Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: IPL ನಿಂದ ಮುಸ್ತಾಫಿಜುರ್ ಔಟ್‌ – ವಿಶ್ವಕಪ್‌ ಆಡಲು ಭಾರತಕ್ಕೆ ಬರಲ್ಲ; ಪಾಕ್‌ ರೀತಿ ಕ್ಯಾತೆ ತೆಗೆದ ಬಾಂಗ್ಲಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | IPL ನಿಂದ ಮುಸ್ತಾಫಿಜುರ್ ಔಟ್‌ – ವಿಶ್ವಕಪ್‌ ಆಡಲು ಭಾರತಕ್ಕೆ ಬರಲ್ಲ; ಪಾಕ್‌ ರೀತಿ ಕ್ಯಾತೆ ತೆಗೆದ ಬಾಂಗ್ಲಾ

Cricket

IPL ನಿಂದ ಮುಸ್ತಾಫಿಜುರ್ ಔಟ್‌ – ವಿಶ್ವಕಪ್‌ ಆಡಲು ಭಾರತಕ್ಕೆ ಬರಲ್ಲ; ಪಾಕ್‌ ರೀತಿ ಕ್ಯಾತೆ ತೆಗೆದ ಬಾಂಗ್ಲಾ

Public TV
Last updated: January 4, 2026 5:29 pm
Public TV
Share
3 Min Read
mustafizur rahman 1
SHARE

– ಟಿ20 ವಿಶ್ವಕಪ್‌ ಪಂದ್ಯಗಳ ಸ್ಥಳ ಬದಲಾವಣೆ ಮಾಡುವಂತೆ ಐಸಿಸಿಗೆ ಮನವಿ

ಢಾಕಾ/ನವದೆಹಲಿ:‌ ಕ್ರಿಕೆಟಿಗ ಮುಸ್ತಾಫಿಜುರ್ ರೆಹಮಾನ್‌ (Mustafizur Rahman) ಅವರನ್ನು ಐಪಿಎಲ್‌ನಿಂದ ಹೊರದಬ್ಬಿದ ಬಳಿಕ ಬಾಂಗ್ಲಾ (Bangladesh) ಹೊಸ ಕ್ಯಾತೆ ತೆಗೆದಿದೆ. 2026ರ ಟಿ20 ವಿಶ್ವಕಪ್‌ ಪಂದ್ಯಗಳನ್ನ ಆಡಲು ಭಾರತಕ್ಕೆ ಬರುವುದಿಲ್ಲ ಎಂದು ಹೇಳಿದೆ.

2026ರ ಐಸಿಸಿ ಟಿ20 ವಿಶ್ವಕಪ್‌ (T20 World Cup 2026) ಪಂದ್ಯಗಳಿಗೆ ಸ್ಥಳ ಬದಲಾವಣೆ ಮಾಡುವಂತೆ ಕೋರಲು ಬಾಂಗ್ಲಾದೇಶದ ಮಧ್ಯಂತರ ಸರ್ಕಾರವು ಬಾಂಗ್ಲಾ ಕ್ರಿಕೆಟ್‌ ಮಂಡಳಿಗೆ ಸೂಚಿಸಿದೆ. ಭಾರತದಲ್ಲಿ ನಿಯೋಜನೆಗೊಂಡಿರುವ ತನ್ನ ದೇಶದ ಎಲ್ಲಾ ಲೀಗ್‌ ಪಂದ್ಯಗಳನ್ನ ಭಾರತದಿಂದ ಹೊರಗೆ ಸ್ಥಳಾಂತರಿಸುವಂತೆ ಐಸಿಸಿಗೆ ಮನವಿ ಮಾಡುವಂತೆ ಹೇಳಿದೆ. ಇದನ್ನೂ ಓದಿ: ಬಾಂಗ್ಲಾ ಘರ್ಷಣೆ – ಐಪಿಎಲ್‌ನಿಂದ ಮುಸ್ತಾಫಿಜುರ್ ಔಟ್‌

