Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dakshina Kannada

ಕರಾವಳಿಯಲ್ಲಿ ‘ಕೈ’ ಕಾರ್ಯಕರ್ತರಿಗೆ ರಾಹುಲ್ ಆಗಮನ ಉತ್ತೇಜನ

Public TV
Last updated: March 21, 2018 7:10 pm
Public TV
Share
3 Min Read
SHARE

ಮಂಗಳೂರು: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯ ಕರಾವಳಿ ಕರ್ನಾಟಕದ ಪ್ರವಾಸಕ್ಕೆ ಸಿಕ್ಕಿದ ಪ್ರತಿಕ್ರಿಯೆ ಕರಾವಳಿಯ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ಭರವಸೆ ಮತ್ತು ಹುಮ್ಮಸ್ಸು ಮೂಡಿಸಿದೆ. ರಾಹುಲ್ ಗಾಂಧಿ ಕಾರ್ಯಕರ್ತರ ಅಭಿಪ್ರಾಯ ಆಲಿಸಿದರು. ಇದರ ಜೊತೆಗೆ ಮುಖಂಡರ ನಿರೀಕ್ಷೆಗೂ ಮೀರಿ ಜನಾರ್ಶೀವಾದ ಸಮಾವೇಶದಲ್ಲಿ ಜನರು ಭಾವಹಿಸಿದ್ದರು.

ಇದೇ ಮೊದಲ ಬಾರಿಗೆ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರೊಬ್ಬರು ಬ್ಲಾಕ್ ಅಧ್ಯಕ್ಷರ ಮಾತುಗಳನ್ನು ಆಲಿಸಿರುವುದು ಮತ್ತು ಸಮಸ್ಯೆಗಳಿಗೆ ಬ್ಲಾಕ್ ಅಧ್ಯಕ್ಷರಿಂದಲೇ ಪರಿಹಾರ ಮಾರ್ಗಗಳನ್ನು ಕೂಡ ಕೇಳಿದ್ದು, ಪಕ್ಷದ ಸಾಮಾನ್ಯ ಕಾರ್ಯಕರ್ತರಿಗೆ ಭರವಸೆಯ ಸಂದೇಶ ನೀಡಿದೆ.

ಮಾರ್ಚ್ 20 ರ ಬುಧವಾರದಂದು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಿದ ರಾಹುಲ್ ಗಾಂಧಿ ಅವರು ಉಡುಪಿಯ ಕಾಪು, ಪಡುಬಿದ್ರೆ, ಸುರತ್ಕಲ್ ಮುಂತಾದೆಡೆ ರೋಡ್ ಶೋ ನಡೆಸಿ ಇಳಿ ಸಂಜೆ ಹೊತ್ತಿನಲ್ಲಿ ಮಂಗಳೂರು ನೆಹರೂ ಮೈದಾನದಲ್ಲಿ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಿದರು.

ಸಾಮಾನ್ಯವಾಗಿ ಕಾಂಗ್ರೆಸ್ ಪಕ್ಷದಲ್ಲಿ ಸರ್ಕಾರಕ್ಕೂ, ಕಾರ್ಯಕರ್ತನಿಗೂ, ಪಕ್ಷದ ಮುಖಂಡರಿಗೂ ಬಡಪಾಯಿ ಕಾರ್ಯಕರ್ತನಿಗೂ ಯಾವುದೇ ಸಂಪರ್ಕವೇ ಇರುತ್ತಿರಲಿಲ್ಲ. ಹಾಗೊಂದು ವೇಳೆ ಸಭೆ ಕರೆದರೂ ವಾಸ್ತವ ಸಂಗತಿಯನ್ನು ಹೇಳುವ ಪರಿಸ್ಥಿತಿ ಇರಲಿಲ್ಲ. ಆದರೆ, ಈ ಬಾರಿ ರಾಹುಲ್ ಗಾಂಧಿ ಕರೆದಿದ್ದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಬ್ಲಾಕ್ ಅಧ್ಯಕ್ಷರು ಮತ್ತು ಇತರ ಮುಖಂಡರ ಸಭೆಯಲ್ಲಿ ಮುಕ್ತ ಚರ್ಚೆ ನಡೆದಿದೆ. ರಾಹುಲ್ ಗಾಂಧಿ ಪ್ರತಿಯೊಬ್ಬ ಬ್ಲಾಕ್ ಅಧ್ಯಕ್ಷರಿಗೂ ತಮ್ಮ ಅಭಿಪ್ರಾಯ ಹಂಚಿಕೊಳ್ಳಲು ಅವಕಾಶ ನೀಡಿದ್ದಾರೆ. ಕಳೆದ ಒಂದು ವರ್ಷದಿಂದ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ನೀಡುತ್ತಿರುವ ಬಿಡುವಿಲ್ಲದ ಕೆಲಸಗಳ ನಡುವೆಯೂ ಉತ್ತಮ ಮಟ್ಟದ ಉತ್ತೇಜನ ನೀಡಿದಂತಾಗಿದೆ.

