ಬೆಳಗಾವಿ(ಚಿಕ್ಕೋಡಿ): ಮಾಜಿ ಸಿಎಂ ಕುಮಾರಸ್ವಾಮಿ ಅವರು ನನಗೆ ತುಂಬಾ ಮಾನಸಿಕ ಹಿಂಸೆ ನೀಡಿದ್ದಾರೆ. ಅವರ ಕೆಲಸದಿಂದ ನಾನು ನೇಣು ಹಾಕಿಕೊಳ್ಳುವ ಪರಿಸ್ಥಿತಿ ಬಂದಿದೆ ಎಂದು ಅವರ ಬಳಿ ನಾನು ಹೇಳಿದ್ದೆ ಎಂದು ಕಾಗವಾಡ ಬಿಜೆಪಿ ಅಭ್ಯರ್ಥಿ ಶ್ರೀಮಂತ್ ಪಾಟೀಲ್ ರೋಡ್ ಶೋನಲ್ಲಿ ಹೇಳಿದ್ದಾರೆ.
ನಾಮಪತ್ರ ಸಲ್ಲಿಕೆಯ ಬಳಿಕ ಅಥಣಿ ಪಟ್ಟಣದಲ್ಲಿ ರೋಡ್ ಶೋ ನಂತರ ಭಾಷಣ ಮಾಡಿದ ಅವರು, ಹೆಚ್ಡಿಕೆ ವಿರುದ್ಧ ಕಿಡಿಕಾರಿದರು. ಕುಮಾರಸ್ವಾಮಿ ಅವರು ನನಗೆ ತುಂಬಾ ಮಾನಸಿಕ ಹಿಂಸೆ ನೀಡಿದ್ದಾರೆ. ಅವರ ಕೆಲಸದಿಂದ ನಾನು ನೇಣು ಹಾಕಿಕೊಳ್ಳುವ ಪರಿಸ್ಥಿತಿ ಬಂದಿದೆ ಎಂದು ಅವರ ಬಳಿ ನಾನು ಹೇಳಿದ್ದೆ. ಆದರೆ ಅದಕ್ಕೂ ಅವರು ಕೇರ್ ಮಾಡದೆ ಹೋಗಿದ್ದರು. ಕುಮಾರಸ್ವಾಮಿ ಅವರಿಂದಾಗಿಯೇ ನಾನು ಪಕ್ಷ ಬಿಟ್ಟಿದ್ದು. ಅವರು ಸಿಎಂ ಆಗಿ ಮುಂದುವರಿದರೆ ಯಾವುದೇ ಕೆಲಸ ಆಗುವುದಿಲ್ಲ ಎಂದು ಗೊತ್ತಿತ್ತು. ಆದ್ದರಿಂದ ನಾನು ರಾಜೀನಾಮೆ ಕೊಟ್ಟೆ ಎಂದು ಅಸಮಾಧಾನ ಹೊರಹಾಕಿದರು. ಇದನ್ನೂ ಓದಿ:ಅಧಿಕಾರ, ದುಡ್ಡಿಗಾಗಿ ಬಿಜೆಪಿ ಸೇರಿಲ್ಲ: ಮಕ್ಕಳ ಮೇಲೆ ಶ್ರೀಮಂತ್ ಪಾಟೀಲ್ ಪ್ರಮಾಣ
ಇದೇ ವೇಳೆ ಬಿಜೆಪಿ ಸೇರಲು ನಾನು ಯಾರಿಂದಲೂ ಹಣ ಪಡೆದಿಲ್ಲ ಎಂದು ದೇವರ ಮೇಲೆ ಪ್ರಮಾಣ ಮಾಡಿ ಹೇಳಿದರು. ಭಾನುವಾರ ಉಗಾರ ಪಟ್ಟಣದಲ್ಲಿ ಬಿಜೆಪಿ ಸೇರಲು ಹಣ ಪಡೆದಿಲ್ಲ ಎಂದು ಮಕ್ಕಳ ಮೇಲೆ ಶ್ರೀಮಂತ್ ಪಾಟೀಲ್ ಪ್ರಮಾಣ ಮಾಡಿದ್ದರು. ಅಷ್ಟೇ ಅಲ್ಲದೆ ಕೇವಲ ಅಭಿವೃದ್ಧಿಗಾಗಿ ಮಾತ್ರ ನಾನು ಬಿಜೆಪಿ ಪಕ್ಷ ಸೇರಿದ್ದೇನೆ ಎಂದು ಹೇಳಿದ್ದರು.