mustafizur rahman 3

ಈ ಕುರಿತು ಬಾಂಗ್ಲಾದೇಶದ ಕ್ರೀಡಾ ಸಲಹೆಗಾರ ಆಸಿಫ್‌ ನಜ್ರುಲ್‌ (Asif Nazrul), ಈ ನಿರ್ಧಾರ ಸೋಷಿಯಲ್‌ ಮೀಡಿಯಾ ಪೋಸ್ಟ್‌ ಮೂಲಕ ದೃಢಪಡಿಸಿದ್ದಾರೆ. ಭಾರತದಲ್ಲಿ ನಿಗದಿಪಡಿಸಿರುವ ಬಾಂಗ್ಲಾದ ಎಲ್ಲಾ ಪಂದ್ಯಗಳನ್ನ ಶ್ರೀಲಂಕಾಗೆ (Sri Lanka) ಸ್ಥಳಾಂತರಿಸಲು ಐಸಿಸಿಗೆ ಮನವಿ ಮಾಡುವಂತೆ ಮಧ್ಯಂತರ ಸರ್ಕಾರ ನಿರ್ದೇಶನ ನೀಡಿದೆ. ಸರ್ಕಾರದ ಸೂಚನೆ ಬಳಿಕ ಶನಿವಾರವೇ ಬಾಂಗ್ಲಾ ಕ್ರಿಕೆಟ್‌ ಮಂಡಳಿ ತುರ್ತು ಸಭೆ ನಡೆಸಿದ್ದು, ಈ ವಿಷಯವನ್ನ ಚರ್ಚಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ:  IND vs NZ | ಕಿವೀಸ್‌ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ ಪ್ರಕಟ – ಪಾಂಡ್ಯ, ಶಮಿಗೆ ಕೂಡಿಬಾರದ ಮುಹೂರ್ತ!

ಐಪಿಎಲ್‌ ಪ್ರಸಾರ ಬಂದ್‌
ಮುಂದುವರಿದು… ಕೋಮುವಾದಿ ಶಕ್ತಿಗಳಿಗೆ ತಲೆಬಾಗಿ ಬಿಸಿಸಿಐ (BCCI) ಮುಸ್ತಾಫಿಜುರ್‌ ಅವರನ್ನ ತಂಡದಿಂದ ಕೈಬಿಡುವಂತೆ ನಿರ್ದೇಶನ ನೀಡಿದೆ. ಇದನ್ನ ನಾವು ಬಲವಾಗಿ ಖಂಡಿಸುತ್ತೇವೆ, ಇದರ ವಿರುದ್ಧ ಪ್ರತಿಭಟನೆ ದಾಖಲಿಸುತ್ತೇವೆ. ಗುಲಾಮಗಿರಿಯ ದಿನಗಳು ಮುಗಿದಿವೆ. ಬಾಂಗ್ಲಾದೇಶ, ಬಾಂಗ್ಲಾದೇಶದ ಕ್ರಿಕೆಟ್ ಅಥವಾ ಬಾಂಗ್ಲಾ ಕ್ರಿಕೆಟಿಗರ ಅವಮಾನವನ್ನ ನಾವು ಸಹಿಸುವುದಿಲ್ಲ. ಹಾಗಾಗಿ ದೇಶದಲ್ಲಿ ಐಪಿಎಲ್‌ ಪ್ರಸಾರವನ್ನೂ ನಿಲ್ಲಿಸುವಂತೆ ಸೂಚಿಸಿದ್ದಾನೆ ಎಂದು ನಜ್ರುಲ್‌ ಎಚ್ಚರಿಸಿದ್ದಾರೆ. ಇದನ್ನೂ ಓದಿ: 6,6,6,6,6,4 – ಒಂದೇ ಓವರ್‌ನಲ್ಲೇ 34 ರನ್‌ ಚಚ್ಚಿ ಶತಕ; ಪಾಂಡ್ಯ ಬೆಂಕಿ ಆಟಕ್ಕೆ ವಿದರ್ಭ ಸುಸ್ತು!