ರಾಹುಲ್ ಗಾಂಧಿ ಇತ್ತೀಚೆಗೆ ಒತ್ತು ನೀಡುತ್ತಿರುವ ಕೇಡರ್ ಪಾರ್ಟಿ ಮತ್ತು ಮೈಕ್ರೋ ಮ್ಯಾನೇಜ್ಮೆಂಟಿಗೆ ಪೂರಕವಾಗಿ ಸ್ಥಾಪಿಸಲಾದ ತೆಂಕ ಎರ್ಮಾಳಿನ ರಾಜೀವ್ ಗಾಂಧಿ ಪೊಲಿಟಿಕಲ್ ಇನ್‍ಸ್ಟಿಟ್ಯೂಟನ್ನು ಉದ್ಘಾಟಿಸುವ ಮೂಲಕ ಜನಾರ್ಶೀವಾದ ಯಾತ್ರೆ ಆರಂಭವಾಯಿತು. ಇದು ಪಕ್ಷದ ಕಾರ್ಯಕರ್ತರಿಗೆ, ಮುಖಂಡರಿಗೆ ತರಬೇತಿ ನೀಡಲು ನಿರ್ಮಿಸಲಾದ ವ್ಯವಸ್ಥೆಯಾಗಿದ್ದು, ಪೂರ್ಣಪ್ರಮಾಣದಲ್ಲಿ ಉಪಯೋಗವಾಗಲಿದೆ.

ಉಡುಪಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಮೂಲಕ ಮಂಗಳೂರಿಗೆ ಆಗಮಿಸಿದ ಯಾತ್ರೆಗೆ ಮಂಗಳೂರಿನ ಅಂಬೇಡ್ಕರ್ ವೃತ್ತದಲ್ಲಿ ಭಾರೀ ಸ್ವಾಗತ ನೀಡಲಾಯಿತು. ರಾಹುಲ್ ಗಾಂಧಿ ಅವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಇದ್ದರು. ಅಂಬೇಡ್ಕರ್ ವೃತ್ತದಿಂದ ನೆಹರೂ ಮೈದಾನದವರೆಗೆ ತೆರೆದ ವಾಹನದಲ್ಲಿ ಮೆರವಣಿಗೆ ನಡೆಸಲಾಯಿತು.

ಕತ್ತಲು ಕವಿಯುತ್ತಿದ್ದಂತೆ ಆರಂಭವಾದ ಸಮಾವೇಶದಲ್ಲಿ ಮೊದಲಿಗೆ ಮಾತನಾಡಿದ ರಾಹುಲ್ ಗಾಂಧಿ ಅವರು, ಕರಾವಳಿಯಲ್ಲಿ ಹೆಚ್ಚಿನ ಬೆಂಬಲಿಗರು ಇರುವ ಬಿಲ್ಲವ ಸಮುದಾಯವನ್ನು ಓಲೈಸಲು ಬ್ರಹ್ಮಶ್ರೀ ನಾರಾಯಣ ಗುರು ಅವರ ಹೆಸರನ್ನು, ಅವರ ಸಂದೇಶಗಳನ್ನು ಭಾಷಣದಲ್ಲಿ ಹಲವು ಬಾರಿ ಪ್ರಸ್ತಾಪಿಸಿದ್ರು. ಆನಂತರ ಜಗಜ್ಯೋತಿ ಬಸವಣ್ಣ, ಕರಾವಳಿಯ ವೀರಪುರುಷರಾದ ಕೋಟಿ ಚೆನ್ನಯ, ರಾಣಿ ಅಬ್ಬಕ್ಕ ಮುಂತಾದವರ ಹೆಸರು ಹೇಳಲು ಮರೆಯಲಿಲ್ಲ. ಇಂತಹ ಮಹನೀಯರ ಹೆಸರು ಉಲ್ಲೇಖಿಸಿಯೇ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟೀಕಾಪ್ರಹಾರ ನಡೆಸಿದರು.

