮಾಡಿದ ಬೆನ್ನಲ್ಲೇ ನಟಿ ಶಿಲ್ಪಾ ಶೆಟ್ಟಿ (Shilpa Shetty ) ಮತ್ತೆ ದೇವರಿಗೆ ಮೊರೆ ಹೋಗಿದ್ದಾರೆ. ಹೀಗೆ ಕಷ್ಟ ಬಂದಾಗೆಲ್ಲ ದೇವರ ಮುಂದೆ ಬಂದು ನಿಲ್ಲುವ ಇವರು, ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆ ಸುರತ್ಕಲ್ ತಾಲೂಕಿನ ದೇಲಂತಬೆಟ್ಟು (Delanta Bettu) ಶಿಬರೂರು ಕೊಡಮಣಿತ್ತಾಯ ಕ್ಷೇತ್ರದ ಬ್ರಹ್ಮಕುಂಭಾಭಿಷೇಕದಲ್ಲಿ ಭಾಗಿಯಾಗಿದ್ದಾರೆ. ಮುಂದಿರುವ ಕಷ್ಟವನ್ನು ಕರುಗುವಂತೆ ಮಾಡು ಎಂದು ಕೈ ಮುಗಿದ್ದಾರೆ. ನಿನ್ನೆ ದಕ್ಷಿಣ ಕನ್ನಡಕ್ಕೆ ತಾಯಿ ಮತ್ತು ಮಕ್ಕಳೊಂದಿಗೆ ಬಂದಿದ್ದ ಶಿಲ್ಪಾ, ಬ್ರಹ್ಮಕುಂಭಾಭಿಷೇಕದಲ್ಲಿ ಭಾಗಿಯಾಗಿ ದೇವರ ಆಶೀರ್ವಾದ ಪಡೆದಿದ್ದಾರೆ. ಈ ಹಿಂದೆಯೂ ಅವರು ಅನೇಕ ಬಾರಿ ದೈವದ ಮೊರೆ ಹೋಗಿ ಕಷ್ಟಗಳನ್ನು ದಾಟಿಕೊಂಡಿದ್ದಾರೆ. ಈ ಬಾರಿಯೂ ಅದೇ ನಂಬಿಕೆಯೊಂದಿಗೆ ದೇವರ ಮುಂದೆ ನಿಂತಿದ್ದಾರೆ.

Shilpa Shetty 1

2022ರ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದಿ ಅಡಿ ಇಡಿ ಪ್ರಕರಣವನ್ನು ದಾಖಲಿಸಿದ್ದು, ಜಾರಿ ನಿರ್ದೇಶನಾಲಯವು 97.97 ಕೋಟಿ ರೂಪಾಯಿ ಮೊತ್ತದ ಸ್ಥಿರ ಹಾಗೂ ಚರಾಸ್ತಿಯನ್ನು ಜಪ್ತಿ ಮಾಡಿದೆ. ಜಪ್ತಿಯಾದ ಆಸ್ತಿಗಳಲ್ಲಿ ಪುಣೆಯಲ್ಲಿರುವ ಬಂಗ್ಲೆ, ಫ್ಲಾಟ್ ಹಾಗೂ ಇಕ್ವಿಟಿ ಷೇರು ಕೂಡ ಹೊಂದಿವೆ.