mustafizur rahman 2

ದಾಖಲೆ ಬೆಲೆಗೆ ಬಿಕರಿಯಾಗಿದ್ದ ರೆಹಮಾನ್‌
2026ರ ಐಪಿಎಲ್‌ ಟೂರ್ನಿಗಾಗಿ ಡಿಸೆಂಬರ್‌ನಲ್ಲಿ ನಡೆದ ಹರಾಜಿನಲ್ಲಿ ಮುಸ್ತಾಫಿಜುರ್ ರೆಹಮಾನ್‌ ಅವರನ್ನ ಕೆಕೆಆರ್‌ ಫ್ರಾಂಚೈಸಿಯು 9.20 ಕೋಟಿ ರೂ. ನೀಡಿ ಖರೀದಿಸಿತ್ತು. ಐಪಿಎಲ್‌ ಇತಿಹಾಸದಲ್ಲಿ ಅತಿ ಹೆಚ್ಚು ಬೆಲೆಗೆ ಮಾರಾಟವಾದ ಬಾಂಗ್ಲಾ ಆಟಗಾರ ಎಂಬ ಹೆಗ್ಗಳಿಕೆಗೂ ಮುಸ್ತಾಫಿಜುರ್ ಪಾತ್ರವಾಗಿದ್ದರು. ಆದ್ರೆ ಶೇಖ್‌ ಹಸೀನಾ ಸರ್ಕಾರ ಪತನದ ಬಳಿಕ ಭಾರತ ಮತ್ತು ಬಾಂಗ್ಲಾದೇಶದ ನಡುವಿನ ಸಂಬಂಧ ಹಾಳಾಗಿದೆ. ಈಗ ಹಿಂದೂಗಳ ಮೇಲೆ ದೌರ್ಜನ್ಯ ನಡೆಯುತ್ತಿರುವ ಕಾರಣ ಬಾಂಗ್ಲಾದೇಶದ ಆಟಗಾರರು ಐಪಿಎಲ್‌ನಲ್ಲಿ (IPL) ಆಡಬಾರದು ಎಂಬ ಆಕ್ರೋಶ ಕ್ರಿಕೆಟ್‌ ಅಭಿಮಾನಿಗಳಿಂದ ವ್ಯಕ್ತವಾಗಿತ್ತು. ಒತ್ತಡ ಜಾಸ್ತಿಯಾಗುತ್ತಿದ್ದಂತೆ ಬಿಸಿಸಿಐ ಮಧ್ಯಪ್ರವೇಶಿಸಿ ಮುಸ್ತಾಫಿಜುರ್ ರೆಹಮಾನ್ ಅವರನ್ನ ಕೆಕೆಆರ್‌ನಿಂದ ಕೈಬಿಡುವಂತೆ ಫ್ರಾಂಚೈಸಿಗೆ ಸೂಚಿಸಿತ್ತು.

mustafizur rahman

ಫೆಬ್ರವರಿಯಲ್ಲಿ ಟಿ20 ವಿಶ್ವಕಪ್‌
2026ರ ಟಿ20 ವಿಶ್ವಕಪ್‌ ಟೂರ್ನಿಯ ಹಕ್ಕು ಭಾರತದ್ದೇ ಆದರೂ ಶ್ರೀಲಂಕಾ ಜೊತೆಗಿನ ಜಂಟಿ ಆತಿಥ್ಯದಲ್ಲಿ ನಡೆಸಲಾಗುತ್ತಿದೆ. ಭಾರತ ಮತ್ತು ಪಾಕ್‌ ನಡುವಿನ ಸಂಬಂಧ ಹದಗೆಟ್ಟಿದ್ದರಿಂದ, ಪಾಕಿಸ್ತಾನದ ಎಲ್ಲಾ ಪಂದ್ಯಗಳು ಲಂಕಾದಲ್ಲಿ ನಡೆಯಲಿದೆ. ಬಾಂಗ್ಲಾ ತಂಡವು ಫೆಬ್ರವರಿ 7 ರಂದು ಕೋಲ್ಕತ್ತಾದ ಈಡನ್‌ ಗಾರ್ಡನ್‌ನಲ್ಲಿ ವೆಸ್ಟ್‌ ಇಂಡೀಸ್‌ ವಿರುದ್ಧ ತನ್ನ ವಿಶ್ವಕಪ್‌ ಅಭಿಯಾನವನ್ನ ಶುರು ಮಾಡಲಿದೆ. ಫೆ.9 ರಂದು ಇಟೇ ವಿರುದ್ಧ, ಫೆ.14 ರಂದು ಇಂಗ್ಲೆಂಡ್‌ ವಿರುದ್ಧ ಈಡನ್‌ ಗಾರ್ಡನ್‌ನಲ್ಲಿ ಹಾಗೂ ಅಂತಿಮ ಲೀಗ್‌ ಸುತ್ತಿನ ಪಂದ್ಯವನ್ನ ಮುಂಬೈನ ವಾಂಖೇಡೆ ಕ್ರೀಡಾಂಗಣದಲ್ಲಿ ನೇಪಾಳದ ವಿರುದ್ಧ ಆಡಬೇಕಿದೆ. ಆದ್ರೆ ಉಭಯ ರಾಷ್ಟ್ರಗಳ ನಡುವಿನ ಉದ್ವಿಗ್ನತೆಯಿಂದಾಗಿ ಬಾಂಗ್ಲಾ ಭಾರತದಿಂದ ಹೊರಗೆ ಲೀಗ್‌ ಪಂದ್ಯಗಳನ್ನ ನಿಗದಿ ಮಾಡುವಂತೆ ಕೇಳಿಕೊಂಡಿದೆ.