ಬಳಿಕ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರ ಭಾಷಣ ಜನರಿಗೆ ಹೆಚ್ಚು ರುಚಿಸದಿದ್ದರೂ, ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಷಣಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಯಿತು. ಸಮಾವೇಶಕ್ಕೆ ಭಾರೀ ಜನಸಂದಣಿ ಸೇರಿರುವುದು ಕಾಂಗ್ರೆಸ್ ಪಕ್ಷದ ಜಿಲ್ಲಾ ಮುಖಂಡರು, ರಾಜ್ಯ ನಾಯಕರು ಮತ್ತು ಉಸ್ತುವಾರಿ ಮುಖಂಡರಿಗೆ ಅಚ್ಚರಿ ತಂದಿತ್ತು. ಮಾತ್ರವಲ್ಲದೆ, ರಾಹುಲ್ ಸಮಾವೇಶಕ್ಕೆ ದೊರೆತ ಜನಸ್ಪಂದನೆ ಗುಪ್ತಚರ ಇಲಾಖೆ ಅಧಿಕಾರಿಗಳಲ್ಲೂ ಗೊಂದಲ ಮೂಡಿಸಿತ್ತು ಎನ್ನುವುದು ಸುಳ್ಳಲ್ಲ.

ಭಾವನಾತ್ಮಕ ವಿಚಾರಗಳು ಮತ್ತು ಅಪಪ್ರಚಾರಗಳ ಮೂಲಕ ಮತದಾರರನ್ನು ಓಲೈಸುತ್ತಿದ್ದ ಪ್ರತಿಪಕ್ಷಕ್ಕೆ ರಾಹುಲ್ ಗಾಂಧಿ ಕಾರ್ಯಕ್ರಮ ಒಂದು ಸ್ಪಷ್ಟ ಸಂದೇಶ ನೀಡಿದರೆ, ಕಾಂಗ್ರೆಸ್ ಕಾರ್ಯಕರ್ತರಲ್ಲಿ ಉತ್ಸಾಹ ಇಮ್ಮಡಿಯಾಗಿದೆ. ಜಿಲ್ಲಾ ಕಾಂಗ್ರೆಸ್ ಆಯೋಜಿಸಿದ ಈ ಸಮಾವೇಶಕ್ಕೆ ಇಷ್ಟು ದೊಡ್ಡ ಸಂಖ್ಯೆಯಲ್ಲಿ ಜನ ಸೇರುತ್ತೆ ಅನ್ನೋದನ್ನು ಸ್ವತಃ ಜಿಲ್ಲಾ ಕಾಂಗ್ರೆಸ್ ನಾಯಕರೇ ಊಹಿಸಿರಲಿಲ್ಲ.