Shilpa Shetty 2

ಈ ಹಿಂದೆ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ವೇರಿಯಬಲ್ ಟೆಕ್ ಪ್ರೈವೇಟ್ ಲಿಮಿಟೆಡ್ ಹೆಸರಿನ ಸಂಸ್ಥೆಯ ವಿರುದ್ಧ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿದ್ದರು. ಈ ಸಂಸ್ಥೆಯ ಮೂಲಕ ಅಮಿತ್ ಭಾರದ್ವಾಜ್, ವಿವೇಕ್, ಅಜಯ್, ಮಹೇಂದರ್ ಹೀಗೆ ಹಲವಾರು ಏಜೆಂಟರ್ ಗಳು ಬಿಟ್ ಕಾಯಿನ್ ರೂಪದಲ್ಲಿ 2017ರಲ್ಲಿ 6,600 ಕೋಟಿ ರೂ. ಹಣ ಸಂಗ್ರಹಿಸಿದ್ದರು. ಇವರ ಜೊತೆ ಶಿಲ್ಪಾ ಶೆಟ್ಟಿ ಮತ್ತು ರಾಜ್ ಕುಂದ್ರಾ ವ್ಯವಹಾರ ಮಾಡಿದ್ದರು ಎನ್ನುವ ಆರೋಪವಿದೆ.

shilpa shetty 1

ಉಕ್ರೇನ್‌ನಲ್ಲಿ ಬಿಟ್ ಕಾಯಿನ್ ಮೈನಿಂಗ್ ಫಾರ್ಮ್ ಶುರು ಮಾಡುವುದಕ್ಕೆ ಶಿಲ್ಪಾ ಮತ್ತು ರಾಜ್ ಕುಂದ್ರಾ ದಂಪತಿ ಅಮಿತ್ ಭಾರದ್ವಾಜ್ ಬಳಿ 285 ಬಿಟ್ ಕಾಯಿನ್ ಪಡೆದಿದ್ದಾರೆ. ಸದ್ಯ ಈ ಬಿಟ್ ಕಾಯಿನ್ ಮೌಲ್ಯ ಸುಮಾರು 150 ಕೋಟಿ ರೂ. ಎಂದು ಎಂದು ತನಿಖಾ ಸಂಸ್ಥೆ ಹೇಳಿದೆ.

Shilpa Shetty and Raj Kundra 3

ಈ ಹಿಂದೆ ಶಿಲ್ಪಾ ಶೆಟ್ಟಿ (Shilpa Shetty) ಮತ್ತು ಪತಿ ರಾಜ್ ಕುಂದ್ರಾಗೆ (Raj Kundra) ಸೇರಿದ ಅಂದಾಜು 97 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಏ.18ರಂದು ಇಡಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಜಪ್ತಿ ಮಾಡಿದ ಆಸ್ತಿಯಲ್ಲಿ ಮುಂಬೈನ ಪ್ರತಿಷ್ಠಿತ ಜುಹುವಿನಲ್ಲಿರುವ ಅಪಾರ್ಟ್ ಮೆಂಟ್ ಕೂಡ ಸೇರಿದೆ. ಇಡಿ ದಾಳಿ ಬಳಿಕ ರಾಜ್ ಕುಂದ್ರಾ-ಶಿಲ್ಪಾ ಶೆಟ್ಟಿ ದಂಪತಿ ಸೋಶಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

 

ನಿಮಗೆ ಅಗೌರವ ತೋರುತ್ತಿರುವಾಗಲೂ ಶಾಂತವಾಗಿ ಇರುವುದನ್ನು ಕಲಿಯುವುದು ಒಂದು ಬೇರೆ ರೀತಿಯ ಬೆಳವಣಿಗೆ ಎಂದು ರಾಜ್ ಕುಂದ್ರಾ ಅವರು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಇಡಿ ದಾಳಿ ಮಾಡಿದ ಬಳಿಕ ಅವರ ಕಡೆಯಿಂದ ಬಂದಿರುವ ಮೊದಲ ಪ್ರತಿಕ್ರಿಯೆ ಇದಾಗಿದೆ. ಸಾಯಿ ಬಾಬ ದೇವರ ಫೋಟೋ ಶೇರ್‌ ಮಾಡಿ ದೇವರಿಗೆ ಶರಣು ಎಂಬರ್ಥದಲ್ಲಿ ಶಿಲ್ಪಾ ಶೆಟ್ಟಿ ಪೋಸ್ಟ್‌ ಮಾಡಿದ್ದಾರೆ.

Share This Article