TAGGED:bangladeshbcciICCindiaIPL 2026Mustafizur RahmanT20 World Cup 2026ಐಪಿಎಲ್‌ 2026ಐಸಿಸಿಟಿ20 ವಿಶ್ವಕಪ್‌ 2026ಬಾಂಗ್ಲಾ ಕ್ರಿಕೆಟ್‌ ಬೋರ್ಡ್‌ಬಾಂಗ್ಲಾದೇಶಬಿಸಿಸಿಐಭಾರತ
Share This Article
Facebook Whatsapp Whatsapp Telegram

Cinema news

rohit shetty 1 e1573969461253
ರೋಹಿತ್ ಶೆಟ್ಟಿ ಮನೆ ಮೇಲೆ ಫೈರಿಂಗ್ – ಮತ್ತೆ ಆರು ಜನ ಅರೆಸ್ಟ್, ಈವರೆಗೂ ಒಟ್ಟು 11 ಮಂದಿ ಬಂಧನ
Cinema Crime Latest National Top Stories
yash mother pushpa compound demolition 1
ಯಶ್‌ ತಾಯಿ ಸೈಟ್‌ ವಿವಾದ – ಏಕಪಕ್ಷೀಯ ತೀರ್ಪಿಗೆ ಕೋರ್ಟ್ ತಾತ್ಕಾಲಿಕ ತಡೆ
Cinema Court Districts Hassan Karnataka Latest States Top Stories
vijay devarakonda rashmika
ವೈರಲ್ ಆಯ್ತು ವಿಜಯ್ ದೇವರಕೊಂಡ – ರಶ್ಮಿಕಾ ವೆಡ್ಡಿಂಗ್ ಕಾರ್ಡ್; ಮದ್ವೆ ಎಲ್ಲಿ – ಯಾವಾಗ?
Cinema Latest Sandalwood South cinema
World Of Nagabandham
`ನಾಗಬಂಧಂ’ ಟೀಸರ್ ರಿಲೀಸ್ ಮಾಡಿದ ಸೂಪರ್‌ ಸ್ಟಾರ್‌ ಮಹೇಶ್ ಬಾಬು
Cinema Latest South cinema

You Might Also Like

Head on collision between a scooty and a bike
Districts

ಸ್ಕೂಟಿ, ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ದಾರುಣ ಸಾವು

Public TV
By Public TV
3 minutes ago
Sanjaya Baru Mamata Banerjee
Latest

ರಾಹುಲ್‌ ಬದಲು ಮಮತಾ ಇಂಡಿ ಕೂಟ ಮುನ್ನಡೆಸಲಿ: ಸಿಂಗ್‌ ಮಾಧ್ಯಮ ಸಲಹೆಗಾರ ಸಂಜಯ ಬಾರು

Public TV
By Public TV
46 minutes ago
Basanagouda Patil Yatnal 1
Districts

ಯತೀಂದ್ರ ಕೂಡ ವಿಜಯೇಂದ್ರನಂತೆ ವಸೂಲಿಗೆ ಇಳಿದಿದ್ದಾನೆ: ಯತ್ನಾಳ್

Public TV
By Public TV
1 hour ago
Pakistan Team
Cricket

ಭಾರತದ ವಿರುದ್ಧ ಹೀನಾಯ ಸೋಲು – ಪಾಕಿನ ಇಬ್ಬರು ಸ್ಟಾರ್‌ ಆಟಗಾರರು ಔಟ್‌

Public TV
By Public TV
2 hours ago
Nikhil Kumaraswamy 1
Districts

ಇವರ ಸಾಧನೆ ಸಾಲದ ಹೊರೆ ಅಷ್ಟೇ – ಸರ್ಕಾರದ 1000 ದಿನಗಳ ಸಂಭ್ರಮಕ್ಕೆ ನಿಖಿಲ್ ಲೇವಡಿ

Public TV
By Public TV
2 hours ago
PM Narendra Modi Emmanuel Macron to Virtually Inaugurate Indias First Private Helicopter Assembly Line in Kolara
Districts

ಕೋಲಾರದಲ್ಲಿ ದೇಶದ ಮೊದಲ ಮಿನಿ ಹೆಲಿಕಾಪ್ಟರ್ ತಯಾರಿಕಾ ಘಟಕಕ್ಕೆ ನಾಳೆ ಮೋದಿ ಚಾಲನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?