ಈ ಹಿಂದೆ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಹಾಗೂ ಹಿಂದೂ ಫೈರ್ ಬ್ರಾಂಡ್ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಂಗಳೂರಿಗೆ ಬಂದಾಗಲೂ ಇಷ್ಟು ದೊಡ್ಡ ಸಂಖ್ಯೆಯಲ್ಲಿ ಜನ ಸೇರದಿರೋದು ಬಿಜೆಪಿಗರನ್ನೂ ಕಂಗೆಡಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಎಂಟು ಕ್ಷೇತ್ರಗಳ ಪೈಕಿ ಏಳು ಕ್ಷೇತ್ರಗಳಲ್ಲೂ ಕಾಂಗ್ರೆಸ್ ನ ಶಾಸಕರಿದ್ದು, ಅದನ್ನು ಉಳಿಸಿಕೊಂಡು ಕೈತಪ್ಪಿಕೊಂಡಿರುವ ಒಂದು ಕ್ಷೇತ್ರವನ್ನೂ ಪಡೆಯಬೇಕೆಂಬ ಪ್ಲಾನನ್ನೂ ಕಾಂಗ್ರೆಸ್ ಮಾಡುತ್ತಿದೆ. ಇದಕ್ಕೆಲ್ಲಾ ಚುನಾವಣಾ ಪೂರ್ವದಲ್ಲಿ ನಡೆದ ಈ ಜನಾಶೀರ್ವಾದ ಯಾತ್ರೆಯ ಯಶಸ್ಸೂ ಹೆಚ್ಚು ಬಲ ಕೊಟ್ಟಂತಾಗಿದೆ. ಒಟ್ಟಿನಲ್ಲಿ ಇನ್ನೊಂದು ತಿಂಗಳಲ್ಲಿ ನಡೆಯಲಿರುವ ಚುನಾವಣೆಯಲ್ಲಿ ರಾಹುಲ್ ಗಾಂಧಿ ಸಮಾವೇಶದ ನೈಜ ಫಲಿತಾಂಶ ದೊರೆಯಲಿದೆ.

– ಸುಖ್‍ಪಾಲ್ ಪೊಳಲಿ, ಮಂಗಳೂರು

TAGGED:MangalurupublictvRahul Gandhiudupiಉಡುಪಿಪಬ್ಲಿಕ್ ಟಿವಿಮಂಗಳೂರುರಾಹುಲ್ ಗಾಂಧಿ
Share This Article
Facebook Whatsapp Whatsapp Telegram

You Might Also Like

DY Chandrachud
Court

ಅಧಿಕೃತ ನಿವಾಸದಿಂದ ತಕ್ಷಣವೇ ಚಂದ್ರಚೂಡ್ ತೆರವಿಗೆ ಕೇಂದ್ರಕ್ಕೆ ಸುಪ್ರೀಂ ಪತ್ರ

Public TV
By Public TV
29 minutes ago
Hubballi Police
Crime

ಗಂಡ-ಹೆಂಡ್ತಿ ಜಗಳ ಬಗೆಹರಿಸೋ ನೆಪದಲ್ಲಿ ಮಹಿಳೆ ಜೊತೆಗೆ ಲವ್ವಿ-ಡವ್ವಿ; ಪೊಲೀಸಪ್ಪನ ಕಾಮದಾಸೆಗೆ ಸುಂದರ ಕುಟುಂಬ ಬೀದಿಗೆ

Public TV
By Public TV
34 minutes ago
Soldier 2
Chikkaballapur

ಮಲಗಿದ್ದಲ್ಲೇ ಹೃದಯಾಘಾತದಿಂದ ಯೋಧ ಸಾವು – ಹುಟ್ಟೂರಲ್ಲಿ ಸೇನಾ ಗೌರವಗಳೊಂದಿಗೆ ಅಂತ್ಯಕ್ರಿಯೆ

Public TV
By Public TV
51 minutes ago
R Ashok
Bengaluru City

ನಮ್ಮ ಸರ್ಕಾರ ಬಂದ ಮೇಲೆ ರಾಯರೆಡ್ಡಿಗೆ `ಸತ್ಯವಾನ್’ ಪ್ರಶಸ್ತಿ: ಅಶೋಕ್

Public TV
By Public TV
58 minutes ago
Trump Netanyahu
Latest

ಇರಾನ್‌-ಇಸ್ರೇಲ್‌ ಯುದ್ಧದ ಬಳಿಕ ನೆತನ್ಯಾಹು-ಟ್ರಂಪ್‌ ಫಸ್ಟ್‌ ಮೀಟ್‌ – ಜು.7ರಂದು ವೈಟ್‌ಹೌಸ್‌ನಲ್ಲಿ ಮಹತ್ವದ ಭೇಟಿ

Public TV
By Public TV
1 hour ago
BS Yediyurappa 2
Districts

ರಾಷ್ಟ್ರೀಯವಾದಿಗಳ ಹೆಮ್ಮೆ ಮುಖರ್ಜಿ ಕನಸು ಮೋದಿಯಿಂದ ನನಸು: ಯಡಿಯೂರಪ್ಪ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?