– ಭೀಮ ಬದುಕೋದು ಕಷ್ಟ ಎನ್ನುತ್ತಿದ್ದಾರೆ ಸ್ಥಳೀಯರು
ಹಾಸನ: ಶಾರ್ಪ್ ಶೂಟರ್ ವೆಂಕಟೇಶ್ (Sharp Shooter Venkatesh) ಸಾವಿನ ಬಳಿಕ ಗಾಯಗೊಂಡಿದ್ದ ಆನೆ ಭೀಮ (Elephant Bheema) ಚಿಕಿತ್ಸೆ ಸಿಗದೇ ನರಳಾಡುತ್ತಿದೆ.
- Advertisement 2
ಆಗಸ್ಟ್ 31 ರಂದು ಭೀಮನಿಗೆ ಚಿಕಿತ್ಸೆ ನೀಡುವ ಕಾರ್ಯಾಚರಣೆ ವೇಳೆಯೇ ವೆಂಕಟೇಶ್ ಮೇಲೆ ಆನೆ ದಾಳಿ ನಡೆಸಿದ್ದು, ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಅವರು ಸಾವನ್ನಪ್ಪಿದ್ದರು. ವೆಂಕಟೇಶ್ ಸಾವಿನ ಬಳಿಕ ಅರಣ್ಯ ಇಲಾಖೆ ಭೀಮನಿಗೆ ಚಿಕಿತ್ಸೆ ನೀಡುವ ಕಾರ್ಯಾಚರಣೆಯನ್ನೇ ಕೈಬಿಟ್ಟಿದೆ.
- Advertisement 3
- Advertisement 4
ಇದೀಗ ಭೀಮನಿಗೆ ಆಗಿರುವ ಗಾಯ ಉಲ್ಬಗೊಂಡಿದ್ದು ಓಡಾಡಲು ಸಾಧ್ಯವಾಗದೇ ಒಂದೆಡೆಯೇ ನಿಲ್ಲುತ್ತಿದೆ. ಕಾಡಾನೆಯ ಬೆನ್ನಿನ ಹಿಂಭಾಗದಲ್ಲಿ ಗಾಯ ಕೊಳೆಯುತ್ತಿದ್ದು, ಚಿಕಿತ್ಸೆ ನೀಡದಿದ್ದರೆ ಭೀಮ ಬದುಕುವುದು ಕಷ್ಟ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಇದನ್ನೂ ಓದಿ: ಚೆನ್ನೈ-ಬೆಂಗಳೂರು ಹೆದ್ದಾರಿಯಲ್ಲಿ ವ್ಯಾನ್ಗೆ ಲಾರಿ ಡಿಕ್ಕಿ: 7 ಮಹಿಳೆಯರ ದುರ್ಮರಣ
ಭೀಮನನ್ನು ಉಳಿಸಿ ಎಂದು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಆರಂಭಿಸಲಾಗಿದ್ದು, ಭೀಮನಿಗೆ ಶೀಘ್ರವೇ ಚಿಕಿತ್ಸೆ ನೀಡುವಂತೆ ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಮಾಜಿ ಕ್ರಿಕೆಟಿಗ ಕುಂಬ್ಳೆಗೂ ತಟ್ಟಿದ ಬೆಂಗಳೂರು ಬಂದ್ ಬಿಸಿ – ಬಿಎಂಟಿಸಿಯಲ್ಲಿ ಪ್ರಯಾಣ
Web Stories