ಬಾಗಲಕೋಟೆ: ಬಜೆಟ್ ಮುಗಿದ ಬೆನ್ನಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೆ ಬದಾಮಿ ಕ್ಷೇತ್ರದಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಇದೇ ತಿಂಗಳು 17 ರಂದು ಸಾಯಾಂಕಾಲ ಮಾಜಿ ಸಿಎಂ ಸಿದ್ದರಾಮಯ್ಯ ಬದಾಮಿಗೆ ಆಗಮಿಸಲಿದ್ದಾರೆ. ಎರಡು ದಿನಗಳ ಕಾಲ ಬದಾಮಿಯ ಹೊರ ವಲಯದಲ್ಲಿರುವ ಕೃಷ್ಣಾ ಹೆರಿಟೇಜ್ ನಲ್ಲಿ ವಾಸ್ತವ್ಯ ಹೂಡಲಿದ್ದು, 18 ರಂದು ತಾಲೂಕು ಕೆಡಿಪಿ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಬದಾಮಿ, ಪಟ್ಟದಕಲ್ಲು, ಐಹೊಳೆ ಸೇರಿದಂತೆ ಐತಿಹಾಸಿಕ ತಾಣಗಳ ಅಭಿವೃದ್ಧಿ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ. ಇದರ ಜೊತೆಗೆ ಬದಾಮಿ ತಾಲೂಕಿನಾದ್ಯಂತ ಇರುವ ಕೆರೆಗಳನ್ನ ತುಂಬುವ ಕುರಿತು ಚರ್ಚೆ ನಡೆಸುವ ಸಾಧ್ಯತೆ ಇದೆ. 19 ರಂದು ತಾಲೂಕಿನ ಕುಂದುಕೊರತೆ ಹಾಗೂ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ.
ಈಗಾಗಲೇ ಬದಾಮಿ ಕ್ಷೇತ್ರದಲ್ಲಾಗಬೇಕಿರುವ ಐಟಿಐ ಕಾಲೇಜು, ಜವಳಿ ಪಾರ್ಕ್, ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ, ಸಿಎಂ ಕುಮಾರಸ್ವಾಮಿ ಹಾಗೂ ಆಯಾ ಇಲಾಖೆಯ ಸಚಿವರುಗಳಿಗೆ ಪ್ರತ್ಯೇಕ 8 ಪತ್ರಗಳನ್ನ ಸಹ ಬರೆದಿದ್ದಾರೆ. ಆ ಬಗ್ಗೆಯೂ ತಾಲೂಕಿನ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಮೂಲಭೂತ ಸೌಕರ್ಯಗಳ ಒದಗಿಸುವ ಬಗ್ಗೆ ಸೂಚಿಸಲಿದ್ದಾರೆ. 19 ರಂದು ಸಾಯಂಕಾಲ ಬದಾಮಿಯಿಂದ ಮರಳಿ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.